Homeಚಳವಳಿಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ಬಿಜೆಪಿ ತನಗೆ ತಾನೇ ಮಸಿ ಬಳಿದುಕೊಂಡಿದೆ: ಪ್ರಕಾಶ್ ಕಮ್ಮರಡಿ ಆಕ್ರೋಶ

ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಾಡಿನಾದ್ಯಂತ ರೈತ ಹೋರಾಟದ ವತಿಯಿಂದ 'ಕರಾಳ ದಿನ' ಆಚರಣೆ ನಡೆದಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿಯಲು ಹೋಗಿ ತನ್ನ ಮುಖಕ್ಕೆ ತಾನೇ ಮಸಿ ಬಳಿದುಕೊಂಡಿದೆ ಎಂದು ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಯಾರ ಮಾತಿಗೂ ಮಣಿಯುವುದಿಲ್ಲ, ಅವರನ್ನು ಮಣಿಸಲು ಸಾಧ್ಯವಿಲ್ಲ ಎಂದೇ ಹೇಳುತ್ತಾರೆ. ಆದರೆ, ರೈತ ಹೋರಾಟದ ಎದುರು ಅವರು ತಲೆಬಾಗಲೇಬೇಕಿತ್ತು. ರೈತರು ಒಟ್ಟಾಗಿ ಮೋದಿಯನ್ನು ಮಣಿಸಿದ್ದರು. ಈ ಮೂಲಕ ದೇಶದ ರೈತ ಹೋರಾಟ ತನ್ನ ಪ್ರಾಮಾಣಿಕತೆಯನ್ನು ಮೆರೆದಿತ್ತು. ಆದರೆ, ಈ ಹೋರಾಟವನ್ನು ಮುನ್ನಡೆಸಿದ ನಾಯಕರ ಮೇಲೆ ಮಸಿ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ತನ್ನ ಮುಖಕ್ಕೆ ತಾನೇ ಮಸಿ ಎರಚಿಕೊಂಡಿದೆ” ಎಂದು ಕಿಡಿಕಾರಿದರು.

“ಭಿನ್ನ ಅಭಿಪ್ರಾಯಗಳನ್ನೂ ಗೌರವಿಸುವುದು ಪ್ರಜಾಪ್ರಭುತ್ವದ ಸೌಂದರ್ಯ. ಆದರೆ, ಭಾರತೀಯ ಜನತಾ ಪಕ್ಷ ಭಿನ್ನ ಅಭಿಪ್ರಾಯಗಳನ್ನು ಗೌರವಿಸುವುದಿರಲಿ, ಪರಿಗಣಿಸುವುದೂ ಇಲ್ಲ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿನ ಹೆಸರಿಗೂ ಮಸಿ ಬಳಿದುಬಿಟ್ಟಿದೆ” ಎಂದು ವಿಷಾದಿಸಿದರು.

ಬಿಜೆಪಿ ಸರ್ಕಾರ ದೇಶದ ರೈತ ಹೋರಾಟವನ್ನು ಮುಗಿಸಲು ವ್ಯವಸ್ಥಿತ ಸಂಚು ರೂಪಿಸುತ್ತಿದೆ. ರಾಕೇಶ್ ಟಿಕಾಯತ್ ಮೇಲಿನ ಮಸಿ ದಾಳಿಯೂ ಅದರ ಒಂದು ಭಾಗ. ಆದರೆ, ಬಿಜೆಪಿಗರ ಯಾವ ಸಂಚಿಗೂ ರೈತ ಹೋರಾಟ ಬಗ್ಗುವುದಿಲ್ಲ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಎಚ್ಚರಿಸಿದ್ದಾರೆ.

“ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಕೇಶ್ ಟಿಕಾಯತ್‌ ನೇತೃತ್ವದಲ್ಲಿ ರೈತರು ಒಂದೂವರೆ ವರ್ಷ ದೆಹಲಿಯಲ್ಲಿ ಹೋರಾಟ ನಡೆಸಿದ್ದರು. ರೈತ ಹೋರಾಟದ ಎದುರು ಕೊನೆಗೂ ಕೇಂದ್ರ ಸರ್ಕಾರ ಮಂಡಿಯೂರಿತ್ತು. ಆ ಸೇಡನ್ನು ಬಿಜೆಪಿ ಈ ರೀತಿ ತೀರಿಸಿಕೊಳ್ಳುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ರಾಕೇಶ್‌ ಟಿಕಾಯತ್ ಮತ್ತು ರೈತರು ಹೋರಾಡಿದ್ದು, ಬಿಜೆಪಿ ಸರ್ಕಾರದ ವಿರುದ್ಧ. ಕರ್ನಾಟಕದಲ್ಲೂ ಅವರದ್ದೇ ಸರ್ಕಾರವಿದೆ. ಟಿಕಾಯತ್ ಮೇಲೆ ಹಲ್ಲೆ ನಡೆಸಿದವರೂ ಬಿಜೆಪಿ ಕಾರ್ಯಕರ್ತರೇ. ಇವನ್ನೆಲ್ಲ ಗಮನಿಸಿದರೆ ಬಿಜೆಪಿ ನಾಯಕರೇ ಮುಂದೆ ನಿಂತು ಹಲ್ಲೆ ನಡೆಸಿದೆ ಮತ್ತು ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರವೇ ಸಂಚು ರೂಪಿಸಿದೆ ಎಂಬುದು ಸ್ಪಷ್ಟವಾಗುತ್ತದೆ. ಆದರೆ, ಇಂತಹ ಕಿಡಿಗೇಡಿತನಗಳಿಗೆ ರೈತರು ಎಂದಿಗೂ ಬಗ್ಗುವುದಿಲ್ಲ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ಇಂತಹ ಕಿಡಿಗೇಡಿ ದಾಳಿಗಳ ಮೂಲಕ ರೈತ ಹೋರಾಟದ ಸದ್ದಡಗಿಸಿಬಿಡಬಹುದು ಎಂದು ಬಿಜೆಪಿ ನಾಯಕರು ತಿಳಿದುಕೊಂಡಿದ್ದರೆ ಅದು ಭ್ರಮೆಯಷ್ಟೆ. ಬಿಜೆಪಿ ಸರ್ಕಾರಗಳ ನಡೆಯನ್ನು ಇಡೀ ನಾಡಿನ ಜನ ನೋಡುತ್ತಿದ್ದಾರೆ. ರೈತ ಹೋರಾಟ ಶೀಘ್ರದಲ್ಲೇ ರಾಜಕೀಯ ಶಕ್ತಿಯಾಗಿ ರೂಪುಗೊಳ್ಳಲಿದೆ. ಇದರ ಫಲಿತಾಂಶವನ್ನು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅನುಭವಿಸಲಿದೆ” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಚುಕ್ಕಿ ನಂಜುಂಡಸ್ವಾಮಿ, ಗುರುಪ್ರಸಾದ್ ಕೆರಗೋಡು, ಎಸ್.ಆರ್ ಹೀರೇಮಠ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸೋಮವಾರ ರೈತ ನಾಯಕ ರಾಕೇಶ್ ಟಿಕಾಯತ್ ಪತ್ರಿಕಾಗೋಷ್ಠಿಗೆ ಸೂಕ್ತ ಭದ್ರತೆ ನೀಡುವಲ್ಲಿ ಸರ್ಕಾರ ವಿಫಲವಾಗಿತ್ತು. ಪರಿಣಾಮ ಟಿಕಾಯತ್ ಮೇಲೆ ಹಲ್ಲೆ ನಡೆದಿತ್ತು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಸ್ವತಂತ್ರ ಉದ್ಯಾನದಲ್ಲಿ ನಡೆದಿದ್ದ ರೈತ ಪ್ರತಿಭಟನೆಗೆ ಬಿಗಿ ಪೊಲೀಸ್ ಭದ್ರತೆ ನೀಡಿತ್ತು. ರೈತರು ಪ್ರತಿಭಟನೆ ನಡೆಸಿದ ಜಾಗದ ಸುತ್ತಲೂ ಪೊಲೀಸ್ ಸರ್ಪಗಾವಲು ನೀಡಲಾಗಿತ್ತು. ಭದ್ರತೆಗೆ ಕನಿಷ್ಟ 50 ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು.

ರಾಜ್ಯಾದ್ಯಂತ ಪ್ರತಿಭಟನೆ

ರಾಕೇಶ್ ಟಿಕಾಯತ್ ಮೇಲಿನ ದಾಳಿಯನ್ನು ಖಂಡಿಸಿ ಸಿಂಧನೂರು, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರು ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು. ‘ಕರಾಳ ದಿನ’ ಆಚರಿಸಿದರು. ಪ್ರತಿಭಟನೆಯಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...