Homeಮುಖಪುಟಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಚುನಾವಣಾ ಅಧಿಕಾರಿಗೆ ಥಳಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಬಿಜೆಪಿ ಶಾಸಕ ಸಂಗೀತ್ ಸೋಮ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಫೆಬ್ರವರಿ 10ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೀರತ್ ಜಿಲ್ಲೆಯ ಸಲಾವಾ ಗ್ರಾಮದ ಬೂತ್ 131ಕ್ಕೆ ಸೋಮ್ ಮತ್ತು ಅವರ ಬೆಂಬಲಿಗರು ನುಗ್ಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬೂತ್‌ನ ಹೊರಗೆ ಮತದಾರರ ಉದ್ದನೆಯ ಸರತಿ ಸಾಲಿನಿಂದಾಗಿ ಶಾಸಕರು ಅಸಮಾಧಾನಗೊಂಡರು. ನಿಧಾನಗತಿಯ ಮತದಾನದ ವಿರುದ್ಧ ಶಾಸಕ ಸೋಮ್, ಇಲ್ಲಿನ ಅಧಿಕಾರಿಯೊಂದಿಗೆ ವಾಗ್ವಾದಕ್ಕೆ ಉಳಿದರು. ನಂತರ ಅಧಿಕಾರಿಗೆ ಕಪಾಳಕ್ಕೆ ಹೊಡೆದರು ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪೊಲೀಸರ ಪ್ರಕಾರ, “ಶಾಸಕರ ಬೆಂಬಲಿಗರು ಮತಗಟ್ಟೆಯೊಳಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನೂ ಧ್ವಂಸ ಮಾಡಿದ್ದಾರೆ.”

ಮೀರತ್ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಪ್ರಭಾಕರ್ ಚೌಧರಿ ಅವರು ಇಂಡಿಯನ್‌ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದು, “ದೂರು ದಾಖಲಿಸಲು ಅಧಿಕಾರಿ ಅಶ್ವಿನಿ ಶರ್ಮಾ ಅವರಿಗೆ ಪೊಲೀಸರು ಕಾಯುತ್ತಿದ್ದರು. ಅವರು ಬಾರದಿದ್ದಾಗ ಸರ್ಧಾನ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಿಸಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ನಮ್ಮ ವಿಚಾರಣೆ ಪೂರ್ಣಗೊಂಡ ನಂತರ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಅದೇ ದಿನ ಎಫ್‌ಐಆರ್ ಪ್ರತಿಯನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಪ್ರಕರಣವನ್ನು ಪುಷ್ಟೀಕರಿಸುವುದಕ್ಕಾಗಿ ಹೇಳಿಕೆಯನ್ನು ದಾಖಲಿಸುವಂತೆ ಅಧಿಕಾರಿಯನ್ನು ಕೇಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸೋಮ್ ಅವರು ಸರ್ಧಾನದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. “ಇತ್ತೀಚಿನ ಎಫ್‌ಐಆರ್‌ ಸೇರಿ ಸೋಮ್ ವಿರುದ್ಧ ಈಗ ಎಂಟು ಪ್ರಕರಣಗಳಿವೆ. ಆದರೆ ಅವುಗಳಲ್ಲಿ ಯಾವುದರಲ್ಲೂ ಸೋಮ್‌ ಶಿಕ್ಷೆಗೊಳಗಾಗಿಲ್ಲ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

2013ರ ಮುಜಾಫರ್‌ನಗರ ಗಲಭೆ ಪ್ರಕರಣದಲ್ಲಿ ಸೋಮ್ ಆರೋಪಿಯಾಗಿದ್ದರು. ಗಲಭೆಗೆ ಮುನ್ನ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ ಆರೋಪ ಹೊತ್ತಿದ್ದ ಸೋಮ್ ವಿರುದ್ಧ ಯುಪಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ವರದಿಯನ್ನು ಕಳೆದ ವರ್ಷ ಸಲ್ಲಿಸಿತ್ತು. ಅದರ ವಿರುದ್ಧ ಯಾವುದೇ ಆಕ್ಷೇಪಣೆ ಸಲ್ಲಿಸದ ಕಾರಣ ಸ್ಥಳೀಯ ನ್ಯಾಯಾಲಯವು ವರದಿಯನ್ನು ಅಂಗೀಕರಿಸಿತು.


ಇದನ್ನೂ ಓದಿರಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...