Homeಮುಖಪುಟಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

- Advertisement -
- Advertisement -

ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ)ದ ಕರಡು ನಿಯಮಗಳನ್ನು ಹಿಂಪಡೆಯಬೇಕೆಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾನುವಾರ ಒತ್ತಾಯಿಸಿದ್ದು, ಅವುಗಳನ್ನು ಸಂವಿಧಾನದ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ವಿಶ್ವವಿದ್ಯಾಲಯಗಳನ್ನು ನಡೆಸುವ ಅಧಿಕಾರವನ್ನು ಈ ನಿಯಮಗಳ ಮೂಲಕ ರಾಜ್ಯ ಸರ್ಕಾರಗಳಿಂದ ಕೇಂದ್ರ ಸರ್ಕಾರವು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯುಜಿಸಿ ಕರಡು ನಿಯಮ

ಜನವರಿ 6 ರಂದು ಬಿಡುಗಡೆಯಾದ ಯುಜಿಸಿ ಕರಡು ನಿಯಮಗಳಲ್ಲಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನೆ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿಗಳನ್ನು ಮಾಡುವ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿವೆ. ವಿಶ್ವವಿದ್ಯಾಲಯದ ಉಪಕುಲಪತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಕುಲಪತಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಬಗ್ಗೆ ಕೇಂದ್ರ ಸರ್ಕಾರವು ಯೋಚಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಅಡಿಯಲ್ಲಿ ಇರುವ ವಿಶ್ವವಿದ್ಯಾಲಯಗಳ ಕುಲಪತಿಗಳು ಕೇಂದ್ರ ಸರ್ಕಾರದಿಂದ ನೇಮಕಗೊಂಡ ರಾಜ್ಯಪಾಲರಾಗಿದ್ದಾರೆ. ಇದು ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಂದ ಕೇಂದ್ರ ಸರ್ಕಾರವು ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ಆಯ್ಕೆ ಮಾಡಲು ಹೆಚ್ಚಿನ ಅಧಿಕಾರವನ್ನು ಪಡೆಯುತ್ತಿದೆ ಎಂಬ ಆತಂಕಕ್ಕೆ ಕಾರಣವಾಗಿದೆ.

ಶೈಕ್ಷಣಿಕ ಹಿನ್ನೆಲೆ ಇಲ್ಲದ ಅಭ್ಯರ್ಥಿಗಳನ್ನು ಉಪಕುಲಪತಿಗಳನ್ನಾಗಿ ಮಾಡಲು ಅನುಮತಿಸುವ ಕರಡು ನಿಯಮಗಳಲ್ಲಿನ ನಿಬಂಧನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಹ ಆಕ್ಷೇಪಿಸಿದ್ದಾರೆ. ಇದು ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವವಿಲ್ಲದ ವ್ಯಕ್ತಿಗಳನ್ನು ವಿಶ್ವವಿದ್ಯಾಲಯಗಳ ಮುಖ್ಯಸ್ಥರನ್ನಾಗಿ ನೇಮಿಸಲು ಕಾರಣವಾಗಲಿದೆ ಎಂದು ಅವರು ಕಳೆದ ವಾರ ವಾದಿಸಿದ್ದರು.

ಭಾನುವಾರ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ, ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ಹೊಸ ನಿಯಮಗಳನ್ನು ಪರಿಚಯಿಸುವ ಪ್ರಸ್ತಾಪದ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. “ಕೇಂದ್ರವು ವಿಶ್ವವಿದ್ಯಾಲಯಗಳ ಆಡಳಿತವನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯು ಕೆಲವು ವ್ಯಕ್ತಿಗಳಿಂದ ಸುಳ್ಳು ಪ್ರಚಾರಕ್ಕೆ ವೇದಿಕೆಗಳಾಗಲು ಕಾರಣವಾಗಲಿದೆ” ಎಂದು ಅವರು ಆರೋಪಿಸಿದ್ದಾರೆ. ಯುಜಿಸಿ ಕರಡು ನಿಯಮ

ಈ ವಿಷಯದ ಬಗ್ಗೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ “ಸಮನ್ವಯ” ಮಾಡಿಕೊಳ್ಳುವುದಾಗಿ ರೇವಂತ್ ರೆಡ್ಡಿ ಹೇಳಿದ್ದು, ಶೀಘ್ರದಲ್ಲೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರೊಂದಿಗೆ ಈ ವಿಷಯವನ್ನು ಚರ್ಚಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆಯು ಜನವರಿ 9 ರಂದು ಕರಡು ನಿಯಮಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತ್ತು. ಜನವರಿ 21 ರಂದು ಕೇರಳ ವಿಧಾನಸಭೆ ಕೂಡಾ ನಿರ್ಣಯ ಅಂಗೀಕರಿಸಿದ್ದು, ಜನವರಿ 9 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕರಡನ್ನು ವಿರೋಧಿಸಿದ್ದಾರೆ. ಅವರು ಇದನ್ನು, ಕನ್ನಡಿಗರಿಗೆ ಬಗೆಯುವ “ದ್ರೋಹ” ಎಂದು ಕರೆದಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ವಿಧಾನಸಭೆಯು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ 2024 ಅನ್ನು ಅಂಗೀಕರಿಸಿತ್ತು. ಈ ಮಸೂದೆಯು, ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕಿದ್ದು, ಈ ಸ್ಥಾನಕ್ಕೆ ಮುಖ್ಯಮಂತ್ರಿಯನ್ನು ಬದಲಾಯಿಸಿತ್ತು.

ಆದಾಗ್ಯೂ, ವಿಶ್ವವಿದ್ಯಾಲಯ ಅನುದಾನ ಆಯೋಗವು ಪ್ರಸ್ತಾವಿತ ನಿಯಮಗಳನ್ನು ಸಮರ್ಥಿಸಿಕೊಂಡಿದ್ದು, ಪರಿಷ್ಕೃತ ಪ್ರಕ್ರಿಯೆಯು “ಅಸ್ಪಷ್ಟತೆಯನ್ನು ನಿವಾರಿಸುತ್ತದೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ” ಎಂದು ಹೇಳಿದೆ. ಜನವರಿ 10 ರಂದು ಮಾತನಾಡಿರುವ ಆಯೋಗದ ಅಧ್ಯಕ್ಷ ಎಂ. ಜಗದೀಶ್, ಹೊಸ ನಿಯಮಗಳು ಕುಲಪತಿ-ಶೋಧನಾ-ಕಮ್-ಆಯ್ಕೆ ಸಮಿತಿಯ ಸಂಯೋಜನೆಯನ್ನು ನಿರ್ದಿಷ್ಟಪಡಿಸುವ ಮೂಲಕ “ತುಂಬಾ ಅಗತ್ಯವಿರುವ ಸ್ಪಷ್ಟತೆ”ಯನ್ನು ತರುತ್ತವೆ ಎಂದು ಹೇಳಿದ್ದಾರೆ.

ಈ ಸಮಿತಿಯು ಮೂವರು ಸದಸ್ಯರನ್ನು ಹೊಂದಿರುತ್ತದೆ – ಒಬ್ಬರು ಕುಲಪತಿಗಳಿಂದ ಆಯ್ಕೆ ಮಾಡಲ್ಪಟ್ಟವರು, ಇನ್ನೊಬ್ಬರು ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರಿಂದ ಮತ್ತು ಮೂರನೇ ಒಬ್ಬರು ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ ಅಥವಾ ಸೆನೆಟ್‌ನಿಂದ ಆಯ್ಕೆಯಾಗುತ್ತಾರೆ ಎಂದು ಜಗದೀಶ್ ಹೇಳಿದ್ದರು.

ಇದನ್ನೂಓದಿ:  ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...