Homeಅಂತರಾಷ್ಟ್ರೀಯಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ಟ್ರಂಪ್ ಒಬ್ಬ ವಿಫಲ ನಾಯಕ, ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ: ಅರ್ನಾಲ್ಡ್‌

ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ - ಅರ್ನಾಲ್ಡ್

- Advertisement -
- Advertisement -

ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕ್ಯಾಪಿಟಲ್‌ ಮೇಲಿನ ದಾಳಿಯನ್ನು ಖ್ಯಾತ ಬಾಡಿ ಬಿಲ್ಡರ್‍, ಟರ್ಮಿನೇಟರ್‍ ಖ್ಯಾತಿಯ ಹಾಲಿವುಡ್ ನಟ ಮತ್ತು ಕ್ಯಾಲಿಫೋರ್ನಿಯದ ಮಾಜಿ ಗವರ್ನರ್ ಅರ್ನಾಲ್ಡ್ ಖಂಡಿಸಿದ್ದು, ಈ ಕೃತ್ಯವನ್ನು ಜರ್ಮನಿಯ ನಾಜಿ ದೌರ್ಜನ್ಯಕ್ಕೆ ಹೋಲಿಸಿದ್ದಾರೆ. ಜೊತೆಗೆ ಈ ಕುರಿತು ತಾವು ಮಾಡಿರುವ ವೀಡಿಯೋದಲ್ಲಿ ಐಕ್ಯತೆಗಾಗಿ ಮನವಿ ಮಾಡಿದ್ದಾರೆ.

ಈ ಕುರಿತ ವೀಡಿಯೋವನ್ನು ಅರ್ನಾಲ್ಡ್ ಟ್ವೀಟ್ ಮಾಡಿದ್ದು, “ಜಗತ್ತಿನಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಈ ವಾರ ಕ್ಯಾಪಿಟಲ್ ಮೇಲೆ ನಡೆದ ದಾಳಿಯ ಕುರಿತು ನನ್ನ ಅಮೆರಿಕದ ಪ್ರಜೆಗಳಿಗೆ ಮತ್ತು ಗೆಳೆಯರಿಗೆ ನನ್ನ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ಇದನ್ನೂ ಓದಿ: ಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

1938 ರಲ್ಲಿ ನಾಜಿಗಳು “ಕ್ರಿಸ್ಟಲ್‌ನಚ್ ಅಥವಾ ನೈಟ್ ಆಫ್ ಬ್ರೋಕನ್ ಗ್ಲಾಸ್” ಎಂದು ಕರೆಯಲ್ಪಡುವ ದಾಳಿಯಲ್ಲಿ ಯಹೂದಿ ಒಡೆತನದ ಮಳಿಗೆಗಳ ಕಿಟಕಿಗಳನ್ನು ಒಡೆದಿದ್ದರು. ಈ ದಾಳಿಯನ್ನು ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಮೇಲೆ ಮಾಡಿದ ದಾಳಿಗೆ ಹೋಲಿಸಿದ್ದಾರೆ.

“ಬುಧವಾರ ಅಮೆರಿಕದಲ್ಲಿ ಬ್ರೋಕನ್ ಗ್ಲಾಸ್ ದಿನ” ಎಂದು ಅಮೆರಿಕ ಮತ್ತು ಕ್ಯಾಲಿಫೋರ್ನಿಯ ಧ್ವಜಗಳ ನಡುವೆ ಕುಳಿತು ವೀಡಿಯೋದಲ್ಲಿ ಹೇಳಿದ್ದಾರೆ. ಇದು ಸಾಕಷ್ಟು ವೈರಲ್ ಆಗಿತ್ತು. ಮುಂದುವರಿದು, ತನ್ನ ಬಾಲ್ಯ ಮತ್ತು ತನ್ನ ಕುಟುಂಬದ ಬಗ್ಗೆ ಮತ್ತು ತಾವು ಅನುಭವಿಸಿದ ಕಷ್ಟಗಳನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಇದು ನೋವಿನ ಸಂಗತಿಯಾದ್ದರಿಂದ ಇದುವರೆಗೂ ಸಾರ್ವಜನಿಕವಾಗಿ ಇದನ್ನು ಹಂಚಿಕೊಂಡಿರಲಿಲ್ಲ. ನನ್ನ ತಂದೆ ವಾರದಲ್ಲಿ 2-3 ಬಾರಿ ಕುಡಿದು ಬಂದು ನನ್ನನ್ನು ಮತ್ತು ನನ್ನ ತಾಯಿಯನ್ನು ಹೊಡೆಯುತ್ತಿದ್ದರು. ಹೆದರಿಸುತ್ತಿದ್ದರು. ನನ್ನ ತಂದೆ ಮತ್ತು ನಮ್ಮ ಕೆಲವು ನೆರೆಹೊರೆಯವರನ್ನು ಸುಳ್ಳಿನ ಮೂಲಕ ದಾರಿ ತಪ್ಪಿಸಲಾಗಿತ್ತು. ಇಂತಹ ಸುಳ್ಳುಗಳಿಗೆ ಯಾವಾಗಲೂ ಮುನ್ನಡೆಯಿರುತ್ತದೆ.

ಇಂತಹ ಸುಳ್ಳುಗಳಿಂದಲೇ ಟ್ರಂಪ್‌ ಕೂಡಾ ಜನರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದು ಆರೋಪಿಸಿದ ಅರ್ನಾಲ್ಡ್‌, “ಅಧ್ಯಕ್ಷ ಟ್ರಂಪ್, ಚುನಾವಣೆಯ ಫಲಿತಾಂಶಗಳನ್ನು ಮತ್ತು ನ್ಯಾಯಯುತವಾಗಿ ನಡೆದ ಚುನಾವಣೆಯನ್ನು ರದ್ದುಗೊಳಿಸಲು ಪ್ರಯತ್ನಿಸಿದರು. ಸುಳ್ಳಿನಿಂದ ಜನರನ್ನು ತಪ್ಪುದಾರಿಗೆಳೆಯುವ ಮೂಲಕ ಅವರು ದೊಂಬಿಯೆಬ್ಬಿಸಲು ಬಯಸಿದರು. ಟ್ರಂಪ್ ಒಬ್ಬ ವಿಫಲ ನಾಯಕ. ಅವರು ಇತಿಹಾಸದಲ್ಲಿ ಒಬ್ಬ ಕೆಟ್ಟ ಅಧ್ಯಕ್ಷರಾಗಿ ಉಳಿಯುತ್ತಾರೆ” ಎಂದು ಹೇಳಿದ್ದಾರೆ.

“ನಿಮ್ಮ ರಾಜಕೀಯ ನಿಲುವು ಮತ್ತು ಸಂಬಂಧ ಏನೇ ಇರಲಿ. ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್‌ಗೆ ಶುಭ ಹಾರೈಸಿ. ‘ಅಧ್ಯಕ್ಷರಾಗಿ ಚುನಾಯಿತರಾಗಿರುವ ಬೈಡೆನ್, ನಮ್ಮ ಅಧ್ಯಕ್ಷರಾಗಿರುವ ನಿಮ್ಮ ಯಶಸ್ಸನ್ನು ನಾವು ಬಯಸುತ್ತೇವೆ. ನೀವು ಯಶಸ್ವಿಯಾದರೆ, ನಮ್ಮ ರಾಷ್ಟ್ರವು ಯಶಸ್ವಿಯಾಗುತ್ತದೆ’ ಎಂದು ನಮ್ಮೊಂದಿಗೆ ಸೇರಿ ಹರಸಿ ಎಂದು ಅರ್ನಾಲ್ಡ್‌ ಹೇಳಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಕೊನೆಯದಾಗಿ ಅಮೆರಿಕದ ಸಂವಿಧಾನವನ್ನು ಬದಲಾಯಿಸಬೇಕು ಎಂದು ಭಾವಿಸುವವರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದು, “ನೀವು ಎಂದಿಗೂ ಗೆಲ್ಲುವುದಿಲ್ಲ” ಎಂದು ಹೇಳಿದ್ದಾರೆ.

ಅಮೆರಿಕದ ಚುನಾವಣೆ ಮುಗಿದು, ಜೋ ಬೈಡೆನ್‌ ಗೆಲುವು ಸಾಧಿಸಿದ್ದರೂ ಸಹ ಡೊನಾಲ್ಡ್‌ ಟ್ರಂಪ್‌ ತಮ್ಮ ಸೋಲನ್ನು ಒಪ್ಪಿಕೊಂಡಿಲ್ಲ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲಿನಿಂದಲೂ ಆರೋಪಿಸುತ್ತಲೇ ಇದ್ದಾರೆ. ಇದರ ಭಾಗವಾಗಿ ಟ್ರಂಪ್‌ ಬೆಂಬಲಿಗರು ಇತ್ತೀಚೆಗೆ ಶ್ವೇತ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇಲ್ಲಿ ಭಾರತದ ಧ್ವಜವನ್ನೂ ಬಳಸಲಾಗಿತ್ತು. ಇದಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಟ್ರಂಪ್‌ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಅವರ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ.


ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...