Homeಕರ್ನಾಟಕಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

- Advertisement -
- Advertisement -

ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ರಾಜ್ಯ ಸರ್ಕಾರದ ಪರವಾನಗಿ ಹೊಂದಿದ್ದಾಗ್ಯೂ ಮಂಗಳೂರು ವ್ಯಾಪಾರಿಗಳನ್ನು ಅಲ್ಲಿನ ಮಹಾನಗರ ಪಾಲಿಕೆ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದಾರೆ. ಅಲ್ಲದೆ, ಹಣ್ಣು ತರಕಾರಿಗಳನ್ನು ಒತ್ತಾಯಪೂರ್ವಕವಾಗಿ ಕಸದ ಲಾರಿಗೆ ತುಂಬುವ ಮೂಲಕ ಅಮಾನವೀಯತೆ ಮೆರೆದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಜೀವನೋಪಾಯ ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರಿಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡುವಂತೆ ಎಪ್ರಿಲ್ 7 ರಂದು ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚಿಸಿತ್ತು.

ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರ ಪಡೆದಿರುವ ಬೀದಿಬದಿ ವ್ಯಾಪರಸ್ಥರಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸ್ಥಳೀಯ ಸಂಸ್ಥೆಗಳು ವ್ಯಾಪಾರಕ್ಕೆ ಅನುವು ಮಾಡಿಕೊಟ್ಟೆದೆ. ಆದರೆ ಮಂಗಳೂರಿನ ಮಹಾನಗರ ಪಾಲಿಕೆ ರಾಜ್ಯ ಸರ್ಕಾರದ ಸೂಚನೆ ಬಂದು ಒಂದು ವಾರವೆ ಕಳೆದರೂ, ವ್ಯಾಪಾರಕ್ಕೆ ಪಾಸ್ ಪಡೆದಿರುವ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಿದ್ದಲ್ಲದೆ ಅದನ್ನು ಕಸದ ಡಬ್ಬಿಗೆ ಹಾಕಿ ನಾಶಪಡಿಸಿದ್ದಾರೆ ಎಂದು ಬೀದಿಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ಭಾರತದಾದ್ಯಂತ ಲಾಕ್‌ಡೌನ್ ಘೋಷಿದಂದಿನಿಂದ ದೇಶದ ಹಲವಾರು ಜನರು ಉದ್ಯೋಗ ಕಳೆದುಕೊಂಡು ತಮ್ಮ ಊರಿಗೆ ಕಾಲ್ನಡಿಗೆಯಲ್ಲೆ ಹೊರಟು ದಾರಿಯಲ್ಲೆ ಸಾವಿಗೀಡಾದ ಘಟನೆಗಳು ಈಗಾಗಲೇ ಹಸಿಹಸಿಯಾಗಿದೆ. ದೇಶದಾದ್ಯಂತ ಇರುವ ಅಸಂಘಟಿತ ಕಾರ್ಮಿಕರು ಇನ್ನೂ ಪ್ರಶ್ನಾರ್ಥಕವಾಗಿ ಆಡಳಿತದ ಕಡೆಗೆ ನೋಡುತ್ತಿದ್ದಾರೆ. ಹೀಗಿರುವಾಗ ಆಡಳಿತ ಇಷ್ಟು ಕ್ರೂರಿಯಾಗಬಾರದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ನಿನ್ನೆ (ಮಂಗಳವಾರ) ನಗರದ ಸ್ಟೇಟ್‌ಬ್ಯಾಂಕ್ ಪರಿಸರದಲ್ಲಿ ಬೀದಿಬದಿ ವ್ಯಾಪರಸ್ಥರ ಮೇಲೆ ದಾಳಿ ಮಾಡಿದ ಮಹಾನಗರ ಪಾಲಿಕೆ ಮಾರಾಟಕ್ಕೆ ಇಟ್ಟಿದ್ದ ಸರಕುಗಳನ್ನು ಕಾರ್ಪೋರೇಶನ್ ಕಸದ ಗಾಡಿಗೆ ತುಂಬಿ ಅಮಾನವೀಯತೆ ಮೆರೆದಿದ್ದಾರೆ. ವ್ಯಾಪಾರಸ್ಥರು ವ್ಯಾಪಾರಿ ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರವನ್ನು ಹೊಂದಿದ್ದರೂ ವಸ್ತುಗಳನ್ನು ಕಸವೆತ್ತುವ ಲಾರಿಗೆ ತುಂಬಿ ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಬೀದಿಬದಿ ವ್ಯಾಪಾರಸ್ಥರನ್ನು ನಾನುಗೌರಿ.ಕಾಮ್ ಮಾತನಾಡಿಸಿದಾಗ, “ಕೊರೊನಾ ಬರುತ್ತದೆಯೆಂದು ಲಾಕ್‌ಡೌನ್ ಮಾಡಲಾಗಿದೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕೊರೊನ ಬರುವುದಕ್ಕಿಂತಲೂ ಮುಂಚೆಯೆ ನಾವು ಹಸಿವಿನಿಂದ ಸಾಯುತ್ತೇವೆ. ಮನೆಗೆ ಹಾಲು ಕೊಳ್ಳಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ವಸ್ತುಗಳನ್ನು ಮಾತ್ರವಲ್ಲದೆ ತಕ್ಕಡಿ ಹಾಗೂ ಇತರ ವಸ್ತುಗಳನ್ನೂ ಸಹ ಪಾಲಿಕೆ ವಶಪಡಿಸಿಕೊಂಡಿದೆ. ಆಹಾರ ವಸ್ತುಗಳನ್ನು ಪೊಲೀಸರ ರಕ್ಷಣೆಯಲ್ಲಿ ಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಸವನ್ನು ತುಂಬುವಂತೆ ತುಂಬಿ ನಾಶಪಡಿಸಲಾಗಿದೆ” ಎಂದು ಸ್ಥಳೀಯ ವ್ಯಾಪಾರಿ ಸಲೀಂ ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾದ ಸಂತೋಷ್ ಕುಮಾರ್ “ಬೀದಿಬದಿ ವ್ಯಾಪಾರಸ್ಥರಿಗೆ ಈಗಾಗಲೇ ಗುರುತಿನ ಚೀಟಿಯನ್ನು ನೀಡಿ ಸರ್ಕಾರದಿಂದ ಆದೇಶ ಬರುವವರೆಗೂ ಕಾಯಲು ಹೇಳಿದ್ದೆವು. 60 ವಾರ್ಡಿಗೆ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರಕ್ಕೆ ನೇಮಿಸುವ ಬಗ್ಗೆ ಕೂಡಾ ಚಿಂತಿಸಲಾಗಿತ್ತು. ಸದ್ಯಕ್ಕೆ ಜಿಲ್ಲಾಡಳಿತ ಬೀದಿಬದಿ ವ್ಯಾಪಾರವನ್ನು ತಡೆ ಹಿಡಿದಿದೆ. ಅದಲ್ಲದೆ ಗುರುತಿನ ಚೀಟಿ ಇರದಿರುವವರು ಕಾನೂನು ಮೀರಿ ವ್ಯಾಪರ ಮಾಡುತ್ತಿರುವುದರಿಂದ ಅದನ್ನು ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ. ಆದ್ದರಿಂದ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಕೇಳಿ ಕೊಂಡಿದ್ದೇವೆ” ಎಂದರಲ್ಲದೇ “ಆಹಾರವನ್ನು ಕಸದ ಬುಟ್ಟಿಗೆ ಎಸೆದ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ” ಎಂದಿದ್ದಾರೆ.

(ಬೀದಿಬದಿ ವ್ಯಾಪಾರಿಗಳಿಗೆ ಅನುವು ಮಾಡುವಂತೆ ಸೂಚಿಸಿದ ಅಧಿಸೂಚನೆ)

ಒಟ್ಟಾರೆ ಬೀದಿಬದಿಯ ವ್ಯಾಪಾರಿಗಳಿಗೆ ಅಧಿಕಾರಿಗಳು ಕಿರುಕುಳ ಕೊಟ್ಟಿರುವುದು ನಿಜಕ್ಕೂ ದುರಾದೃಷ್ಟಕರ. ಈ ಕುರಿತು ರಾಜ್ಯ ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳೂ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂಬುದೆ ಎಲ್ಲರ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿ ಬದಿಯ ವ್ಯಾಪಾರಿಗಳ ಮೇಲಿನ ಈ ದೌರ್ಜನ್ಯ ಕಂಡನಾರ್ಹ. ಲಾಕ್ ಡೌನ್ ನೆಪದಲ್ಲಿ ಬಡವರ ಬದುಕನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...