Homeಮುಖಪುಟಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

- Advertisement -
- Advertisement -

ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ)ದ ಕರಡು ನಿಯಮಗಳನ್ನು ಹಿಂಪಡೆಯಬೇಕೆಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾನುವಾರ ಒತ್ತಾಯಿಸಿದ್ದು, ಅವುಗಳನ್ನು ಸಂವಿಧಾನದ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ವಿಶ್ವವಿದ್ಯಾಲಯಗಳನ್ನು ನಡೆಸುವ ಅಧಿಕಾರವನ್ನು ಈ ನಿಯಮಗಳ ಮೂಲಕ ರಾಜ್ಯ ಸರ್ಕಾರಗಳಿಂದ ಕೇಂದ್ರ ಸರ್ಕಾರವು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯುಜಿಸಿ ಕರಡು ನಿಯಮ

ಜನವರಿ 6 ರಂದು ಬಿಡುಗಡೆಯಾದ ಯುಜಿಸಿ ಕರಡು ನಿಯಮಗಳಲ್ಲಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನೆ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿಗಳನ್ನು ಮಾಡುವ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿವೆ. ವಿಶ್ವವಿದ್ಯಾಲಯದ ಉಪಕುಲಪತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಕುಲಪತಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಬಗ್ಗೆ ಕೇಂದ್ರ ಸರ್ಕಾರವು ಯೋಚಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಅಡಿಯಲ್ಲಿ ಇರುವ ವಿಶ್ವವಿದ್ಯಾಲಯಗಳ ಕುಲಪತಿಗಳು ಕೇಂದ್ರ ಸರ್ಕಾರದಿಂದ ನೇಮಕಗೊಂಡ ರಾಜ್ಯಪಾಲರಾಗಿದ್ದಾರೆ. ಇದು ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಂದ ಕೇಂದ್ರ ಸರ್ಕಾರವು ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ಆಯ್ಕೆ ಮಾಡಲು ಹೆಚ್ಚಿನ ಅಧಿಕಾರವನ್ನು ಪಡೆಯುತ್ತಿದೆ ಎಂಬ ಆತಂಕಕ್ಕೆ ಕಾರಣವಾಗಿದೆ.

ಶೈಕ್ಷಣಿಕ ಹಿನ್ನೆಲೆ ಇಲ್ಲದ ಅಭ್ಯರ್ಥಿಗಳನ್ನು ಉಪಕುಲಪತಿಗಳನ್ನಾಗಿ ಮಾಡಲು ಅನುಮತಿಸುವ ಕರಡು ನಿಯಮಗಳಲ್ಲಿನ ನಿಬಂಧನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಹ ಆಕ್ಷೇಪಿಸಿದ್ದಾರೆ. ಇದು ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವವಿಲ್ಲದ ವ್ಯಕ್ತಿಗಳನ್ನು ವಿಶ್ವವಿದ್ಯಾಲಯಗಳ ಮುಖ್ಯಸ್ಥರನ್ನಾಗಿ ನೇಮಿಸಲು ಕಾರಣವಾಗಲಿದೆ ಎಂದು ಅವರು ಕಳೆದ ವಾರ ವಾದಿಸಿದ್ದರು.

ಭಾನುವಾರ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ, ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ಹೊಸ ನಿಯಮಗಳನ್ನು ಪರಿಚಯಿಸುವ ಪ್ರಸ್ತಾಪದ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. “ಕೇಂದ್ರವು ವಿಶ್ವವಿದ್ಯಾಲಯಗಳ ಆಡಳಿತವನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯು ಕೆಲವು ವ್ಯಕ್ತಿಗಳಿಂದ ಸುಳ್ಳು ಪ್ರಚಾರಕ್ಕೆ ವೇದಿಕೆಗಳಾಗಲು ಕಾರಣವಾಗಲಿದೆ” ಎಂದು ಅವರು ಆರೋಪಿಸಿದ್ದಾರೆ. ಯುಜಿಸಿ ಕರಡು ನಿಯಮ

ಈ ವಿಷಯದ ಬಗ್ಗೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ “ಸಮನ್ವಯ” ಮಾಡಿಕೊಳ್ಳುವುದಾಗಿ ರೇವಂತ್ ರೆಡ್ಡಿ ಹೇಳಿದ್ದು, ಶೀಘ್ರದಲ್ಲೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರೊಂದಿಗೆ ಈ ವಿಷಯವನ್ನು ಚರ್ಚಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆಯು ಜನವರಿ 9 ರಂದು ಕರಡು ನಿಯಮಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತ್ತು. ಜನವರಿ 21 ರಂದು ಕೇರಳ ವಿಧಾನಸಭೆ ಕೂಡಾ ನಿರ್ಣಯ ಅಂಗೀಕರಿಸಿದ್ದು, ಜನವರಿ 9 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕರಡನ್ನು ವಿರೋಧಿಸಿದ್ದಾರೆ. ಅವರು ಇದನ್ನು, ಕನ್ನಡಿಗರಿಗೆ ಬಗೆಯುವ “ದ್ರೋಹ” ಎಂದು ಕರೆದಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ವಿಧಾನಸಭೆಯು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ 2024 ಅನ್ನು ಅಂಗೀಕರಿಸಿತ್ತು. ಈ ಮಸೂದೆಯು, ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕಿದ್ದು, ಈ ಸ್ಥಾನಕ್ಕೆ ಮುಖ್ಯಮಂತ್ರಿಯನ್ನು ಬದಲಾಯಿಸಿತ್ತು.

ಆದಾಗ್ಯೂ, ವಿಶ್ವವಿದ್ಯಾಲಯ ಅನುದಾನ ಆಯೋಗವು ಪ್ರಸ್ತಾವಿತ ನಿಯಮಗಳನ್ನು ಸಮರ್ಥಿಸಿಕೊಂಡಿದ್ದು, ಪರಿಷ್ಕೃತ ಪ್ರಕ್ರಿಯೆಯು “ಅಸ್ಪಷ್ಟತೆಯನ್ನು ನಿವಾರಿಸುತ್ತದೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ” ಎಂದು ಹೇಳಿದೆ. ಜನವರಿ 10 ರಂದು ಮಾತನಾಡಿರುವ ಆಯೋಗದ ಅಧ್ಯಕ್ಷ ಎಂ. ಜಗದೀಶ್, ಹೊಸ ನಿಯಮಗಳು ಕುಲಪತಿ-ಶೋಧನಾ-ಕಮ್-ಆಯ್ಕೆ ಸಮಿತಿಯ ಸಂಯೋಜನೆಯನ್ನು ನಿರ್ದಿಷ್ಟಪಡಿಸುವ ಮೂಲಕ “ತುಂಬಾ ಅಗತ್ಯವಿರುವ ಸ್ಪಷ್ಟತೆ”ಯನ್ನು ತರುತ್ತವೆ ಎಂದು ಹೇಳಿದ್ದಾರೆ.

ಈ ಸಮಿತಿಯು ಮೂವರು ಸದಸ್ಯರನ್ನು ಹೊಂದಿರುತ್ತದೆ – ಒಬ್ಬರು ಕುಲಪತಿಗಳಿಂದ ಆಯ್ಕೆ ಮಾಡಲ್ಪಟ್ಟವರು, ಇನ್ನೊಬ್ಬರು ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರಿಂದ ಮತ್ತು ಮೂರನೇ ಒಬ್ಬರು ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ ಅಥವಾ ಸೆನೆಟ್‌ನಿಂದ ಆಯ್ಕೆಯಾಗುತ್ತಾರೆ ಎಂದು ಜಗದೀಶ್ ಹೇಳಿದ್ದರು.

ಇದನ್ನೂಓದಿ:  ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...