Homeಚಳವಳಿಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮೇಲೆ ಶುಕ್ರವಾರ (ಏಪ್ರಿಲ್ 02) ನಡೆದ ದಾಳಿಯನ್ನು ಬಿಟ್ಟಿ ಪ್ರಚಾರ ಪಡೆಯಲು ನಡೆಸಿದ್ದಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್ ತಪ್ಪೊಪ್ಪಿಕೊಂಡಿದ್ದಾನೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಅಲ್ವಾರ್ ಪೊಲೀಸರ ಬಂಧನದಲ್ಲಿರುವ ಎಬಿವಿಪಿ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ವಿಚಾರಣೆ ವೇಳೆ ಈ ತಪ್ಪೊಪ್ಪಿಗೆಯನ್ನು ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೇಸ್ ವರದಿ ಮಾಡಿದೆ.

ಕುಲದೀಪ್ ಯಾದವ್ ಸ್ವತಂತ್ರ ಅಭ್ಯರ್ಥಿಯಾಗಿ 2019 ರಲ್ಲಿ ಅಲ್ವಾರ್ ಮೂಲದ ಮತ್ಸ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕರಾಗಿದ್ದರು. ನಂತರ ಎಬಿವಿಪಿಗೆ ಸೇರಿದ್ದಾರೆ. ಆದರೆ, ಆತನ ಬಿಎ ಪದವಿ ನಕಲಿ ಎಂಬುದು ತಿಳಿದ ನಂತರ, ಆಯ್ಕೆಯಾದ ಕೆಲವೇ ದಿನಗಳಲ್ಲಿ ಆತ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆತ ಆಯೋಜಿಸುತ್ತಿದ್ದ ಹಲವು ಕಾರ್ಯಕ್ರಮಗಳಲ್ಲಿ ಬಿಜೆಪಿಯ ಹಿರಿಯ ಮುಖಂಡರು ಹಾಜರಾಗುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ಬಂಧಿತ ಆರೋಪಿಗಳು (PC: EPS)

ಕಳೆದ ಶುಕ್ರವಾರ ರಾಕೇಶ್ ಟಿಕಾಯತ್ ಅವರ ಬೆಂಗಾವಲು ವಾಹನ ಹರ್ಸೋರಾ ಗ್ರಾಮದಿಂದ ಬನ್ಸೂರ್‌ಗೆ ತೆರಳುತ್ತಿದ್ದಾಗ, ತತಾರ್ಪುರ್ ಗ್ರಾಮದಲ್ಲಿ ಎಬಿವಿಪಿ ಮುಖಂಡ ಕುಲದೀಪ್ ಯಾದವ್ ತನ್ನ ಬೆಂಬಲಿಗರೊಂದಿಗೆ ಕಪ್ಪು ಧ್ವಜಗಳನ್ನು ತೋರಿಸಿದ್ದರು.

ರೈತ ನಾಯಕರನ್ನು ಸ್ವಾಗತಿಸುವ ನೆಪದಲ್ಲಿ ಅವರ ಕಾರುಗಳನ್ನು ತಡೆದು ಕಲ್ಲುತೂರಾಟ ನಡೆಸಿದ್ದರು. ಟಿಕಾಯತ್ ಅವರ ಕಾರಿನ ಕಿಟಕಿಗೆ ಹಾನಿಯಾಗಿತ್ತು ಜೊತೆಗೆ ಕಪ್ಪು ಮಸಿ ಬಳಿಯಲಾಗಿತ್ತು ಎಂದು 33 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ದಾಳಿ ಆರೋಪದ ಮೇಲೆ ಈವರೆಗೆ 16 ಜನರನ್ನು ಬಂಧಿಸಲಾಗಿದೆ. ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ ಎಂದು ಪೊಲೀಸರ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಬಂಧಿತ ವಿದ್ಯಾರ್ಥಿ ನಾಯಕನೊಂದಿಗಿನ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ನಿರಾಕರಿಸಿದ್ದರೂ, ಕುಲದೀಪ್ ಯಾದವ್ ಜೊತೆಗೆ ಇರುವ ಹಿರಿಯ ಬಿಜೆಪಿ ನಾಯಕರ ಚಿತ್ರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಆರೋಪಿ ಕುಲದೀಪ್ ಯಾದವ್ ಅವರೊಂದಿಗೆ ಕಾಣಿಸಿಕೊಂಡವರಲ್ಲಿ ರಾಜಸ್ಥಾನ ರಾಜ್ಯ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ, ಅಲ್ವಾರ್ ಸಂಸದ ಬಾಬಾ ಬಾಲಕನಾಥ್ ಮತ್ತು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹೋಶಿಯಾರ್ ಮೀನಾ ಸೇರಿದ್ದಾರೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಂಡಿಸಿದ್ದರು. ಎಬಿವಿಪಿ ನಾಯಕ ಕುಲದೀಪ್ ಯಾದವ್ ಆರೋಪಿ ಎಂಬುದನ್ನು ಖಚಿತಪಡಿಸಿದವರಲ್ಲಿ ಪತ್ರಕರ್ತ ಮಂದೀಪ್ ಪುನೀಯಾ ಮೊದಲಿಗರಾಗಿದ್ದರು.

ಹಲ್ಲೆ ನಡೆದ ದಿನವೇ ಕುಲ್‌ದೀಪ್ ಯಾದವ್, ಎಬಿವಿಪಿ ಸದಸ್ಯನಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದಾನೆ. ಇವನ ಕಾರನ್ನು ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯಲ್ಲಿ ಬಳಸಲಾಗಿದೆ ಎಂಬುದನ್ನು ಪತ್ರಕರ್ತ ಮಂದೀಪ್ ಪುನಿಯಾ ಸಾಕ್ಷಿಗಳ ಸಮೇತ ವಿವರಿಸಿದ್ದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...