Homeಕರ್ನಾಟಕಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

- Advertisement -
- Advertisement -

ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ರಾಜ್ಯ ಸರ್ಕಾರದ ಪರವಾನಗಿ ಹೊಂದಿದ್ದಾಗ್ಯೂ ಮಂಗಳೂರು ವ್ಯಾಪಾರಿಗಳನ್ನು ಅಲ್ಲಿನ ಮಹಾನಗರ ಪಾಲಿಕೆ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದಾರೆ. ಅಲ್ಲದೆ, ಹಣ್ಣು ತರಕಾರಿಗಳನ್ನು ಒತ್ತಾಯಪೂರ್ವಕವಾಗಿ ಕಸದ ಲಾರಿಗೆ ತುಂಬುವ ಮೂಲಕ ಅಮಾನವೀಯತೆ ಮೆರೆದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಜೀವನೋಪಾಯ ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರಿಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡುವಂತೆ ಎಪ್ರಿಲ್ 7 ರಂದು ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚಿಸಿತ್ತು.

ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರ ಪಡೆದಿರುವ ಬೀದಿಬದಿ ವ್ಯಾಪರಸ್ಥರಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸ್ಥಳೀಯ ಸಂಸ್ಥೆಗಳು ವ್ಯಾಪಾರಕ್ಕೆ ಅನುವು ಮಾಡಿಕೊಟ್ಟೆದೆ. ಆದರೆ ಮಂಗಳೂರಿನ ಮಹಾನಗರ ಪಾಲಿಕೆ ರಾಜ್ಯ ಸರ್ಕಾರದ ಸೂಚನೆ ಬಂದು ಒಂದು ವಾರವೆ ಕಳೆದರೂ, ವ್ಯಾಪಾರಕ್ಕೆ ಪಾಸ್ ಪಡೆದಿರುವ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಿದ್ದಲ್ಲದೆ ಅದನ್ನು ಕಸದ ಡಬ್ಬಿಗೆ ಹಾಕಿ ನಾಶಪಡಿಸಿದ್ದಾರೆ ಎಂದು ಬೀದಿಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ಭಾರತದಾದ್ಯಂತ ಲಾಕ್‌ಡೌನ್ ಘೋಷಿದಂದಿನಿಂದ ದೇಶದ ಹಲವಾರು ಜನರು ಉದ್ಯೋಗ ಕಳೆದುಕೊಂಡು ತಮ್ಮ ಊರಿಗೆ ಕಾಲ್ನಡಿಗೆಯಲ್ಲೆ ಹೊರಟು ದಾರಿಯಲ್ಲೆ ಸಾವಿಗೀಡಾದ ಘಟನೆಗಳು ಈಗಾಗಲೇ ಹಸಿಹಸಿಯಾಗಿದೆ. ದೇಶದಾದ್ಯಂತ ಇರುವ ಅಸಂಘಟಿತ ಕಾರ್ಮಿಕರು ಇನ್ನೂ ಪ್ರಶ್ನಾರ್ಥಕವಾಗಿ ಆಡಳಿತದ ಕಡೆಗೆ ನೋಡುತ್ತಿದ್ದಾರೆ. ಹೀಗಿರುವಾಗ ಆಡಳಿತ ಇಷ್ಟು ಕ್ರೂರಿಯಾಗಬಾರದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ನಿನ್ನೆ (ಮಂಗಳವಾರ) ನಗರದ ಸ್ಟೇಟ್‌ಬ್ಯಾಂಕ್ ಪರಿಸರದಲ್ಲಿ ಬೀದಿಬದಿ ವ್ಯಾಪರಸ್ಥರ ಮೇಲೆ ದಾಳಿ ಮಾಡಿದ ಮಹಾನಗರ ಪಾಲಿಕೆ ಮಾರಾಟಕ್ಕೆ ಇಟ್ಟಿದ್ದ ಸರಕುಗಳನ್ನು ಕಾರ್ಪೋರೇಶನ್ ಕಸದ ಗಾಡಿಗೆ ತುಂಬಿ ಅಮಾನವೀಯತೆ ಮೆರೆದಿದ್ದಾರೆ. ವ್ಯಾಪಾರಸ್ಥರು ವ್ಯಾಪಾರಿ ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರವನ್ನು ಹೊಂದಿದ್ದರೂ ವಸ್ತುಗಳನ್ನು ಕಸವೆತ್ತುವ ಲಾರಿಗೆ ತುಂಬಿ ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಬೀದಿಬದಿ ವ್ಯಾಪಾರಸ್ಥರನ್ನು ನಾನುಗೌರಿ.ಕಾಮ್ ಮಾತನಾಡಿಸಿದಾಗ, “ಕೊರೊನಾ ಬರುತ್ತದೆಯೆಂದು ಲಾಕ್‌ಡೌನ್ ಮಾಡಲಾಗಿದೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕೊರೊನ ಬರುವುದಕ್ಕಿಂತಲೂ ಮುಂಚೆಯೆ ನಾವು ಹಸಿವಿನಿಂದ ಸಾಯುತ್ತೇವೆ. ಮನೆಗೆ ಹಾಲು ಕೊಳ್ಳಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ವಸ್ತುಗಳನ್ನು ಮಾತ್ರವಲ್ಲದೆ ತಕ್ಕಡಿ ಹಾಗೂ ಇತರ ವಸ್ತುಗಳನ್ನೂ ಸಹ ಪಾಲಿಕೆ ವಶಪಡಿಸಿಕೊಂಡಿದೆ. ಆಹಾರ ವಸ್ತುಗಳನ್ನು ಪೊಲೀಸರ ರಕ್ಷಣೆಯಲ್ಲಿ ಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಸವನ್ನು ತುಂಬುವಂತೆ ತುಂಬಿ ನಾಶಪಡಿಸಲಾಗಿದೆ” ಎಂದು ಸ್ಥಳೀಯ ವ್ಯಾಪಾರಿ ಸಲೀಂ ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾದ ಸಂತೋಷ್ ಕುಮಾರ್ “ಬೀದಿಬದಿ ವ್ಯಾಪಾರಸ್ಥರಿಗೆ ಈಗಾಗಲೇ ಗುರುತಿನ ಚೀಟಿಯನ್ನು ನೀಡಿ ಸರ್ಕಾರದಿಂದ ಆದೇಶ ಬರುವವರೆಗೂ ಕಾಯಲು ಹೇಳಿದ್ದೆವು. 60 ವಾರ್ಡಿಗೆ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರಕ್ಕೆ ನೇಮಿಸುವ ಬಗ್ಗೆ ಕೂಡಾ ಚಿಂತಿಸಲಾಗಿತ್ತು. ಸದ್ಯಕ್ಕೆ ಜಿಲ್ಲಾಡಳಿತ ಬೀದಿಬದಿ ವ್ಯಾಪಾರವನ್ನು ತಡೆ ಹಿಡಿದಿದೆ. ಅದಲ್ಲದೆ ಗುರುತಿನ ಚೀಟಿ ಇರದಿರುವವರು ಕಾನೂನು ಮೀರಿ ವ್ಯಾಪರ ಮಾಡುತ್ತಿರುವುದರಿಂದ ಅದನ್ನು ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ. ಆದ್ದರಿಂದ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಕೇಳಿ ಕೊಂಡಿದ್ದೇವೆ” ಎಂದರಲ್ಲದೇ “ಆಹಾರವನ್ನು ಕಸದ ಬುಟ್ಟಿಗೆ ಎಸೆದ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ” ಎಂದಿದ್ದಾರೆ.

(ಬೀದಿಬದಿ ವ್ಯಾಪಾರಿಗಳಿಗೆ ಅನುವು ಮಾಡುವಂತೆ ಸೂಚಿಸಿದ ಅಧಿಸೂಚನೆ)

ಒಟ್ಟಾರೆ ಬೀದಿಬದಿಯ ವ್ಯಾಪಾರಿಗಳಿಗೆ ಅಧಿಕಾರಿಗಳು ಕಿರುಕುಳ ಕೊಟ್ಟಿರುವುದು ನಿಜಕ್ಕೂ ದುರಾದೃಷ್ಟಕರ. ಈ ಕುರಿತು ರಾಜ್ಯ ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳೂ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂಬುದೆ ಎಲ್ಲರ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿ ಬದಿಯ ವ್ಯಾಪಾರಿಗಳ ಮೇಲಿನ ಈ ದೌರ್ಜನ್ಯ ಕಂಡನಾರ್ಹ. ಲಾಕ್ ಡೌನ್ ನೆಪದಲ್ಲಿ ಬಡವರ ಬದುಕನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...