Homeಮುಖಪುಟಮುಸ್ಲಿಮರಿಂದ ವಕ್ಫ್ ಆಸ್ತಿ ಕಸಿದುಕೊಂಡು ನಾಶಕ್ಕೆ ಯತ್ನ: ಅಸಾದುದ್ದೀನ್ ಓವೈಸಿ ಆರೋಪ

ಮುಸ್ಲಿಮರಿಂದ ವಕ್ಫ್ ಆಸ್ತಿ ಕಸಿದುಕೊಂಡು ನಾಶಕ್ಕೆ ಯತ್ನ: ಅಸಾದುದ್ದೀನ್ ಓವೈಸಿ ಆರೋಪ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯನ್ನು ‘ಅಸಂವಿಧಾನಿಕ’ ಎಂದು ಬಣ್ಣಿಸಿದ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ, ಜಂಟಿ ಸಮಿತಿಯ ವರದಿಯನ್ನು ವಿರೋಧಿಸಿದರು. ವಕ್ಫ್‌ ಮಸೂದೆಯು 15, 15 ಮತ್ತು 29 ನೇ ವಿಧಿಗಳ ಗಂಭೀರ ಉಲ್ಲಂಘನೆಯಾಗಿದೆ. ಆದರೆ, ಮುಸ್ಲಿಮರಿಂದ ವಕ್ಫ್ ಕಸಿದುಕೊಂಡು ಅದನ್ನು ನಾಶಮಾಡಲು ತರಲಾಗುತ್ತಿದೆ ಎಂದು ಹೇಳಿದರು.

ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತಾದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯನ್ನು ಗುರುವಾರ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮಂಡಿಸಲಾಯಿತು. ಇದು ವಿರೋಧ ಪಕ್ಷಗಳಿಂದ ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಜೆಪಿಸಿ ಅಧ್ಯಕ್ಷೆ ಜಗದಾಂಬಿಕಾ ಪಾಲ್ ಲೋಕಸಭೆಯಲ್ಲಿ ವರದಿಯನ್ನು ಮಂಡಿಸಿದರು. ಆದರೆ, ವಿರೋಧ ಪಕ್ಷಗಳು ತಮ್ಮ ಅಭಿಪ್ರಾಯಗಳನ್ನು ಅಂತಿಮ ವರದಿಯಲ್ಲಿ ಸೇರಿಸಲಾಗಿಲ್ಲ ಎಂದು ಆರೋಪಿಸಿ ಪ್ರತಿಭಟಿಸಿದರು.

ಓವೈಸಿ ಹೇಳಿದ್ದೇನು?

ಸಂಸತ್ತಿನಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತು ಜೆಪಿಸಿ ವರದಿಯನ್ನು ಮಂಡಿಸಿದ ಸಂದರ್ಭದಲ್ಲಿ ಎಐಎಂಐಎಂ ಸಂಸದರು, “ಜೆಪಿಸಿ ಸದಸ್ಯರು ಹೇಳಿದ್ದನ್ನು ನಾನು ಒಪ್ಪುತ್ತೇನೆ, ಈ ವಕ್ಫ್ ಮಸೂದೆ ಸಂವಿಧಾನಬಾಹಿರ. 15, 15 ಮತ್ತು 29 ನೇ ವಿಧಿಯ ಗಂಭೀರ ಉಲ್ಲಂಘನೆಯಾಗಿದೆ, ಬದಲಿಗೆ ಮುಸ್ಲಿಮರಿಂದ ವಕ್ಫ್ ಅನ್ನು ಕಸಿದುಕೊಂಡು ಅದನ್ನು ನಾಶಮಾಡಲು ತರಲಾಗುತ್ತಿದೆ. ನಾವು ಈ ಮಸೂದೆಯನ್ನು ಖಂಡಿಸುತ್ತೇವೆ” ಎಂದರು.

“ಬಿಜೆಪಿ ಮತ್ತು ಎನ್‌ಡಿಎ ಮಂಡಿಸಿದ ತಿದ್ದುಪಡಿಗಳು ವಕ್ಫ್‌ ಅನ್ನು ಇನ್ನಷ್ಟು ಹದಗೆಡಿಸಿದೆ. ನೀವು ಹೇಳಿ, ಮುಸ್ಲಿಂ ಅಲ್ಲದ ಸದಸ್ಯರನ್ನು ಮುಸ್ಲಿಂ ವಕ್ಫ್ ಆಸ್ತಿಗಳಲ್ಲಿ ಹೇಗೆ ಸೇರಿಸಬಹುದು? ಕಲೆಕ್ಟರ್‌ಗಳು ಮತ್ತು ಮೇಲಿನ ಅಧಿಕಾರಿಗಳಿಗೆ ನೀವು ಹೇಗೆ ಅಧಿಕಾರ ನೀಡುತ್ತೀರಿ? ಆಸ್ತಿ ವಕ್ಫ್‌ಗೆ ಸೇರಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಲೆಕ್ಟರ್ ಹೇಗೆ ನಿರ್ಧರಿಸುತ್ತಾರೆ” ಎಂದು ಪ್ರಶ್ನಿಸಿದರು.

ವಿಪಕ್ಷ ನಾಯಕರ ವಿರೋಧ

ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ ಜೆಪಿಸಿ ವರದಿಯ ಕುರಿತು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್, “ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ದೇಶದ ಪ್ರಮುಖ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಈ ಮಸೂದೆಯನ್ನು ಮಂಡಿಸಲಾಗಿದೆ. ನಾವು ಮಸೂದೆಯನ್ನು ವಿರೋಧಿಸಿದ್ದಲ್ಲದೆ, ಅದನ್ನು ಬಹಿಷ್ಕರಿಸಿದ್ದೇವೆ. ಯಾವುದೇ ಷರತ್ತಿನ ಮೇಲೆ ಇದನ್ನು ಪಾಸ್‌ ಮಾಡಲು ನಾವು ಬಿಡುವುದಿಲ್ಲ” ಎಂದು ಹೇಳಿದರು.

“ವಿರೋಧ ಪಕ್ಷದ ಸದಸ್ಯರು ನೀಡಿದ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ವಕ್ಫ್ ತಿದ್ದುಪಡಿ ಮಸೂದೆಯಲ್ಲಿ ಸೇರಿಸಲಾಗಿಲ್ಲ. ಸರ್ಕಾರ ಈ ಮಸೂದೆಯನ್ನು ಅನಿಯಂತ್ರಿತ ರೀತಿಯಲ್ಲಿ ತರುತ್ತಿದೆ. ಅವರು ಗೊಂದಲ ಉಂಟುಮಾಡಲು ಅಧಿವೇಶನದ ಕೊನೆಯ ದಿನದಂದು ಮಸೂದೆಯನ್ನು ತಂದಿದ್ದಾರೆ” ಎಂದು ಎಸ್‌ಪಿ ಸಂಸದೆ ಇಕ್ರಾ ಹಸನ್ ಹೇಳಿದರು.

ಇದನ್ನೂ ಓದಿ; ವಕ್ಫ್ ಮಸೂದೆಯನ್ನು ಜೆಪಿಸಿಗೆ ಹಿಂತಿರುಗಿಸುವಂತೆ ಒತ್ತಾಯಿಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...