Homeಮುಖಪುಟನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

- Advertisement -
- Advertisement -

ಭಾರತದಲ್ಲಿ ಕ್ರೈಸ್ತರ ಮೇಲಿನ ದ್ವೇಷ ಮತ್ತು ಹಿಂಸಾಚಾರದ ಘಟನೆಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಬೇಕು ಎಂದು ಶನಿವಾರ 93 ಮಾಜಿ ನಾಗರಿಕ ಸೇವಕರ ಗುಂಪು ಒತ್ತಾಯಿಸಿದೆ.

”ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚಾಗುತ್ತಿವೆ. ಹಾಗಾಗಿ ಕ್ರಿಶ್ಚಿಯನ್ನರ ವಿರುದ್ಧದ ದಾಳಿಯನ್ನು ಖಂಡಿಸಬೇಕು” ಎಂದು ಪ್ರಧಾನ ಮಂತ್ರಿಯನ್ನು 93 ಮಾಜಿ ಅಧಿಕಾರಿಗಳು ಕೇಳಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳ ಆದೇಶದಿಂದ ಕೆಲವು ಉಗ್ರಗಾಮಿಗಳು ನಿರ್ಭಯದಿಂದ ಕ್ರಿಶ್ಚಿಯನ್ನರ ಮೇಲೆ ದಾಳಿ ನಡೆಸುತ್ತಿದ್ದಾರೆ. ಭಾರತದಲ್ಲಿ ನಮ್ಮನ್ನು ಅಪರಿಚಿತರಂತೆ ಭಾವಿಸುತ್ತಿದ್ದಾರೆ ಎಂದು ಮಾಜಿ ಅಧಿಕಾರಿಗಳು ಆರೋಪಿಸಿದ್ದಾರೆ.

”ಕ್ರೈಸ್ತರು ಭಾರತದ ಜನಸಂಖ್ಯೆಯ 2.3% ರಷ್ಟಿದ್ದಾರೆ, ಮತ್ತು ಈ ಶೇಕಡಾವಾರು 1951ರ ಜನಗಣತಿಯಿಂದಲೂ ಹೆಚ್ಚು ಕಡಿಮೆ ಒಂದೇ ಆಗಿದೆ. ಆದರೂ, ಕಡಿಮೆ ಸಂಖ್ಯೆಯ ಕ್ರಿಶ್ಚಿಯನ್ನರಿಂದ 80% ಹಿಂದೂಗಳ ಮೇಲೆ ಅಪಾಯಉಂಟಾಗಲಿದೆ ಎನ್ನುವುದು ಕೆಲವರ ಮನಸ್ಸಿನಲ್ಲಿದೆ” ಎಂದು ಮಾಜಿ ಅಧಿಕಾರಿಗಳು ಹೇಳಿದರು.

ಕಳೆದ ಕೆಲವು ವರ್ಷಗಳಿಂದ, ಕ್ರಿಶ್ಚಿಯನ್ನರು ಬಲವಂತದ ಮತಾಂತರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಹಿಂದುತ್ವ ಗುಂಪುಗಳು ಚರ್ಚ್‌ಗಳ ಮೇಲೆ ದಾಳಿ ನಡೆಸಿದ ಹಲವಾರು ನಿದರ್ಶನಗಳಿವೆ.

ಇತ್ತಿಚೆಗೆ ಮಾರ್ಚ್ 2ರಂದು, ದೆಹಲಿಯ ವಿಶ್ವ ಪುಸ್ತಕ ಮೇಳದಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸುವುದನ್ನು ವಿರೋಧಿಸಿದ ಗುಂಪೊಂದು ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಿತು. ಗಿಡಿಯನ್ ಇಂಟರ್‌ನ್ಯಾಶನಲ್ ಎಂಬ ಕ್ರಿಶ್ಚಿಯನ್ ಲಾಭೋದ್ದೇಶವಿಲ್ಲದ ಸಂಸ್ಥೆಯು ಈ ಸ್ಟಾಲ್ ಅನ್ನು ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

ಫೆಬ್ರವರಿ 28 ರಂದು, ಘಾಜಿಯಾಬಾದ್‌ನಲ್ಲಿ ಪಾದ್ರಿ ಮತ್ತು ಅವರ ಪತ್ನಿ ಮನವೊಲಿಕೆ ಮತ್ತು ಆಮಿಷದ ಮೂಲಕ ಅಲ್ಲಿಯ ನಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುತ್ತಿದ್ದಾರೆ ಎಂದು ಬಜರಂಗದಳದ ಸದಸ್ಯರು ದೂರು ಸಲ್ಲಿಸಿದ್ದರು. ಆ ದೂರಿನ ಮೇರೆಗೆ ಪಾದ್ರಿ ಮತ್ತು ಅವರ ಪತ್ನಿಯನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಫೆಬ್ರವರಿ 13 ಮತ್ತು ಜನವರಿ 2 ರಂದು ಕ್ರಮವಾಗಿ ಮಧ್ಯಪ್ರದೇಶದ ನರ್ಮದಾಪುರಂ ಮತ್ತು ಛತ್ತೀಸ್‌ಗಢದ ನಾರಾಯಣಪುರದಲ್ಲಿ ಚರ್ಚ್‌ಗಳನ್ನು ಧ್ವಂಸಗೊಳಿಸಲಾಗಿತ್ತು.

2021ರಲ್ಲಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ಆ ವರ್ಷದ ಜನವರಿ ಮತ್ತು ಸೆಪ್ಟೆಂಬರ್ ನಡುವೆ ಭಾರತದಾದ್ಯಂತ ಕ್ರಿಶ್ಚಿಯನ್ ಸಮುದಾಯದ ಸದಸ್ಯರ ಮೇಲೆ 305 ದಾಳಿಗಳು ನಡೆದಿವೆ ಎಂದು ಹೇಳಲಾಗಿದೆ.

ಫೆಬ್ರವರಿ 20ರಂದು, ಚರ್ಚ್‌ಗಳ ಮೇಲಿನ ದಾಳಿಯನ್ನು ವಿರೋಧಿಸಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದರು. ಸುಮಾರು 100 ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಾಜಿ ನಾಗರಿಕ ಸೇವಕರು ಶನಿವಾರದಂದು ಬರೆದ ಪತ್ರದಲ್ಲಿ, ”ಕ್ರಿಶ್ಚಿಯನ್ನರ ಮೇಲೆ ಬಲವಂತದ ಮತಾಂತರದ ಆರೋಪ ಹೊರಿಸುತ್ತಿದ್ದಾರೆ. ಆನಂತರ ದೈಹಿಕ ಮತ್ತು ಮಾನಸಿಕ ದಾಳಿಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

”ಇಂತಹ ದೊಡ್ಡ ಪ್ರಮಾಣದ ಮತಾಂತರಗಳು ನಡೆಯುತ್ತಿದ್ದರೆ, ಕ್ರಿಶ್ಚಿಯನ್ನರ ಶೇಕಡಾವಾರು ಪ್ರಮಾಣವು ಹಲವು ದಶಕಗಳಿಂದ ಏಕೆ ಸ್ಥಿರವಾಗಿ ಉಳಿದಿದೆ?” ಎಂದು ಅವರು ಕೇಳಿದ್ದಾರೆ.

ಈ ಪತ್ರಕ್ಕೆ ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಮಾಜಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ನಜೀಬ್ ಜಂಗ್ ಮತ್ತು ಇತರರು ಸೇರಿದಂತೆ ನಿವೃತ್ತ ನಾಗರಿಕ ಸೇವಕರು ಸಹಿ ಹಾಕಿದ್ದಾರೆ.

ಕ್ರಿಶ್ಚಿಯನ್ನರು ಅನೇಕ ಕ್ಷೇತ್ರಗಳಲ್ಲಿ ವಿಶೇಷವಾಗಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸುಧಾರಣೆಗಳಿಗೆ ಕೊಡುಗೆ ನೀಡುತ್ತಾರೆ ಎಂದು ಸಹಿ ಮಾಡಿದ ಮಾಜಿ ಅಧಿಕಾರಿಗಳು ಒತ್ತಿ ಹೇಳಿದ್ದಾರೆ.

”ಸಾಂಕ್ರಾಮಿಕ ಸಮಯದಲ್ಲಿ, ಒಂದು ಸಾವಿರಕ್ಕೂ ಹೆಚ್ಚು ಕ್ರಿಶ್ಚಿಯನ್ ಆಸ್ಪತ್ರೆಗಳು ರೋಗಿಗಳ ಚಿಕಿತ್ಸೆಗಾಗಿ ಕೆಲಸ ಮಾಡಿವೆ. ಕ್ರಿಶ್ಚಿಯನ್ ಸಂಸ್ಥೆಗಳು ಶಿಕ್ಷಣ ಅಥವಾ ಆರೋಗ್ಯವನ್ನು ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಎಂದು ನಿರ್ಬಂಧಿಸುವುದಿಲ್ಲ ಎಂದು ಅವರು ಹೇಳಿದರು.”

ಬಿಜೆಪಿ, ಕೇಂದ್ರ ಸರ್ಕಾರ ಮತ್ತು ಪ್ರತಿ ರಾಜ್ಯ ಸರ್ಕಾರದ ನಾಯಕರ ಒಂದು ಮಾತಿನಿಂದ ಕ್ರಿಶ್ಚಿಯನ್ನರ ಮೇಲಿನ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬಹುದು ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...