Homeಮುಖಪುಟಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ರಾಜ್ಯ ಸರ್ಕಾರಗಳು ಮತ್ತು ಅವುಗಳನ್ನು ಆರಿಸಿದ ಪ್ರಜಾಪ್ರಭುಗಳು ಪಂಕದಲ್ಲಿ ಬಿದ್ದ ಪಶುವಿನಂತೆ ಒದ್ದಾಡುತ್ತಿರುವುದು ಈಗಾಗಲೇ ಗೋಚರಿಸುತ್ತಿದೆ. ಭವಿಷ್ಯದಲ್ಲಿ ಇದರ ಪರಿಸ್ಥಿತಿ ಇನ್ನಷ್ಟು ಭೀಕರವಾಗುತ್ತದೆ

- Advertisement -
- Advertisement -

ಒಕ್ಕೂಟ ಸರ್ಕಾರ ‘ಸಹಕಾರ ಖಾತೆ’ ಹೆಸರಿನಲ್ಲಿ ಹೊಸ ಇಲಾಖೆಯನ್ನು ಆರಂಭಿಸಿದೆ. ಸಂವಿಧಾನದ ಪ್ರಕಾರ ಸಹಕಾರಿ ಕ್ಷೇತ್ರ ರಾಜ್ಯ ಪಟ್ಟಿಯಲ್ಲಿದೆ. ಇದರ ಪ್ರಕಾರ, ಒಕ್ಕೂಟ ಸರ್ಕಾರಕ್ಕೆ ರಾಜ್ಯದ ಹಕ್ಕಿನ ಮೇಲೆ ಸವಾರಿ ಮಾಡುವ ಅಧಿಕಾರವಿಲ್ಲ. ಸಂವಿಧಾನದ 7ನೇ ಪರಿಚ್ಛೇದದಲ್ಲಿ ಸಹಕಾರಿ ಕ್ಷೇತ್ರಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದೆ. ರಾಜ್ಯದ ಹಕ್ಕಿನಲ್ಲಿ ಮಧ್ಯಪ್ರವೇಶಿಸುವುದು ಅಸಾಂವಿಧಾನಿಕ ನಡೆ ಎಂದು ಗೊತ್ತಿದ್ದೂ ಒಕ್ಕೂಟ ಸರ್ಕಾರ ಸಹಕಾರ ಇಲಾಖೆಯನ್ನು ಆರಂಭಿಸಿದೆ. ಇದರ ಹಿಂದೆ ರಾಜ್ಯಗಳ ಒಡೆತನದಲ್ಲಿರುವ ಸಹಕಾರಿ ಕ್ಷೇತ್ರವನ್ನು ತನ್ನ ವಶಕ್ಕೆ ಪಡೆಯುವ ದೀರ್ಘಕಾಲೀನ ಹುನ್ನಾರವಿದೆ.

ವಿವಾದಾತ್ಮಕ ಕೃಷಿ ಮಸೂದೆಗಳಿಂದ ರಾಜ್ಯದ ಹಕ್ಕು ಮೊಟಕು

ವಿವಾದಾತ್ಮಕ ಮೂರು ಕೃಷಿ ಮಸೂದೆಗಳನ್ನು ರೂಪಿಸಿ ರಾಜ್ಯದ ಪಾಲಿನಲ್ಲಿದ್ದ ಕೃಷಿ ಕ್ಷೇತ್ರವನ್ನು ತನ್ನ ಹಿಡಿತಕ್ಕೆ ಪಡೆಯಲು ಒಕ್ಕೂಟ ಸರ್ಕಾರ ಮುಂದಾಗಿತ್ತು. ಇದನ್ನು ವಿರೋಧಿಸಿ ದೇಶದ ಅನ್ನದಾತರು 7 ತಿಂಗಳಿಂದ ದೆಹಲಿ ಗಡಿಗಳಲ್ಲಿ ಮಳೆ, ಬಿಸಿಲು, ಚಳಿಗಳನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ವಿವಿಧ ರಾಜ್ಯಗಳ ಚುನಾವಣೆಗಳಲ್ಲಿ, ಸಂಪುಟ ವಿಸ್ತರಣೆಯಲ್ಲಿ ಬಿಜಿಯಾಗುವ ಒಕ್ಕೂಟ ಸರ್ಕಾರ ಮತ್ತು ಪ್ರಧಾನಿ, ಸಚಿವರಿಗೆ ದೆಹಲಿ ಗಡಿಯಲ್ಲಿ ಪ್ರತಿಭಟಿಸುತ್ತಿರುವ ಅನ್ನದಾತರ ಅಳಲನ್ನು ಕೇಳುವ ವ್ಯವಧಾನವಿಲ್ಲ. ಸುಮಾರು 250ಕ್ಕೂ ಹೆಚ್ಚು ರೈತರು ಇಲ್ಲೇ ಬಲಿಯಾದರೂ ಅವರೆಡೆಗೆ ಎಳ್ಳಷ್ಟು ಕನಿಕರವೂ ದೇಶವನ್ನು ಆಳುತ್ತಿರುವ 56 ಎದೆಯಿದೆ ಎಂದು ಬಡಾಯಿ ಕೊಚ್ಚಿಕೊಳ್ಳುವ ವ್ಯಕ್ತಿಗೆ ಇಲ್ಲ.

ಹೊಸ ಶಿಕ್ಷಣ ನೀತಿಯಿಂದ ರಾಜ್ಯಗಳ ಹಿಡಿತ ಕಳೆದುಕೊಳ್ಳದೆ ಶಿಕ್ಷಣ

ಇನ್ನು ರಾಜ್ಯಪಟ್ಟಿಯಲ್ಲೇ ಇರುವ ಶಿಕ್ಷಣವನ್ನು ಕೂಡ ಈಗಾಗಲೇ ಒಕ್ಕೂಟ ಸರ್ಕಾರ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇದರ ಭಾಗವಾಗಿಯೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ಜಾರಿಗೆ ತರಲಾಗಿದೆ. ಇದರ ಹಿಂದಿರುವ ಹುನ್ನಾರವೆಂದರೆ ಭವಿಷ್ಯದಲ್ಲಿ ತಳಸಮುದಾಯದವರು, ದೀನದಲಿತರು, ಹಿಂದುಳಿದವರು, ಬಡವರು, ಅಸಂಘಟಿತ ವಲಯದವರು, ಮಹಿಳೆಯರು ಶಿಕ್ಷಣದಿಂದ ವಂಚಿತರನ್ನಾಗಿಸುವುದು.

ಇದನ್ನೂ ಓದಿ: ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾದ ಸಹಕಾರಿ ಬ್ಯಾಂಕುಗಳನ್ನು ರಕ್ಷಿಸಿ: ಶರದ್ ಪವಾರ್

ರಾಜ್ಯಪಟ್ಟಿಯಲ್ಲಿರುವ ಶಿಕ್ಷಣ ವ್ಯವಸ್ಥೆಯಿಂದಾಗಿ ಸೈಕಲ್, ಬಿಸಿಯೂಟ, ಬಟ್ಟೆ, ಕ್ಷೀರಭಾಗ್ಯ, ಉಚಿತಪಠ್ಯಪುಸ್ತಕ ವಿತರಣೆ ಮತ್ತಿತರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇದರಿಂದಾಗಿ ದೇಶದ ಜನಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರನ್ನೂ ಒಳಗೊಂಡು ಶೇ. 97ರಷ್ಟು ಪ್ರಮಾಣದಲ್ಲಿರುವ ಹಿಂದುಳಿದ ವರ್ಗ ಮತ್ತು ಇತರ ಜಾತಿಯವರಿಗೆ ಶಿಕ್ಷಣ ಸಿಗುತ್ತಿದೆ. ಇದರಿಂದಾಗಿ ಶಿಕ್ಷಣ, ದುಡಿಮೆ, ವೈಜ್ಞಾನಿಕ ಮನೋಭಾವ, ಆರೋಗ್ಯ, ವಸತಿ ಇತ್ಯಾದಿಗಳು ಈ ವರ್ಗಗಳಲ್ಲಿ ಸುಧಾರಿಸುತ್ತಿವೆ. ಆದರೆ, ಇದನ್ನು ಹತ್ತಿಕ್ಕಲು ಹೊಸ ಶಿಕ್ಷಣ ನೀತಿಯನ್ನು ಒಕ್ಕೂಟ ಸರ್ಕಾರ ಕುತಂತ್ರದಿಂದ ಜಾರಿಗೆ ತಂದಿದೆ.

ಇದರಲ್ಲಿರುವ ನಿಯಮಗಳು ಇನ್ನು 10-15 ವರ್ಷಗಳಲ್ಲಿ ದೇಶದ ಶೈಕ್ಷಣಿಕ ವ್ಯವಸ್ಥೆಯನ್ನು ಉಳ್ಳವರಿಗೆ ಮಾತ್ರ ಮತ್ತು ಮೇಲ್ವರ್ಗದವರಿಗೆ ಸೀಮಿತಗೊಳಿಸುವ ದುಷ್ಟ ಚಿಂತನೆಯನ್ನು ಜಾರಿಗೆ ತರಲಿವೆ. ಇದರಿಂದ ಕೇವಲ ದೇಶದ ಶೈಕ್ಷಣಿಕ ವ್ಯವಸ್ಥೆ ಮಾತ್ರ ಹಾಳಾಗುವುದಿಲ್ಲ. ಆರ್ಥಿಕ ಪರಿಸ್ಥಿತಿ ಕೂಡ ಅಧೋಗತಿಗೆ ಇಳಿಯುತ್ತದೆ. ವೈಜ್ಞಾನಿಕ ಮನೋಭಾವ ನಷ್ಟವಾಗುತ್ತದೆ. ಇದು ಸಂವಿಧಾನದ ಪ್ರಕಾರ ಕೂಡ ದ್ರೋಹವೆಂದೇ ಹೇಳಬೇಕು. ಸಂವಿಧಾನದಲ್ಲಿ ವೈಜ್ಞಾನಿಕ ಮನೋಭಾವಕ್ಕೆ ಒತ್ತು ನೀಡಲಾಗಿದೆ. ಆದರೆ, ಶಿಕ್ಷಣವನ್ನೇ ಕೊಡದೆ ಹೋದಲ್ಲಿ ವೈಜ್ಞಾನಿಕ ಮನೋಭಾವಕ್ಕೆ ಧಕ್ಕೆಯಾಗುವುದು ನಿಶ್ಚಿತ.

ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ| NaanuGauri

ವಿದ್ಯೆ ಕಲಿತವರಿಗೆ ಸೇವಾವಲಯ, ಸರ್ಕಾರಿ ಹುದ್ದೆಗಳು, ವಿದೇಶದಲ್ಲಿ ವಿವಿಧ ಹುದ್ದೆಗಳು ಸಿಗುತ್ತಿವೆ. ನಿರ್ದಿಷ್ಟ ವಿದ್ಯಾರ್ಹತೆಯ ಅಭ್ಯರ್ಥಿಗಳು ನೂತನ ಶಿಕ್ಷಣ ನೀತಿಯ ದುಷ್ಪರಿಣಾಮದಿಂದ ದೇಶದಲ್ಲೇ ಸಿಗದೆ ಇರುವ ಸಾಧ್ಯತೆಗಳು ಇವೆ. ಜೊತೆಗೆ, ಶಿಕ್ಷಣವನ್ನು ಸಂಪೂರ್ಣ ಖಾಸಗೀಕರಿಸುವ ಹುನ್ನಾರದ ಭಾಗವಾಗಿ ಶಿಕ್ಷಣ ನೀತಿಯಲ್ಲಿ ಅನೇಕ ವಿಷಯಗಳನ್ನು ಸೇರಿಸಲಾಗಿದೆ. ಸ್ಥಳೀಯ ಭಾಷೆ ಮತ್ತು ವಿಷಯ ಹಾಗೂ ಕೌಶಲಗಳನ್ನು ಕಡೆಗಣಿಸಲಾಗಿದೆ. ಇವೆಲ್ಲವುಗಳಿಂದಾಗಿ ಶಿಕ್ಷಣ ಕೇವಲ ಉಳ್ಳವರ ಪಾಲಾಗುತ್ತದೆ.

ಜಿ.ಎಸ್.ಟಿ. ಜಾರಿಯೆಂಬ ಮಧ್ಯರಾತ್ರಿ ನಾಟಕದಿಂದ ರಾಜ್ಯಗಳಿಗೆ ನಷ್ಟ

ಮಧ್ಯರಾತ್ರಿ ವಿಶೇಷ ಅಧಿವೇಶನ ನಡೆಸಿ ಅವೈಜ್ಞಾನಿಕ ಜಿ.ಎಸ್.ಟಿ.ಯನ್ನು ಒಕ್ಕೂಟ ಸರ್ಕಾರ ಜಾರಿಗೆ ತಂದಿತ್ತು. ದುರಂತವೆಂದರೆ, ಸರಳ, ಕನಿಷ್ಠ ಎಂದು ಹೇಳಿದ ತನ್ನ ಮಾತನ್ನು ಸರ್ಕಾರ ಉಳಿಸಿಕೊಳ್ಳುವಲ್ಲಿ ವಿಫಲವಾಯಿತು. ಜಗತ್ತಿನಲ್ಲೇ ಅತಿಹೆಚ್ಚು ತೆರಿಗೆ ವಸೂಲಿ ಮಾಡಿದ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆಯಿತು. ಶೇ. 28ರಷ್ಟು ತೆರಿಗೆಯನ್ನು ಜನರಿಂದ ಸುಲಿದು, ರಾಜ್ಯಗಳಿಗೆ ಇದ್ದ ತೆರಿಗೆ ಸಂಗ್ರಹಿಸುವ ಅವಕಾಶವನ್ನು ಕಬಳಿಸಿತು. ಮತ್ತೆ ರಾಜ್ಯಗಳ ಪಾಲು ಕೊಡುತ್ತೇನೆ ಎಂದು, 5 ವರ್ಷಗಳ ಕಾಲ ರಾಜ್ಯಗಳಿಗೆ ಆಗುವ ನಷ್ಟವನ್ನು ಭರಿಸುವುದಾಗಿ ಕೊಟ್ಟ ಮಾತನ್ನು ಸರ್ಕಾರ ಮರೆತುಬಿಟ್ಟಿತು. ಕೊರೊನ ನಂತರ ಕರ್ನಾಟಕದ ಜಿ.ಎಸ್.ಟಿ. ಪಾಲನ್ನು ಕೇಳಿದರೆ, ಸಾಲ ಮಾಡಿ ಎಂದು ಹೇಳಿತು. ಈ ಮಾತನ್ನು ಶಿರಸಾವಹಿಸಿ ಪಾಲಿಸಿದ ರಾಜ್ಯ ಸರ್ಕಾರ ಬರೋಬ್ಬರಿ 35,000 ಕೋಟಿ ಸಾಲ ಮಾಡಿತು. ಹೀಗೆ ರಾಜ್ಯಗಳ ಸ್ವಾಯತ್ತತೆಯ ಮೇಲೆ ಒಕ್ಕೂಟ ಸರ್ಕಾರ ನಿರಂತರವಾಗಿ ದಾಳಿ ಮಾಡಿ ಅಶಕ್ತರನ್ನಾಗಿಸುತ್ತಲೇ ಇದೆ.

ಸಹಕಾರ ಖಾತೆಯಿಂದ ರಾಜ್ಯಗಳ ಸ್ಥಿತಿ ದಿವಾಳಿ

ಇನ್ನು ಸಹಕಾರ ಕ್ಷೇತ್ರಕ್ಕೆ ಒಕ್ಕೂಟ ಸರ್ಕಾರ ಬಾಯಿ ಹಾಕುತ್ತಿರುವುದೇಕೆ? ನೋಡೋಣ. ರಾಜ್ಯದ ಪಾಲಿನಲ್ಲಿದ್ದ ಕೃಷಿ, ಶಿಕ್ಷಣವನ್ನು ತನ್ನ ಕಪಿಮುಷ್ಠಿಯ ಬಿಗಿಹಿಡಿತಕ್ಕೆ ತೆಗೆದುಕೊಂಡಿರುವ ಒಕ್ಕೂಟ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾಡಿರುವುದೇನು ಒಮ್ಮೆ ಆಲೋಚಿಸಿ. ಸಾಲ ಮತ್ತು ಬಡ್ಡಿ ಸೇರಿ 9000 ಕೋಟಿ ರೂಪಾಯಿಗಳನ್ನು ಕೊಡಬೇಕಿರುವ ವಿಜಯ್ ಮಲ್ಯ, 13,500 ಕೋಟಿ ರೂ. ಪಾವತಿಸಬೇಕಿರುವ ಮೇಹುಲ್ ಚೋಕ್ಸಿ ಮೊದಲಾದವರು ದೇಶಭಕ್ತರು ಎಂದು ಬಿಂಬಿಸುವ ಬಿಜೆಪಿಗರು ಅಧಿಕಾರ ನಡೆಸುತ್ತಿರುವ ಸಮಯದಲ್ಲಿ ದೇಶಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಹೊಸ ‘ಸಹಕಾರ ಸಚಿವಾಲಯ’ ಅಮಿತ್‌ ಶಾ ತೆಕ್ಕೆಗೆ!

ಇನ್ನು ದೇಶದ ಪ್ರಧಾನಿಗೆ ಪ್ರಿಯವಾದ ಅನಿಲ್ ಅಂಬಾನಿಯವರು ಡಿಸೆಂಬರ್ 31, 2019ರವರೆಗೆ ದೇಶದ ಬ್ಯಾಂಕುಗಳಿಗೆ ಒಟ್ಟು ಪಾವತಿಸಬೇಕಾದ ಮೊತ್ತ 43,800 ಕೋಟಿ ರೂಪಾಯಿಗಳು ಮಾತ್ರ! ಇವರನ್ನು ಬ್ಯಾಂಕುಗಳು ಈಗಾಗಲೇ ಡಿಫಾಲ್ಟರ್ ಪಟ್ಟಿಗೆ ಸೇರಿಸಿಯಾಗಿದೆ. ಎಚ್.ಡಿ.ಎಫ್.ಸಿ ಸೇರಿದಂತೆ ಇನ್ನಿತರ ಬ್ಯಾಂಕುಗಳಿಗೆ ಬರೋಬ್ಬರಿ 23,000 ಕೋಟಿ ರೂ.ಗಳನ್ನು ಅನಿಲ್ ಅಂಬಾನಿ ಪಾವತಿಸಬೇಕಿದೆ. ಎಸ್.ಬಿ.ಐ ನಲ್ಲಿ ರಾಜ್ಯ ಬ್ಯಾಂಕುಗಳ ವಿಲೀನ, ಸಿಂಡಿಕೇಟ್, ವಿಜಯ ಬ್ಯಾಂಕ್ ಗಳ ವಿಲೀನ ಇತ್ಯಾದಿ ಪ್ರಕ್ರಿಯೆಗಳ ಹಿಂದೆ ಕೇಂದ್ರ ಸರ್ಕಾರ 2.41 ಲಕ್ಷ ಕೋಟಿ ರೂಪಾಯಿಗಳಷ್ಟು ಬೃಹತ್ ಮೊತ್ತವನ್ನು ವಸೂಲಾಗದ ಸಾಲದ ಮೊತ್ತಕ್ಕೆ ಸೇರಿಸಿದ್ದೇ ಕಾರಣ.

ಬ್ಯಾಂಕುಗಳ ನಷ್ಟದ ಮೊತ್ತವನ್ನು ಕೇಳಿ ಗಣಿತ ಬರುವ ದೇಶದ ನಾಗರಿಕರು ಎದೆ ಹೊಡೆದು ಸತ್ತಾರು ಎಂದು ದೇಶವನ್ನು ಆಳುತ್ತಿರುವ ಮೋದಿ ಸರ್ಕಾರ ಬ್ಯಾಂಕುಗಳನ್ನು ವಿಲೀನಗೊಳಿಸುತ್ತಿದೆ. ಇಷ್ಟೆಲ್ಲ ಅವಘಡಗಳ ನಡುವೆ ಒಕ್ಕೂಟ ಸರ್ಕಾರ ಆರ್.ಬಿ.ಐ ಅನ್ನೂ ಬಿಡದೆ ಲಕ್ಷ ಕೋಟಿಗಟ್ಟಲೇ ಹಣವನ್ನು ಪಡೆದಿದೆ. ಕಳ್ಳ ಹೊಕ್ಕ ಮನೆಯಲ್ಲಿ ಏನಾದರೂ ಉಳಿದಿರಬಹುದು, ಕೊಳ್ಳಿ ಹೊಕ್ಕ ಮನೆಯಲ್ಲಿ ಉಳಿಯಲು ಸಾಧ್ಯವೇ? ಎಂಬ ಮಾತಿನಂತೆ ಒಕ್ಕೂಟ ಸರ್ಕಾರ ಆರ್.ಬಿ.ಐ ಅನ್ನೂ ಬಿಟ್ಟಿಲ್ಲ. ಇನ್ನು ಸಹಕಾರಿ ಬ್ಯಾಂಕುಗಳು ಯಾವ ಲೆಕ್ಕ? ಆಲೋಚಿಸಿ.

ಹಣ ವಂಚನೆ ಆರೋಪಿ ನೀರವ್‌ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಿ - ಇಂಗ್ಲೇಂಡ್ ಕೋರ್ಟ್‌ ತೀರ್ಪು
ನೀರವ್‌ ಮೋದಿ

ಒಕ್ಕೂಟ ಸರ್ಕಾರ ರಾತ್ರೋರಾತ್ರಿ ಗರಿಷ್ಠ ಮುಖಬೆಲೆಯ ನೋಟುಗಳನ್ನು ನಿಷೇಧಿಸಿ, ಜಿ.ಎಸ್.ಟಿಯನ್ನು ಅವೈಜ್ಞಾನಿಕವಾಗಿ ಜಾರಿಗೆ ತಂದ ಪರಿಣಾಮದಿಂದಾಗಿ ಬ್ಯಾಂಕುಗಳು, ದೇಶದ ಆರ್ಥಿಕತೆ, ಭಾರತೀಯ ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಇವುಗಳನ್ನು ನಂಬಿಕೊಂಡಿದ್ದ 20 ಕೋಟಿ ನೌಕರರು ಬೀದಿಗೆ ಬಿದ್ದಿದ್ದಾರೆ. ಇದೀಗ ಒಕ್ಕೂಟ ಸರ್ಕಾರದ ಕಣ್ಣು ರಾಜ್ಯದ ಒಡೆತನದಲ್ಲಿರುವ ಸಹಕಾರಿ ಬ್ಯಾಂಕುಗಳ ಮೇಲೆ ಬಿದ್ದಿದೆ.

ಒಕ್ಕೂಟ ಸರ್ಕಾರ ಸಹಕಾರಿ ಖಾತೆಯನ್ನು ತೆರೆಯುವ ಹಿಂದೆ ರಾಜ್ಯ ಸರ್ಕಾರಗಳ ಕೈಯಲ್ಲಿರುವ ಅಧಿಕಾರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದೆ. ಏಕೆಂದರೆ, ಈಗ ಚೂರುಪಾರು ಜೀವ ಹಿಡಿದುಕೊಂಡು ತೆವಳುತ್ತಿರುವ ಸಹಕಾರಿ ಬ್ಯಾಂಕುಗಳು ದೇಶ ಆಳುತ್ತಿರುವ ಮೋದಿಯ ಕಣ್ಣಿಗೆ ಬಿದ್ದಿವೆ. ಏಕೆಂದರೆ, ಸಹಕಾರಿ ಬ್ಯಾಂಕುಗಳ ವಹಿವಾಟಿನಿಂದ ಮತ್ತದೆ ಮಹಿಳೆಯರು, ಶೂದ್ರರು, ದಲಿತರು, ಅಲ್ಪಸಂಖ್ಯಾತರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಹೀಗೆ ಜನ ನೆಮ್ಮದಿಯಿಂದ ಇದ್ದರೆ ಒಕ್ಕೂಟ ಸರ್ಕಾರಕ್ಕೆ ಅಸ್ತಿತ್ವವೆಲ್ಲಿಯದು? ಏಕೆಂದರೆ, ದೇಶ “ಜನ ಪಕೋಡ ಮಾರಿ ಇನ್ನೂರು ರೂ. ಗಳಿಸುತ್ತಿದ್ದಾರೆ. ಆಮೂಲಕ ಉದ್ಯೋಗ ಸೃಷ್ಟಿಯಾಗಿದೆ” ಎಂದವರ ಕೈಯಲ್ಲಿದೆಯಲ್ಲವೇ? ಅವರ ಪ್ರಕಾರ, ದೇಶದ ಶೇ. 97ರಷ್ಟು ಜನ ನೆಮ್ಮದಿಯಾಗಿರಬಾರದು.

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ಕೊರೊನಾ ಅವಧಿಯಲ್ಲಿ ಸರ್ಕಾರ ಕೊಡುವ ಅಕ್ಕಿ, ಗೋಧಿಗೆ ಭಿಕ್ಷೆಗೆ ನಿಲ್ಲುವಂತೆ ಮಾಡಲಿಲ್ಲವೇ? ಹಾಗೆ ಜನರನ್ನು ಖಾಯಂ ಆಗಿ ಭಿಕ್ಷುಕರನ್ನಾಗಿಸಬೇಕು. ಆ ಮಹೋದ್ದೇಶ ಸಾಧನೆಗಾಗಿ ಇದೀಗ ಸಹಕಾರಿ ಬ್ಯಾಂಕುಗಳ ಒಕ್ಕೂಟ ಸರ್ಕಾರಕ್ಕೆ ಸಹಕರಿಸಬೇಕು.

ಇದೀಗ ಸಂವಿಧಾನದತ್ತ ರಾಜ್ಯದ ಎಲ್ಲ ಅವಕಾಶ, ಅಧಿಕಾರಗಳನ್ನು ಕಟ್ಟಿಹಾಕಿ, ಭವಿಷ್ಯದಲ್ಲಿ ಎಲ್ಲವನ್ನೂ ಒಕ್ಕೂಟದ ಕಬಂಧಬಾಹುವಿನ ತೆಕ್ಕೆಗೆ ಎಳೆದುಕೊಳ್ಳಲು ಒಕ್ಕೂಟ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುವುದು, ರಾಜ್ಯದ ಆರ್ಥಿಕತೆಯನ್ನು ಹದಗೆಡಿಸುವುದು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಕ್ಕೂಟ ಸರ್ಕಾರದ ಬಳಿ ಭಿಕ್ಷೆಗೆ ಸರಿಯಲ್ಲಿ ನಿಲ್ಲುವ ವ್ಯವಸ್ಥೆ ಜಾರಿಯಾಗುತ್ತದೆ.

1,169 ಕೋಟಿಗೆ ಒಡಿಶಾ ಹೆದ್ದಾರಿ ಟೆಂಡರ್‌ ಯೋಜನೆ ಗೆದ್ದುಕೊಂಡ ಅದಾನಿ! | Naanu gauri
ಅದಾನಿ

ಈಗಾಗಲೇ ನೋಡಿರುವ ಪ್ರಕಾರ, ಚುನಾವಣೆಗಳಿರುವ ರಾಜ್ಯಕ್ಕೆ ಒಕ್ಕೂಟ ಸರ್ಕಾರ ಉದಾರವಾಗಿ ಹಣ ಹಂಚಿಕೆ ಮಾಡುವುದು, ತನ್ನ ಪಕ್ಷವೇ ಅಧಿಕಾರದಲ್ಲಿದ್ದ ರಾಜ್ಯಗಳಿಗೆ ಹೆಚ್ಚಿನ ಅನುದಾನ ಕೊಡುವುದು, ಕೇಂದ್ರದ ಮಾತು ಕೇಳದಿರುವ ನಾಯಕರಿರುವ ರಾಜ್ಯದ ಕಣ್ಣಿಗೆ ಸುಣ್ಣ ಬಳಿಯುವುದನ್ನೆಲ್ಲ ನೋಡಿಯಾಗಿದೆ. ಇವುಗಳ ನಡುವೆ ಕೂಡ ರಾಜ್ಯಗಳು ಹೇಗೋ ಉಸಿರಾಡುತ್ತಿವೆ. ರಾಜ್ಯಗಳ ಆರ್ಥಿಕತೆಯ ಉಸಿರು ನಿಲ್ಲಿಸಲು ಸಹಕಾರ ಖಾತೆ ಸಹಕರಿಸಲಿದೆ ಎಂಬ ದಟ್ಟ ಅನುಮಾನ ಇದೀಗೆ ಎದ್ದಿದೆ. ಈ ಮೂಲಕ ಸಹಕಾರ ಕ್ಷೇತ್ರದ ಮೇಲೆ ಕೂಡ ಒಕ್ಕೂಟ ಸರ್ಕಾರ ಹಿಡಿತ ಮತ್ತು ಕೇಂದ್ರೀಕೃತ ವ್ಯವಸ್ಥೆಗೆ ಅಳವಡಿಸುವ ಹುನ್ನಾರವನ್ನು ಜಾರಿಗೆ ತರಲಾಗುತ್ತದೆ.

ಇದಕ್ಕಿಂತ ಭೀಕರ ಪರಿಸ್ಥಿತಿಯೊಂದು ಉದ್ಭವಿಸುವ ಸಾಧ್ಯತೆ ಕೂಡ ಇದೆ. ಮೇಲೆ ಉದಾಹರಿಸಿರುವ ವಿಜಯ್ ಮಲ್ಯ, ಮೇಹುಲ್ ಚೋಕ್ಸಿ, ಅನಿಲ್ ಅಂಬಾನಿಯಂತವರಿಂದ ರಾಷ್ಟ್ರೀಕೃತ ಬ್ಯಾಂಕುಗಳು ಅಧೋಗತಿಗೆ ಇಳಿದಿವೆ. ಪ್ರಾಯಶಃ ಇನ್ನಷ್ಟು ಅವುಗಳನ್ನು ಪಾತಾಳಕ್ಕೆ ತುಳಿಯಲು ಅಸಾಧ್ಯವೆಂಬ ಸತ್ಯವನ್ನು ಅರಿತ ಒಕ್ಕೂಟ ಸರ್ಕಾರ ಇದೀಗ ಸಹಕಾರಿ ಬ್ಯಾಂಕುಗಳಿಗೆ ಬಾಯಿ ಹಾಕಲು ಸನ್ನದ್ಧವಾಗಿದೆ. ಜಿ.ಎಸ್.ಟಿ, ವಿವಾದಾತ್ಮಕ ಕೃಷಿ ಮಸೂದೆಗಳು, ಹೊಸ ಶಿಕ್ಷಣ ನೀತಿ, ಇದೀಗ ಸಹಕಾರ ಖಾತೆ ಸೃಷ್ಟಿಯ ಹಿಂದಿರುವುದು ರಾಜ್ಯಗಳ ಸಂವಿಧಾನದತ್ತ ಹಕ್ಕನ್ನು ಕೇಂದ್ರೀಕರಿಸುವುದು, ಮೊಟಕುಗೊಳಿಸುವುದು. ಇದನ್ನು ಅರಿಯದೆ ಒಕ್ಕೂಟ ಸರ್ಕಾರಕ್ಕೆ ಮತ ನೀಡಿದ ಮತದಾರರು, ರಾಜ್ಯ ಸರ್ಕಾರಗಳು ಮತ್ತು ಅವುಗಳನ್ನು ಆರಿಸಿದ ಪ್ರಜಾಪ್ರಭುಗಳು ಪಂಕದಲ್ಲಿ ಬಿದ್ದ ಪಶುವಿನಂತೆ ಒದ್ದಾಡುತ್ತಿರುವುದು ಈಗಾಗಲೇ ಗೋಚರಿಸುತ್ತಿದೆ. ಭವಿಷ್ಯದಲ್ಲಿ ಇದರ ಪರಿಸ್ಥಿತಿ ಇನ್ನಷ್ಟು ಭೀಕರವಾಗುತ್ತದೆ.

– ಡಾ.ಪ್ರದೀಪ್ ಮಾಲ್ಗುಡಿ, ಸಂಶೋಧಕ

ಇದನ್ನೂ ಓದಿ: ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...