Homeಮುಖಪುಟಮುಸ್ಲಿಮರಿಂದ ವಕ್ಫ್ ಆಸ್ತಿ ಕಸಿದುಕೊಂಡು ನಾಶಕ್ಕೆ ಯತ್ನ: ಅಸಾದುದ್ದೀನ್ ಓವೈಸಿ ಆರೋಪ

ಮುಸ್ಲಿಮರಿಂದ ವಕ್ಫ್ ಆಸ್ತಿ ಕಸಿದುಕೊಂಡು ನಾಶಕ್ಕೆ ಯತ್ನ: ಅಸಾದುದ್ದೀನ್ ಓವೈಸಿ ಆರೋಪ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯನ್ನು ‘ಅಸಂವಿಧಾನಿಕ’ ಎಂದು ಬಣ್ಣಿಸಿದ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ, ಜಂಟಿ ಸಮಿತಿಯ ವರದಿಯನ್ನು ವಿರೋಧಿಸಿದರು. ವಕ್ಫ್‌ ಮಸೂದೆಯು 15, 15 ಮತ್ತು 29 ನೇ ವಿಧಿಗಳ ಗಂಭೀರ ಉಲ್ಲಂಘನೆಯಾಗಿದೆ. ಆದರೆ, ಮುಸ್ಲಿಮರಿಂದ ವಕ್ಫ್ ಕಸಿದುಕೊಂಡು ಅದನ್ನು ನಾಶಮಾಡಲು ತರಲಾಗುತ್ತಿದೆ ಎಂದು ಹೇಳಿದರು.

ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತಾದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯನ್ನು ಗುರುವಾರ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮಂಡಿಸಲಾಯಿತು. ಇದು ವಿರೋಧ ಪಕ್ಷಗಳಿಂದ ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಜೆಪಿಸಿ ಅಧ್ಯಕ್ಷೆ ಜಗದಾಂಬಿಕಾ ಪಾಲ್ ಲೋಕಸಭೆಯಲ್ಲಿ ವರದಿಯನ್ನು ಮಂಡಿಸಿದರು. ಆದರೆ, ವಿರೋಧ ಪಕ್ಷಗಳು ತಮ್ಮ ಅಭಿಪ್ರಾಯಗಳನ್ನು ಅಂತಿಮ ವರದಿಯಲ್ಲಿ ಸೇರಿಸಲಾಗಿಲ್ಲ ಎಂದು ಆರೋಪಿಸಿ ಪ್ರತಿಭಟಿಸಿದರು.

ಓವೈಸಿ ಹೇಳಿದ್ದೇನು?

ಸಂಸತ್ತಿನಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತು ಜೆಪಿಸಿ ವರದಿಯನ್ನು ಮಂಡಿಸಿದ ಸಂದರ್ಭದಲ್ಲಿ ಎಐಎಂಐಎಂ ಸಂಸದರು, “ಜೆಪಿಸಿ ಸದಸ್ಯರು ಹೇಳಿದ್ದನ್ನು ನಾನು ಒಪ್ಪುತ್ತೇನೆ, ಈ ವಕ್ಫ್ ಮಸೂದೆ ಸಂವಿಧಾನಬಾಹಿರ. 15, 15 ಮತ್ತು 29 ನೇ ವಿಧಿಯ ಗಂಭೀರ ಉಲ್ಲಂಘನೆಯಾಗಿದೆ, ಬದಲಿಗೆ ಮುಸ್ಲಿಮರಿಂದ ವಕ್ಫ್ ಅನ್ನು ಕಸಿದುಕೊಂಡು ಅದನ್ನು ನಾಶಮಾಡಲು ತರಲಾಗುತ್ತಿದೆ. ನಾವು ಈ ಮಸೂದೆಯನ್ನು ಖಂಡಿಸುತ್ತೇವೆ” ಎಂದರು.

“ಬಿಜೆಪಿ ಮತ್ತು ಎನ್‌ಡಿಎ ಮಂಡಿಸಿದ ತಿದ್ದುಪಡಿಗಳು ವಕ್ಫ್‌ ಅನ್ನು ಇನ್ನಷ್ಟು ಹದಗೆಡಿಸಿದೆ. ನೀವು ಹೇಳಿ, ಮುಸ್ಲಿಂ ಅಲ್ಲದ ಸದಸ್ಯರನ್ನು ಮುಸ್ಲಿಂ ವಕ್ಫ್ ಆಸ್ತಿಗಳಲ್ಲಿ ಹೇಗೆ ಸೇರಿಸಬಹುದು? ಕಲೆಕ್ಟರ್‌ಗಳು ಮತ್ತು ಮೇಲಿನ ಅಧಿಕಾರಿಗಳಿಗೆ ನೀವು ಹೇಗೆ ಅಧಿಕಾರ ನೀಡುತ್ತೀರಿ? ಆಸ್ತಿ ವಕ್ಫ್‌ಗೆ ಸೇರಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಲೆಕ್ಟರ್ ಹೇಗೆ ನಿರ್ಧರಿಸುತ್ತಾರೆ” ಎಂದು ಪ್ರಶ್ನಿಸಿದರು.

ವಿಪಕ್ಷ ನಾಯಕರ ವಿರೋಧ

ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ ಜೆಪಿಸಿ ವರದಿಯ ಕುರಿತು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್, “ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ದೇಶದ ಪ್ರಮುಖ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಈ ಮಸೂದೆಯನ್ನು ಮಂಡಿಸಲಾಗಿದೆ. ನಾವು ಮಸೂದೆಯನ್ನು ವಿರೋಧಿಸಿದ್ದಲ್ಲದೆ, ಅದನ್ನು ಬಹಿಷ್ಕರಿಸಿದ್ದೇವೆ. ಯಾವುದೇ ಷರತ್ತಿನ ಮೇಲೆ ಇದನ್ನು ಪಾಸ್‌ ಮಾಡಲು ನಾವು ಬಿಡುವುದಿಲ್ಲ” ಎಂದು ಹೇಳಿದರು.

“ವಿರೋಧ ಪಕ್ಷದ ಸದಸ್ಯರು ನೀಡಿದ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ವಕ್ಫ್ ತಿದ್ದುಪಡಿ ಮಸೂದೆಯಲ್ಲಿ ಸೇರಿಸಲಾಗಿಲ್ಲ. ಸರ್ಕಾರ ಈ ಮಸೂದೆಯನ್ನು ಅನಿಯಂತ್ರಿತ ರೀತಿಯಲ್ಲಿ ತರುತ್ತಿದೆ. ಅವರು ಗೊಂದಲ ಉಂಟುಮಾಡಲು ಅಧಿವೇಶನದ ಕೊನೆಯ ದಿನದಂದು ಮಸೂದೆಯನ್ನು ತಂದಿದ್ದಾರೆ” ಎಂದು ಎಸ್‌ಪಿ ಸಂಸದೆ ಇಕ್ರಾ ಹಸನ್ ಹೇಳಿದರು.

ಇದನ್ನೂ ಓದಿ; ವಕ್ಫ್ ಮಸೂದೆಯನ್ನು ಜೆಪಿಸಿಗೆ ಹಿಂತಿರುಗಿಸುವಂತೆ ಒತ್ತಾಯಿಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...