Homeಮುಖಪುಟಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

ಅಲಿಬಾಗ್ ಪೊಲೀಸರ ತಂಡ, ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ಬಂಧಿಸಲು ಹೋದಾಗ ಮಹಿಳಾ ಪೊಲೀಸ್‌ ಮೇಲೆ ಅರ್ನಾಬ್, ಪತ್ನಿ ಮತ್ತು ಮಗ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಲಾಗಿದೆ.

- Advertisement -
- Advertisement -

ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ, ಅವರ ಪತ್ನಿ, ಮಗ ಮತ್ತು ಇನ್ನಿಬ್ಬರ ವಿರುದ್ಧ ಮುಂಬೈ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2018 ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅರ್ನಾಬ್ ಗೋಸ್ವಾಮಿಯನ್ನು ಬೆಳಿಗ್ಗೆ ಬಂಧಿಸಲು ಅಲಿಬಾಗ್ ಪೊಲೀಸರ ತಂಡ ಹೋದಾಗ ಈ ಘಟನೆ ನಡೆದಿದೆ.

ಮಹಿಳಾ ಪೊಲೀಸ್ ಅಧಿಕಾರಿಯ ದೂರಿನ ನಂತರ, ಅರ್ನಾಬ್ ಗೋಸ್ವಾಮಿ ಮತ್ತು ಇತರರ ವಿರುದ್ಧ ಮುಂಬೈನ ಎನ್ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ಸ್ 353 (ಸಾರ್ವಜನಿಕ ಸೇವಕನನ್ನು ತನ್ನ ಕರ್ತವ್ಯ ನಿರ್ವಹಣೆಯಿಂದ ತಡೆದು ಹಲ್ಲೆ), 504 (ಉದ್ದೇಶಪೂರ್ವಕ ಶಾಂತಿ ಕದಡುವಿಕೆ) ಮತ್ತು 506 (ಕ್ರಿಮಿನಲ್ ಬೆದರಿಕೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪೋಲಿಸ್ ವ್ಯಾನ್‌ಗೆ ತಳ್ಳಲ್ಪಟ್ಟಿದ್ದ ಅರ್ನಾಬ್ ಗೋಸ್ವಾಮಿ, ತನ್ನ ಮನೆಯಲ್ಲಿ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಹೇಳಿಕೊಂಡರು.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

ಈ ಪ್ರಕರಣದಲ್ಲಿ ಅನ್ವಯ್ ನಾಯಕ್ 2018 ರಲ್ಲಿ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ (80 ಲಕ್ಷ), ಐಕಾಸ್ಟ್ ಎಕ್ಸ್‌ನ ಫಿರೋಜ್ ಶೇಖ್ (4 ಕೋಟಿ) ಮತ್ತು ಸ್ಮಾರ್ಟ್‌ವರ್ಕ್‌ ನಿತಿಶ್ ಸರ್ದಾ (55 ಲಕ್ಷ) ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದರಲ್ಲಿ ಮೂರು ಕಂಪನಿಗಳ ಮಾಲೀಕರು 5.35 ಕೋಟಿ ಹಣ ಪಾವತಿ ಮಾಡದೇ ಇರುವುದರಿಂದ ಈ ಕಠಿಣ ನಿರ್ಧಾರಕ್ಕೆ ಬರುತ್ತಿದ್ದೇವೆ ಎಂದು ಬರೆಯಲಾಗಿದೆ.

2018 ರಲ್ಲಿ ನಡೆದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅರ್ನಾಬ್‌‌ನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದು, ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‌ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿದೆ.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

2018 ರಲ್ಲಿ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರಾದರೂ 2019 ರಲ್ಲಿ ಪ್ರಕರಣವನ್ನು ರಾಯಗಡ್ ಪೊಲೀಸರು ಮುಚ್ಚಿದ್ದರು.

2020 ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

ಅನ್ವಯ್ ನಾಯಕ್ ಕಾನ್ಕಾರ್ಡ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಕಂಪೆನಿಯು ರಿಪಬ್ಲಿಕ್ ಟಿವಿಗೆ ಕೆಲವು ಸೇವೆಗಳನ್ನು ನೀಡಿತ್ತು. ಅನ್ವಯ್ ಅವರ ತಾಯಿ ಸಹ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿದ್ದರು. ಅನ್ವಯ್ ಅವರ ಪತ್ನಿ ಸೂಸೈಡ್ ನೋಟ್‌‌ನಲ್ಲಿ ಇರುವ ಹೆಸರಿನ ಆಧಾರದಲ್ಲಿ ಅರ್ನಾಬ್ ಸೇರಿದಂತೆ ಇತರರ ಮೇಲೆ ಕೇಸು ದಾಖಲಿಸಿದ್ದರು.

ಆ ಸಮಯದಲ್ಲಿ ರಿಪಬ್ಲಿಕ್ ಟಿವಿಯು ತನ್ನ ಬಾಕಿ ಪಾವತಿಯ ಆರೋಪಗಳನ್ನು ರದ್ದುಗೊಳಿಸಿ, ಇದು ದುರುದ್ದೇಶಪೂರಿತ ಅಭಿಯಾನ ಎಂದು ಹೇಳಿತ್ತು. ಒಪ್ಪಂದದ ಪ್ರಕಾರ ಪಾವತಿಸಬೇಕಾದ ಎಲ್ಲಾ ಮೊತ್ತವನ್ನು ರಿಪಬ್ಲಿಕ್ ಟಿವಿ ಕನ್‌ಕಾರ್ಡ್ ಡಿಸೈನ್ಸ್‌‌ಗೆ ಪಾವತಿಸಿದೆ ಎಂದು ಅದು ಹೇಳಿಕೊಂಡಿತ್ತು.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ಅರ್ನಾಬ್ ಗೋಸ್ವಾಮಿಯ ಬಂಧನವು ರಾಜಕೀಯ ಮೇಲಾಟಗಳಿಗೆ ಸಾಕ್ಷಿಯಾಯಿತು. ಬಿಜೆಪಿಯ ಉನ್ನತ ನಾಯಕರು ಇದರ ವಿರುದ್ಧ ಕಿಡಿ ಕಾರಿದ್ದು, ಇದು ಕಾಂಗ್ರೆಸ್ ಮತ್ತು ಶಿವಸೇನೆಯ ಪ್ರಜಾಪ್ರಭುತ್ವವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ಇದನ್ನು ಅಘೋಷಿತ ತುರ್ತು ಪರಿಸ್ಥಿತಿ ಎಂದು ಕರೆದಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಶಿವಸೇನೆ, “ಇದು ಪತ್ರಿಕೋದ್ಯಮ ಮತ್ತು ಪತ್ರಕರ್ತರ ಮೇಲಿನ ದಾಳಿಯಲ್ಲ. ಬದಲಿಗೆ ಅವರ ಮೇಲಿನ ವೈಯಕ್ತಿಕ ಆರೋಪಗಳ ಆಧಾರದ ಮೇಲೆ ಆಗಿರುವ ಬಂಧನವಾಗಿದ್ದು, ಕಾನೂನು ತನ್ನ ಕರ್ತವ್ಯವನ್ನು ನಿರ್ವಹಿಸಲಿದೆ” ಎಂದು ಹೇಳಿದೆ.

ಇನ್ನು ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಬಿಜೆಪಿಯವರ ಪ್ರತಿರೋಧಗಳು ಅವಕಾಶವಾದಿತನದ್ದಾಗಿದೆ. ಇವರು ಎಲ್ಲಾ ಪ್ರಕರಣಗಳಲ್ಲೂ ಹೀಗೇ ವರ್ತಿಸುವುದಿಲ್ಲ” ಎಂದು ಬಿಜೆಪಿ ನಾಯಕರ ಕಾಲೆಳೆದಿದೆ.

ಇನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅರ್ನಾಬ್ ಬಂಧನದ ಬಗ್ಗೆ ಪರ-ವಿರೋಧದ ಚರ್ಚೆಗಳು ಭುಗಿಲೆದ್ದಿವೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...