Homeಚಳವಳಿಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮೇಲೆ ಶುಕ್ರವಾರ (ಏಪ್ರಿಲ್ 02) ನಡೆದ ದಾಳಿಯನ್ನು ಬಿಟ್ಟಿ ಪ್ರಚಾರ ಪಡೆಯಲು ನಡೆಸಿದ್ದಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್ ತಪ್ಪೊಪ್ಪಿಕೊಂಡಿದ್ದಾನೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಅಲ್ವಾರ್ ಪೊಲೀಸರ ಬಂಧನದಲ್ಲಿರುವ ಎಬಿವಿಪಿ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ವಿಚಾರಣೆ ವೇಳೆ ಈ ತಪ್ಪೊಪ್ಪಿಗೆಯನ್ನು ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೇಸ್ ವರದಿ ಮಾಡಿದೆ.

ಕುಲದೀಪ್ ಯಾದವ್ ಸ್ವತಂತ್ರ ಅಭ್ಯರ್ಥಿಯಾಗಿ 2019 ರಲ್ಲಿ ಅಲ್ವಾರ್ ಮೂಲದ ಮತ್ಸ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕರಾಗಿದ್ದರು. ನಂತರ ಎಬಿವಿಪಿಗೆ ಸೇರಿದ್ದಾರೆ. ಆದರೆ, ಆತನ ಬಿಎ ಪದವಿ ನಕಲಿ ಎಂಬುದು ತಿಳಿದ ನಂತರ, ಆಯ್ಕೆಯಾದ ಕೆಲವೇ ದಿನಗಳಲ್ಲಿ ಆತ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆತ ಆಯೋಜಿಸುತ್ತಿದ್ದ ಹಲವು ಕಾರ್ಯಕ್ರಮಗಳಲ್ಲಿ ಬಿಜೆಪಿಯ ಹಿರಿಯ ಮುಖಂಡರು ಹಾಜರಾಗುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ಬಂಧಿತ ಆರೋಪಿಗಳು (PC: EPS)

ಕಳೆದ ಶುಕ್ರವಾರ ರಾಕೇಶ್ ಟಿಕಾಯತ್ ಅವರ ಬೆಂಗಾವಲು ವಾಹನ ಹರ್ಸೋರಾ ಗ್ರಾಮದಿಂದ ಬನ್ಸೂರ್‌ಗೆ ತೆರಳುತ್ತಿದ್ದಾಗ, ತತಾರ್ಪುರ್ ಗ್ರಾಮದಲ್ಲಿ ಎಬಿವಿಪಿ ಮುಖಂಡ ಕುಲದೀಪ್ ಯಾದವ್ ತನ್ನ ಬೆಂಬಲಿಗರೊಂದಿಗೆ ಕಪ್ಪು ಧ್ವಜಗಳನ್ನು ತೋರಿಸಿದ್ದರು.

ರೈತ ನಾಯಕರನ್ನು ಸ್ವಾಗತಿಸುವ ನೆಪದಲ್ಲಿ ಅವರ ಕಾರುಗಳನ್ನು ತಡೆದು ಕಲ್ಲುತೂರಾಟ ನಡೆಸಿದ್ದರು. ಟಿಕಾಯತ್ ಅವರ ಕಾರಿನ ಕಿಟಕಿಗೆ ಹಾನಿಯಾಗಿತ್ತು ಜೊತೆಗೆ ಕಪ್ಪು ಮಸಿ ಬಳಿಯಲಾಗಿತ್ತು ಎಂದು 33 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ದಾಳಿ ಆರೋಪದ ಮೇಲೆ ಈವರೆಗೆ 16 ಜನರನ್ನು ಬಂಧಿಸಲಾಗಿದೆ. ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ ಎಂದು ಪೊಲೀಸರ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಬಂಧಿತ ವಿದ್ಯಾರ್ಥಿ ನಾಯಕನೊಂದಿಗಿನ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ನಿರಾಕರಿಸಿದ್ದರೂ, ಕುಲದೀಪ್ ಯಾದವ್ ಜೊತೆಗೆ ಇರುವ ಹಿರಿಯ ಬಿಜೆಪಿ ನಾಯಕರ ಚಿತ್ರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಆರೋಪಿ ಕುಲದೀಪ್ ಯಾದವ್ ಅವರೊಂದಿಗೆ ಕಾಣಿಸಿಕೊಂಡವರಲ್ಲಿ ರಾಜಸ್ಥಾನ ರಾಜ್ಯ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ, ಅಲ್ವಾರ್ ಸಂಸದ ಬಾಬಾ ಬಾಲಕನಾಥ್ ಮತ್ತು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹೋಶಿಯಾರ್ ಮೀನಾ ಸೇರಿದ್ದಾರೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಂಡಿಸಿದ್ದರು. ಎಬಿವಿಪಿ ನಾಯಕ ಕುಲದೀಪ್ ಯಾದವ್ ಆರೋಪಿ ಎಂಬುದನ್ನು ಖಚಿತಪಡಿಸಿದವರಲ್ಲಿ ಪತ್ರಕರ್ತ ಮಂದೀಪ್ ಪುನೀಯಾ ಮೊದಲಿಗರಾಗಿದ್ದರು.

ಹಲ್ಲೆ ನಡೆದ ದಿನವೇ ಕುಲ್‌ದೀಪ್ ಯಾದವ್, ಎಬಿವಿಪಿ ಸದಸ್ಯನಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದಾನೆ. ಇವನ ಕಾರನ್ನು ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯಲ್ಲಿ ಬಳಸಲಾಗಿದೆ ಎಂಬುದನ್ನು ಪತ್ರಕರ್ತ ಮಂದೀಪ್ ಪುನಿಯಾ ಸಾಕ್ಷಿಗಳ ಸಮೇತ ವಿವರಿಸಿದ್ದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...