Homeಕರ್ನಾಟಕಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

- Advertisement -
- Advertisement -

ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ರಾಜ್ಯ ಸರ್ಕಾರದ ಪರವಾನಗಿ ಹೊಂದಿದ್ದಾಗ್ಯೂ ಮಂಗಳೂರು ವ್ಯಾಪಾರಿಗಳನ್ನು ಅಲ್ಲಿನ ಮಹಾನಗರ ಪಾಲಿಕೆ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದಾರೆ. ಅಲ್ಲದೆ, ಹಣ್ಣು ತರಕಾರಿಗಳನ್ನು ಒತ್ತಾಯಪೂರ್ವಕವಾಗಿ ಕಸದ ಲಾರಿಗೆ ತುಂಬುವ ಮೂಲಕ ಅಮಾನವೀಯತೆ ಮೆರೆದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಜೀವನೋಪಾಯ ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರಿಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡುವಂತೆ ಎಪ್ರಿಲ್ 7 ರಂದು ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚಿಸಿತ್ತು.

ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರ ಪಡೆದಿರುವ ಬೀದಿಬದಿ ವ್ಯಾಪರಸ್ಥರಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸ್ಥಳೀಯ ಸಂಸ್ಥೆಗಳು ವ್ಯಾಪಾರಕ್ಕೆ ಅನುವು ಮಾಡಿಕೊಟ್ಟೆದೆ. ಆದರೆ ಮಂಗಳೂರಿನ ಮಹಾನಗರ ಪಾಲಿಕೆ ರಾಜ್ಯ ಸರ್ಕಾರದ ಸೂಚನೆ ಬಂದು ಒಂದು ವಾರವೆ ಕಳೆದರೂ, ವ್ಯಾಪಾರಕ್ಕೆ ಪಾಸ್ ಪಡೆದಿರುವ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಿದ್ದಲ್ಲದೆ ಅದನ್ನು ಕಸದ ಡಬ್ಬಿಗೆ ಹಾಕಿ ನಾಶಪಡಿಸಿದ್ದಾರೆ ಎಂದು ಬೀದಿಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ಭಾರತದಾದ್ಯಂತ ಲಾಕ್‌ಡೌನ್ ಘೋಷಿದಂದಿನಿಂದ ದೇಶದ ಹಲವಾರು ಜನರು ಉದ್ಯೋಗ ಕಳೆದುಕೊಂಡು ತಮ್ಮ ಊರಿಗೆ ಕಾಲ್ನಡಿಗೆಯಲ್ಲೆ ಹೊರಟು ದಾರಿಯಲ್ಲೆ ಸಾವಿಗೀಡಾದ ಘಟನೆಗಳು ಈಗಾಗಲೇ ಹಸಿಹಸಿಯಾಗಿದೆ. ದೇಶದಾದ್ಯಂತ ಇರುವ ಅಸಂಘಟಿತ ಕಾರ್ಮಿಕರು ಇನ್ನೂ ಪ್ರಶ್ನಾರ್ಥಕವಾಗಿ ಆಡಳಿತದ ಕಡೆಗೆ ನೋಡುತ್ತಿದ್ದಾರೆ. ಹೀಗಿರುವಾಗ ಆಡಳಿತ ಇಷ್ಟು ಕ್ರೂರಿಯಾಗಬಾರದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ನಿನ್ನೆ (ಮಂಗಳವಾರ) ನಗರದ ಸ್ಟೇಟ್‌ಬ್ಯಾಂಕ್ ಪರಿಸರದಲ್ಲಿ ಬೀದಿಬದಿ ವ್ಯಾಪರಸ್ಥರ ಮೇಲೆ ದಾಳಿ ಮಾಡಿದ ಮಹಾನಗರ ಪಾಲಿಕೆ ಮಾರಾಟಕ್ಕೆ ಇಟ್ಟಿದ್ದ ಸರಕುಗಳನ್ನು ಕಾರ್ಪೋರೇಶನ್ ಕಸದ ಗಾಡಿಗೆ ತುಂಬಿ ಅಮಾನವೀಯತೆ ಮೆರೆದಿದ್ದಾರೆ. ವ್ಯಾಪಾರಸ್ಥರು ವ್ಯಾಪಾರಿ ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರವನ್ನು ಹೊಂದಿದ್ದರೂ ವಸ್ತುಗಳನ್ನು ಕಸವೆತ್ತುವ ಲಾರಿಗೆ ತುಂಬಿ ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಬೀದಿಬದಿ ವ್ಯಾಪಾರಸ್ಥರನ್ನು ನಾನುಗೌರಿ.ಕಾಮ್ ಮಾತನಾಡಿಸಿದಾಗ, “ಕೊರೊನಾ ಬರುತ್ತದೆಯೆಂದು ಲಾಕ್‌ಡೌನ್ ಮಾಡಲಾಗಿದೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕೊರೊನ ಬರುವುದಕ್ಕಿಂತಲೂ ಮುಂಚೆಯೆ ನಾವು ಹಸಿವಿನಿಂದ ಸಾಯುತ್ತೇವೆ. ಮನೆಗೆ ಹಾಲು ಕೊಳ್ಳಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ವಸ್ತುಗಳನ್ನು ಮಾತ್ರವಲ್ಲದೆ ತಕ್ಕಡಿ ಹಾಗೂ ಇತರ ವಸ್ತುಗಳನ್ನೂ ಸಹ ಪಾಲಿಕೆ ವಶಪಡಿಸಿಕೊಂಡಿದೆ. ಆಹಾರ ವಸ್ತುಗಳನ್ನು ಪೊಲೀಸರ ರಕ್ಷಣೆಯಲ್ಲಿ ಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಸವನ್ನು ತುಂಬುವಂತೆ ತುಂಬಿ ನಾಶಪಡಿಸಲಾಗಿದೆ” ಎಂದು ಸ್ಥಳೀಯ ವ್ಯಾಪಾರಿ ಸಲೀಂ ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾದ ಸಂತೋಷ್ ಕುಮಾರ್ “ಬೀದಿಬದಿ ವ್ಯಾಪಾರಸ್ಥರಿಗೆ ಈಗಾಗಲೇ ಗುರುತಿನ ಚೀಟಿಯನ್ನು ನೀಡಿ ಸರ್ಕಾರದಿಂದ ಆದೇಶ ಬರುವವರೆಗೂ ಕಾಯಲು ಹೇಳಿದ್ದೆವು. 60 ವಾರ್ಡಿಗೆ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರಕ್ಕೆ ನೇಮಿಸುವ ಬಗ್ಗೆ ಕೂಡಾ ಚಿಂತಿಸಲಾಗಿತ್ತು. ಸದ್ಯಕ್ಕೆ ಜಿಲ್ಲಾಡಳಿತ ಬೀದಿಬದಿ ವ್ಯಾಪಾರವನ್ನು ತಡೆ ಹಿಡಿದಿದೆ. ಅದಲ್ಲದೆ ಗುರುತಿನ ಚೀಟಿ ಇರದಿರುವವರು ಕಾನೂನು ಮೀರಿ ವ್ಯಾಪರ ಮಾಡುತ್ತಿರುವುದರಿಂದ ಅದನ್ನು ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ. ಆದ್ದರಿಂದ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಕೇಳಿ ಕೊಂಡಿದ್ದೇವೆ” ಎಂದರಲ್ಲದೇ “ಆಹಾರವನ್ನು ಕಸದ ಬುಟ್ಟಿಗೆ ಎಸೆದ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ” ಎಂದಿದ್ದಾರೆ.

(ಬೀದಿಬದಿ ವ್ಯಾಪಾರಿಗಳಿಗೆ ಅನುವು ಮಾಡುವಂತೆ ಸೂಚಿಸಿದ ಅಧಿಸೂಚನೆ)

ಒಟ್ಟಾರೆ ಬೀದಿಬದಿಯ ವ್ಯಾಪಾರಿಗಳಿಗೆ ಅಧಿಕಾರಿಗಳು ಕಿರುಕುಳ ಕೊಟ್ಟಿರುವುದು ನಿಜಕ್ಕೂ ದುರಾದೃಷ್ಟಕರ. ಈ ಕುರಿತು ರಾಜ್ಯ ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳೂ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂಬುದೆ ಎಲ್ಲರ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿ ಬದಿಯ ವ್ಯಾಪಾರಿಗಳ ಮೇಲಿನ ಈ ದೌರ್ಜನ್ಯ ಕಂಡನಾರ್ಹ. ಲಾಕ್ ಡೌನ್ ನೆಪದಲ್ಲಿ ಬಡವರ ಬದುಕನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...