Homeಅಂತರಾಷ್ಟ್ರೀಯಕ್ಯಾಪಿಟಲ್ ಮೇಲೆ ದಾಳಿ - ಟ್ರಂಪ್ ಪದಚ್ಯುತಿಗೆ ಮುಂದಾದ ಅಮೆರಿಕ ಸಂಸತ್!

ಕ್ಯಾಪಿಟಲ್ ಮೇಲೆ ದಾಳಿ – ಟ್ರಂಪ್ ಪದಚ್ಯುತಿಗೆ ಮುಂದಾದ ಅಮೆರಿಕ ಸಂಸತ್!

ಮಂಗಳವಾರ ರಾತ್ರಿ ಅಂಗೀಕರಿಸಿದ ಪದಚ್ಯುತಿ ನಿರ್ಣಯದ ಪರವಾಗಿ 223-205 ಮತಗಳು ಬಿದ್ದಿವೆ

- Advertisement -
- Advertisement -

ಸದಾ ವಿವಾದಕ್ಕೆ ಒಳಗಾಗುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪದಚ್ಯುತಿಗೊಳಿಸಲು ಅಮೆರಿಕದ ಸಂಸತ್ ಮುಂದಾಗಿದೆ. ಅಲ್ಲಿನ ಸಂವಿಧಾನದ 25ನೇ ತಿದ್ದುಪಡಿಯ ವಿಶೇಷ ಅಧಿಕಾರ ಬಳಸಿಕೊಂಡು ಟ್ರಂಪ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಮೆರಿಕ ಮುಂದಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ಡೊನಾಲ್ಡ್ ಟ್ರಂಪ್ ವಿರುದ್ಧ ದೋಷಾರೋಪಣೆ ಹೊರಿಸಿದ್ದು, ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ ಕೊನೆಯ ಅವಕಾಶವನ್ನು ಡೆಮೋಕ್ರಾಟ್ಸ್ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷೀಯ ಅವಧಿ ಕೊನೆಯಾಗಲು ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಯಾವಾಗ ಹುದ್ದೆ ಬಿಟ್ಟು ನಿರ್ಗಮಿಸುತ್ತಾರೆ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಇದನ್ನೂ ಓದಿ: ಇಂದು ಸಚಿವ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸುವ ನೂತನ ಸಚಿವರ ಪಟ್ಟಿ ಇಲ್ಲಿದೆ…

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಟ್ರಂಪ್ ವಿರುದ್ಧ ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಈ ಅಧಿಕಾರವನ್ನು ಈ ಮೊದಲು ಯಾರ ವಿರುದ್ಧವೂ ಬಳಸಲಾಗಿಲ್ಲ. ಅಧ್ಯಕ್ಷೀಯ ಅವಧಿ ಮುಗಿದ ಬಳಿಕವೂ, ಹುದ್ದೆ ತೊರೆಯದಿದ್ದರೆ, ಈ ತಿದ್ದುಪಡಿ ಬಳಸಿಕೊಂಡು ಸಂಸತ್ ಕ್ರಮ ಕೈಗೊಳ್ಳುತ್ತದೆ.

ಮಂಗಳವಾರ ರಾತ್ರಿ ಅಂಗೀಕರಿಸಿದ ಪದಚ್ಯುತಿ ನಿರ್ಣಯದ ಪರವಾಗಿ 223-205 ಮತಗಳು ಬಿದ್ದಿವೆ.

ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ ಮತ್ತು ಹಿಂಸಾಚಾರ, ಐವರ ಸಾವು ಪ್ರಕರಣ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಇದು ಡೊನಾಲ್ಡ್ ಟ್ರಂಪ್ ಬೆಂಬಲಿಗರ ಕೃತ್ಯವಾಗಿರುವುದರಿಂದ, ಟ್ರಂಪ್ ಅಮೆರಿಕ ಸಂಸತ್‌ನಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ವಿರೋಧಕ್ಕೆ ಮಣಿದ ಹಿಂದೂ ಮಹಾಸಭಾ – ‘ಗೋಡ್ಸೆ ಜ್ಞಾನ ಶಾಲೆ’ ಒಂದೇ ದಿನದಲ್ಲಿ ಕ್ಲೋಸ್!

ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಷಿಂಗ್ಟನ್‌ನ ಎಫ್‌ಬಿಐ ಅಧಿಕಾರಿ ಸ್ಟೀವನ್‌ ಎಂ ಡಿ ಆಂಟುವೊನೊ, “ಕ್ಯಾಪಿಟಲ್‌ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಪ್ರತಿಭಟನಕಾರರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿ ಅಮೆರಿಕದ ಅಟಾರ್ನಿ ಕಚೇರಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಆರು ದಿನಗಳಲ್ಲಿ ನಾವು ದಂಗೆಕೋರರ ವಿರುದ್ಧ 160 ಪ್ರಕರಣಗಳನ್ನು ದಾಖಲಿಸಿದ್ದೇವೆ. ಇದು ಕೇವಲ ಆರಂಭವಷ್ಟೇ” ಎಂದು ಹೇಳಿದ್ದಾರೆ.

ಇತ್ತ ಅಮೆರಿಕ ಕ್ಯಾಪಿಟಲ್ ಮೇಲಿನ ದಾಳಿಗೂ ಮುನ್ನ ತಾನು ಮಾಡಿದ ಭಾಷಣವನ್ನು ಸಮರ್ಥಿಸಿಕೊಂಡಿರುವ ಟ್ರಂಪ್, ದೇಶದಾದ್ಯಂತ ಆಕ್ರೋಶ ಭುಗಿಲೇಳಲಿದೆ ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಜೋ ಬೈಡೆನ್ ಪ್ರಮಾಣವಚನ ಸ್ವೀಕಾರ ಹಿನ್ನೆಲೆ: ವಾಶಿಂಗ್ಟನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಟ್ರಂಪ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....