Homeಕರ್ನಾಟಕಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

- Advertisement -
- Advertisement -

ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ರಾಜ್ಯ ಸರ್ಕಾರದ ಪರವಾನಗಿ ಹೊಂದಿದ್ದಾಗ್ಯೂ ಮಂಗಳೂರು ವ್ಯಾಪಾರಿಗಳನ್ನು ಅಲ್ಲಿನ ಮಹಾನಗರ ಪಾಲಿಕೆ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದಾರೆ. ಅಲ್ಲದೆ, ಹಣ್ಣು ತರಕಾರಿಗಳನ್ನು ಒತ್ತಾಯಪೂರ್ವಕವಾಗಿ ಕಸದ ಲಾರಿಗೆ ತುಂಬುವ ಮೂಲಕ ಅಮಾನವೀಯತೆ ಮೆರೆದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಜೀವನೋಪಾಯ ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರಿಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡುವಂತೆ ಎಪ್ರಿಲ್ 7 ರಂದು ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚಿಸಿತ್ತು.

ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರ ಪಡೆದಿರುವ ಬೀದಿಬದಿ ವ್ಯಾಪರಸ್ಥರಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸ್ಥಳೀಯ ಸಂಸ್ಥೆಗಳು ವ್ಯಾಪಾರಕ್ಕೆ ಅನುವು ಮಾಡಿಕೊಟ್ಟೆದೆ. ಆದರೆ ಮಂಗಳೂರಿನ ಮಹಾನಗರ ಪಾಲಿಕೆ ರಾಜ್ಯ ಸರ್ಕಾರದ ಸೂಚನೆ ಬಂದು ಒಂದು ವಾರವೆ ಕಳೆದರೂ, ವ್ಯಾಪಾರಕ್ಕೆ ಪಾಸ್ ಪಡೆದಿರುವ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಿದ್ದಲ್ಲದೆ ಅದನ್ನು ಕಸದ ಡಬ್ಬಿಗೆ ಹಾಕಿ ನಾಶಪಡಿಸಿದ್ದಾರೆ ಎಂದು ಬೀದಿಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ಭಾರತದಾದ್ಯಂತ ಲಾಕ್‌ಡೌನ್ ಘೋಷಿದಂದಿನಿಂದ ದೇಶದ ಹಲವಾರು ಜನರು ಉದ್ಯೋಗ ಕಳೆದುಕೊಂಡು ತಮ್ಮ ಊರಿಗೆ ಕಾಲ್ನಡಿಗೆಯಲ್ಲೆ ಹೊರಟು ದಾರಿಯಲ್ಲೆ ಸಾವಿಗೀಡಾದ ಘಟನೆಗಳು ಈಗಾಗಲೇ ಹಸಿಹಸಿಯಾಗಿದೆ. ದೇಶದಾದ್ಯಂತ ಇರುವ ಅಸಂಘಟಿತ ಕಾರ್ಮಿಕರು ಇನ್ನೂ ಪ್ರಶ್ನಾರ್ಥಕವಾಗಿ ಆಡಳಿತದ ಕಡೆಗೆ ನೋಡುತ್ತಿದ್ದಾರೆ. ಹೀಗಿರುವಾಗ ಆಡಳಿತ ಇಷ್ಟು ಕ್ರೂರಿಯಾಗಬಾರದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ನಿನ್ನೆ (ಮಂಗಳವಾರ) ನಗರದ ಸ್ಟೇಟ್‌ಬ್ಯಾಂಕ್ ಪರಿಸರದಲ್ಲಿ ಬೀದಿಬದಿ ವ್ಯಾಪರಸ್ಥರ ಮೇಲೆ ದಾಳಿ ಮಾಡಿದ ಮಹಾನಗರ ಪಾಲಿಕೆ ಮಾರಾಟಕ್ಕೆ ಇಟ್ಟಿದ್ದ ಸರಕುಗಳನ್ನು ಕಾರ್ಪೋರೇಶನ್ ಕಸದ ಗಾಡಿಗೆ ತುಂಬಿ ಅಮಾನವೀಯತೆ ಮೆರೆದಿದ್ದಾರೆ. ವ್ಯಾಪಾರಸ್ಥರು ವ್ಯಾಪಾರಿ ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರವನ್ನು ಹೊಂದಿದ್ದರೂ ವಸ್ತುಗಳನ್ನು ಕಸವೆತ್ತುವ ಲಾರಿಗೆ ತುಂಬಿ ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಬೀದಿಬದಿ ವ್ಯಾಪಾರಸ್ಥರನ್ನು ನಾನುಗೌರಿ.ಕಾಮ್ ಮಾತನಾಡಿಸಿದಾಗ, “ಕೊರೊನಾ ಬರುತ್ತದೆಯೆಂದು ಲಾಕ್‌ಡೌನ್ ಮಾಡಲಾಗಿದೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕೊರೊನ ಬರುವುದಕ್ಕಿಂತಲೂ ಮುಂಚೆಯೆ ನಾವು ಹಸಿವಿನಿಂದ ಸಾಯುತ್ತೇವೆ. ಮನೆಗೆ ಹಾಲು ಕೊಳ್ಳಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ವಸ್ತುಗಳನ್ನು ಮಾತ್ರವಲ್ಲದೆ ತಕ್ಕಡಿ ಹಾಗೂ ಇತರ ವಸ್ತುಗಳನ್ನೂ ಸಹ ಪಾಲಿಕೆ ವಶಪಡಿಸಿಕೊಂಡಿದೆ. ಆಹಾರ ವಸ್ತುಗಳನ್ನು ಪೊಲೀಸರ ರಕ್ಷಣೆಯಲ್ಲಿ ಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಸವನ್ನು ತುಂಬುವಂತೆ ತುಂಬಿ ನಾಶಪಡಿಸಲಾಗಿದೆ” ಎಂದು ಸ್ಥಳೀಯ ವ್ಯಾಪಾರಿ ಸಲೀಂ ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾದ ಸಂತೋಷ್ ಕುಮಾರ್ “ಬೀದಿಬದಿ ವ್ಯಾಪಾರಸ್ಥರಿಗೆ ಈಗಾಗಲೇ ಗುರುತಿನ ಚೀಟಿಯನ್ನು ನೀಡಿ ಸರ್ಕಾರದಿಂದ ಆದೇಶ ಬರುವವರೆಗೂ ಕಾಯಲು ಹೇಳಿದ್ದೆವು. 60 ವಾರ್ಡಿಗೆ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರಕ್ಕೆ ನೇಮಿಸುವ ಬಗ್ಗೆ ಕೂಡಾ ಚಿಂತಿಸಲಾಗಿತ್ತು. ಸದ್ಯಕ್ಕೆ ಜಿಲ್ಲಾಡಳಿತ ಬೀದಿಬದಿ ವ್ಯಾಪಾರವನ್ನು ತಡೆ ಹಿಡಿದಿದೆ. ಅದಲ್ಲದೆ ಗುರುತಿನ ಚೀಟಿ ಇರದಿರುವವರು ಕಾನೂನು ಮೀರಿ ವ್ಯಾಪರ ಮಾಡುತ್ತಿರುವುದರಿಂದ ಅದನ್ನು ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ. ಆದ್ದರಿಂದ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಕೇಳಿ ಕೊಂಡಿದ್ದೇವೆ” ಎಂದರಲ್ಲದೇ “ಆಹಾರವನ್ನು ಕಸದ ಬುಟ್ಟಿಗೆ ಎಸೆದ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ” ಎಂದಿದ್ದಾರೆ.

(ಬೀದಿಬದಿ ವ್ಯಾಪಾರಿಗಳಿಗೆ ಅನುವು ಮಾಡುವಂತೆ ಸೂಚಿಸಿದ ಅಧಿಸೂಚನೆ)

ಒಟ್ಟಾರೆ ಬೀದಿಬದಿಯ ವ್ಯಾಪಾರಿಗಳಿಗೆ ಅಧಿಕಾರಿಗಳು ಕಿರುಕುಳ ಕೊಟ್ಟಿರುವುದು ನಿಜಕ್ಕೂ ದುರಾದೃಷ್ಟಕರ. ಈ ಕುರಿತು ರಾಜ್ಯ ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳೂ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂಬುದೆ ಎಲ್ಲರ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿ ಬದಿಯ ವ್ಯಾಪಾರಿಗಳ ಮೇಲಿನ ಈ ದೌರ್ಜನ್ಯ ಕಂಡನಾರ್ಹ. ಲಾಕ್ ಡೌನ್ ನೆಪದಲ್ಲಿ ಬಡವರ ಬದುಕನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...