Homeಮುಖಪುಟನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚುತ್ತಿವೆ: ಪ್ರಧಾನಿಗೆ ಮಾಜಿ ಅಧಿಕಾರಿಗಳ ಪತ್ರ

- Advertisement -
- Advertisement -

ಭಾರತದಲ್ಲಿ ಕ್ರೈಸ್ತರ ಮೇಲಿನ ದ್ವೇಷ ಮತ್ತು ಹಿಂಸಾಚಾರದ ಘಟನೆಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಬೇಕು ಎಂದು ಶನಿವಾರ 93 ಮಾಜಿ ನಾಗರಿಕ ಸೇವಕರ ಗುಂಪು ಒತ್ತಾಯಿಸಿದೆ.

”ನಿಮ್ಮ ಮೌನದಿಂದ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚಾಗುತ್ತಿವೆ. ಹಾಗಾಗಿ ಕ್ರಿಶ್ಚಿಯನ್ನರ ವಿರುದ್ಧದ ದಾಳಿಯನ್ನು ಖಂಡಿಸಬೇಕು” ಎಂದು ಪ್ರಧಾನ ಮಂತ್ರಿಯನ್ನು 93 ಮಾಜಿ ಅಧಿಕಾರಿಗಳು ಕೇಳಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳ ಆದೇಶದಿಂದ ಕೆಲವು ಉಗ್ರಗಾಮಿಗಳು ನಿರ್ಭಯದಿಂದ ಕ್ರಿಶ್ಚಿಯನ್ನರ ಮೇಲೆ ದಾಳಿ ನಡೆಸುತ್ತಿದ್ದಾರೆ. ಭಾರತದಲ್ಲಿ ನಮ್ಮನ್ನು ಅಪರಿಚಿತರಂತೆ ಭಾವಿಸುತ್ತಿದ್ದಾರೆ ಎಂದು ಮಾಜಿ ಅಧಿಕಾರಿಗಳು ಆರೋಪಿಸಿದ್ದಾರೆ.

”ಕ್ರೈಸ್ತರು ಭಾರತದ ಜನಸಂಖ್ಯೆಯ 2.3% ರಷ್ಟಿದ್ದಾರೆ, ಮತ್ತು ಈ ಶೇಕಡಾವಾರು 1951ರ ಜನಗಣತಿಯಿಂದಲೂ ಹೆಚ್ಚು ಕಡಿಮೆ ಒಂದೇ ಆಗಿದೆ. ಆದರೂ, ಕಡಿಮೆ ಸಂಖ್ಯೆಯ ಕ್ರಿಶ್ಚಿಯನ್ನರಿಂದ 80% ಹಿಂದೂಗಳ ಮೇಲೆ ಅಪಾಯಉಂಟಾಗಲಿದೆ ಎನ್ನುವುದು ಕೆಲವರ ಮನಸ್ಸಿನಲ್ಲಿದೆ” ಎಂದು ಮಾಜಿ ಅಧಿಕಾರಿಗಳು ಹೇಳಿದರು.

ಕಳೆದ ಕೆಲವು ವರ್ಷಗಳಿಂದ, ಕ್ರಿಶ್ಚಿಯನ್ನರು ಬಲವಂತದ ಮತಾಂತರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಹಿಂದುತ್ವ ಗುಂಪುಗಳು ಚರ್ಚ್‌ಗಳ ಮೇಲೆ ದಾಳಿ ನಡೆಸಿದ ಹಲವಾರು ನಿದರ್ಶನಗಳಿವೆ.

ಇತ್ತಿಚೆಗೆ ಮಾರ್ಚ್ 2ರಂದು, ದೆಹಲಿಯ ವಿಶ್ವ ಪುಸ್ತಕ ಮೇಳದಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸುವುದನ್ನು ವಿರೋಧಿಸಿದ ಗುಂಪೊಂದು ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಿತು. ಗಿಡಿಯನ್ ಇಂಟರ್‌ನ್ಯಾಶನಲ್ ಎಂಬ ಕ್ರಿಶ್ಚಿಯನ್ ಲಾಭೋದ್ದೇಶವಿಲ್ಲದ ಸಂಸ್ಥೆಯು ಈ ಸ್ಟಾಲ್ ಅನ್ನು ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

ಫೆಬ್ರವರಿ 28 ರಂದು, ಘಾಜಿಯಾಬಾದ್‌ನಲ್ಲಿ ಪಾದ್ರಿ ಮತ್ತು ಅವರ ಪತ್ನಿ ಮನವೊಲಿಕೆ ಮತ್ತು ಆಮಿಷದ ಮೂಲಕ ಅಲ್ಲಿಯ ನಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುತ್ತಿದ್ದಾರೆ ಎಂದು ಬಜರಂಗದಳದ ಸದಸ್ಯರು ದೂರು ಸಲ್ಲಿಸಿದ್ದರು. ಆ ದೂರಿನ ಮೇರೆಗೆ ಪಾದ್ರಿ ಮತ್ತು ಅವರ ಪತ್ನಿಯನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಫೆಬ್ರವರಿ 13 ಮತ್ತು ಜನವರಿ 2 ರಂದು ಕ್ರಮವಾಗಿ ಮಧ್ಯಪ್ರದೇಶದ ನರ್ಮದಾಪುರಂ ಮತ್ತು ಛತ್ತೀಸ್‌ಗಢದ ನಾರಾಯಣಪುರದಲ್ಲಿ ಚರ್ಚ್‌ಗಳನ್ನು ಧ್ವಂಸಗೊಳಿಸಲಾಗಿತ್ತು.

2021ರಲ್ಲಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ಆ ವರ್ಷದ ಜನವರಿ ಮತ್ತು ಸೆಪ್ಟೆಂಬರ್ ನಡುವೆ ಭಾರತದಾದ್ಯಂತ ಕ್ರಿಶ್ಚಿಯನ್ ಸಮುದಾಯದ ಸದಸ್ಯರ ಮೇಲೆ 305 ದಾಳಿಗಳು ನಡೆದಿವೆ ಎಂದು ಹೇಳಲಾಗಿದೆ.

ಫೆಬ್ರವರಿ 20ರಂದು, ಚರ್ಚ್‌ಗಳ ಮೇಲಿನ ದಾಳಿಯನ್ನು ವಿರೋಧಿಸಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದರು. ಸುಮಾರು 100 ಚರ್ಚ್‌ಗಳು ಮತ್ತು ಕ್ರಿಶ್ಚಿಯನ್ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಾಜಿ ನಾಗರಿಕ ಸೇವಕರು ಶನಿವಾರದಂದು ಬರೆದ ಪತ್ರದಲ್ಲಿ, ”ಕ್ರಿಶ್ಚಿಯನ್ನರ ಮೇಲೆ ಬಲವಂತದ ಮತಾಂತರದ ಆರೋಪ ಹೊರಿಸುತ್ತಿದ್ದಾರೆ. ಆನಂತರ ದೈಹಿಕ ಮತ್ತು ಮಾನಸಿಕ ದಾಳಿಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

”ಇಂತಹ ದೊಡ್ಡ ಪ್ರಮಾಣದ ಮತಾಂತರಗಳು ನಡೆಯುತ್ತಿದ್ದರೆ, ಕ್ರಿಶ್ಚಿಯನ್ನರ ಶೇಕಡಾವಾರು ಪ್ರಮಾಣವು ಹಲವು ದಶಕಗಳಿಂದ ಏಕೆ ಸ್ಥಿರವಾಗಿ ಉಳಿದಿದೆ?” ಎಂದು ಅವರು ಕೇಳಿದ್ದಾರೆ.

ಈ ಪತ್ರಕ್ಕೆ ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಮಾಜಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ನಜೀಬ್ ಜಂಗ್ ಮತ್ತು ಇತರರು ಸೇರಿದಂತೆ ನಿವೃತ್ತ ನಾಗರಿಕ ಸೇವಕರು ಸಹಿ ಹಾಕಿದ್ದಾರೆ.

ಕ್ರಿಶ್ಚಿಯನ್ನರು ಅನೇಕ ಕ್ಷೇತ್ರಗಳಲ್ಲಿ ವಿಶೇಷವಾಗಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸುಧಾರಣೆಗಳಿಗೆ ಕೊಡುಗೆ ನೀಡುತ್ತಾರೆ ಎಂದು ಸಹಿ ಮಾಡಿದ ಮಾಜಿ ಅಧಿಕಾರಿಗಳು ಒತ್ತಿ ಹೇಳಿದ್ದಾರೆ.

”ಸಾಂಕ್ರಾಮಿಕ ಸಮಯದಲ್ಲಿ, ಒಂದು ಸಾವಿರಕ್ಕೂ ಹೆಚ್ಚು ಕ್ರಿಶ್ಚಿಯನ್ ಆಸ್ಪತ್ರೆಗಳು ರೋಗಿಗಳ ಚಿಕಿತ್ಸೆಗಾಗಿ ಕೆಲಸ ಮಾಡಿವೆ. ಕ್ರಿಶ್ಚಿಯನ್ ಸಂಸ್ಥೆಗಳು ಶಿಕ್ಷಣ ಅಥವಾ ಆರೋಗ್ಯವನ್ನು ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಎಂದು ನಿರ್ಬಂಧಿಸುವುದಿಲ್ಲ ಎಂದು ಅವರು ಹೇಳಿದರು.”

ಬಿಜೆಪಿ, ಕೇಂದ್ರ ಸರ್ಕಾರ ಮತ್ತು ಪ್ರತಿ ರಾಜ್ಯ ಸರ್ಕಾರದ ನಾಯಕರ ಒಂದು ಮಾತಿನಿಂದ ಕ್ರಿಶ್ಚಿಯನ್ನರ ಮೇಲಿನ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬಹುದು ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...