Homeಮುಖಪುಟನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

- Advertisement -
- Advertisement -

ಭಾರತದಲ್ಲಿ ಕ್ರೈಸ್ತರ ಮೇಲಿನ ದ್ವೇಷ ಮತ್ತು ಹಿಂಸಾಚಾರದ ಘಟನೆಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಬೇಕು ಎಂದು ಶನಿವಾರ 93 ಮಾಜಿ ನಾಗರಿಕ ಸೇವಕರ ಗುಂಪು ಒತ್ತಾಯಿಸಿದೆ.

”ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚಾಗುತ್ತಿವೆ. ಹಾಗಾಗಿ ಕ್ರಿಶ್ಚಿಯನ್ನರ ವಿರುದ್ಧದ ದಾಳಿಯನ್ನು ಖಂಡಿಸಬೇಕು” ಎಂದು ಪ್ರಧಾನ ಮಂತ್ರಿಯನ್ನು 93 ಮಾಜಿ ಅಧಿಕಾರಿಗಳು ಕೇಳಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳ ಆದೇಶದಿಂದ ಕೆಲವು ಉಗ್ರಗಾಮಿಗಳು ನಿರ್ಭಯದಿಂದ ಕ್ರಿಶ್ಚಿಯನ್ನರ ಮೇಲೆ ದಾಳಿ ನಡೆಸುತ್ತಿದ್ದಾರೆ. ಭಾರತದಲ್ಲಿ ನಮ್ಮನ್ನು ಅಪರಿಚಿತರಂತೆ ಭಾವಿಸುತ್ತಿದ್ದಾರೆ ಎಂದು ಮಾಜಿ ಅಧಿಕಾರಿಗಳು ಆರೋಪಿಸಿದ್ದಾರೆ.

”ಕ್ರೈಸ್ತರು ಭಾರತದ ಜನಸಂಖ್ಯೆಯ 2.3% ರಷ್ಟಿದ್ದಾರೆ, ಮತ್ತು ಈ ಶೇಕಡಾವಾರು 1951ರ ಜನಗಣತಿಯಿಂದಲೂ ಹೆಚ್ಚು ಕಡಿಮೆ ಒಂದೇ ಆಗಿದೆ. ಆದರೂ, ಕಡಿಮೆ ಸಂಖ್ಯೆಯ ಕ್ರಿಶ್ಚಿಯನ್ನರಿಂದ 80% ಹಿಂದೂಗಳ ಮೇಲೆ ಅಪಾಯಉಂಟಾಗಲಿದೆ ಎನ್ನುವುದು ಕೆಲವರ ಮನಸ್ಸಿನಲ್ಲಿದೆ” ಎಂದು ಮಾಜಿ ಅಧಿಕಾರಿಗಳು ಹೇಳಿದರು.

ಕಳೆದ ಕೆಲವು ವರ್ಷಗಳಿಂದ, ಕ್ರಿಶ್ಚಿಯನ್ನರು ಬಲವಂತದ ಮತಾಂತರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಹಿಂದುತ್ವ ಗುಂಪುಗಳು ಚರ್ಚ್‌ಗಳ ಮೇಲೆ ದಾಳಿ ನಡೆಸಿದ ಹಲವಾರು ನಿದರ್ಶನಗಳಿವೆ.

ಇತ್ತಿಚೆಗೆ ಮಾರ್ಚ್ 2ರಂದು, ದೆಹಲಿಯ ವಿಶ್ವ ಪುಸ್ತಕ ಮೇಳದಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸುವುದನ್ನು ವಿರೋಧಿಸಿದ ಗುಂಪೊಂದು ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಿತು. ಗಿಡಿಯನ್ ಇಂಟರ್‌ನ್ಯಾಶನಲ್ ಎಂಬ ಕ್ರಿಶ್ಚಿಯನ್ ಲಾಭೋದ್ದೇಶವಿಲ್ಲದ ಸಂಸ್ಥೆಯು ಈ ಸ್ಟಾಲ್ ಅನ್ನು ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

ಫೆಬ್ರವರಿ 28 ರಂದು, ಘಾಜಿಯಾಬಾದ್‌ನಲ್ಲಿ ಪಾದ್ರಿ ಮತ್ತು ಅವರ ಪತ್ನಿ ಮನವೊಲಿಕೆ ಮತ್ತು ಆಮಿಷದ ಮೂಲಕ ಅಲ್ಲಿಯ ನಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುತ್ತಿದ್ದಾರೆ ಎಂದು ಬಜರಂಗದಳದ ಸದಸ್ಯರು ದೂರು ಸಲ್ಲಿಸಿದ್ದರು. ಆ ದೂರಿನ ಮೇರೆಗೆ ಪಾದ್ರಿ ಮತ್ತು ಅವರ ಪತ್ನಿಯನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಫೆಬ್ರವರಿ 13 ಮತ್ತು ಜನವರಿ 2 ರಂದು ಕ್ರಮವಾಗಿ ಮಧ್ಯಪ್ರದೇಶದ ನರ್ಮದಾಪುರಂ ಮತ್ತು ಛತ್ತೀಸ್‌ಗಢದ ನಾರಾಯಣಪುರದಲ್ಲಿ ಚರ್ಚ್‌ಗಳನ್ನು ಧ್ವಂಸಗೊಳಿಸಲಾಗಿತ್ತು.

2021ರಲ್ಲಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ಆ ವರ್ಷದ ಜನವರಿ ಮತ್ತು ಸೆಪ್ಟೆಂಬರ್ ನಡುವೆ ಭಾರತದಾದ್ಯಂತ ಕ್ರಿಶ್ಚಿಯನ್ ಸಮುದಾಯದ ಸದಸ್ಯರ ಮೇಲೆ 305 ದಾಳಿಗಳು ನಡೆದಿವೆ ಎಂದು ಹೇಳಲಾಗಿದೆ.

ಫೆಬ್ರವರಿ 20ರಂದು, ಚರ್ಚ್‌ಗಳ ಮೇಲಿನ ದಾಳಿಯನ್ನು ವಿರೋಧಿಸಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದರು. ಸುಮಾರು 100 ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಾಜಿ ನಾಗರಿಕ ಸೇವಕರು ಶನಿವಾರದಂದು ಬರೆದ ಪತ್ರದಲ್ಲಿ, ”ಕ್ರಿಶ್ಚಿಯನ್ನರ ಮೇಲೆ ಬಲವಂತದ ಮತಾಂತರದ ಆರೋಪ ಹೊರಿಸುತ್ತಿದ್ದಾರೆ. ಆನಂತರ ದೈಹಿಕ ಮತ್ತು ಮಾನಸಿಕ ದಾಳಿಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

”ಇಂತಹ ದೊಡ್ಡ ಪ್ರಮಾಣದ ಮತಾಂತರಗಳು ನಡೆಯುತ್ತಿದ್ದರೆ, ಕ್ರಿಶ್ಚಿಯನ್ನರ ಶೇಕಡಾವಾರು ಪ್ರಮಾಣವು ಹಲವು ದಶಕಗಳಿಂದ ಏಕೆ ಸ್ಥಿರವಾಗಿ ಉಳಿದಿದೆ?” ಎಂದು ಅವರು ಕೇಳಿದ್ದಾರೆ.

ಈ ಪತ್ರಕ್ಕೆ ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಮಾಜಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ನಜೀಬ್ ಜಂಗ್ ಮತ್ತು ಇತರರು ಸೇರಿದಂತೆ ನಿವೃತ್ತ ನಾಗರಿಕ ಸೇವಕರು ಸಹಿ ಹಾಕಿದ್ದಾರೆ.

ಕ್ರಿಶ್ಚಿಯನ್ನರು ಅನೇಕ ಕ್ಷೇತ್ರಗಳಲ್ಲಿ ವಿಶೇಷವಾಗಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸುಧಾರಣೆಗಳಿಗೆ ಕೊಡುಗೆ ನೀಡುತ್ತಾರೆ ಎಂದು ಸಹಿ ಮಾಡಿದ ಮಾಜಿ ಅಧಿಕಾರಿಗಳು ಒತ್ತಿ ಹೇಳಿದ್ದಾರೆ.

”ಸಾಂಕ್ರಾಮಿಕ ಸಮಯದಲ್ಲಿ, ಒಂದು ಸಾವಿರಕ್ಕೂ ಹೆಚ್ಚು ಕ್ರಿಶ್ಚಿಯನ್ ಆಸ್ಪತ್ರೆಗಳು ರೋಗಿಗಳ ಚಿಕಿತ್ಸೆಗಾಗಿ ಕೆಲಸ ಮಾಡಿವೆ. ಕ್ರಿಶ್ಚಿಯನ್ ಸಂಸ್ಥೆಗಳು ಶಿಕ್ಷಣ ಅಥವಾ ಆರೋಗ್ಯವನ್ನು ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಎಂದು ನಿರ್ಬಂಧಿಸುವುದಿಲ್ಲ ಎಂದು ಅವರು ಹೇಳಿದರು.”

ಬಿಜೆಪಿ, ಕೇಂದ್ರ ಸರ್ಕಾರ ಮತ್ತು ಪ್ರತಿ ರಾಜ್ಯ ಸರ್ಕಾರದ ನಾಯಕರ ಒಂದು ಮಾತಿನಿಂದ ಕ್ರಿಶ್ಚಿಯನ್ನರ ಮೇಲಿನ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬಹುದು ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...