Homeಚಳವಳಿಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮೇಲೆ ಶುಕ್ರವಾರ (ಏಪ್ರಿಲ್ 02) ನಡೆದ ದಾಳಿಯನ್ನು ಬಿಟ್ಟಿ ಪ್ರಚಾರ ಪಡೆಯಲು ನಡೆಸಿದ್ದಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್ ತಪ್ಪೊಪ್ಪಿಕೊಂಡಿದ್ದಾನೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಅಲ್ವಾರ್ ಪೊಲೀಸರ ಬಂಧನದಲ್ಲಿರುವ ಎಬಿವಿಪಿ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ವಿಚಾರಣೆ ವೇಳೆ ಈ ತಪ್ಪೊಪ್ಪಿಗೆಯನ್ನು ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೇಸ್ ವರದಿ ಮಾಡಿದೆ.

ಕುಲದೀಪ್ ಯಾದವ್ ಸ್ವತಂತ್ರ ಅಭ್ಯರ್ಥಿಯಾಗಿ 2019 ರಲ್ಲಿ ಅಲ್ವಾರ್ ಮೂಲದ ಮತ್ಸ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕರಾಗಿದ್ದರು. ನಂತರ ಎಬಿವಿಪಿಗೆ ಸೇರಿದ್ದಾರೆ. ಆದರೆ, ಆತನ ಬಿಎ ಪದವಿ ನಕಲಿ ಎಂಬುದು ತಿಳಿದ ನಂತರ, ಆಯ್ಕೆಯಾದ ಕೆಲವೇ ದಿನಗಳಲ್ಲಿ ಆತ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆತ ಆಯೋಜಿಸುತ್ತಿದ್ದ ಹಲವು ಕಾರ್ಯಕ್ರಮಗಳಲ್ಲಿ ಬಿಜೆಪಿಯ ಹಿರಿಯ ಮುಖಂಡರು ಹಾಜರಾಗುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ಬಂಧಿತ ಆರೋಪಿಗಳು (PC: EPS)

ಕಳೆದ ಶುಕ್ರವಾರ ರಾಕೇಶ್ ಟಿಕಾಯತ್ ಅವರ ಬೆಂಗಾವಲು ವಾಹನ ಹರ್ಸೋರಾ ಗ್ರಾಮದಿಂದ ಬನ್ಸೂರ್‌ಗೆ ತೆರಳುತ್ತಿದ್ದಾಗ, ತತಾರ್ಪುರ್ ಗ್ರಾಮದಲ್ಲಿ ಎಬಿವಿಪಿ ಮುಖಂಡ ಕುಲದೀಪ್ ಯಾದವ್ ತನ್ನ ಬೆಂಬಲಿಗರೊಂದಿಗೆ ಕಪ್ಪು ಧ್ವಜಗಳನ್ನು ತೋರಿಸಿದ್ದರು.

ರೈತ ನಾಯಕರನ್ನು ಸ್ವಾಗತಿಸುವ ನೆಪದಲ್ಲಿ ಅವರ ಕಾರುಗಳನ್ನು ತಡೆದು ಕಲ್ಲುತೂರಾಟ ನಡೆಸಿದ್ದರು. ಟಿಕಾಯತ್ ಅವರ ಕಾರಿನ ಕಿಟಕಿಗೆ ಹಾನಿಯಾಗಿತ್ತು ಜೊತೆಗೆ ಕಪ್ಪು ಮಸಿ ಬಳಿಯಲಾಗಿತ್ತು ಎಂದು 33 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ದಾಳಿ ಆರೋಪದ ಮೇಲೆ ಈವರೆಗೆ 16 ಜನರನ್ನು ಬಂಧಿಸಲಾಗಿದೆ. ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ ಎಂದು ಪೊಲೀಸರ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಬಂಧಿತ ವಿದ್ಯಾರ್ಥಿ ನಾಯಕನೊಂದಿಗಿನ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ನಿರಾಕರಿಸಿದ್ದರೂ, ಕುಲದೀಪ್ ಯಾದವ್ ಜೊತೆಗೆ ಇರುವ ಹಿರಿಯ ಬಿಜೆಪಿ ನಾಯಕರ ಚಿತ್ರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಆರೋಪಿ ಕುಲದೀಪ್ ಯಾದವ್ ಅವರೊಂದಿಗೆ ಕಾಣಿಸಿಕೊಂಡವರಲ್ಲಿ ರಾಜಸ್ಥಾನ ರಾಜ್ಯ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ, ಅಲ್ವಾರ್ ಸಂಸದ ಬಾಬಾ ಬಾಲಕನಾಥ್ ಮತ್ತು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹೋಶಿಯಾರ್ ಮೀನಾ ಸೇರಿದ್ದಾರೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಂಡಿಸಿದ್ದರು. ಎಬಿವಿಪಿ ನಾಯಕ ಕುಲದೀಪ್ ಯಾದವ್ ಆರೋಪಿ ಎಂಬುದನ್ನು ಖಚಿತಪಡಿಸಿದವರಲ್ಲಿ ಪತ್ರಕರ್ತ ಮಂದೀಪ್ ಪುನೀಯಾ ಮೊದಲಿಗರಾಗಿದ್ದರು.

ಹಲ್ಲೆ ನಡೆದ ದಿನವೇ ಕುಲ್‌ದೀಪ್ ಯಾದವ್, ಎಬಿವಿಪಿ ಸದಸ್ಯನಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದಾನೆ. ಇವನ ಕಾರನ್ನು ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯಲ್ಲಿ ಬಳಸಲಾಗಿದೆ ಎಂಬುದನ್ನು ಪತ್ರಕರ್ತ ಮಂದೀಪ್ ಪುನಿಯಾ ಸಾಕ್ಷಿಗಳ ಸಮೇತ ವಿವರಿಸಿದ್ದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...