Homeಚಳವಳಿಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮೇಲೆ ಶುಕ್ರವಾರ (ಏಪ್ರಿಲ್ 02) ನಡೆದ ದಾಳಿಯನ್ನು ಬಿಟ್ಟಿ ಪ್ರಚಾರ ಪಡೆಯಲು ನಡೆಸಿದ್ದಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್ ತಪ್ಪೊಪ್ಪಿಕೊಂಡಿದ್ದಾನೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಅಲ್ವಾರ್ ಪೊಲೀಸರ ಬಂಧನದಲ್ಲಿರುವ ಎಬಿವಿಪಿ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ವಿಚಾರಣೆ ವೇಳೆ ಈ ತಪ್ಪೊಪ್ಪಿಗೆಯನ್ನು ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೇಸ್ ವರದಿ ಮಾಡಿದೆ.

ಕುಲದೀಪ್ ಯಾದವ್ ಸ್ವತಂತ್ರ ಅಭ್ಯರ್ಥಿಯಾಗಿ 2019 ರಲ್ಲಿ ಅಲ್ವಾರ್ ಮೂಲದ ಮತ್ಸ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕರಾಗಿದ್ದರು. ನಂತರ ಎಬಿವಿಪಿಗೆ ಸೇರಿದ್ದಾರೆ. ಆದರೆ, ಆತನ ಬಿಎ ಪದವಿ ನಕಲಿ ಎಂಬುದು ತಿಳಿದ ನಂತರ, ಆಯ್ಕೆಯಾದ ಕೆಲವೇ ದಿನಗಳಲ್ಲಿ ಆತ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆತ ಆಯೋಜಿಸುತ್ತಿದ್ದ ಹಲವು ಕಾರ್ಯಕ್ರಮಗಳಲ್ಲಿ ಬಿಜೆಪಿಯ ಹಿರಿಯ ಮುಖಂಡರು ಹಾಜರಾಗುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ಬಂಧಿತ ಆರೋಪಿಗಳು (PC: EPS)

ಕಳೆದ ಶುಕ್ರವಾರ ರಾಕೇಶ್ ಟಿಕಾಯತ್ ಅವರ ಬೆಂಗಾವಲು ವಾಹನ ಹರ್ಸೋರಾ ಗ್ರಾಮದಿಂದ ಬನ್ಸೂರ್‌ಗೆ ತೆರಳುತ್ತಿದ್ದಾಗ, ತತಾರ್ಪುರ್ ಗ್ರಾಮದಲ್ಲಿ ಎಬಿವಿಪಿ ಮುಖಂಡ ಕುಲದೀಪ್ ಯಾದವ್ ತನ್ನ ಬೆಂಬಲಿಗರೊಂದಿಗೆ ಕಪ್ಪು ಧ್ವಜಗಳನ್ನು ತೋರಿಸಿದ್ದರು.

ರೈತ ನಾಯಕರನ್ನು ಸ್ವಾಗತಿಸುವ ನೆಪದಲ್ಲಿ ಅವರ ಕಾರುಗಳನ್ನು ತಡೆದು ಕಲ್ಲುತೂರಾಟ ನಡೆಸಿದ್ದರು. ಟಿಕಾಯತ್ ಅವರ ಕಾರಿನ ಕಿಟಕಿಗೆ ಹಾನಿಯಾಗಿತ್ತು ಜೊತೆಗೆ ಕಪ್ಪು ಮಸಿ ಬಳಿಯಲಾಗಿತ್ತು ಎಂದು 33 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ದಾಳಿ ಆರೋಪದ ಮೇಲೆ ಈವರೆಗೆ 16 ಜನರನ್ನು ಬಂಧಿಸಲಾಗಿದೆ. ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ ಎಂದು ಪೊಲೀಸರ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಬಂಧಿತ ವಿದ್ಯಾರ್ಥಿ ನಾಯಕನೊಂದಿಗಿನ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ನಿರಾಕರಿಸಿದ್ದರೂ, ಕುಲದೀಪ್ ಯಾದವ್ ಜೊತೆಗೆ ಇರುವ ಹಿರಿಯ ಬಿಜೆಪಿ ನಾಯಕರ ಚಿತ್ರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಆರೋಪಿ ಕುಲದೀಪ್ ಯಾದವ್ ಅವರೊಂದಿಗೆ ಕಾಣಿಸಿಕೊಂಡವರಲ್ಲಿ ರಾಜಸ್ಥಾನ ರಾಜ್ಯ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ, ಅಲ್ವಾರ್ ಸಂಸದ ಬಾಬಾ ಬಾಲಕನಾಥ್ ಮತ್ತು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹೋಶಿಯಾರ್ ಮೀನಾ ಸೇರಿದ್ದಾರೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಂಡಿಸಿದ್ದರು. ಎಬಿವಿಪಿ ನಾಯಕ ಕುಲದೀಪ್ ಯಾದವ್ ಆರೋಪಿ ಎಂಬುದನ್ನು ಖಚಿತಪಡಿಸಿದವರಲ್ಲಿ ಪತ್ರಕರ್ತ ಮಂದೀಪ್ ಪುನೀಯಾ ಮೊದಲಿಗರಾಗಿದ್ದರು.

ಹಲ್ಲೆ ನಡೆದ ದಿನವೇ ಕುಲ್‌ದೀಪ್ ಯಾದವ್, ಎಬಿವಿಪಿ ಸದಸ್ಯನಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದಾನೆ. ಇವನ ಕಾರನ್ನು ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯಲ್ಲಿ ಬಳಸಲಾಗಿದೆ ಎಂಬುದನ್ನು ಪತ್ರಕರ್ತ ಮಂದೀಪ್ ಪುನಿಯಾ ಸಾಕ್ಷಿಗಳ ಸಮೇತ ವಿವರಿಸಿದ್ದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...