Homeಮುಖಪುಟಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

- Advertisement -
- Advertisement -

ಸೋಮವಾರ ಮಹಾರಾಷ್ಟ್ರದ ಅಕೋಲಾದಲ್ಲಿ ಸ್ವರಾಜ್ ಪಕ್ಷದ ನಾಯಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಸುಮಾರು 40-50 ಜನರ ಗುಂಪು ಅವರು ಮಾತನಾಡದಂತೆ ತಡೆಯಲು ವೇದಿಕೆಗೆ ನುಗ್ಗಿದೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಈ ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಬಂದು ಕಾರ್ಯಕ್ರಮವನ್ನು ನಿಲ್ಲಿಸಲು ಸೂಚಿಸಿದರು ಎಂದಿದ್ದಾರೆ.

ತಮ್ಮ ಮೇಲಿನ ಹಲ್ಲೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಯಾದವ್, “ಕಾರ್ಯಕ್ರಮದಲ್ಲಿ ‘ಸಂವಿಧಾನ ರಕ್ಷಣೆ ಮತ್ತು ನಮ್ಮ ಮತ’ ಎಂಬ ಚರ್ಚೆ ನಡೆಯುತ್ತಿತ್ತು. ಈ ವೇಳೆ ಭಾರತ್ ಜೋಡೋ ಅಭಿಯಾನದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಮತ್ತು ನನ್ನ ಮೇಲೆ ಹಲ್ಲೆ ನಡೆದಿದೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವವರ ಮೇಲೆ ಇಂತಹ ಹಲ್ಲೆಗಳು ನಡೆಯುತ್ತಲೇ ಇವೆ. ಪೊಲೀಸರು ಮಧ್ಯಪ್ರವೇಶಿಸಿದರೂ, ದಾಳಿಕೋರರು ತಮ್ಮ ವಿಧ್ವಂಸಕತೆಯನ್ನು ಮುಂದುವರೆಸಿದರು. ಪರಿಣಾಮ ಕಾರ್ಯಕ್ರಮ ರದ್ದುಗೊಳಿಸಬೇಕಾಯಿತು” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳೆದ 25 ವರ್ಷಗಳಿಂದ ಆಗಾಗ್ಗೆ ಭೇಟಿ ನೀಡುತ್ತಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ್ದೇನೆ. ಇಂತಹ ಘಟನೆಯನ್ನು ಎಂದಿಗೂ ಎದುರಿಸಿರಲಿಲ್ಲ. ಈ ಘಟನೆಯು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಇಂತಹ ಘಟನೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದಿದ್ದಾರೆ.

‘ವಂಚಿತ್ ಬಹುಜನ್ ಅಘಾಡಿ (ವಿಬಿಎ)’ ಗುಂಪಿನಿಂದ ಹಲ್ಲೆ?

ಹಲ್ಲೆಯ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೇಂದ್ರ ಯಾದವ್ “ಹಲ್ಲೆ ನಡೆಸಿದವರು ವಂಚಿತ್ ಬಹುಜನ್ ಅಘಾಡಿ ಪಕ್ಷ (ಎಬಿವಿ)ದ ಕಾರ್ಯಕರ್ತರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಮತ್ತು ಕಾರ್ಯಕರ್ತರು ಹೇಳಿದ್ದಾರೆ. ಆದರೆ, ನನಗೆ ಆ ಬಗ್ಗೆ ಮಾಹಿತಿಯಿಲ್ಲ” ಎಂದಿದ್ದಾರೆ.

“ನನಗೆ ದಾಳಿ ನಡೆಸಿದ ಯಾರೊಬ್ಬರೂ ತಿಳಿದಿಲ್ಲ, ಆದರೆ ಸ್ಥಳೀಯ ಸಹೋದ್ಯೋಗಿಗಳು 24 ಹೆಸರುಗಳನ್ನು ಹೇಳಿದ್ದಾರೆ. ಅವರು ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಎಂದಿದ್ದಾರೆ. ಕಾರ್ಯಕ್ರಮಕ್ಕೆ ದಾಳಿ ನಡೆಸಿದಾಗ ನಮ್ಮ ಸಹೋದ್ಯೋಗಿಯೊಬ್ಬರು ಏಕೆ ದಾಳಿ ಮಾಡಿದ್ದೀರಿ? ಎಂದು ಕೇಳಿದ್ದಾರೆ. ಆಗ ದಾಳಿಗೆ ಬಂದ ವ್ಯಕ್ತಿಯೊಬ್ಬರು “ಸಾಬ್ ಆದೇಶ, ನಮಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ ಎಂದು ಯಾದವ್ ಘಟನೆ ಕುರಿತು ವಿವರಿಸಿದ್ದಾರೆ.

ದಾಳಿಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಯಾದವ್, “ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಒಂದು ವೇಳೆ ದಾಳಿ ನಡೆಸಿದ್ದರೆ ತುಂಬಾ ಆಶ್ಚರ್ಯದ ವಿಷಯ. ಯೋಗೇಂದ್ರ ಯಾದವ್ ಬಹಳ ಸಣ್ಣ ಮನುಷ್ಯ; ನೀವು ಅವರ ಮೇಲೆ ದಾಳಿ ಮಾಡಿಲ್ಲ, ಬಾಬಾ ಸಾಹೇಬರ ಸಂವಿಧಾನದ ಮೇಲೆ ದಾಳಿ ಮಾಡಿದ್ದೀರಿ. ಹಗಲಿರುಳು ಮಾತನಾಡುವ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿದ್ದೀರಿ ಮತ್ತು ನಿಮ್ಮ ನಾಯಕ ಪ್ರಕಾಶ್ ಅಂಬೇಡ್ಕರ್ ಅವರು ನಾಚಿಕೆ ಪಡುವಂತೆ ಮಾಡಿದ್ದೀರಿ” ಎಂದಿದ್ದಾರೆ.

“ಪ್ರಕಾಶ್ ಅಂಬೇಡ್ಕರ್ ಅವರ ಚಿಂತನೆ ಮತ್ತು ನಮ್ಮ ಆಲೋಚನೆಗಳು ವಿಭಿನ್ನವಾಗಿವೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ಭಿನ್ನಾಭಿಪ್ರಾಯಗಳಿಂದಾಗಿ ಇಂತಹ ದಾಳಿ ನಡೆಸಲಾಗದು. ಇದು ನನ್ನ ಕಲ್ಪನೆಗೂ ಮೀರಿದ್ದು. ಪ್ರಕಾಶ್ ಅಂಬೇಡ್ಕರ್ ಅವರು ಇಂತಹ ಕೃತ್ಯವೆಸಗುವ ವ್ಯಕ್ತಿ ಎಂದು ನಂಬುವುದಿಲ್ಲ” ಎಂದು ಹೇಳಿದ್ದಾರೆ.

ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು?

ಘಟನೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ “ಫುಲೆ, ಶಾಹು, ಅಂಬೇಡ್ಕರ್, ಗೋಖಲೆ, ತಿಲಕ್, ರಾನಡೆ, ಅಗರ್ಕರ್ ಅವರ ನಾಡಿನಲ್ಲಿ ಇದು ಸಂಭವಿಸಿದೆ. ಅಕೋಲಾದಲ್ಲಿ ವಿಬಿಎ ಕಾರ್ಯಕರ್ತರು ಯೋಗೇಂದ್ರ ಯಾದವ್ ಸಭೆಗೆ ಅಡ್ಡಿಪಡಿಸಿದ್ದಾರೆ. ಅವರಿಂದ ಮೈಕ್ ಕಿತ್ತುಕೊಂಡಿದ್ದಾರೆ. ಕುರ್ಚಿಗಳನ್ನು ಎಸೆದಿದ್ದಾರೆ. ಯಾದವ್ ಭಾಷಣ ಮಾಡಲು ಬಂದಾಗ ಅವರನ್ನು ತಳ್ಳಿದ್ದಾರೆ. ಇದನ್ನು ಪ್ರಶ್ನಿಸುವ ಹಕ್ಕು ಅವರಿಗೆ ಇಲ್ಲವೇ? ನಿಮಗೆ ಇಷ್ಟವಿಲ್ಲದಿದ್ದರೆ ಅವರ ಮಾತನ್ನು ಕೇಳಬೇಡಿ. ಆದರೆ, ಈ ಹಿಂಸೆ ಏಕೆ? ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು ಎಂದು ಆಶ್ಚರ್ಯವಾಗುತ್ತಿದೆ. ಇದು ನಮ್ಮ ಮಹಾರಾಷ್ಟ್ರ ಧರ್ಮವೇ? ಎಂದು ಪ್ರಶ್ನಿಸಿದ್ದಾರೆ.

ಆರೋಪ ತಳ್ಳಿ ಹಾಕಿದ ವಿಬಿಎ :

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಬಿಎ “ಭೀಮರಾವ್ ಅಂಬೇಡ್ಕರ್ ಮತ್ತು ಮೀಸಲಾತಿ ನೀತಿಗಳ ಬಗ್ಗೆ ನೀಡಿದ ಹೇಳಿಕೆಗೆ ಅತೃಪ್ತಿ ವ್ಯಕ್ತಪಡಿಸಿ, ವಂಚಿತ್ ಬಹುಜನ್ ಅಘಾಡಿಯ ಬೆಂಬಲಿಗರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವರದಿಯಾಗಿದೆ”.

“ಹಿಂದುಳಿದ ಸಮುದಾಯಗಳಿಂದ ಬೆಂಬಲವನ್ನು ಪಡೆದಿದ್ದರೂ, ಚುನಾವಣೆಯ ನಂತರ ಕಾಂಗ್ರೆಸ್‌ನ ಆಪಾದಿತ ಮೀಸಲಾತಿ ವಿರೋಧಿ ಕ್ರಮಗಳ ಕುರಿತು ಯಾದವ್ ಮತ್ತು ಹೋರಾಟಗಾರ್ತಿ ಉಲ್ಕಾ ಮಹಾಜನ್‌ಗೆ ಪ್ರೇಕ್ಷಕರು  ಪ್ರಶ್ನೆಗಳನ್ನು ಹಾಕಿದ್ದಾರೆ ಎಂದು ವಿಬಿಎ ತಿಳಿಸಿದೆ. ಈ ಮೂಲಕ ಹಲ್ಲೆ ಆರೋಪವನ್ನು ತಳ್ಳಿ ಹಾಕಿದೆ.

ವಿಬಿಎಗೆ ಸಂಬಂಧಿಸಿದ ಪತ್ರಿಕೆಯಾದ ಪ್ರಬುದ್ಧ್ ಭಾರತ್‌ನಲ್ಲಿ “ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೌದ್ಧರು, ದಲಿತರು, ಬುಡಕಟ್ಟುಗಳು, ಮುಸ್ಲಿಮರು, ಒಬಿಸಿಗಳ ಮತಗಳನ್ನು ತೆಗೆದುಕೊಂಡಿತು. ಆದರೆ, ಕಾಂಗ್ರೆಸ್ ಬಿಜೆಪಿಯ ಕೆಲಸವನ್ನು ಮಾಡುತ್ತಿದೆ. ಯಾವುದೇ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡಲು ಸಾಧ್ಯವಾಗದೆ, ಮಹಾರಾಷ್ಟ್ರ ಡೆಮಾಕ್ರಟಿಕ್ ಫ್ರಂಟ್ ಮತ್ತು ಭಾರತ್ ಜೋಡೋ ಅಭಿಯಾನದ ಜನರು ಪ್ರಶ್ನೆಗಳನ್ನು ಕೇಳುವ ಜನರನ್ನು ಮೌನಗೊಳಿಸಲು ಪ್ರಯತ್ನಿಸಿದರು. ಯೋಗೇಂದ್ರ ಯಾದವ್ ಮತ್ತು ಉಲ್ಕಾ ಮಹಾಜನ್ ಯಾವುದೇ ಪ್ರಶ್ನೆಗೆ ಉತ್ತರವಿಲ್ಲದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿದರು” ಎಂದು ವಿಬಿಎ ಬರೆದುಕೊಂಡಿದೆ.

ಇದನ್ನೂ ಓದಿ : ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...