Homeಕರ್ನಾಟಕಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

- Advertisement -
- Advertisement -

ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ರಾಜ್ಯ ಸರ್ಕಾರದ ಪರವಾನಗಿ ಹೊಂದಿದ್ದಾಗ್ಯೂ ಮಂಗಳೂರು ವ್ಯಾಪಾರಿಗಳನ್ನು ಅಲ್ಲಿನ ಮಹಾನಗರ ಪಾಲಿಕೆ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದಾರೆ. ಅಲ್ಲದೆ, ಹಣ್ಣು ತರಕಾರಿಗಳನ್ನು ಒತ್ತಾಯಪೂರ್ವಕವಾಗಿ ಕಸದ ಲಾರಿಗೆ ತುಂಬುವ ಮೂಲಕ ಅಮಾನವೀಯತೆ ಮೆರೆದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಜೀವನೋಪಾಯ ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರಿಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡುವಂತೆ ಎಪ್ರಿಲ್ 7 ರಂದು ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚಿಸಿತ್ತು.

ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರ ಪಡೆದಿರುವ ಬೀದಿಬದಿ ವ್ಯಾಪರಸ್ಥರಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸ್ಥಳೀಯ ಸಂಸ್ಥೆಗಳು ವ್ಯಾಪಾರಕ್ಕೆ ಅನುವು ಮಾಡಿಕೊಟ್ಟೆದೆ. ಆದರೆ ಮಂಗಳೂರಿನ ಮಹಾನಗರ ಪಾಲಿಕೆ ರಾಜ್ಯ ಸರ್ಕಾರದ ಸೂಚನೆ ಬಂದು ಒಂದು ವಾರವೆ ಕಳೆದರೂ, ವ್ಯಾಪಾರಕ್ಕೆ ಪಾಸ್ ಪಡೆದಿರುವ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಿದ್ದಲ್ಲದೆ ಅದನ್ನು ಕಸದ ಡಬ್ಬಿಗೆ ಹಾಕಿ ನಾಶಪಡಿಸಿದ್ದಾರೆ ಎಂದು ಬೀದಿಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ಭಾರತದಾದ್ಯಂತ ಲಾಕ್‌ಡೌನ್ ಘೋಷಿದಂದಿನಿಂದ ದೇಶದ ಹಲವಾರು ಜನರು ಉದ್ಯೋಗ ಕಳೆದುಕೊಂಡು ತಮ್ಮ ಊರಿಗೆ ಕಾಲ್ನಡಿಗೆಯಲ್ಲೆ ಹೊರಟು ದಾರಿಯಲ್ಲೆ ಸಾವಿಗೀಡಾದ ಘಟನೆಗಳು ಈಗಾಗಲೇ ಹಸಿಹಸಿಯಾಗಿದೆ. ದೇಶದಾದ್ಯಂತ ಇರುವ ಅಸಂಘಟಿತ ಕಾರ್ಮಿಕರು ಇನ್ನೂ ಪ್ರಶ್ನಾರ್ಥಕವಾಗಿ ಆಡಳಿತದ ಕಡೆಗೆ ನೋಡುತ್ತಿದ್ದಾರೆ. ಹೀಗಿರುವಾಗ ಆಡಳಿತ ಇಷ್ಟು ಕ್ರೂರಿಯಾಗಬಾರದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ನಿನ್ನೆ (ಮಂಗಳವಾರ) ನಗರದ ಸ್ಟೇಟ್‌ಬ್ಯಾಂಕ್ ಪರಿಸರದಲ್ಲಿ ಬೀದಿಬದಿ ವ್ಯಾಪರಸ್ಥರ ಮೇಲೆ ದಾಳಿ ಮಾಡಿದ ಮಹಾನಗರ ಪಾಲಿಕೆ ಮಾರಾಟಕ್ಕೆ ಇಟ್ಟಿದ್ದ ಸರಕುಗಳನ್ನು ಕಾರ್ಪೋರೇಶನ್ ಕಸದ ಗಾಡಿಗೆ ತುಂಬಿ ಅಮಾನವೀಯತೆ ಮೆರೆದಿದ್ದಾರೆ. ವ್ಯಾಪಾರಸ್ಥರು ವ್ಯಾಪಾರಿ ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರವನ್ನು ಹೊಂದಿದ್ದರೂ ವಸ್ತುಗಳನ್ನು ಕಸವೆತ್ತುವ ಲಾರಿಗೆ ತುಂಬಿ ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಬೀದಿಬದಿ ವ್ಯಾಪಾರಸ್ಥರನ್ನು ನಾನುಗೌರಿ.ಕಾಮ್ ಮಾತನಾಡಿಸಿದಾಗ, “ಕೊರೊನಾ ಬರುತ್ತದೆಯೆಂದು ಲಾಕ್‌ಡೌನ್ ಮಾಡಲಾಗಿದೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕೊರೊನ ಬರುವುದಕ್ಕಿಂತಲೂ ಮುಂಚೆಯೆ ನಾವು ಹಸಿವಿನಿಂದ ಸಾಯುತ್ತೇವೆ. ಮನೆಗೆ ಹಾಲು ಕೊಳ್ಳಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ವಸ್ತುಗಳನ್ನು ಮಾತ್ರವಲ್ಲದೆ ತಕ್ಕಡಿ ಹಾಗೂ ಇತರ ವಸ್ತುಗಳನ್ನೂ ಸಹ ಪಾಲಿಕೆ ವಶಪಡಿಸಿಕೊಂಡಿದೆ. ಆಹಾರ ವಸ್ತುಗಳನ್ನು ಪೊಲೀಸರ ರಕ್ಷಣೆಯಲ್ಲಿ ಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಸವನ್ನು ತುಂಬುವಂತೆ ತುಂಬಿ ನಾಶಪಡಿಸಲಾಗಿದೆ” ಎಂದು ಸ್ಥಳೀಯ ವ್ಯಾಪಾರಿ ಸಲೀಂ ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾದ ಸಂತೋಷ್ ಕುಮಾರ್ “ಬೀದಿಬದಿ ವ್ಯಾಪಾರಸ್ಥರಿಗೆ ಈಗಾಗಲೇ ಗುರುತಿನ ಚೀಟಿಯನ್ನು ನೀಡಿ ಸರ್ಕಾರದಿಂದ ಆದೇಶ ಬರುವವರೆಗೂ ಕಾಯಲು ಹೇಳಿದ್ದೆವು. 60 ವಾರ್ಡಿಗೆ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರಕ್ಕೆ ನೇಮಿಸುವ ಬಗ್ಗೆ ಕೂಡಾ ಚಿಂತಿಸಲಾಗಿತ್ತು. ಸದ್ಯಕ್ಕೆ ಜಿಲ್ಲಾಡಳಿತ ಬೀದಿಬದಿ ವ್ಯಾಪಾರವನ್ನು ತಡೆ ಹಿಡಿದಿದೆ. ಅದಲ್ಲದೆ ಗುರುತಿನ ಚೀಟಿ ಇರದಿರುವವರು ಕಾನೂನು ಮೀರಿ ವ್ಯಾಪರ ಮಾಡುತ್ತಿರುವುದರಿಂದ ಅದನ್ನು ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ. ಆದ್ದರಿಂದ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಕೇಳಿ ಕೊಂಡಿದ್ದೇವೆ” ಎಂದರಲ್ಲದೇ “ಆಹಾರವನ್ನು ಕಸದ ಬುಟ್ಟಿಗೆ ಎಸೆದ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ” ಎಂದಿದ್ದಾರೆ.

(ಬೀದಿಬದಿ ವ್ಯಾಪಾರಿಗಳಿಗೆ ಅನುವು ಮಾಡುವಂತೆ ಸೂಚಿಸಿದ ಅಧಿಸೂಚನೆ)

ಒಟ್ಟಾರೆ ಬೀದಿಬದಿಯ ವ್ಯಾಪಾರಿಗಳಿಗೆ ಅಧಿಕಾರಿಗಳು ಕಿರುಕುಳ ಕೊಟ್ಟಿರುವುದು ನಿಜಕ್ಕೂ ದುರಾದೃಷ್ಟಕರ. ಈ ಕುರಿತು ರಾಜ್ಯ ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳೂ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂಬುದೆ ಎಲ್ಲರ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿ ಬದಿಯ ವ್ಯಾಪಾರಿಗಳ ಮೇಲಿನ ಈ ದೌರ್ಜನ್ಯ ಕಂಡನಾರ್ಹ. ಲಾಕ್ ಡೌನ್ ನೆಪದಲ್ಲಿ ಬಡವರ ಬದುಕನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...