Homeಮುಖಪುಟಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರ ಮೇಲೆ ಇದೇ ರೀತಿಯ ದಾಳಿ ಮುಂದುವರೆಸಿದ್ದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರು ರಸ್ತೆಯಲ್ಲಿ ಓಡಾಡಲು ಸಹ ಜನರು ಬಿಡುವುದಿಲ್ಲ. - ರಾಕೇಶ್ ಟಿಕಾಯತ್

- Advertisement -
- Advertisement -

ನಿನ್ನೆ ರಾಜಸ್ಥಾನದ ಅಲ್ವಾರ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಸ್ಥಳೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಸೇರಿದಂತೆ ಇತರ ಮೂವರನ್ನು ಮುಂಜಾಗ್ರತ ಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ.

ಇನ್ನು ಘಟನೆಗೆ ಬಿಜೆಪಿಯೇ ನೇರ ಕಾರಣ ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರ ಮೇಲೆ ಇದೇ ರೀತಿಯ ದಾಳಿ ಮುಂದುವರೆಸಿದ್ದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರು ರಸ್ತೆಯಲ್ಲಿ ಓಡಾಡಲು ಸಹ ಜನರು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ದಾಳಿಕೋರರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ಯ ಸಕ್ರಿಯ ಸದಸ್ಯರಾಗಿದ್ದಾರೆ ಮತ್ತು ಸ್ಥಳೀಯ ಸಂಸದ ಬಾಲಕ್ ನಾಥ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪುನಿಯಾ ಅವರ ಆಪ್ತರಾಗಿದ್ದಾರೆ ಎಂದು ಟಿಕಾಯತ್ ಹೇಳಿದ್ದಾರೆ.

“ನಾವು ಮುಂದಿನ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸುತ್ತೇವೆ ಮತ್ತು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ. ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ ಮತ್ತು ನಮ್ಮ ಕಾರ್ಯಕ್ರಮಗಳು ಯೋಜಿಸಿದಂತೆ ಮುಂದುವರಿಯುತ್ತದೆ ಎಂದಿರುವ ಟಿಕಾಯತ್, ಈ ದಾಳಿಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ” ಅವರು ಎಲ್ಲಾ ರೈತರಿಗೆ ಮನವಿ ಮಾಡಿದ್ದಾರೆ.

“ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್‌ರವರ ಬೆಂಗಾವಲು ವಾಹನದ ಮೇಲಿನ ಬಿಜೆಪಿ ಗೂಂಡಾಗಳ ಹಲ್ಲೆ ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರೈತ ಹೋರಾಟ ಆರಂಭವಾದಾಗಿನಿಂದಲೂ ಬಿಜೆಪಿಯು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವುದರ ಮೂಲಕ ಹಿಂಸೆಗೆ ಪ್ರಚೋದನೆ ನೀಡುತ್ತಿದೆ. ರೈತರ ಹಕ್ಕುಗಳ ಪರವಾಗಿ ಹೋರಾಡುತ್ತಿರುವವರ ವಿರುದ್ಧ ಅಪ್ರಜಾತಾಂತ್ರಿಕ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸಂಯುಕ್ತ ಹೋರಾಟ – ಕರ್ನಾಟಕವು ರಾಕೇಶ್ ಟಿಕಾಯತ್ ಮೇಲಿನ ದಾಳಿಯನ್ನು ಖಂಡಿಸಿದೆ. ಈ ಎಲ್ಲಾ ಅನ್ಯಾಯಗಳ ಫಲವನ್ನು ಮೋದಿ ಸರ್ಕಾರ ಸದ್ಯದಲ್ಲಿಯೇ ಅನುಭವಿಸಲಿದೆ ಎಂದು ಹೇಳಿಕೆಯಲ್ಲಿ ಸಂಯುಕ್ತು ಹೋರಾಟ ಕರ್ನಾಟಕದ ಪರವಾಗಿ ಬಡಗಲಪುರ ನಾಗೇಂದ್ರ, ಜಿ.ಸಿ ಬಯ್ಯಾರೆಡ್ಡಿ ಮತ್ತು ಪಿ.ಗೋಪಾಲ್ ತಿಳಿಸಿದ್ದಾರೆ.

ದೆಹಲಿ-ಉತ್ತರ ಪ್ರದೇಶದ ಗಾಜಿಪುರ ಗಡಿಯಲ್ಲಿ ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಅವರು ನಾಲ್ಕು ತಿಂಗಳಿನಿಂದ ಮುನ್ನಡೆಸುತ್ತಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳಲ್ಲಿ ಭಾಗವಹಿಸಿ ಹೋರಾಟಕ್ಕೆ ಹುರುಪು ತುಂಬುತ್ತಿದ್ದಾರೆ.


ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....