Homeಮುಖಪುಟನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

- Advertisement -
- Advertisement -

ಭಾರತದಲ್ಲಿ ಕ್ರೈಸ್ತರ ಮೇಲಿನ ದ್ವೇಷ ಮತ್ತು ಹಿಂಸಾಚಾರದ ಘಟನೆಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಬೇಕು ಎಂದು ಶನಿವಾರ 93 ಮಾಜಿ ನಾಗರಿಕ ಸೇವಕರ ಗುಂಪು ಒತ್ತಾಯಿಸಿದೆ.

”ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚಾಗುತ್ತಿವೆ. ಹಾಗಾಗಿ ಕ್ರಿಶ್ಚಿಯನ್ನರ ವಿರುದ್ಧದ ದಾಳಿಯನ್ನು ಖಂಡಿಸಬೇಕು” ಎಂದು ಪ್ರಧಾನ ಮಂತ್ರಿಯನ್ನು 93 ಮಾಜಿ ಅಧಿಕಾರಿಗಳು ಕೇಳಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳ ಆದೇಶದಿಂದ ಕೆಲವು ಉಗ್ರಗಾಮಿಗಳು ನಿರ್ಭಯದಿಂದ ಕ್ರಿಶ್ಚಿಯನ್ನರ ಮೇಲೆ ದಾಳಿ ನಡೆಸುತ್ತಿದ್ದಾರೆ. ಭಾರತದಲ್ಲಿ ನಮ್ಮನ್ನು ಅಪರಿಚಿತರಂತೆ ಭಾವಿಸುತ್ತಿದ್ದಾರೆ ಎಂದು ಮಾಜಿ ಅಧಿಕಾರಿಗಳು ಆರೋಪಿಸಿದ್ದಾರೆ.

”ಕ್ರೈಸ್ತರು ಭಾರತದ ಜನಸಂಖ್ಯೆಯ 2.3% ರಷ್ಟಿದ್ದಾರೆ, ಮತ್ತು ಈ ಶೇಕಡಾವಾರು 1951ರ ಜನಗಣತಿಯಿಂದಲೂ ಹೆಚ್ಚು ಕಡಿಮೆ ಒಂದೇ ಆಗಿದೆ. ಆದರೂ, ಕಡಿಮೆ ಸಂಖ್ಯೆಯ ಕ್ರಿಶ್ಚಿಯನ್ನರಿಂದ 80% ಹಿಂದೂಗಳ ಮೇಲೆ ಅಪಾಯಉಂಟಾಗಲಿದೆ ಎನ್ನುವುದು ಕೆಲವರ ಮನಸ್ಸಿನಲ್ಲಿದೆ” ಎಂದು ಮಾಜಿ ಅಧಿಕಾರಿಗಳು ಹೇಳಿದರು.

ಕಳೆದ ಕೆಲವು ವರ್ಷಗಳಿಂದ, ಕ್ರಿಶ್ಚಿಯನ್ನರು ಬಲವಂತದ ಮತಾಂತರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಹಿಂದುತ್ವ ಗುಂಪುಗಳು ಚರ್ಚ್‌ಗಳ ಮೇಲೆ ದಾಳಿ ನಡೆಸಿದ ಹಲವಾರು ನಿದರ್ಶನಗಳಿವೆ.

ಇತ್ತಿಚೆಗೆ ಮಾರ್ಚ್ 2ರಂದು, ದೆಹಲಿಯ ವಿಶ್ವ ಪುಸ್ತಕ ಮೇಳದಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸುವುದನ್ನು ವಿರೋಧಿಸಿದ ಗುಂಪೊಂದು ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಿತು. ಗಿಡಿಯನ್ ಇಂಟರ್‌ನ್ಯಾಶನಲ್ ಎಂಬ ಕ್ರಿಶ್ಚಿಯನ್ ಲಾಭೋದ್ದೇಶವಿಲ್ಲದ ಸಂಸ್ಥೆಯು ಈ ಸ್ಟಾಲ್ ಅನ್ನು ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

ಫೆಬ್ರವರಿ 28 ರಂದು, ಘಾಜಿಯಾಬಾದ್‌ನಲ್ಲಿ ಪಾದ್ರಿ ಮತ್ತು ಅವರ ಪತ್ನಿ ಮನವೊಲಿಕೆ ಮತ್ತು ಆಮಿಷದ ಮೂಲಕ ಅಲ್ಲಿಯ ನಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುತ್ತಿದ್ದಾರೆ ಎಂದು ಬಜರಂಗದಳದ ಸದಸ್ಯರು ದೂರು ಸಲ್ಲಿಸಿದ್ದರು. ಆ ದೂರಿನ ಮೇರೆಗೆ ಪಾದ್ರಿ ಮತ್ತು ಅವರ ಪತ್ನಿಯನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಫೆಬ್ರವರಿ 13 ಮತ್ತು ಜನವರಿ 2 ರಂದು ಕ್ರಮವಾಗಿ ಮಧ್ಯಪ್ರದೇಶದ ನರ್ಮದಾಪುರಂ ಮತ್ತು ಛತ್ತೀಸ್‌ಗಢದ ನಾರಾಯಣಪುರದಲ್ಲಿ ಚರ್ಚ್‌ಗಳನ್ನು ಧ್ವಂಸಗೊಳಿಸಲಾಗಿತ್ತು.

2021ರಲ್ಲಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ಆ ವರ್ಷದ ಜನವರಿ ಮತ್ತು ಸೆಪ್ಟೆಂಬರ್ ನಡುವೆ ಭಾರತದಾದ್ಯಂತ ಕ್ರಿಶ್ಚಿಯನ್ ಸಮುದಾಯದ ಸದಸ್ಯರ ಮೇಲೆ 305 ದಾಳಿಗಳು ನಡೆದಿವೆ ಎಂದು ಹೇಳಲಾಗಿದೆ.

ಫೆಬ್ರವರಿ 20ರಂದು, ಚರ್ಚ್‌ಗಳ ಮೇಲಿನ ದಾಳಿಯನ್ನು ವಿರೋಧಿಸಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದರು. ಸುಮಾರು 100 ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಾಜಿ ನಾಗರಿಕ ಸೇವಕರು ಶನಿವಾರದಂದು ಬರೆದ ಪತ್ರದಲ್ಲಿ, ”ಕ್ರಿಶ್ಚಿಯನ್ನರ ಮೇಲೆ ಬಲವಂತದ ಮತಾಂತರದ ಆರೋಪ ಹೊರಿಸುತ್ತಿದ್ದಾರೆ. ಆನಂತರ ದೈಹಿಕ ಮತ್ತು ಮಾನಸಿಕ ದಾಳಿಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

”ಇಂತಹ ದೊಡ್ಡ ಪ್ರಮಾಣದ ಮತಾಂತರಗಳು ನಡೆಯುತ್ತಿದ್ದರೆ, ಕ್ರಿಶ್ಚಿಯನ್ನರ ಶೇಕಡಾವಾರು ಪ್ರಮಾಣವು ಹಲವು ದಶಕಗಳಿಂದ ಏಕೆ ಸ್ಥಿರವಾಗಿ ಉಳಿದಿದೆ?” ಎಂದು ಅವರು ಕೇಳಿದ್ದಾರೆ.

ಈ ಪತ್ರಕ್ಕೆ ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಮಾಜಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ನಜೀಬ್ ಜಂಗ್ ಮತ್ತು ಇತರರು ಸೇರಿದಂತೆ ನಿವೃತ್ತ ನಾಗರಿಕ ಸೇವಕರು ಸಹಿ ಹಾಕಿದ್ದಾರೆ.

ಕ್ರಿಶ್ಚಿಯನ್ನರು ಅನೇಕ ಕ್ಷೇತ್ರಗಳಲ್ಲಿ ವಿಶೇಷವಾಗಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸುಧಾರಣೆಗಳಿಗೆ ಕೊಡುಗೆ ನೀಡುತ್ತಾರೆ ಎಂದು ಸಹಿ ಮಾಡಿದ ಮಾಜಿ ಅಧಿಕಾರಿಗಳು ಒತ್ತಿ ಹೇಳಿದ್ದಾರೆ.

”ಸಾಂಕ್ರಾಮಿಕ ಸಮಯದಲ್ಲಿ, ಒಂದು ಸಾವಿರಕ್ಕೂ ಹೆಚ್ಚು ಕ್ರಿಶ್ಚಿಯನ್ ಆಸ್ಪತ್ರೆಗಳು ರೋಗಿಗಳ ಚಿಕಿತ್ಸೆಗಾಗಿ ಕೆಲಸ ಮಾಡಿವೆ. ಕ್ರಿಶ್ಚಿಯನ್ ಸಂಸ್ಥೆಗಳು ಶಿಕ್ಷಣ ಅಥವಾ ಆರೋಗ್ಯವನ್ನು ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಎಂದು ನಿರ್ಬಂಧಿಸುವುದಿಲ್ಲ ಎಂದು ಅವರು ಹೇಳಿದರು.”

ಬಿಜೆಪಿ, ಕೇಂದ್ರ ಸರ್ಕಾರ ಮತ್ತು ಪ್ರತಿ ರಾಜ್ಯ ಸರ್ಕಾರದ ನಾಯಕರ ಒಂದು ಮಾತಿನಿಂದ ಕ್ರಿಶ್ಚಿಯನ್ನರ ಮೇಲಿನ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬಹುದು ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...