Homeಅಂತರಾಷ್ಟ್ರೀಯಕ್ಯಾಪಿಟಲ್ ಮೇಲೆ ದಾಳಿ - ಟ್ರಂಪ್ ಪದಚ್ಯುತಿಗೆ ಮುಂದಾದ ಅಮೆರಿಕ ಸಂಸತ್!

ಕ್ಯಾಪಿಟಲ್ ಮೇಲೆ ದಾಳಿ – ಟ್ರಂಪ್ ಪದಚ್ಯುತಿಗೆ ಮುಂದಾದ ಅಮೆರಿಕ ಸಂಸತ್!

ಮಂಗಳವಾರ ರಾತ್ರಿ ಅಂಗೀಕರಿಸಿದ ಪದಚ್ಯುತಿ ನಿರ್ಣಯದ ಪರವಾಗಿ 223-205 ಮತಗಳು ಬಿದ್ದಿವೆ

- Advertisement -
- Advertisement -

ಸದಾ ವಿವಾದಕ್ಕೆ ಒಳಗಾಗುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪದಚ್ಯುತಿಗೊಳಿಸಲು ಅಮೆರಿಕದ ಸಂಸತ್ ಮುಂದಾಗಿದೆ. ಅಲ್ಲಿನ ಸಂವಿಧಾನದ 25ನೇ ತಿದ್ದುಪಡಿಯ ವಿಶೇಷ ಅಧಿಕಾರ ಬಳಸಿಕೊಂಡು ಟ್ರಂಪ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಮೆರಿಕ ಮುಂದಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ಡೊನಾಲ್ಡ್ ಟ್ರಂಪ್ ವಿರುದ್ಧ ದೋಷಾರೋಪಣೆ ಹೊರಿಸಿದ್ದು, ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ ಕೊನೆಯ ಅವಕಾಶವನ್ನು ಡೆಮೋಕ್ರಾಟ್ಸ್ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷೀಯ ಅವಧಿ ಕೊನೆಯಾಗಲು ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಯಾವಾಗ ಹುದ್ದೆ ಬಿಟ್ಟು ನಿರ್ಗಮಿಸುತ್ತಾರೆ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಇದನ್ನೂ ಓದಿ: ಇಂದು ಸಚಿವ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸುವ ನೂತನ ಸಚಿವರ ಪಟ್ಟಿ ಇಲ್ಲಿದೆ…

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಟ್ರಂಪ್ ವಿರುದ್ಧ ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಈ ಅಧಿಕಾರವನ್ನು ಈ ಮೊದಲು ಯಾರ ವಿರುದ್ಧವೂ ಬಳಸಲಾಗಿಲ್ಲ. ಅಧ್ಯಕ್ಷೀಯ ಅವಧಿ ಮುಗಿದ ಬಳಿಕವೂ, ಹುದ್ದೆ ತೊರೆಯದಿದ್ದರೆ, ಈ ತಿದ್ದುಪಡಿ ಬಳಸಿಕೊಂಡು ಸಂಸತ್ ಕ್ರಮ ಕೈಗೊಳ್ಳುತ್ತದೆ.

ಮಂಗಳವಾರ ರಾತ್ರಿ ಅಂಗೀಕರಿಸಿದ ಪದಚ್ಯುತಿ ನಿರ್ಣಯದ ಪರವಾಗಿ 223-205 ಮತಗಳು ಬಿದ್ದಿವೆ.

ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ ಮತ್ತು ಹಿಂಸಾಚಾರ, ಐವರ ಸಾವು ಪ್ರಕರಣ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಇದು ಡೊನಾಲ್ಡ್ ಟ್ರಂಪ್ ಬೆಂಬಲಿಗರ ಕೃತ್ಯವಾಗಿರುವುದರಿಂದ, ಟ್ರಂಪ್ ಅಮೆರಿಕ ಸಂಸತ್‌ನಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ವಿರೋಧಕ್ಕೆ ಮಣಿದ ಹಿಂದೂ ಮಹಾಸಭಾ – ‘ಗೋಡ್ಸೆ ಜ್ಞಾನ ಶಾಲೆ’ ಒಂದೇ ದಿನದಲ್ಲಿ ಕ್ಲೋಸ್!

ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಷಿಂಗ್ಟನ್‌ನ ಎಫ್‌ಬಿಐ ಅಧಿಕಾರಿ ಸ್ಟೀವನ್‌ ಎಂ ಡಿ ಆಂಟುವೊನೊ, “ಕ್ಯಾಪಿಟಲ್‌ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಪ್ರತಿಭಟನಕಾರರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿ ಅಮೆರಿಕದ ಅಟಾರ್ನಿ ಕಚೇರಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಆರು ದಿನಗಳಲ್ಲಿ ನಾವು ದಂಗೆಕೋರರ ವಿರುದ್ಧ 160 ಪ್ರಕರಣಗಳನ್ನು ದಾಖಲಿಸಿದ್ದೇವೆ. ಇದು ಕೇವಲ ಆರಂಭವಷ್ಟೇ” ಎಂದು ಹೇಳಿದ್ದಾರೆ.

ಇತ್ತ ಅಮೆರಿಕ ಕ್ಯಾಪಿಟಲ್ ಮೇಲಿನ ದಾಳಿಗೂ ಮುನ್ನ ತಾನು ಮಾಡಿದ ಭಾಷಣವನ್ನು ಸಮರ್ಥಿಸಿಕೊಂಡಿರುವ ಟ್ರಂಪ್, ದೇಶದಾದ್ಯಂತ ಆಕ್ರೋಶ ಭುಗಿಲೇಳಲಿದೆ ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಜೋ ಬೈಡೆನ್ ಪ್ರಮಾಣವಚನ ಸ್ವೀಕಾರ ಹಿನ್ನೆಲೆ: ವಾಶಿಂಗ್ಟನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಟ್ರಂಪ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...