Homeಚಳವಳಿಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಾಡಿನಾದ್ಯಂತ ರೈತ ಹೋರಾಟದ ವತಿಯಿಂದ 'ಕರಾಳ ದಿನ' ಆಚರಣೆ ನಡೆದಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿಯಲು ಹೋಗಿ ತನ್ನ ಮುಖಕ್ಕೆ ತಾನೇ ಮಸಿ ಬಳಿದುಕೊಂಡಿದೆ ಎಂದು ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಯಾರ ಮಾತಿಗೂ ಮಣಿಯುವುದಿಲ್ಲ, ಅವರನ್ನು ಮಣಿಸಲು ಸಾಧ್ಯವಿಲ್ಲ ಎಂದೇ ಹೇಳುತ್ತಾರೆ. ಆದರೆ, ರೈತ ಹೋರಾಟದ ಎದುರು ಅವರು ತಲೆಬಾಗಲೇಬೇಕಿತ್ತು. ರೈತರು ಒಟ್ಟಾಗಿ ಮೋದಿಯನ್ನು ಮಣಿಸಿದ್ದರು. ಈ ಮೂಲಕ ದೇಶದ ರೈತ ಹೋರಾಟ ತನ್ನ ಪ್ರಾಮಾಣಿಕತೆಯನ್ನು ಮೆರೆದಿತ್ತು. ಆದರೆ, ಈ ಹೋರಾಟವನ್ನು ಮುನ್ನಡೆಸಿದ ನಾಯಕರ ಮೇಲೆ ಮಸಿ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ತನ್ನ ಮುಖಕ್ಕೆ ತಾನೇ ಮಸಿ ಎರಚಿಕೊಂಡಿದೆ” ಎಂದು ಕಿಡಿಕಾರಿದರು.

“ಭಿನ್ನ ಅಭಿಪ್ರಾಯಗಳನ್ನೂ ಗೌರವಿಸುವುದು ಪ್ರಜಾಪ್ರಭುತ್ವದ ಸೌಂದರ್ಯ. ಆದರೆ, ಭಾರತೀಯ ಜನತಾ ಪಕ್ಷ ಭಿನ್ನ ಅಭಿಪ್ರಾಯಗಳನ್ನು ಗೌರವಿಸುವುದಿರಲಿ, ಪರಿಗಣಿಸುವುದೂ ಇಲ್ಲ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿನ ಹೆಸರಿಗೂ ಮಸಿ ಬಳಿದುಬಿಟ್ಟಿದೆ” ಎಂದು ವಿಷಾದಿಸಿದರು.

ಬಿಜೆಪಿ ಸರ್ಕಾರ ದೇಶದ ರೈತ ಹೋರಾಟವನ್ನು ಮುಗಿಸಲು ವ್ಯವಸ್ಥಿತ ಸಂಚು ರೂಪಿಸುತ್ತಿದೆ. ರಾಕೇಶ್ ಟಿಕಾಯತ್ ಮೇಲಿನ ಮಸಿ ದಾಳಿಯೂ ಅದರ ಒಂದು ಭಾಗ. ಆದರೆ, ಬಿಜೆಪಿಗರ ಯಾವ ಸಂಚಿಗೂ ರೈತ ಹೋರಾಟ ಬಗ್ಗುವುದಿಲ್ಲ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಎಚ್ಚರಿಸಿದ್ದಾರೆ.

“ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಕೇಶ್ ಟಿಕಾಯತ್‌ ನೇತೃತ್ವದಲ್ಲಿ ರೈತರು ಒಂದೂವರೆ ವರ್ಷ ದೆಹಲಿಯಲ್ಲಿ ಹೋರಾಟ ನಡೆಸಿದ್ದರು. ರೈತ ಹೋರಾಟದ ಎದುರು ಕೊನೆಗೂ ಕೇಂದ್ರ ಸರ್ಕಾರ ಮಂಡಿಯೂರಿತ್ತು. ಆ ಸೇಡನ್ನು ಬಿಜೆಪಿ ಈ ರೀತಿ ತೀರಿಸಿಕೊಳ್ಳುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ರಾಕೇಶ್‌ ಟಿಕಾಯತ್ ಮತ್ತು ರೈತರು ಹೋರಾಡಿದ್ದು, ಬಿಜೆಪಿ ಸರ್ಕಾರದ ವಿರುದ್ಧ. ಕರ್ನಾಟಕದಲ್ಲೂ ಅವರದ್ದೇ ಸರ್ಕಾರವಿದೆ. ಟಿಕಾಯತ್ ಮೇಲೆ ಹಲ್ಲೆ ನಡೆಸಿದವರೂ ಬಿಜೆಪಿ ಕಾರ್ಯಕರ್ತರೇ. ಇವನ್ನೆಲ್ಲ ಗಮನಿಸಿದರೆ ಬಿಜೆಪಿ ನಾಯಕರೇ ಮುಂದೆ ನಿಂತು ಹಲ್ಲೆ ನಡೆಸಿದೆ ಮತ್ತು ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರವೇ ಸಂಚು ರೂಪಿಸಿದೆ ಎಂಬುದು ಸ್ಪಷ್ಟವಾಗುತ್ತದೆ. ಆದರೆ, ಇಂತಹ ಕಿಡಿಗೇಡಿತನಗಳಿಗೆ ರೈತರು ಎಂದಿಗೂ ಬಗ್ಗುವುದಿಲ್ಲ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ಇಂತಹ ಕಿಡಿಗೇಡಿ ದಾಳಿಗಳ ಮೂಲಕ ರೈತ ಹೋರಾಟದ ಸದ್ದಡಗಿಸಿಬಿಡಬಹುದು ಎಂದು ಬಿಜೆಪಿ ನಾಯಕರು ತಿಳಿದುಕೊಂಡಿದ್ದರೆ ಅದು ಭ್ರಮೆಯಷ್ಟೆ. ಬಿಜೆಪಿ ಸರ್ಕಾರಗಳ ನಡೆಯನ್ನು ಇಡೀ ನಾಡಿನ ಜನ ನೋಡುತ್ತಿದ್ದಾರೆ. ರೈತ ಹೋರಾಟ ಶೀಘ್ರದಲ್ಲೇ ರಾಜಕೀಯ ಶಕ್ತಿಯಾಗಿ ರೂಪುಗೊಳ್ಳಲಿದೆ. ಇದರ ಫಲಿತಾಂಶವನ್ನು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅನುಭವಿಸಲಿದೆ” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಚುಕ್ಕಿ ನಂಜುಂಡಸ್ವಾಮಿ, ಗುರುಪ್ರಸಾದ್ ಕೆರಗೋಡು, ಎಸ್.ಆರ್ ಹೀರೇಮಠ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸೋಮವಾರ ರೈತ ನಾಯಕ ರಾಕೇಶ್ ಟಿಕಾಯತ್ ಪತ್ರಿಕಾಗೋಷ್ಠಿಗೆ ಸೂಕ್ತ ಭದ್ರತೆ ನೀಡುವಲ್ಲಿ ಸರ್ಕಾರ ವಿಫಲವಾಗಿತ್ತು. ಪರಿಣಾಮ ಟಿಕಾಯತ್ ಮೇಲೆ ಹಲ್ಲೆ ನಡೆದಿತ್ತು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಸ್ವತಂತ್ರ ಉದ್ಯಾನದಲ್ಲಿ ನಡೆದಿದ್ದ ರೈತ ಪ್ರತಿಭಟನೆಗೆ ಬಿಗಿ ಪೊಲೀಸ್ ಭದ್ರತೆ ನೀಡಿತ್ತು. ರೈತರು ಪ್ರತಿಭಟನೆ ನಡೆಸಿದ ಜಾಗದ ಸುತ್ತಲೂ ಪೊಲೀಸ್ ಸರ್ಪಗಾವಲು ನೀಡಲಾಗಿತ್ತು. ಭದ್ರತೆಗೆ ಕನಿಷ್ಟ 50 ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು.

ರಾಜ್ಯಾದ್ಯಂತ ಪ್ರತಿಭಟನೆ

ರಾಕೇಶ್ ಟಿಕಾಯತ್ ಮೇಲಿನ ದಾಳಿಯನ್ನು ಖಂಡಿಸಿ ಸಿಂಧನೂರು, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರು ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು. ‘ಕರಾಳ ದಿನ’ ಆಚರಿಸಿದರು. ಪ್ರತಿಭಟನೆಯಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...