Homeಅಂತರಾಷ್ಟ್ರೀಯಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ - ಅರ್ನಾಲ್ಡ್

- Advertisement -
- Advertisement -

ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕ್ಯಾಪಿಟಲ್‌ ಮೇಲಿನ ದಾಳಿಯನ್ನು ಖ್ಯಾತ ಬಾಡಿ ಬಿಲ್ಡರ್‍, ಟರ್ಮಿನೇಟರ್‍ ಖ್ಯಾತಿಯ ಹಾಲಿವುಡ್ ನಟ ಮತ್ತು ಕ್ಯಾಲಿಫೋರ್ನಿಯದ ಮಾಜಿ ಗವರ್ನರ್ ಅರ್ನಾಲ್ಡ್ ಖಂಡಿಸಿದ್ದು, ಈ ಕೃತ್ಯವನ್ನು ಜರ್ಮನಿಯ ನಾಜಿ ದೌರ್ಜನ್ಯಕ್ಕೆ ಹೋಲಿಸಿದ್ದಾರೆ. ಜೊತೆಗೆ ಈ ಕುರಿತು ತಾವು ಮಾಡಿರುವ ವೀಡಿಯೋದಲ್ಲಿ ಐಕ್ಯತೆಗಾಗಿ ಮನವಿ ಮಾಡಿದ್ದಾರೆ.

ಈ ಕುರಿತ ವೀಡಿಯೋವನ್ನು ಅರ್ನಾಲ್ಡ್ ಟ್ವೀಟ್ ಮಾಡಿದ್ದು, “ಜಗತ್ತಿನಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಈ ವಾರ ಕ್ಯಾಪಿಟಲ್ ಮೇಲೆ ನಡೆದ ದಾಳಿಯ ಕುರಿತು ನನ್ನ ಅಮೆರಿಕದ ಪ್ರಜೆಗಳಿಗೆ ಮತ್ತು ಗೆಳೆಯರಿಗೆ ನನ್ನ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ಇದನ್ನೂ ಓದಿ: ಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

1938 ರಲ್ಲಿ ನಾಜಿಗಳು “ಕ್ರಿಸ್ಟಲ್‌ನಚ್ ಅಥವಾ ನೈಟ್ ಆಫ್ ಬ್ರೋಕನ್ ಗ್ಲಾಸ್” ಎಂದು ಕರೆಯಲ್ಪಡುವ ದಾಳಿಯಲ್ಲಿ ಯಹೂದಿ ಒಡೆತನದ ಮಳಿಗೆಗಳ ಕಿಟಕಿಗಳನ್ನು ಒಡೆದಿದ್ದರು. ಈ ದಾಳಿಯನ್ನು ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಮೇಲೆ ಮಾಡಿದ ದಾಳಿಗೆ ಹೋಲಿಸಿದ್ದಾರೆ.

“ಬುಧವಾರ ಅಮೆರಿಕದಲ್ಲಿ ಬ್ರೋಕನ್ ಗ್ಲಾಸ್ ದಿನ” ಎಂದು ಅಮೆರಿಕ ಮತ್ತು ಕ್ಯಾಲಿಫೋರ್ನಿಯ ಧ್ವಜಗಳ ನಡುವೆ ಕುಳಿತು ವೀಡಿಯೋದಲ್ಲಿ ಹೇಳಿದ್ದಾರೆ. ಇದು ಸಾಕಷ್ಟು ವೈರಲ್ ಆಗಿತ್ತು. ಮುಂದುವರಿದು, ತನ್ನ ಬಾಲ್ಯ ಮತ್ತು ತನ್ನ ಕುಟುಂಬದ ಬಗ್ಗೆ ಮತ್ತು ತಾವು ಅನುಭವಿಸಿದ ಕಷ್ಟಗಳನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಇದು ನೋವಿನ ಸಂಗತಿಯಾದ್ದರಿಂದ ಇದುವರೆಗೂ ಸಾರ್ವಜನಿಕವಾಗಿ ಇದನ್ನು ಹಂಚಿಕೊಂಡಿರಲಿಲ್ಲ. ನನ್ನ ತಂದೆ ವಾರದಲ್ಲಿ 2-3 ಬಾರಿ ಕುಡಿದು ಬಂದು ನನ್ನನ್ನು ಮತ್ತು ನನ್ನ ತಾಯಿಯನ್ನು ಹೊಡೆಯುತ್ತಿದ್ದರು. ಹೆದರಿಸುತ್ತಿದ್ದರು. ನನ್ನ ತಂದೆ ಮತ್ತು ನಮ್ಮ ಕೆಲವು ನೆರೆಹೊರೆಯವರನ್ನು ಸುಳ್ಳಿನ ಮೂಲಕ ದಾರಿ ತಪ್ಪಿಸಲಾಗಿತ್ತು. ಇಂತಹ ಸುಳ್ಳುಗಳಿಗೆ ಯಾವಾಗಲೂ ಮುನ್ನಡೆಯಿರುತ್ತದೆ.

ಇಂತಹ ಸುಳ್ಳುಗಳಿಂದಲೇ ಟ್ರಂಪ್‌ ಕೂಡಾ ಜನರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದು ಆರೋಪಿಸಿದ ಅರ್ನಾಲ್ಡ್‌, “ಅಧ್ಯಕ್ಷ ಟ್ರಂಪ್, ಚುನಾವಣೆಯ ಫಲಿತಾಂಶಗಳನ್ನು ಮತ್ತು ನ್ಯಾಯಯುತವಾಗಿ ನಡೆದ ಚುನಾವಣೆಯನ್ನು ರದ್ದುಗೊಳಿಸಲು ಪ್ರಯತ್ನಿಸಿದರು. ಸುಳ್ಳಿನಿಂದ ಜನರನ್ನು ತಪ್ಪುದಾರಿಗೆಳೆಯುವ ಮೂಲಕ ಅವರು ದೊಂಬಿಯೆಬ್ಬಿಸಲು ಬಯಸಿದರು. ಟ್ರಂಪ್ ಒಬ್ಬ ವಿಫಲ ನಾಯಕ. ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ” ಎಂದು ಹೇಳಿದ್ದಾರೆ.

“ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ. ‘ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್, ನಮ್ಮ ಅಧ್ಯಕ್ಷರಾಗಿರುವ ನಿಮ್ಮ ಯಶಸ್ಸನ್ನು ನಾವು ಬಯಸುತ್ತೇವೆ. ನೀವು ಯಶಸ್ವಿಯಾದರೆ, ನಮ್ಮ ರಾಷ್ಟ್ರವು ಯಶಸ್ವಿಯಾಗುತ್ತದೆ’ ಎಂದು ನಮ್ಮೊಂದಿಗೆ ಸೇರಿ ಹರಸಿ ಎಂದು ಅರ್ನಾಲ್ಡ್‌ ಹೇಳಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಕೊನೆಯದಾಗಿ ಅಮೆರಿಕದ ಸಂವಿಧಾನವನ್ನು ಬದಲಾಯಿಸಬೇಕು ಎಂದು ಭಾವಿಸುವವರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದು, “ನೀವು ಎಂದಿಗೂ ಗೆಲ್ಲುವುದಿಲ್ಲ” ಎಂದು ಹೇಳಿದ್ದಾರೆ.

ಅಮೆರಿಕದ ಚುನಾವಣೆ ಮುಗಿದು, ಜೋ ಬೈಡೆನ್‌ ಗೆಲುವು ಸಾಧಿಸಿದ್ದರೂ ಸಹ ಡೊನಾಲ್ಡ್‌ ಟ್ರಂಪ್‌ ತಮ್ಮ ಸೋಲನ್ನು ಒಪ್ಪಿಕೊಂಡಿಲ್ಲ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲಿನಿಂದಲೂ ಆರೋಪಿಸುತ್ತಲೇ ಇದ್ದಾರೆ. ಇದರ ಭಾಗವಾಗಿ ಟ್ರಂಪ್‌ ಬೆಂಬಲಿಗರು ಇತ್ತೀಚೆಗೆ ಶ್ವೇತ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇಲ್ಲಿ ಭಾರತದ ಧ್ವಜವನ್ನೂ ಬಳಸಲಾಗಿತ್ತು. ಇದಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಟ್ರಂಪ್‌ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಅವರ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ.


ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...