Homeಚಳವಳಿಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಾಡಿನಾದ್ಯಂತ ರೈತ ಹೋರಾಟದ ವತಿಯಿಂದ 'ಕರಾಳ ದಿನ' ಆಚರಣೆ ನಡೆದಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿಯಲು ಹೋಗಿ ತನ್ನ ಮುಖಕ್ಕೆ ತಾನೇ ಮಸಿ ಬಳಿದುಕೊಂಡಿದೆ ಎಂದು ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಯಾರ ಮಾತಿಗೂ ಮಣಿಯುವುದಿಲ್ಲ, ಅವರನ್ನು ಮಣಿಸಲು ಸಾಧ್ಯವಿಲ್ಲ ಎಂದೇ ಹೇಳುತ್ತಾರೆ. ಆದರೆ, ರೈತ ಹೋರಾಟದ ಎದುರು ಅವರು ತಲೆಬಾಗಲೇಬೇಕಿತ್ತು. ರೈತರು ಒಟ್ಟಾಗಿ ಮೋದಿಯನ್ನು ಮಣಿಸಿದ್ದರು. ಈ ಮೂಲಕ ದೇಶದ ರೈತ ಹೋರಾಟ ತನ್ನ ಪ್ರಾಮಾಣಿಕತೆಯನ್ನು ಮೆರೆದಿತ್ತು. ಆದರೆ, ಈ ಹೋರಾಟವನ್ನು ಮುನ್ನಡೆಸಿದ ನಾಯಕರ ಮೇಲೆ ಮಸಿ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ತನ್ನ ಮುಖಕ್ಕೆ ತಾನೇ ಮಸಿ ಎರಚಿಕೊಂಡಿದೆ” ಎಂದು ಕಿಡಿಕಾರಿದರು.

“ಭಿನ್ನ ಅಭಿಪ್ರಾಯಗಳನ್ನೂ ಗೌರವಿಸುವುದು ಪ್ರಜಾಪ್ರಭುತ್ವದ ಸೌಂದರ್ಯ. ಆದರೆ, ಭಾರತೀಯ ಜನತಾ ಪಕ್ಷ ಭಿನ್ನ ಅಭಿಪ್ರಾಯಗಳನ್ನು ಗೌರವಿಸುವುದಿರಲಿ, ಪರಿಗಣಿಸುವುದೂ ಇಲ್ಲ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿನ ಹೆಸರಿಗೂ ಮಸಿ ಬಳಿದುಬಿಟ್ಟಿದೆ” ಎಂದು ವಿಷಾದಿಸಿದರು.

ಬಿಜೆಪಿ ಸರ್ಕಾರ ದೇಶದ ರೈತ ಹೋರಾಟವನ್ನು ಮುಗಿಸಲು ವ್ಯವಸ್ಥಿತ ಸಂಚು ರೂಪಿಸುತ್ತಿದೆ. ರಾಕೇಶ್ ಟಿಕಾಯತ್ ಮೇಲಿನ ಮಸಿ ದಾಳಿಯೂ ಅದರ ಒಂದು ಭಾಗ. ಆದರೆ, ಬಿಜೆಪಿಗರ ಯಾವ ಸಂಚಿಗೂ ರೈತ ಹೋರಾಟ ಬಗ್ಗುವುದಿಲ್ಲ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಎಚ್ಚರಿಸಿದ್ದಾರೆ.

“ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಕೇಶ್ ಟಿಕಾಯತ್‌ ನೇತೃತ್ವದಲ್ಲಿ ರೈತರು ಒಂದೂವರೆ ವರ್ಷ ದೆಹಲಿಯಲ್ಲಿ ಹೋರಾಟ ನಡೆಸಿದ್ದರು. ರೈತ ಹೋರಾಟದ ಎದುರು ಕೊನೆಗೂ ಕೇಂದ್ರ ಸರ್ಕಾರ ಮಂಡಿಯೂರಿತ್ತು. ಆ ಸೇಡನ್ನು ಬಿಜೆಪಿ ಈ ರೀತಿ ತೀರಿಸಿಕೊಳ್ಳುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ರಾಕೇಶ್‌ ಟಿಕಾಯತ್ ಮತ್ತು ರೈತರು ಹೋರಾಡಿದ್ದು, ಬಿಜೆಪಿ ಸರ್ಕಾರದ ವಿರುದ್ಧ. ಕರ್ನಾಟಕದಲ್ಲೂ ಅವರದ್ದೇ ಸರ್ಕಾರವಿದೆ. ಟಿಕಾಯತ್ ಮೇಲೆ ಹಲ್ಲೆ ನಡೆಸಿದವರೂ ಬಿಜೆಪಿ ಕಾರ್ಯಕರ್ತರೇ. ಇವನ್ನೆಲ್ಲ ಗಮನಿಸಿದರೆ ಬಿಜೆಪಿ ನಾಯಕರೇ ಮುಂದೆ ನಿಂತು ಹಲ್ಲೆ ನಡೆಸಿದೆ ಮತ್ತು ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರವೇ ಸಂಚು ರೂಪಿಸಿದೆ ಎಂಬುದು ಸ್ಪಷ್ಟವಾಗುತ್ತದೆ. ಆದರೆ, ಇಂತಹ ಕಿಡಿಗೇಡಿತನಗಳಿಗೆ ರೈತರು ಎಂದಿಗೂ ಬಗ್ಗುವುದಿಲ್ಲ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ಇಂತಹ ಕಿಡಿಗೇಡಿ ದಾಳಿಗಳ ಮೂಲಕ ರೈತ ಹೋರಾಟದ ಸದ್ದಡಗಿಸಿಬಿಡಬಹುದು ಎಂದು ಬಿಜೆಪಿ ನಾಯಕರು ತಿಳಿದುಕೊಂಡಿದ್ದರೆ ಅದು ಭ್ರಮೆಯಷ್ಟೆ. ಬಿಜೆಪಿ ಸರ್ಕಾರಗಳ ನಡೆಯನ್ನು ಇಡೀ ನಾಡಿನ ಜನ ನೋಡುತ್ತಿದ್ದಾರೆ. ರೈತ ಹೋರಾಟ ಶೀಘ್ರದಲ್ಲೇ ರಾಜಕೀಯ ಶಕ್ತಿಯಾಗಿ ರೂಪುಗೊಳ್ಳಲಿದೆ. ಇದರ ಫಲಿತಾಂಶವನ್ನು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅನುಭವಿಸಲಿದೆ” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಚುಕ್ಕಿ ನಂಜುಂಡಸ್ವಾಮಿ, ಗುರುಪ್ರಸಾದ್ ಕೆರಗೋಡು, ಎಸ್.ಆರ್ ಹೀರೇಮಠ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸೋಮವಾರ ರೈತ ನಾಯಕ ರಾಕೇಶ್ ಟಿಕಾಯತ್ ಪತ್ರಿಕಾಗೋಷ್ಠಿಗೆ ಸೂಕ್ತ ಭದ್ರತೆ ನೀಡುವಲ್ಲಿ ಸರ್ಕಾರ ವಿಫಲವಾಗಿತ್ತು. ಪರಿಣಾಮ ಟಿಕಾಯತ್ ಮೇಲೆ ಹಲ್ಲೆ ನಡೆದಿತ್ತು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಸ್ವತಂತ್ರ ಉದ್ಯಾನದಲ್ಲಿ ನಡೆದಿದ್ದ ರೈತ ಪ್ರತಿಭಟನೆಗೆ ಬಿಗಿ ಪೊಲೀಸ್ ಭದ್ರತೆ ನೀಡಿತ್ತು. ರೈತರು ಪ್ರತಿಭಟನೆ ನಡೆಸಿದ ಜಾಗದ ಸುತ್ತಲೂ ಪೊಲೀಸ್ ಸರ್ಪಗಾವಲು ನೀಡಲಾಗಿತ್ತು. ಭದ್ರತೆಗೆ ಕನಿಷ್ಟ 50 ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು.

ರಾಜ್ಯಾದ್ಯಂತ ಪ್ರತಿಭಟನೆ

ರಾಕೇಶ್ ಟಿಕಾಯತ್ ಮೇಲಿನ ದಾಳಿಯನ್ನು ಖಂಡಿಸಿ ಸಿಂಧನೂರು, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರು ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು. ‘ಕರಾಳ ದಿನ’ ಆಚರಿಸಿದರು. ಪ್ರತಿಭಟನೆಯಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...