Homeಅಂತರಾಷ್ಟ್ರೀಯಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ - ಅರ್ನಾಲ್ಡ್

- Advertisement -
- Advertisement -

ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕ್ಯಾಪಿಟಲ್‌ ಮೇಲಿನ ದಾಳಿಯನ್ನು ಖ್ಯಾತ ಬಾಡಿ ಬಿಲ್ಡರ್‍, ಟರ್ಮಿನೇಟರ್‍ ಖ್ಯಾತಿಯ ಹಾಲಿವುಡ್ ನಟ ಮತ್ತು ಕ್ಯಾಲಿಫೋರ್ನಿಯದ ಮಾಜಿ ಗವರ್ನರ್ ಅರ್ನಾಲ್ಡ್ ಖಂಡಿಸಿದ್ದು, ಈ ಕೃತ್ಯವನ್ನು ಜರ್ಮನಿಯ ನಾಜಿ ದೌರ್ಜನ್ಯಕ್ಕೆ ಹೋಲಿಸಿದ್ದಾರೆ. ಜೊತೆಗೆ ಈ ಕುರಿತು ತಾವು ಮಾಡಿರುವ ವೀಡಿಯೋದಲ್ಲಿ ಐಕ್ಯತೆಗಾಗಿ ಮನವಿ ಮಾಡಿದ್ದಾರೆ.

ಈ ಕುರಿತ ವೀಡಿಯೋವನ್ನು ಅರ್ನಾಲ್ಡ್ ಟ್ವೀಟ್ ಮಾಡಿದ್ದು, “ಜಗತ್ತಿನಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಈ ವಾರ ಕ್ಯಾಪಿಟಲ್ ಮೇಲೆ ನಡೆದ ದಾಳಿಯ ಕುರಿತು ನನ್ನ ಅಮೆರಿಕದ ಪ್ರಜೆಗಳಿಗೆ ಮತ್ತು ಗೆಳೆಯರಿಗೆ ನನ್ನ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ಇದನ್ನೂ ಓದಿ: ಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

1938 ರಲ್ಲಿ ನಾಜಿಗಳು “ಕ್ರಿಸ್ಟಲ್‌ನಚ್ ಅಥವಾ ನೈಟ್ ಆಫ್ ಬ್ರೋಕನ್ ಗ್ಲಾಸ್” ಎಂದು ಕರೆಯಲ್ಪಡುವ ದಾಳಿಯಲ್ಲಿ ಯಹೂದಿ ಒಡೆತನದ ಮಳಿಗೆಗಳ ಕಿಟಕಿಗಳನ್ನು ಒಡೆದಿದ್ದರು. ಈ ದಾಳಿಯನ್ನು ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಮೇಲೆ ಮಾಡಿದ ದಾಳಿಗೆ ಹೋಲಿಸಿದ್ದಾರೆ.

“ಬುಧವಾರ ಅಮೆರಿಕದಲ್ಲಿ ಬ್ರೋಕನ್ ಗ್ಲಾಸ್ ದಿನ” ಎಂದು ಅಮೆರಿಕ ಮತ್ತು ಕ್ಯಾಲಿಫೋರ್ನಿಯ ಧ್ವಜಗಳ ನಡುವೆ ಕುಳಿತು ವೀಡಿಯೋದಲ್ಲಿ ಹೇಳಿದ್ದಾರೆ. ಇದು ಸಾಕಷ್ಟು ವೈರಲ್ ಆಗಿತ್ತು. ಮುಂದುವರಿದು, ತನ್ನ ಬಾಲ್ಯ ಮತ್ತು ತನ್ನ ಕುಟುಂಬದ ಬಗ್ಗೆ ಮತ್ತು ತಾವು ಅನುಭವಿಸಿದ ಕಷ್ಟಗಳನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಇದು ನೋವಿನ ಸಂಗತಿಯಾದ್ದರಿಂದ ಇದುವರೆಗೂ ಸಾರ್ವಜನಿಕವಾಗಿ ಇದನ್ನು ಹಂಚಿಕೊಂಡಿರಲಿಲ್ಲ. ನನ್ನ ತಂದೆ ವಾರದಲ್ಲಿ 2-3 ಬಾರಿ ಕುಡಿದು ಬಂದು ನನ್ನನ್ನು ಮತ್ತು ನನ್ನ ತಾಯಿಯನ್ನು ಹೊಡೆಯುತ್ತಿದ್ದರು. ಹೆದರಿಸುತ್ತಿದ್ದರು. ನನ್ನ ತಂದೆ ಮತ್ತು ನಮ್ಮ ಕೆಲವು ನೆರೆಹೊರೆಯವರನ್ನು ಸುಳ್ಳಿನ ಮೂಲಕ ದಾರಿ ತಪ್ಪಿಸಲಾಗಿತ್ತು. ಇಂತಹ ಸುಳ್ಳುಗಳಿಗೆ ಯಾವಾಗಲೂ ಮುನ್ನಡೆಯಿರುತ್ತದೆ.

ಇಂತಹ ಸುಳ್ಳುಗಳಿಂದಲೇ ಟ್ರಂಪ್‌ ಕೂಡಾ ಜನರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದು ಆರೋಪಿಸಿದ ಅರ್ನಾಲ್ಡ್‌, “ಅಧ್ಯಕ್ಷ ಟ್ರಂಪ್, ಚುನಾವಣೆಯ ಫಲಿತಾಂಶಗಳನ್ನು ಮತ್ತು ನ್ಯಾಯಯುತವಾಗಿ ನಡೆದ ಚುನಾವಣೆಯನ್ನು ರದ್ದುಗೊಳಿಸಲು ಪ್ರಯತ್ನಿಸಿದರು. ಸುಳ್ಳಿನಿಂದ ಜನರನ್ನು ತಪ್ಪುದಾರಿಗೆಳೆಯುವ ಮೂಲಕ ಅವರು ದೊಂಬಿಯೆಬ್ಬಿಸಲು ಬಯಸಿದರು. ಟ್ರಂಪ್ ಒಬ್ಬ ವಿಫಲ ನಾಯಕ. ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ” ಎಂದು ಹೇಳಿದ್ದಾರೆ.

“ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ. ‘ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್, ನಮ್ಮ ಅಧ್ಯಕ್ಷರಾಗಿರುವ ನಿಮ್ಮ ಯಶಸ್ಸನ್ನು ನಾವು ಬಯಸುತ್ತೇವೆ. ನೀವು ಯಶಸ್ವಿಯಾದರೆ, ನಮ್ಮ ರಾಷ್ಟ್ರವು ಯಶಸ್ವಿಯಾಗುತ್ತದೆ’ ಎಂದು ನಮ್ಮೊಂದಿಗೆ ಸೇರಿ ಹರಸಿ ಎಂದು ಅರ್ನಾಲ್ಡ್‌ ಹೇಳಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಕೊನೆಯದಾಗಿ ಅಮೆರಿಕದ ಸಂವಿಧಾನವನ್ನು ಬದಲಾಯಿಸಬೇಕು ಎಂದು ಭಾವಿಸುವವರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದು, “ನೀವು ಎಂದಿಗೂ ಗೆಲ್ಲುವುದಿಲ್ಲ” ಎಂದು ಹೇಳಿದ್ದಾರೆ.

ಅಮೆರಿಕದ ಚುನಾವಣೆ ಮುಗಿದು, ಜೋ ಬೈಡೆನ್‌ ಗೆಲುವು ಸಾಧಿಸಿದ್ದರೂ ಸಹ ಡೊನಾಲ್ಡ್‌ ಟ್ರಂಪ್‌ ತಮ್ಮ ಸೋಲನ್ನು ಒಪ್ಪಿಕೊಂಡಿಲ್ಲ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲಿನಿಂದಲೂ ಆರೋಪಿಸುತ್ತಲೇ ಇದ್ದಾರೆ. ಇದರ ಭಾಗವಾಗಿ ಟ್ರಂಪ್‌ ಬೆಂಬಲಿಗರು ಇತ್ತೀಚೆಗೆ ಶ್ವೇತ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇಲ್ಲಿ ಭಾರತದ ಧ್ವಜವನ್ನೂ ಬಳಸಲಾಗಿತ್ತು. ಇದಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಟ್ರಂಪ್‌ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಅವರ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ.


ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...