Homeಮುಖಪುಟಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

ಅಲಿಬಾಗ್ ಪೊಲೀಸರ ತಂಡ, ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ಬಂಧಿಸಲು ಹೋದಾಗ ಮಹಿಳಾ ಪೊಲೀಸ್‌ ಮೇಲೆ ಅರ್ನಾಬ್, ಪತ್ನಿ ಮತ್ತು ಮಗ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಲಾಗಿದೆ.

- Advertisement -
- Advertisement -

ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ, ಅವರ ಪತ್ನಿ, ಮಗ ಮತ್ತು ಇನ್ನಿಬ್ಬರ ವಿರುದ್ಧ ಮುಂಬೈ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2018 ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅರ್ನಾಬ್ ಗೋಸ್ವಾಮಿಯನ್ನು ಬೆಳಿಗ್ಗೆ ಬಂಧಿಸಲು ಅಲಿಬಾಗ್ ಪೊಲೀಸರ ತಂಡ ಹೋದಾಗ ಈ ಘಟನೆ ನಡೆದಿದೆ.

ಮಹಿಳಾ ಪೊಲೀಸ್ ಅಧಿಕಾರಿಯ ದೂರಿನ ನಂತರ, ಅರ್ನಾಬ್ ಗೋಸ್ವಾಮಿ ಮತ್ತು ಇತರರ ವಿರುದ್ಧ ಮುಂಬೈನ ಎನ್ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ಸ್ 353 (ಸಾರ್ವಜನಿಕ ಸೇವಕನನ್ನು ತನ್ನ ಕರ್ತವ್ಯ ನಿರ್ವಹಣೆಯಿಂದ ತಡೆದು ಹಲ್ಲೆ), 504 (ಉದ್ದೇಶಪೂರ್ವಕ ಶಾಂತಿ ಕದಡುವಿಕೆ) ಮತ್ತು 506 (ಕ್ರಿಮಿನಲ್ ಬೆದರಿಕೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪೋಲಿಸ್ ವ್ಯಾನ್‌ಗೆ ತಳ್ಳಲ್ಪಟ್ಟಿದ್ದ ಅರ್ನಾಬ್ ಗೋಸ್ವಾಮಿ, ತನ್ನ ಮನೆಯಲ್ಲಿ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಹೇಳಿಕೊಂಡರು.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

ಈ ಪ್ರಕರಣದಲ್ಲಿ ಅನ್ವಯ್ ನಾಯಕ್ 2018 ರಲ್ಲಿ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ (80 ಲಕ್ಷ), ಐಕಾಸ್ಟ್ ಎಕ್ಸ್‌ನ ಫಿರೋಜ್ ಶೇಖ್ (4 ಕೋಟಿ) ಮತ್ತು ಸ್ಮಾರ್ಟ್‌ವರ್ಕ್‌ ನಿತಿಶ್ ಸರ್ದಾ (55 ಲಕ್ಷ) ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದರಲ್ಲಿ ಮೂರು ಕಂಪನಿಗಳ ಮಾಲೀಕರು 5.35 ಕೋಟಿ ಹಣ ಪಾವತಿ ಮಾಡದೇ ಇರುವುದರಿಂದ ಈ ಕಠಿಣ ನಿರ್ಧಾರಕ್ಕೆ ಬರುತ್ತಿದ್ದೇವೆ ಎಂದು ಬರೆಯಲಾಗಿದೆ.

2018 ರಲ್ಲಿ ನಡೆದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅರ್ನಾಬ್‌‌ನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದು, ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‌ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿದೆ.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

2018 ರಲ್ಲಿ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರಾದರೂ 2019 ರಲ್ಲಿ ಪ್ರಕರಣವನ್ನು ರಾಯಗಡ್ ಪೊಲೀಸರು ಮುಚ್ಚಿದ್ದರು.

2020 ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

ಅನ್ವಯ್ ನಾಯಕ್ ಕಾನ್ಕಾರ್ಡ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಕಂಪೆನಿಯು ರಿಪಬ್ಲಿಕ್ ಟಿವಿಗೆ ಕೆಲವು ಸೇವೆಗಳನ್ನು ನೀಡಿತ್ತು. ಅನ್ವಯ್ ಅವರ ತಾಯಿ ಸಹ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿದ್ದರು. ಅನ್ವಯ್ ಅವರ ಪತ್ನಿ ಸೂಸೈಡ್ ನೋಟ್‌‌ನಲ್ಲಿ ಇರುವ ಹೆಸರಿನ ಆಧಾರದಲ್ಲಿ ಅರ್ನಾಬ್ ಸೇರಿದಂತೆ ಇತರರ ಮೇಲೆ ಕೇಸು ದಾಖಲಿಸಿದ್ದರು.

ಆ ಸಮಯದಲ್ಲಿ ರಿಪಬ್ಲಿಕ್ ಟಿವಿಯು ತನ್ನ ಬಾಕಿ ಪಾವತಿಯ ಆರೋಪಗಳನ್ನು ರದ್ದುಗೊಳಿಸಿ, ಇದು ದುರುದ್ದೇಶಪೂರಿತ ಅಭಿಯಾನ ಎಂದು ಹೇಳಿತ್ತು. ಒಪ್ಪಂದದ ಪ್ರಕಾರ ಪಾವತಿಸಬೇಕಾದ ಎಲ್ಲಾ ಮೊತ್ತವನ್ನು ರಿಪಬ್ಲಿಕ್ ಟಿವಿ ಕನ್‌ಕಾರ್ಡ್ ಡಿಸೈನ್ಸ್‌‌ಗೆ ಪಾವತಿಸಿದೆ ಎಂದು ಅದು ಹೇಳಿಕೊಂಡಿತ್ತು.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ಅರ್ನಾಬ್ ಗೋಸ್ವಾಮಿಯ ಬಂಧನವು ರಾಜಕೀಯ ಮೇಲಾಟಗಳಿಗೆ ಸಾಕ್ಷಿಯಾಯಿತು. ಬಿಜೆಪಿಯ ಉನ್ನತ ನಾಯಕರು ಇದರ ವಿರುದ್ಧ ಕಿಡಿ ಕಾರಿದ್ದು, ಇದು ಕಾಂಗ್ರೆಸ್ ಮತ್ತು ಶಿವಸೇನೆಯ ಪ್ರಜಾಪ್ರಭುತ್ವವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ಇದನ್ನು ಅಘೋಷಿತ ತುರ್ತು ಪರಿಸ್ಥಿತಿ ಎಂದು ಕರೆದಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಶಿವಸೇನೆ, “ಇದು ಪತ್ರಿಕೋದ್ಯಮ ಮತ್ತು ಪತ್ರಕರ್ತರ ಮೇಲಿನ ದಾಳಿಯಲ್ಲ. ಬದಲಿಗೆ ಅವರ ಮೇಲಿನ ವೈಯಕ್ತಿಕ ಆರೋಪಗಳ ಆಧಾರದ ಮೇಲೆ ಆಗಿರುವ ಬಂಧನವಾಗಿದ್ದು, ಕಾನೂನು ತನ್ನ ಕರ್ತವ್ಯವನ್ನು ನಿರ್ವಹಿಸಲಿದೆ” ಎಂದು ಹೇಳಿದೆ.

ಇನ್ನು ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಬಿಜೆಪಿಯವರ ಪ್ರತಿರೋಧಗಳು ಅವಕಾಶವಾದಿತನದ್ದಾಗಿದೆ. ಇವರು ಎಲ್ಲಾ ಪ್ರಕರಣಗಳಲ್ಲೂ ಹೀಗೇ ವರ್ತಿಸುವುದಿಲ್ಲ” ಎಂದು ಬಿಜೆಪಿ ನಾಯಕರ ಕಾಲೆಳೆದಿದೆ.

ಇನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅರ್ನಾಬ್ ಬಂಧನದ ಬಗ್ಗೆ ಪರ-ವಿರೋಧದ ಚರ್ಚೆಗಳು ಭುಗಿಲೆದ್ದಿವೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...