Homeಚಳವಳಿಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಾಡಿನಾದ್ಯಂತ ರೈತ ಹೋರಾಟದ ವತಿಯಿಂದ 'ಕರಾಳ ದಿನ' ಆಚರಣೆ ನಡೆದಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿಯಲು ಹೋಗಿ ತನ್ನ ಮುಖಕ್ಕೆ ತಾನೇ ಮಸಿ ಬಳಿದುಕೊಂಡಿದೆ ಎಂದು ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಯಾರ ಮಾತಿಗೂ ಮಣಿಯುವುದಿಲ್ಲ, ಅವರನ್ನು ಮಣಿಸಲು ಸಾಧ್ಯವಿಲ್ಲ ಎಂದೇ ಹೇಳುತ್ತಾರೆ. ಆದರೆ, ರೈತ ಹೋರಾಟದ ಎದುರು ಅವರು ತಲೆಬಾಗಲೇಬೇಕಿತ್ತು. ರೈತರು ಒಟ್ಟಾಗಿ ಮೋದಿಯನ್ನು ಮಣಿಸಿದ್ದರು. ಈ ಮೂಲಕ ದೇಶದ ರೈತ ಹೋರಾಟ ತನ್ನ ಪ್ರಾಮಾಣಿಕತೆಯನ್ನು ಮೆರೆದಿತ್ತು. ಆದರೆ, ಈ ಹೋರಾಟವನ್ನು ಮುನ್ನಡೆಸಿದ ನಾಯಕರ ಮೇಲೆ ಮಸಿ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ತನ್ನ ಮುಖಕ್ಕೆ ತಾನೇ ಮಸಿ ಎರಚಿಕೊಂಡಿದೆ” ಎಂದು ಕಿಡಿಕಾರಿದರು.

“ಭಿನ್ನ ಅಭಿಪ್ರಾಯಗಳನ್ನೂ ಗೌರವಿಸುವುದು ಪ್ರಜಾಪ್ರಭುತ್ವದ ಸೌಂದರ್ಯ. ಆದರೆ, ಭಾರತೀಯ ಜನತಾ ಪಕ್ಷ ಭಿನ್ನ ಅಭಿಪ್ರಾಯಗಳನ್ನು ಗೌರವಿಸುವುದಿರಲಿ, ಪರಿಗಣಿಸುವುದೂ ಇಲ್ಲ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿನ ಹೆಸರಿಗೂ ಮಸಿ ಬಳಿದುಬಿಟ್ಟಿದೆ” ಎಂದು ವಿಷಾದಿಸಿದರು.

ಬಿಜೆಪಿ ಸರ್ಕಾರ ದೇಶದ ರೈತ ಹೋರಾಟವನ್ನು ಮುಗಿಸಲು ವ್ಯವಸ್ಥಿತ ಸಂಚು ರೂಪಿಸುತ್ತಿದೆ. ರಾಕೇಶ್ ಟಿಕಾಯತ್ ಮೇಲಿನ ಮಸಿ ದಾಳಿಯೂ ಅದರ ಒಂದು ಭಾಗ. ಆದರೆ, ಬಿಜೆಪಿಗರ ಯಾವ ಸಂಚಿಗೂ ರೈತ ಹೋರಾಟ ಬಗ್ಗುವುದಿಲ್ಲ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಎಚ್ಚರಿಸಿದ್ದಾರೆ.

“ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಕೇಶ್ ಟಿಕಾಯತ್‌ ನೇತೃತ್ವದಲ್ಲಿ ರೈತರು ಒಂದೂವರೆ ವರ್ಷ ದೆಹಲಿಯಲ್ಲಿ ಹೋರಾಟ ನಡೆಸಿದ್ದರು. ರೈತ ಹೋರಾಟದ ಎದುರು ಕೊನೆಗೂ ಕೇಂದ್ರ ಸರ್ಕಾರ ಮಂಡಿಯೂರಿತ್ತು. ಆ ಸೇಡನ್ನು ಬಿಜೆಪಿ ಈ ರೀತಿ ತೀರಿಸಿಕೊಳ್ಳುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ರಾಕೇಶ್‌ ಟಿಕಾಯತ್ ಮತ್ತು ರೈತರು ಹೋರಾಡಿದ್ದು, ಬಿಜೆಪಿ ಸರ್ಕಾರದ ವಿರುದ್ಧ. ಕರ್ನಾಟಕದಲ್ಲೂ ಅವರದ್ದೇ ಸರ್ಕಾರವಿದೆ. ಟಿಕಾಯತ್ ಮೇಲೆ ಹಲ್ಲೆ ನಡೆಸಿದವರೂ ಬಿಜೆಪಿ ಕಾರ್ಯಕರ್ತರೇ. ಇವನ್ನೆಲ್ಲ ಗಮನಿಸಿದರೆ ಬಿಜೆಪಿ ನಾಯಕರೇ ಮುಂದೆ ನಿಂತು ಹಲ್ಲೆ ನಡೆಸಿದೆ ಮತ್ತು ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರವೇ ಸಂಚು ರೂಪಿಸಿದೆ ಎಂಬುದು ಸ್ಪಷ್ಟವಾಗುತ್ತದೆ. ಆದರೆ, ಇಂತಹ ಕಿಡಿಗೇಡಿತನಗಳಿಗೆ ರೈತರು ಎಂದಿಗೂ ಬಗ್ಗುವುದಿಲ್ಲ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ಇಂತಹ ಕಿಡಿಗೇಡಿ ದಾಳಿಗಳ ಮೂಲಕ ರೈತ ಹೋರಾಟದ ಸದ್ದಡಗಿಸಿಬಿಡಬಹುದು ಎಂದು ಬಿಜೆಪಿ ನಾಯಕರು ತಿಳಿದುಕೊಂಡಿದ್ದರೆ ಅದು ಭ್ರಮೆಯಷ್ಟೆ. ಬಿಜೆಪಿ ಸರ್ಕಾರಗಳ ನಡೆಯನ್ನು ಇಡೀ ನಾಡಿನ ಜನ ನೋಡುತ್ತಿದ್ದಾರೆ. ರೈತ ಹೋರಾಟ ಶೀಘ್ರದಲ್ಲೇ ರಾಜಕೀಯ ಶಕ್ತಿಯಾಗಿ ರೂಪುಗೊಳ್ಳಲಿದೆ. ಇದರ ಫಲಿತಾಂಶವನ್ನು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅನುಭವಿಸಲಿದೆ” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಚುಕ್ಕಿ ನಂಜುಂಡಸ್ವಾಮಿ, ಗುರುಪ್ರಸಾದ್ ಕೆರಗೋಡು, ಎಸ್.ಆರ್ ಹೀರೇಮಠ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸೋಮವಾರ ರೈತ ನಾಯಕ ರಾಕೇಶ್ ಟಿಕಾಯತ್ ಪತ್ರಿಕಾಗೋಷ್ಠಿಗೆ ಸೂಕ್ತ ಭದ್ರತೆ ನೀಡುವಲ್ಲಿ ಸರ್ಕಾರ ವಿಫಲವಾಗಿತ್ತು. ಪರಿಣಾಮ ಟಿಕಾಯತ್ ಮೇಲೆ ಹಲ್ಲೆ ನಡೆದಿತ್ತು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಸ್ವತಂತ್ರ ಉದ್ಯಾನದಲ್ಲಿ ನಡೆದಿದ್ದ ರೈತ ಪ್ರತಿಭಟನೆಗೆ ಬಿಗಿ ಪೊಲೀಸ್ ಭದ್ರತೆ ನೀಡಿತ್ತು. ರೈತರು ಪ್ರತಿಭಟನೆ ನಡೆಸಿದ ಜಾಗದ ಸುತ್ತಲೂ ಪೊಲೀಸ್ ಸರ್ಪಗಾವಲು ನೀಡಲಾಗಿತ್ತು. ಭದ್ರತೆಗೆ ಕನಿಷ್ಟ 50 ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು.

ರಾಜ್ಯಾದ್ಯಂತ ಪ್ರತಿಭಟನೆ

ರಾಕೇಶ್ ಟಿಕಾಯತ್ ಮೇಲಿನ ದಾಳಿಯನ್ನು ಖಂಡಿಸಿ ಸಿಂಧನೂರು, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರು ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು. ‘ಕರಾಳ ದಿನ’ ಆಚರಿಸಿದರು. ಪ್ರತಿಭಟನೆಯಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...