Homeಅಂತರಾಷ್ಟ್ರೀಯಇಸ್ರೇಲಿ ಪಡೆಗಳಿಂದ ರಾಫಾ ಮೇಲೆ ಆಕ್ರಮಣ; ನಿರಾಶ್ರಿತರ ಶಿಬಿರಗಳಲ್ಲಿ ತಂಗಿದ್ದ 17 ಜನರ ದುರ್ಮರಣ

ಇಸ್ರೇಲಿ ಪಡೆಗಳಿಂದ ರಾಫಾ ಮೇಲೆ ಆಕ್ರಮಣ; ನಿರಾಶ್ರಿತರ ಶಿಬಿರಗಳಲ್ಲಿ ತಂಗಿದ್ದ 17 ಜನರ ದುರ್ಮರಣ

- Advertisement -
- Advertisement -

ಮಂಗಳವಾರ ಇಸ್ರೇಲಿ ಸೈನ್ಯ ನಡೆಸಿದ ವೈಮಾನಿಕ ದಾಳಿಗಳಿಂದ ಗಾಜಾ ಪಟ್ಟಿಯ ರಫಾ ನಿರಾಶ್ರಿತರ ಶಿಬಿರಗಳಲ್ಲಿ ತಂಗಿದ್ದ ಕನಿಷ್ಠ 17 ಪ್ಯಾಲೆಸ್ಟೀನಿ ನಿರಾಶ್ರಿತರು ಅಸುನೀಗಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲಿ ಯುದ್ಧ ಟ್ಯಾಂಕರ್‌ಗಳು ಗಾಜಾ ದಕ್ಷಿಣ ನಗರವಾದ ರಾಫಾಗೆ ಆಳವಾಗಿ ದಾಳಿ ಇಟ್ಟಿವೆ ಎಂದು ಅಲ್ಲಿನ ನಿವಾಸಿಗಳು ಮತ್ತು ವೈದ್ಯರು ತಿಳಿಸಿದ್ದಾರೆ.

ರಫಾ ನಿವಾಸಿಗಳು ಹಲವಾರು ಪ್ರದೇಶಗಳಲ್ಲಿ ಟ್ಯಾಂಕ್‌ಗಳು ಮತ್ತು ವಿಮಾನಗಳಿಂದ ಭಾರಿ ಬಾಂಬ್ ಸ್ಫೋಟಗಳನ್ನು ವರದಿ ಮಾಡಿದ್ದಾರೆ. ಅಲ್ಲಿ ಮೇ ತಿಂಗಳ ಮೊದಲು ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ಆಶ್ರಯ ಪಡೆದಿದ್ದರು. ಇಸ್ರೇಲಿ ಪಡೆಗಳು ನಗರವನ್ನು ಆಕ್ರಮಿಸಿದ ನಂತರ ಹೆಚ್ಚಿನ ಜನಸಂಖ್ಯೆಯು ಉತ್ತರದ ಕಡೆಗೆ ಓಡಿಹೋಗಿದ್ದಾರೆ ಎನ್ನಲಾಗಿದೆ.

“ಜಗತ್ತಿನ ಯಾವುದೇ ಹಸ್ತಕ್ಷೇಪವಿಲ್ಲದೆ ರಫಾ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ, ಇಸ್ರೇಲ್ ಇಲ್ಲಿ ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ರಾಫಾ ನಿವಾಸಿಯೊಬ್ಬರು ತಿಳಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲಿ ಟ್ಯಾಂಕ್‌ಗಳು ರಾಫಾದ ಪಶ್ಚಿಮದಲ್ಲಿರುವ ಟೆಲ್ ಅಲ್-ಸುಲ್ತಾನ್, ಅಲ್-ಇಜ್ಬಾ ಮತ್ತು ಜುರುಬ್ ಪ್ರದೇಶಗಳಲ್ಲಿ ಮತ್ತು ನಗರದ ಹೃದಯಭಾಗದಲ್ಲಿರುವ ಶಬೌರಾದಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಅವರು ಪೂರ್ವದ ನೆರೆಹೊರೆ, ಹೊರವಲಯಗಳು, ಈಜಿಪ್ಟ್‌ನ ಗಡಿ ಮತ್ತು ಪ್ರಮುಖ ರಫಾ ಗಡಿ ದಾಟುವಿಕೆಯನ್ನು ಸಹ ಆಕ್ರಮಿಸಿಕೊಳ್ಳುವುದನ್ನು ಮುಂದುವರೆಸಿದರು ಎಂದು ಸ್ಥಳೀಯರು ಹೇಳಿದ್ದಾರೆ.

ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ರಫಾದ ಪೂರ್ವ ಭಾಗದಲ್ಲಿ ಇಸ್ರೇಲಿ ಗುಂಡಿನ ದಾಳಿಯಿಂದ ಒಬ್ಬ ವ್ಯಕ್ತಿಯನ್ನು ಬೆಳಿಗ್ಗೆ ಕೊಲ್ಲಲಾಯಿತು. ಕಳೆದ ಕೆಲವು ದಿನಗಳು ಮತ್ತು ವಾರಗಳಲ್ಲಿ ಅನೇಕರು ಕೊಲ್ಲಲ್ಪಟ್ಟಿದ್ದಾರೆ. ಆದರೆ, ರಕ್ಷಣಾ ತಂಡಗಳು ಅವರನ್ನು ತಲುಪಲು ಸಾಧ್ಯವಾಗಲಿಲ್ಲ ಎಂದು ಹಮಾಸ್ ವೈದ್ಯರು ಹೇಳಿದರು.

ಇಸ್ರೇಲಿ ಮಿಲಿಟರಿಯು ರಾಫಾದಲ್ಲಿ “ನಿಖರವಾದ, ಗುಪ್ತಚರ-ಆಧಾರಿತ ಚಟುವಟಿಕೆಯನ್ನು” ಮುಂದುವರೆಸುತ್ತಿದೆ ಎಂದು ಹೇಳಿದೆ. ಕಳೆದ ದಿನದಲ್ಲಿ ಅನೇಕ ಪ್ಯಾಲೇಸ್ಟಿನಿಯನ್ ಬಂದೂಕುಧಾರಿಗಳನ್ನು ಯುದ್ಧದಲ್ಲಿ ಕೊಂದು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಕಳೆದ ದಿನದಲ್ಲಿ ವಾಯುಪಡೆಯು ಗಾಜಾ ಪಟ್ಟಿಯಾದ್ಯಂತ ಡಜನ್‌ಗಟ್ಟಲೆ ಗುರಿಗಳನ್ನು ಹೊಡೆದಿದೆ ಎಂದು ವರದಿ ಹೇಳಿದೆ.

ಮಧ್ಯ ಗಾಜಾ ಪಟ್ಟಿಯಲ್ಲಿ, ಮನೆಗಳ ಮೇಲೆ ಮತ್ತು ಗೊತ್ತುಪಡಿಸಿದ ನಿರಾಶ್ರಿತರ ಶಿಬಿರಗಳ ಮೇಲೆ ಎರಡು ಪ್ರತ್ಯೇಕ ಇಸ್ರೇಲಿ ವೈಮಾನಿಕ ದಾಳಿಗಳು ಅಲ್-ನುಸಿರಾತ್ ಮತ್ತು ಅಲ್-ಬುರೇಜ್‌ನಲ್ಲಿ 17 ಪ್ಯಾಲೆಸ್ಟೀನಿಯನ್ನರನ್ನು ಕೊಂದವು. ಇದು 1948 ರ ಯುದ್ಧದಲ್ಲಿ ಗಾಜಾಕ್ಕೆ ಓಡಿಹೋದ ಕುಟುಂಬಗಳು ಮತ್ತು ವಂಶಸ್ಥರ ನೆಲೆಯಾಗಿದೆ ಎಂದು ವೈದ್ಯರು ಹೇಳಿದರು.

“ಪ್ರತಿ ಗಂಟೆ ತಡವಾಗಿ, ಇಸ್ರೇಲ್ ಹೆಚ್ಚು ಜನರನ್ನು ಕೊಲ್ಲುತ್ತದೆ, ನಾವು ಈಗ ಕದನ ವಿರಾಮವನ್ನು ಬಯಸುತ್ತೇವೆ” ಎಂದು ಗಾಜಾದ ಶಿಕ್ಷಕ ಖಲೀಲ್ ಹೇಳಿದ್ದಾರೆ. ಈಗ ಅವರು ಸೆಂಟ್ರಲ್ ಗಾಜಾ ಪಟ್ಟಿಯಲ್ಲಿರುವ ಡೀರ್ ಅಲ್-ಬಲಾಹ್ ನಗರದಲ್ಲಿ ತನ್ನ ಕುಟುಂಬದೊಂದಿಗೆ ಸ್ಥಳಾಂತರಗೊಂಡಿದ್ದಾರೆ.

“ನಮ್ಮ ರಕ್ತ ಸಾಕು, ನಾನು ಇಸ್ರೇಲ್, ಅಮೇರಿಕಾ ಮತ್ತು ನಮ್ಮ ನಾಯಕರಿಗೂ ಹೇಳುತ್ತೇನೆ. ಯುದ್ಧ ನಿಲ್ಲಬೇಕು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇಸ್ರೇಲಿ ಮಿಲಿಟರಿಯು 17 ಸಾವುಗಳ ಬಗ್ಗೆ ನೇರವಾಗಿ ಪ್ರತಿಕ್ರಿಯಿಸಲಿಲ್ಲ. ಆದರೆ, ಕೇಂದ್ರ ಗಾಜಾ ಪ್ರದೇಶಗಳಲ್ಲಿ ಗುಂಪುಗಳ ವಿರುದ್ಧ ಪಡೆಗಳು ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದೆ ಎಂದು ಹೇಳಿದರು.

ಇಸ್ಲಾಮಿಕ್ ಜಿಹಾದ್ ಸ್ನೈಪರ್ ಸೆಲ್‌ನ ಕಮಾಂಡರ್ ಇಸ್ರೇಲಿ ಯುದ್ಧವಿಮಾನದಿಂದ ಕೊಲ್ಲಲ್ಪಟ್ಟರು ಮತ್ತು ಸೈನ್ಯವು ಉಗ್ರಗಾಮಿ ಸೆಲ್ ಅನ್ನು “ನಿರ್ಮೂಲನೆ” ಮಾಡಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ; ಇಂಡಿಯಾ’ ಬ್ಲಾಕ್ ನಾಯಕರಿಗೆ ಪತ್ರ ಬರೆದ ಮಲಿವಾಲ್; ಹಲ್ಲೆ ಬಗ್ಗೆ ಚರ್ಚಿಸಲು ಸಮಯ ಕೋರಿದ ಸಂಸದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...