Homeಮುಖಪುಟನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

- Advertisement -
- Advertisement -

ಭಾರತದಲ್ಲಿ ಕ್ರೈಸ್ತರ ಮೇಲಿನ ದ್ವೇಷ ಮತ್ತು ಹಿಂಸಾಚಾರದ ಘಟನೆಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಬೇಕು ಎಂದು ಶನಿವಾರ 93 ಮಾಜಿ ನಾಗರಿಕ ಸೇವಕರ ಗುಂಪು ಒತ್ತಾಯಿಸಿದೆ.

”ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚಾಗುತ್ತಿವೆ. ಹಾಗಾಗಿ ಕ್ರಿಶ್ಚಿಯನ್ನರ ವಿರುದ್ಧದ ದಾಳಿಯನ್ನು ಖಂಡಿಸಬೇಕು” ಎಂದು ಪ್ರಧಾನ ಮಂತ್ರಿಯನ್ನು 93 ಮಾಜಿ ಅಧಿಕಾರಿಗಳು ಕೇಳಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳ ಆದೇಶದಿಂದ ಕೆಲವು ಉಗ್ರಗಾಮಿಗಳು ನಿರ್ಭಯದಿಂದ ಕ್ರಿಶ್ಚಿಯನ್ನರ ಮೇಲೆ ದಾಳಿ ನಡೆಸುತ್ತಿದ್ದಾರೆ. ಭಾರತದಲ್ಲಿ ನಮ್ಮನ್ನು ಅಪರಿಚಿತರಂತೆ ಭಾವಿಸುತ್ತಿದ್ದಾರೆ ಎಂದು ಮಾಜಿ ಅಧಿಕಾರಿಗಳು ಆರೋಪಿಸಿದ್ದಾರೆ.

”ಕ್ರೈಸ್ತರು ಭಾರತದ ಜನಸಂಖ್ಯೆಯ 2.3% ರಷ್ಟಿದ್ದಾರೆ, ಮತ್ತು ಈ ಶೇಕಡಾವಾರು 1951ರ ಜನಗಣತಿಯಿಂದಲೂ ಹೆಚ್ಚು ಕಡಿಮೆ ಒಂದೇ ಆಗಿದೆ. ಆದರೂ, ಕಡಿಮೆ ಸಂಖ್ಯೆಯ ಕ್ರಿಶ್ಚಿಯನ್ನರಿಂದ 80% ಹಿಂದೂಗಳ ಮೇಲೆ ಅಪಾಯಉಂಟಾಗಲಿದೆ ಎನ್ನುವುದು ಕೆಲವರ ಮನಸ್ಸಿನಲ್ಲಿದೆ” ಎಂದು ಮಾಜಿ ಅಧಿಕಾರಿಗಳು ಹೇಳಿದರು.

ಕಳೆದ ಕೆಲವು ವರ್ಷಗಳಿಂದ, ಕ್ರಿಶ್ಚಿಯನ್ನರು ಬಲವಂತದ ಮತಾಂತರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಹಿಂದುತ್ವ ಗುಂಪುಗಳು ಚರ್ಚ್‌ಗಳ ಮೇಲೆ ದಾಳಿ ನಡೆಸಿದ ಹಲವಾರು ನಿದರ್ಶನಗಳಿವೆ.

ಇತ್ತಿಚೆಗೆ ಮಾರ್ಚ್ 2ರಂದು, ದೆಹಲಿಯ ವಿಶ್ವ ಪುಸ್ತಕ ಮೇಳದಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸುವುದನ್ನು ವಿರೋಧಿಸಿದ ಗುಂಪೊಂದು ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಿತು. ಗಿಡಿಯನ್ ಇಂಟರ್‌ನ್ಯಾಶನಲ್ ಎಂಬ ಕ್ರಿಶ್ಚಿಯನ್ ಲಾಭೋದ್ದೇಶವಿಲ್ಲದ ಸಂಸ್ಥೆಯು ಈ ಸ್ಟಾಲ್ ಅನ್ನು ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

ಫೆಬ್ರವರಿ 28 ರಂದು, ಘಾಜಿಯಾಬಾದ್‌ನಲ್ಲಿ ಪಾದ್ರಿ ಮತ್ತು ಅವರ ಪತ್ನಿ ಮನವೊಲಿಕೆ ಮತ್ತು ಆಮಿಷದ ಮೂಲಕ ಅಲ್ಲಿಯ ನಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುತ್ತಿದ್ದಾರೆ ಎಂದು ಬಜರಂಗದಳದ ಸದಸ್ಯರು ದೂರು ಸಲ್ಲಿಸಿದ್ದರು. ಆ ದೂರಿನ ಮೇರೆಗೆ ಪಾದ್ರಿ ಮತ್ತು ಅವರ ಪತ್ನಿಯನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಫೆಬ್ರವರಿ 13 ಮತ್ತು ಜನವರಿ 2 ರಂದು ಕ್ರಮವಾಗಿ ಮಧ್ಯಪ್ರದೇಶದ ನರ್ಮದಾಪುರಂ ಮತ್ತು ಛತ್ತೀಸ್‌ಗಢದ ನಾರಾಯಣಪುರದಲ್ಲಿ ಚರ್ಚ್‌ಗಳನ್ನು ಧ್ವಂಸಗೊಳಿಸಲಾಗಿತ್ತು.

2021ರಲ್ಲಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ಆ ವರ್ಷದ ಜನವರಿ ಮತ್ತು ಸೆಪ್ಟೆಂಬರ್ ನಡುವೆ ಭಾರತದಾದ್ಯಂತ ಕ್ರಿಶ್ಚಿಯನ್ ಸಮುದಾಯದ ಸದಸ್ಯರ ಮೇಲೆ 305 ದಾಳಿಗಳು ನಡೆದಿವೆ ಎಂದು ಹೇಳಲಾಗಿದೆ.

ಫೆಬ್ರವರಿ 20ರಂದು, ಚರ್ಚ್‌ಗಳ ಮೇಲಿನ ದಾಳಿಯನ್ನು ವಿರೋಧಿಸಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದರು. ಸುಮಾರು 100 ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಾಜಿ ನಾಗರಿಕ ಸೇವಕರು ಶನಿವಾರದಂದು ಬರೆದ ಪತ್ರದಲ್ಲಿ, ”ಕ್ರಿಶ್ಚಿಯನ್ನರ ಮೇಲೆ ಬಲವಂತದ ಮತಾಂತರದ ಆರೋಪ ಹೊರಿಸುತ್ತಿದ್ದಾರೆ. ಆನಂತರ ದೈಹಿಕ ಮತ್ತು ಮಾನಸಿಕ ದಾಳಿಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

”ಇಂತಹ ದೊಡ್ಡ ಪ್ರಮಾಣದ ಮತಾಂತರಗಳು ನಡೆಯುತ್ತಿದ್ದರೆ, ಕ್ರಿಶ್ಚಿಯನ್ನರ ಶೇಕಡಾವಾರು ಪ್ರಮಾಣವು ಹಲವು ದಶಕಗಳಿಂದ ಏಕೆ ಸ್ಥಿರವಾಗಿ ಉಳಿದಿದೆ?” ಎಂದು ಅವರು ಕೇಳಿದ್ದಾರೆ.

ಈ ಪತ್ರಕ್ಕೆ ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಮಾಜಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ನಜೀಬ್ ಜಂಗ್ ಮತ್ತು ಇತರರು ಸೇರಿದಂತೆ ನಿವೃತ್ತ ನಾಗರಿಕ ಸೇವಕರು ಸಹಿ ಹಾಕಿದ್ದಾರೆ.

ಕ್ರಿಶ್ಚಿಯನ್ನರು ಅನೇಕ ಕ್ಷೇತ್ರಗಳಲ್ಲಿ ವಿಶೇಷವಾಗಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸುಧಾರಣೆಗಳಿಗೆ ಕೊಡುಗೆ ನೀಡುತ್ತಾರೆ ಎಂದು ಸಹಿ ಮಾಡಿದ ಮಾಜಿ ಅಧಿಕಾರಿಗಳು ಒತ್ತಿ ಹೇಳಿದ್ದಾರೆ.

”ಸಾಂಕ್ರಾಮಿಕ ಸಮಯದಲ್ಲಿ, ಒಂದು ಸಾವಿರಕ್ಕೂ ಹೆಚ್ಚು ಕ್ರಿಶ್ಚಿಯನ್ ಆಸ್ಪತ್ರೆಗಳು ರೋಗಿಗಳ ಚಿಕಿತ್ಸೆಗಾಗಿ ಕೆಲಸ ಮಾಡಿವೆ. ಕ್ರಿಶ್ಚಿಯನ್ ಸಂಸ್ಥೆಗಳು ಶಿಕ್ಷಣ ಅಥವಾ ಆರೋಗ್ಯವನ್ನು ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಎಂದು ನಿರ್ಬಂಧಿಸುವುದಿಲ್ಲ ಎಂದು ಅವರು ಹೇಳಿದರು.”

ಬಿಜೆಪಿ, ಕೇಂದ್ರ ಸರ್ಕಾರ ಮತ್ತು ಪ್ರತಿ ರಾಜ್ಯ ಸರ್ಕಾರದ ನಾಯಕರ ಒಂದು ಮಾತಿನಿಂದ ಕ್ರಿಶ್ಚಿಯನ್ನರ ಮೇಲಿನ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬಹುದು ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...