Homeಅಂತರಾಷ್ಟ್ರೀಯಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ - ಅರ್ನಾಲ್ಡ್

- Advertisement -
- Advertisement -

ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕ್ಯಾಪಿಟಲ್‌ ಮೇಲಿನ ದಾಳಿಯನ್ನು ಖ್ಯಾತ ಬಾಡಿ ಬಿಲ್ಡರ್‍, ಟರ್ಮಿನೇಟರ್‍ ಖ್ಯಾತಿಯ ಹಾಲಿವುಡ್ ನಟ ಮತ್ತು ಕ್ಯಾಲಿಫೋರ್ನಿಯದ ಮಾಜಿ ಗವರ್ನರ್ ಅರ್ನಾಲ್ಡ್ ಖಂಡಿಸಿದ್ದು, ಈ ಕೃತ್ಯವನ್ನು ಜರ್ಮನಿಯ ನಾಜಿ ದೌರ್ಜನ್ಯಕ್ಕೆ ಹೋಲಿಸಿದ್ದಾರೆ. ಜೊತೆಗೆ ಈ ಕುರಿತು ತಾವು ಮಾಡಿರುವ ವೀಡಿಯೋದಲ್ಲಿ ಐಕ್ಯತೆಗಾಗಿ ಮನವಿ ಮಾಡಿದ್ದಾರೆ.

ಈ ಕುರಿತ ವೀಡಿಯೋವನ್ನು ಅರ್ನಾಲ್ಡ್ ಟ್ವೀಟ್ ಮಾಡಿದ್ದು, “ಜಗತ್ತಿನಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಈ ವಾರ ಕ್ಯಾಪಿಟಲ್ ಮೇಲೆ ನಡೆದ ದಾಳಿಯ ಕುರಿತು ನನ್ನ ಅಮೆರಿಕದ ಪ್ರಜೆಗಳಿಗೆ ಮತ್ತು ಗೆಳೆಯರಿಗೆ ನನ್ನ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ಇದನ್ನೂ ಓದಿ: ಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

1938 ರಲ್ಲಿ ನಾಜಿಗಳು “ಕ್ರಿಸ್ಟಲ್‌ನಚ್ ಅಥವಾ ನೈಟ್ ಆಫ್ ಬ್ರೋಕನ್ ಗ್ಲಾಸ್” ಎಂದು ಕರೆಯಲ್ಪಡುವ ದಾಳಿಯಲ್ಲಿ ಯಹೂದಿ ಒಡೆತನದ ಮಳಿಗೆಗಳ ಕಿಟಕಿಗಳನ್ನು ಒಡೆದಿದ್ದರು. ಈ ದಾಳಿಯನ್ನು ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಮೇಲೆ ಮಾಡಿದ ದಾಳಿಗೆ ಹೋಲಿಸಿದ್ದಾರೆ.

“ಬುಧವಾರ ಅಮೆರಿಕದಲ್ಲಿ ಬ್ರೋಕನ್ ಗ್ಲಾಸ್ ದಿನ” ಎಂದು ಅಮೆರಿಕ ಮತ್ತು ಕ್ಯಾಲಿಫೋರ್ನಿಯ ಧ್ವಜಗಳ ನಡುವೆ ಕುಳಿತು ವೀಡಿಯೋದಲ್ಲಿ ಹೇಳಿದ್ದಾರೆ. ಇದು ಸಾಕಷ್ಟು ವೈರಲ್ ಆಗಿತ್ತು. ಮುಂದುವರಿದು, ತನ್ನ ಬಾಲ್ಯ ಮತ್ತು ತನ್ನ ಕುಟುಂಬದ ಬಗ್ಗೆ ಮತ್ತು ತಾವು ಅನುಭವಿಸಿದ ಕಷ್ಟಗಳನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಇದು ನೋವಿನ ಸಂಗತಿಯಾದ್ದರಿಂದ ಇದುವರೆಗೂ ಸಾರ್ವಜನಿಕವಾಗಿ ಇದನ್ನು ಹಂಚಿಕೊಂಡಿರಲಿಲ್ಲ. ನನ್ನ ತಂದೆ ವಾರದಲ್ಲಿ 2-3 ಬಾರಿ ಕುಡಿದು ಬಂದು ನನ್ನನ್ನು ಮತ್ತು ನನ್ನ ತಾಯಿಯನ್ನು ಹೊಡೆಯುತ್ತಿದ್ದರು. ಹೆದರಿಸುತ್ತಿದ್ದರು. ನನ್ನ ತಂದೆ ಮತ್ತು ನಮ್ಮ ಕೆಲವು ನೆರೆಹೊರೆಯವರನ್ನು ಸುಳ್ಳಿನ ಮೂಲಕ ದಾರಿ ತಪ್ಪಿಸಲಾಗಿತ್ತು. ಇಂತಹ ಸುಳ್ಳುಗಳಿಗೆ ಯಾವಾಗಲೂ ಮುನ್ನಡೆಯಿರುತ್ತದೆ.

ಇಂತಹ ಸುಳ್ಳುಗಳಿಂದಲೇ ಟ್ರಂಪ್‌ ಕೂಡಾ ಜನರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದು ಆರೋಪಿಸಿದ ಅರ್ನಾಲ್ಡ್‌, “ಅಧ್ಯಕ್ಷ ಟ್ರಂಪ್, ಚುನಾವಣೆಯ ಫಲಿತಾಂಶಗಳನ್ನು ಮತ್ತು ನ್ಯಾಯಯುತವಾಗಿ ನಡೆದ ಚುನಾವಣೆಯನ್ನು ರದ್ದುಗೊಳಿಸಲು ಪ್ರಯತ್ನಿಸಿದರು. ಸುಳ್ಳಿನಿಂದ ಜನರನ್ನು ತಪ್ಪುದಾರಿಗೆಳೆಯುವ ಮೂಲಕ ಅವರು ದೊಂಬಿಯೆಬ್ಬಿಸಲು ಬಯಸಿದರು. ಟ್ರಂಪ್ ಒಬ್ಬ ವಿಫಲ ನಾಯಕ. ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ” ಎಂದು ಹೇಳಿದ್ದಾರೆ.

“ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ. ‘ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್, ನಮ್ಮ ಅಧ್ಯಕ್ಷರಾಗಿರುವ ನಿಮ್ಮ ಯಶಸ್ಸನ್ನು ನಾವು ಬಯಸುತ್ತೇವೆ. ನೀವು ಯಶಸ್ವಿಯಾದರೆ, ನಮ್ಮ ರಾಷ್ಟ್ರವು ಯಶಸ್ವಿಯಾಗುತ್ತದೆ’ ಎಂದು ನಮ್ಮೊಂದಿಗೆ ಸೇರಿ ಹರಸಿ ಎಂದು ಅರ್ನಾಲ್ಡ್‌ ಹೇಳಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಕೊನೆಯದಾಗಿ ಅಮೆರಿಕದ ಸಂವಿಧಾನವನ್ನು ಬದಲಾಯಿಸಬೇಕು ಎಂದು ಭಾವಿಸುವವರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದು, “ನೀವು ಎಂದಿಗೂ ಗೆಲ್ಲುವುದಿಲ್ಲ” ಎಂದು ಹೇಳಿದ್ದಾರೆ.

ಅಮೆರಿಕದ ಚುನಾವಣೆ ಮುಗಿದು, ಜೋ ಬೈಡೆನ್‌ ಗೆಲುವು ಸಾಧಿಸಿದ್ದರೂ ಸಹ ಡೊನಾಲ್ಡ್‌ ಟ್ರಂಪ್‌ ತಮ್ಮ ಸೋಲನ್ನು ಒಪ್ಪಿಕೊಂಡಿಲ್ಲ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲಿನಿಂದಲೂ ಆರೋಪಿಸುತ್ತಲೇ ಇದ್ದಾರೆ. ಇದರ ಭಾಗವಾಗಿ ಟ್ರಂಪ್‌ ಬೆಂಬಲಿಗರು ಇತ್ತೀಚೆಗೆ ಶ್ವೇತ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇಲ್ಲಿ ಭಾರತದ ಧ್ವಜವನ್ನೂ ಬಳಸಲಾಗಿತ್ತು. ಇದಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಟ್ರಂಪ್‌ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಅವರ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ.


ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....