Homeಚಳವಳಿಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಾಡಿನಾದ್ಯಂತ ರೈತ ಹೋರಾಟದ ವತಿಯಿಂದ 'ಕರಾಳ ದಿನ' ಆಚರಣೆ ನಡೆದಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿಯಲು ಹೋಗಿ ತನ್ನ ಮುಖಕ್ಕೆ ತಾನೇ ಮಸಿ ಬಳಿದುಕೊಂಡಿದೆ ಎಂದು ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಯಾರ ಮಾತಿಗೂ ಮಣಿಯುವುದಿಲ್ಲ, ಅವರನ್ನು ಮಣಿಸಲು ಸಾಧ್ಯವಿಲ್ಲ ಎಂದೇ ಹೇಳುತ್ತಾರೆ. ಆದರೆ, ರೈತ ಹೋರಾಟದ ಎದುರು ಅವರು ತಲೆಬಾಗಲೇಬೇಕಿತ್ತು. ರೈತರು ಒಟ್ಟಾಗಿ ಮೋದಿಯನ್ನು ಮಣಿಸಿದ್ದರು. ಈ ಮೂಲಕ ದೇಶದ ರೈತ ಹೋರಾಟ ತನ್ನ ಪ್ರಾಮಾಣಿಕತೆಯನ್ನು ಮೆರೆದಿತ್ತು. ಆದರೆ, ಈ ಹೋರಾಟವನ್ನು ಮುನ್ನಡೆಸಿದ ನಾಯಕರ ಮೇಲೆ ಮಸಿ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ತನ್ನ ಮುಖಕ್ಕೆ ತಾನೇ ಮಸಿ ಎರಚಿಕೊಂಡಿದೆ” ಎಂದು ಕಿಡಿಕಾರಿದರು.

“ಭಿನ್ನ ಅಭಿಪ್ರಾಯಗಳನ್ನೂ ಗೌರವಿಸುವುದು ಪ್ರಜಾಪ್ರಭುತ್ವದ ಸೌಂದರ್ಯ. ಆದರೆ, ಭಾರತೀಯ ಜನತಾ ಪಕ್ಷ ಭಿನ್ನ ಅಭಿಪ್ರಾಯಗಳನ್ನು ಗೌರವಿಸುವುದಿರಲಿ, ಪರಿಗಣಿಸುವುದೂ ಇಲ್ಲ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿನ ಹೆಸರಿಗೂ ಮಸಿ ಬಳಿದುಬಿಟ್ಟಿದೆ” ಎಂದು ವಿಷಾದಿಸಿದರು.

ಬಿಜೆಪಿ ಸರ್ಕಾರ ದೇಶದ ರೈತ ಹೋರಾಟವನ್ನು ಮುಗಿಸಲು ವ್ಯವಸ್ಥಿತ ಸಂಚು ರೂಪಿಸುತ್ತಿದೆ. ರಾಕೇಶ್ ಟಿಕಾಯತ್ ಮೇಲಿನ ಮಸಿ ದಾಳಿಯೂ ಅದರ ಒಂದು ಭಾಗ. ಆದರೆ, ಬಿಜೆಪಿಗರ ಯಾವ ಸಂಚಿಗೂ ರೈತ ಹೋರಾಟ ಬಗ್ಗುವುದಿಲ್ಲ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಎಚ್ಚರಿಸಿದ್ದಾರೆ.

“ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಕೇಶ್ ಟಿಕಾಯತ್‌ ನೇತೃತ್ವದಲ್ಲಿ ರೈತರು ಒಂದೂವರೆ ವರ್ಷ ದೆಹಲಿಯಲ್ಲಿ ಹೋರಾಟ ನಡೆಸಿದ್ದರು. ರೈತ ಹೋರಾಟದ ಎದುರು ಕೊನೆಗೂ ಕೇಂದ್ರ ಸರ್ಕಾರ ಮಂಡಿಯೂರಿತ್ತು. ಆ ಸೇಡನ್ನು ಬಿಜೆಪಿ ಈ ರೀತಿ ತೀರಿಸಿಕೊಳ್ಳುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ರಾಕೇಶ್‌ ಟಿಕಾಯತ್ ಮತ್ತು ರೈತರು ಹೋರಾಡಿದ್ದು, ಬಿಜೆಪಿ ಸರ್ಕಾರದ ವಿರುದ್ಧ. ಕರ್ನಾಟಕದಲ್ಲೂ ಅವರದ್ದೇ ಸರ್ಕಾರವಿದೆ. ಟಿಕಾಯತ್ ಮೇಲೆ ಹಲ್ಲೆ ನಡೆಸಿದವರೂ ಬಿಜೆಪಿ ಕಾರ್ಯಕರ್ತರೇ. ಇವನ್ನೆಲ್ಲ ಗಮನಿಸಿದರೆ ಬಿಜೆಪಿ ನಾಯಕರೇ ಮುಂದೆ ನಿಂತು ಹಲ್ಲೆ ನಡೆಸಿದೆ ಮತ್ತು ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರವೇ ಸಂಚು ರೂಪಿಸಿದೆ ಎಂಬುದು ಸ್ಪಷ್ಟವಾಗುತ್ತದೆ. ಆದರೆ, ಇಂತಹ ಕಿಡಿಗೇಡಿತನಗಳಿಗೆ ರೈತರು ಎಂದಿಗೂ ಬಗ್ಗುವುದಿಲ್ಲ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ಇಂತಹ ಕಿಡಿಗೇಡಿ ದಾಳಿಗಳ ಮೂಲಕ ರೈತ ಹೋರಾಟದ ಸದ್ದಡಗಿಸಿಬಿಡಬಹುದು ಎಂದು ಬಿಜೆಪಿ ನಾಯಕರು ತಿಳಿದುಕೊಂಡಿದ್ದರೆ ಅದು ಭ್ರಮೆಯಷ್ಟೆ. ಬಿಜೆಪಿ ಸರ್ಕಾರಗಳ ನಡೆಯನ್ನು ಇಡೀ ನಾಡಿನ ಜನ ನೋಡುತ್ತಿದ್ದಾರೆ. ರೈತ ಹೋರಾಟ ಶೀಘ್ರದಲ್ಲೇ ರಾಜಕೀಯ ಶಕ್ತಿಯಾಗಿ ರೂಪುಗೊಳ್ಳಲಿದೆ. ಇದರ ಫಲಿತಾಂಶವನ್ನು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅನುಭವಿಸಲಿದೆ” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಚುಕ್ಕಿ ನಂಜುಂಡಸ್ವಾಮಿ, ಗುರುಪ್ರಸಾದ್ ಕೆರಗೋಡು, ಎಸ್.ಆರ್ ಹೀರೇಮಠ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸೋಮವಾರ ರೈತ ನಾಯಕ ರಾಕೇಶ್ ಟಿಕಾಯತ್ ಪತ್ರಿಕಾಗೋಷ್ಠಿಗೆ ಸೂಕ್ತ ಭದ್ರತೆ ನೀಡುವಲ್ಲಿ ಸರ್ಕಾರ ವಿಫಲವಾಗಿತ್ತು. ಪರಿಣಾಮ ಟಿಕಾಯತ್ ಮೇಲೆ ಹಲ್ಲೆ ನಡೆದಿತ್ತು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಸ್ವತಂತ್ರ ಉದ್ಯಾನದಲ್ಲಿ ನಡೆದಿದ್ದ ರೈತ ಪ್ರತಿಭಟನೆಗೆ ಬಿಗಿ ಪೊಲೀಸ್ ಭದ್ರತೆ ನೀಡಿತ್ತು. ರೈತರು ಪ್ರತಿಭಟನೆ ನಡೆಸಿದ ಜಾಗದ ಸುತ್ತಲೂ ಪೊಲೀಸ್ ಸರ್ಪಗಾವಲು ನೀಡಲಾಗಿತ್ತು. ಭದ್ರತೆಗೆ ಕನಿಷ್ಟ 50 ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು.

ರಾಜ್ಯಾದ್ಯಂತ ಪ್ರತಿಭಟನೆ

ರಾಕೇಶ್ ಟಿಕಾಯತ್ ಮೇಲಿನ ದಾಳಿಯನ್ನು ಖಂಡಿಸಿ ಸಿಂಧನೂರು, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರು ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು. ‘ಕರಾಳ ದಿನ’ ಆಚರಿಸಿದರು. ಪ್ರತಿಭಟನೆಯಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...