Homeಮುಖಪುಟಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

- Advertisement -
- Advertisement -

ಸೋಮವಾರ ಮಹಾರಾಷ್ಟ್ರದ ಅಕೋಲಾದಲ್ಲಿ ಸ್ವರಾಜ್ ಪಕ್ಷದ ನಾಯಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಸುಮಾರು 40-50 ಜನರ ಗುಂಪು ಅವರು ಮಾತನಾಡದಂತೆ ತಡೆಯಲು ವೇದಿಕೆಗೆ ನುಗ್ಗಿದೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಈ ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಬಂದು ಕಾರ್ಯಕ್ರಮವನ್ನು ನಿಲ್ಲಿಸಲು ಸೂಚಿಸಿದರು ಎಂದಿದ್ದಾರೆ.

ತಮ್ಮ ಮೇಲಿನ ಹಲ್ಲೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಯಾದವ್, “ಕಾರ್ಯಕ್ರಮದಲ್ಲಿ ‘ಸಂವಿಧಾನ ರಕ್ಷಣೆ ಮತ್ತು ನಮ್ಮ ಮತ’ ಎಂಬ ಚರ್ಚೆ ನಡೆಯುತ್ತಿತ್ತು. ಈ ವೇಳೆ ಭಾರತ್ ಜೋಡೋ ಅಭಿಯಾನದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಮತ್ತು ನನ್ನ ಮೇಲೆ ಹಲ್ಲೆ ನಡೆದಿದೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವವರ ಮೇಲೆ ಇಂತಹ ಹಲ್ಲೆಗಳು ನಡೆಯುತ್ತಲೇ ಇವೆ. ಪೊಲೀಸರು ಮಧ್ಯಪ್ರವೇಶಿಸಿದರೂ, ದಾಳಿಕೋರರು ತಮ್ಮ ವಿಧ್ವಂಸಕತೆಯನ್ನು ಮುಂದುವರೆಸಿದರು. ಪರಿಣಾಮ ಕಾರ್ಯಕ್ರಮ ರದ್ದುಗೊಳಿಸಬೇಕಾಯಿತು” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳೆದ 25 ವರ್ಷಗಳಿಂದ ಆಗಾಗ್ಗೆ ಭೇಟಿ ನೀಡುತ್ತಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ್ದೇನೆ. ಇಂತಹ ಘಟನೆಯನ್ನು ಎಂದಿಗೂ ಎದುರಿಸಿರಲಿಲ್ಲ. ಈ ಘಟನೆಯು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಇಂತಹ ಘಟನೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದಿದ್ದಾರೆ.

‘ವಂಚಿತ್ ಬಹುಜನ್ ಅಘಾಡಿ (ವಿಬಿಎ)’ ಗುಂಪಿನಿಂದ ಹಲ್ಲೆ?

ಹಲ್ಲೆಯ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೇಂದ್ರ ಯಾದವ್ “ಹಲ್ಲೆ ನಡೆಸಿದವರು ವಂಚಿತ್ ಬಹುಜನ್ ಅಘಾಡಿ ಪಕ್ಷ (ಎಬಿವಿ)ದ ಕಾರ್ಯಕರ್ತರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಮತ್ತು ಕಾರ್ಯಕರ್ತರು ಹೇಳಿದ್ದಾರೆ. ಆದರೆ, ನನಗೆ ಆ ಬಗ್ಗೆ ಮಾಹಿತಿಯಿಲ್ಲ” ಎಂದಿದ್ದಾರೆ.

“ನನಗೆ ದಾಳಿ ನಡೆಸಿದ ಯಾರೊಬ್ಬರೂ ತಿಳಿದಿಲ್ಲ, ಆದರೆ ಸ್ಥಳೀಯ ಸಹೋದ್ಯೋಗಿಗಳು 24 ಹೆಸರುಗಳನ್ನು ಹೇಳಿದ್ದಾರೆ. ಅವರು ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಎಂದಿದ್ದಾರೆ. ಕಾರ್ಯಕ್ರಮಕ್ಕೆ ದಾಳಿ ನಡೆಸಿದಾಗ ನಮ್ಮ ಸಹೋದ್ಯೋಗಿಯೊಬ್ಬರು ಏಕೆ ದಾಳಿ ಮಾಡಿದ್ದೀರಿ? ಎಂದು ಕೇಳಿದ್ದಾರೆ. ಆಗ ದಾಳಿಗೆ ಬಂದ ವ್ಯಕ್ತಿಯೊಬ್ಬರು “ಸಾಬ್ ಆದೇಶ, ನಮಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ ಎಂದು ಯಾದವ್ ಘಟನೆ ಕುರಿತು ವಿವರಿಸಿದ್ದಾರೆ.

ದಾಳಿಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಯಾದವ್, “ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಒಂದು ವೇಳೆ ದಾಳಿ ನಡೆಸಿದ್ದರೆ ತುಂಬಾ ಆಶ್ಚರ್ಯದ ವಿಷಯ. ಯೋಗೇಂದ್ರ ಯಾದವ್ ಬಹಳ ಸಣ್ಣ ಮನುಷ್ಯ; ನೀವು ಅವರ ಮೇಲೆ ದಾಳಿ ಮಾಡಿಲ್ಲ, ಬಾಬಾ ಸಾಹೇಬರ ಸಂವಿಧಾನದ ಮೇಲೆ ದಾಳಿ ಮಾಡಿದ್ದೀರಿ. ಹಗಲಿರುಳು ಮಾತನಾಡುವ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿದ್ದೀರಿ ಮತ್ತು ನಿಮ್ಮ ನಾಯಕ ಪ್ರಕಾಶ್ ಅಂಬೇಡ್ಕರ್ ಅವರು ನಾಚಿಕೆ ಪಡುವಂತೆ ಮಾಡಿದ್ದೀರಿ” ಎಂದಿದ್ದಾರೆ.

“ಪ್ರಕಾಶ್ ಅಂಬೇಡ್ಕರ್ ಅವರ ಚಿಂತನೆ ಮತ್ತು ನಮ್ಮ ಆಲೋಚನೆಗಳು ವಿಭಿನ್ನವಾಗಿವೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ಭಿನ್ನಾಭಿಪ್ರಾಯಗಳಿಂದಾಗಿ ಇಂತಹ ದಾಳಿ ನಡೆಸಲಾಗದು. ಇದು ನನ್ನ ಕಲ್ಪನೆಗೂ ಮೀರಿದ್ದು. ಪ್ರಕಾಶ್ ಅಂಬೇಡ್ಕರ್ ಅವರು ಇಂತಹ ಕೃತ್ಯವೆಸಗುವ ವ್ಯಕ್ತಿ ಎಂದು ನಂಬುವುದಿಲ್ಲ” ಎಂದು ಹೇಳಿದ್ದಾರೆ.

ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು?

ಘಟನೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ “ಫುಲೆ, ಶಾಹು, ಅಂಬೇಡ್ಕರ್, ಗೋಖಲೆ, ತಿಲಕ್, ರಾನಡೆ, ಅಗರ್ಕರ್ ಅವರ ನಾಡಿನಲ್ಲಿ ಇದು ಸಂಭವಿಸಿದೆ. ಅಕೋಲಾದಲ್ಲಿ ವಿಬಿಎ ಕಾರ್ಯಕರ್ತರು ಯೋಗೇಂದ್ರ ಯಾದವ್ ಸಭೆಗೆ ಅಡ್ಡಿಪಡಿಸಿದ್ದಾರೆ. ಅವರಿಂದ ಮೈಕ್ ಕಿತ್ತುಕೊಂಡಿದ್ದಾರೆ. ಕುರ್ಚಿಗಳನ್ನು ಎಸೆದಿದ್ದಾರೆ. ಯಾದವ್ ಭಾಷಣ ಮಾಡಲು ಬಂದಾಗ ಅವರನ್ನು ತಳ್ಳಿದ್ದಾರೆ. ಇದನ್ನು ಪ್ರಶ್ನಿಸುವ ಹಕ್ಕು ಅವರಿಗೆ ಇಲ್ಲವೇ? ನಿಮಗೆ ಇಷ್ಟವಿಲ್ಲದಿದ್ದರೆ ಅವರ ಮಾತನ್ನು ಕೇಳಬೇಡಿ. ಆದರೆ, ಈ ಹಿಂಸೆ ಏಕೆ? ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು ಎಂದು ಆಶ್ಚರ್ಯವಾಗುತ್ತಿದೆ. ಇದು ನಮ್ಮ ಮಹಾರಾಷ್ಟ್ರ ಧರ್ಮವೇ? ಎಂದು ಪ್ರಶ್ನಿಸಿದ್ದಾರೆ.

ಆರೋಪ ತಳ್ಳಿ ಹಾಕಿದ ವಿಬಿಎ :

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಬಿಎ “ಭೀಮರಾವ್ ಅಂಬೇಡ್ಕರ್ ಮತ್ತು ಮೀಸಲಾತಿ ನೀತಿಗಳ ಬಗ್ಗೆ ನೀಡಿದ ಹೇಳಿಕೆಗೆ ಅತೃಪ್ತಿ ವ್ಯಕ್ತಪಡಿಸಿ, ವಂಚಿತ್ ಬಹುಜನ್ ಅಘಾಡಿಯ ಬೆಂಬಲಿಗರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವರದಿಯಾಗಿದೆ”.

“ಹಿಂದುಳಿದ ಸಮುದಾಯಗಳಿಂದ ಬೆಂಬಲವನ್ನು ಪಡೆದಿದ್ದರೂ, ಚುನಾವಣೆಯ ನಂತರ ಕಾಂಗ್ರೆಸ್‌ನ ಆಪಾದಿತ ಮೀಸಲಾತಿ ವಿರೋಧಿ ಕ್ರಮಗಳ ಕುರಿತು ಯಾದವ್ ಮತ್ತು ಹೋರಾಟಗಾರ್ತಿ ಉಲ್ಕಾ ಮಹಾಜನ್‌ಗೆ ಪ್ರೇಕ್ಷಕರು  ಪ್ರಶ್ನೆಗಳನ್ನು ಹಾಕಿದ್ದಾರೆ ಎಂದು ವಿಬಿಎ ತಿಳಿಸಿದೆ. ಈ ಮೂಲಕ ಹಲ್ಲೆ ಆರೋಪವನ್ನು ತಳ್ಳಿ ಹಾಕಿದೆ.

ವಿಬಿಎಗೆ ಸಂಬಂಧಿಸಿದ ಪತ್ರಿಕೆಯಾದ ಪ್ರಬುದ್ಧ್ ಭಾರತ್‌ನಲ್ಲಿ “ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೌದ್ಧರು, ದಲಿತರು, ಬುಡಕಟ್ಟುಗಳು, ಮುಸ್ಲಿಮರು, ಒಬಿಸಿಗಳ ಮತಗಳನ್ನು ತೆಗೆದುಕೊಂಡಿತು. ಆದರೆ, ಕಾಂಗ್ರೆಸ್ ಬಿಜೆಪಿಯ ಕೆಲಸವನ್ನು ಮಾಡುತ್ತಿದೆ. ಯಾವುದೇ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡಲು ಸಾಧ್ಯವಾಗದೆ, ಮಹಾರಾಷ್ಟ್ರ ಡೆಮಾಕ್ರಟಿಕ್ ಫ್ರಂಟ್ ಮತ್ತು ಭಾರತ್ ಜೋಡೋ ಅಭಿಯಾನದ ಜನರು ಪ್ರಶ್ನೆಗಳನ್ನು ಕೇಳುವ ಜನರನ್ನು ಮೌನಗೊಳಿಸಲು ಪ್ರಯತ್ನಿಸಿದರು. ಯೋಗೇಂದ್ರ ಯಾದವ್ ಮತ್ತು ಉಲ್ಕಾ ಮಹಾಜನ್ ಯಾವುದೇ ಪ್ರಶ್ನೆಗೆ ಉತ್ತರವಿಲ್ಲದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿದರು” ಎಂದು ವಿಬಿಎ ಬರೆದುಕೊಂಡಿದೆ.

ಇದನ್ನೂ ಓದಿ : ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...