Homeಮುಖಪುಟಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಚಡ್ಡಿಯನ್ನು ದಲಿತರ ಮೇಲೆ ಹೊರಿಸಲಾಗಿದೆ... ಪಠ್ಯಪುಸ್ತಕ ಪರಿಶೀಲನೆಯನ್ನು ಬ್ರಾಹ್ಮಣರಿಗೆ ವಹಿಸಲಾಗಿದೆ... ಅಂಬೇಡ್ಕರ್‌ ಅವರು ಸ್ವಾಭಿಮಾನದ ಬದುಕನ್ನು ಹೇಳಿದರು.. ಆದರೆ ಬಿಜೆಪಿಯಲ್ಲಿನ ದಲಿತರು ಏನನ್ನು ಸಾರಲು ಹೊರಟಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ಪಠ್ಯ ಪರಿಷ್ಕರಣೆ ಮಾಡಲು ಮುಂದಾದ ಬಿಜೆಪಿ ಸರ್ಕಾರಕ್ಕೆ ಇನ್ನಿಲ್ಲದ ಹೊಡೆತ ಬಿದ್ದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಯಡವಟ್ಟುಗಳು ದಿನ ಕಳೆದಂತೆ ಹೆಚ್ಚಾಗುತ್ತಲೇ ಇವೆ. ಮೊದ ಮೊದಲು ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಅದನ್ನು ವಿರೋಧಿಸಿದವರು. ಆ ನಂತರ ಸಾಹಿತಿಗಳು ಪಠ್ಯ ವಾಪಸ್ ಮಾಡಿದರು. ಕುವೆಂಪುರವರಿಗೆ, ಅಂಬೇಡ್ಕರ್‌ರವರಿಗೆ, ಬಸವಣ್ಣನವರಿಗೆ ಅವಮಾನವಾದಾಗ ದಲಿತರು, ಒಕ್ಕಲಿಗರು, ಲಿಂಗಾಯತರು ದೊಡ್ಡ ಮಟ್ಟದಲ್ಲಿ ವಿರೋಧಿಸಿದರು. ಸ್ವಾಮೀಜಿಗಳು ಬೀದಿಗೆ ಬಂದು ಹೋರಾಡಿದರು. ಈಗ ಪಠ್ಯದಲ್ಲಿ ಶಂಕರಾಚಾರ್ಯರಿಗೂ ಅವಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಸ್ಮಾರ್ತ ಬ್ರಾಹ್ಮಣ ಮಠಗಳು ಆಕ್ರೋಶ ಹೊರ ಹಾಕುವ ಸೂಚನೆ ಕಾಣುತ್ತಿದೆ.

ಇಂತಹ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡಿರುವ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದೆ. ಪಠ್ಯ ಪರಿಷ್ಕರಣೆಯಲ್ಲಿ ತಪ್ಪಾಗಿವೆ ಎಂದಿರುವ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಹೊಸದಾಗಿ ಪಠ್ಯ ಮುದ್ರಿಸುವುದಾಗಿ ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ಈ ವಿಷಯದಿಂದ ಜನರನ್ನು ಡೈವರ್ಟ್ ಮಾಡಲು ಯತ್ನಿಸಿದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಚಡ್ಡಿ ಕಳಿಸುವ ಅಭಿಯಾನ ಮಾಡಲು ಮುಂದಾಯಿತು. ಆದರೆ ದಲಿತರಿಗೆ ಚಡ್ಡಿ ಸಂಗ್ರಹಿಸುವ ಮತ್ತು ಚಡ್ಡಿ ಹೊರುವಂತೆ ಮಾಡುವ ಮೂಲಕ ಅದು ಮತ್ತೆ ಜಾತೀಯತೆ ಮೆರೆದು ಆ ಅಭಿಯಾನ ತನಗೆ ತಿರುಗುಬಾಣವಾಗುವಂತೆ ಮಾಡಿಕೊಂಡಿದೆ.

ಇದೆಲ್ಲ ಶುರುವಾಗಿದ್ದು ಹೀಗೆ..

ನಾಡಿನೆಲ್ಲೆಡೆ ಪಠ್ಯ ವಿವಾದ ತಾರಕಕ್ಕೇರಿತ್ತು. ತೀವ್ರ ವಿರೋಧವಿದ್ದರೂ ಸಹ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರ ಪರವಾಗಿ ವಾದಿಸಿದ್ದರು. ಹೋರಾಟನಿರತರನ್ನು ಹೀಯಾಳಿಸಿದ್ದರು. ಇದರಿಂದ ಕ್ರೋಧಗೊಂಡ NSUI ಕಾರ್ಯಕರ್ತರು ಜೂನ್ 01 ರಂದು ತಿಪಟೂರಿನ ನಾಗೇಶ್‌ರವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. RSS ಚಡ್ಡಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಸಿಎಂ, ಗೃಹಸಚಿವ ಎಲ್ಲರೂ ಖಂಡಿಸಿದ್ದರು. ತುಮಕೂರು ಸಂಸದ ಬಸವರಾಜುರವರು ಚಡ್ಡಿ ನಮ್ಮ ಬ್ರಾಂಡ್ ಅದನ್ನು ಸುಟ್ಟಿದ್ದು ತಪ್ಪು ಎಂದರು. NSUI ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 24 ಜನರ ವಿರುದ್ಧ FIR ದಾಖಲಿಸಿ ಬಂಧಿಸಲಾಯಿತು.

ಈ ಕುರಿತು ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ಒಂದು ಚಡ್ಡಿ ಸುಟ್ಟರೆ ಕೇಸ್ ಹಾಕಿ ಬಂಧಿಸುವುದಾದರೆ ತಾನೂ RSS ಚಡ್ಡಿ ಸುಡುವುದಾಗಿ ಘೋಷಿಸಿದ್ದರು. ಕಳೆದ ಒಂದು ತಿಂಗಳಿನಿಂದ ಆರ್‌ಎಸ್‌ಎಸ್‌ ವಿರುದ್ಧ ಸಮರ ಹೂಡಿರುವ ಅವರು #AryanRSS ಹ್ಯಾಷ್‌ಟ್ಯಾಗ್‌ ಅಡಿಯಲ್ಲಿ ಏಕೆ ಆರ್‌ಎಸ್‌ಎಸ್‌ನಲ್ಲಿ ದಲಿತರಿಗೆ ಮುಖ್ಯ ಸ್ಥಾನ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದರು. ಮುಂದುವರಿದು ಅದು ಭಯೋತ್ಪಾದಕ ಸಂಘಟನೆ, ಹಾಗಾಗಿ ಅದನ್ನು ಕಂಡರೆ ನನಗೆ ಭಯ ಎಂದಿದ್ದ ಅವರು ಆರ್ಯನ್ನರು ಈ ದೇಶದ ಮೂಲನಿವಾಸಿಗಳಲ್ಲ, ಬದಲಿಗೆ ಹೊರಗಿನಿಂದ ಬಂದವರು ಎಂದಿದ್ದರು. ಇದಕ್ಕೆ ಹಲವಾರು ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡಿದ್ದರು. ಆಗ ಮತ್ತೆ ಸಿದ್ದರಾಮಯ್ಯನವರು ನಾನು ಕೇಳಿದ್ದು RSSಗೆ. ಏಕೆ ಬಿಜೆಪಿ ನಾಯಕರು ಉತ್ತರಿಸುತ್ತೀರಿ? RSS ನಾಯಕರಿಗೆ ಅಷ್ಟು ಧೈರ್ಯವಿಲ್ಲವೆ ಎಂದು ಛೇಡಿಸಿದ್ದರು.

ಹೀಗೆ ಸಿದ್ದರಾಮಯ್ಯನವರು ಚಡ್ಡಿ ಸುಡುವುದಾಗಿ ಹೇಳಿದ್ದಕ್ಕೆ ಪ್ರತಿಯಾಗಿ ಬಿಜೆಪಿ ನಾವೇ ಹಳೆ ಚಡ್ಡಿ ಕಳಿಸುತ್ತೇವೆ ಎಂಬ ಅಭಿಯಾನ ಆರಂಭಿಸಿದರು. ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿಯವರು ಪತ್ರಿಕಾಗೋಷ್ಟಿ ನಡೆಸಿ “ಬಿಜೆಪಿ ಪರಿಶಿಷ್ಟ ಮೋರ್ಚಾದ ಕಾರ್ಯಕರ್ತರು ಚಡ್ಡಿಗಳನ್ನು ಸಂಗ್ರಹಿಸುತ್ತಾರೆ. ಅವುಗಳನ್ನು ಬಿಜೆಪಿ ಮುಖಂಡರು ಸಿದ್ದರಾಮಯ್ಯನವರಿಗೆ ಕಳಿಸಿಕೊಡುತ್ತಾರೆ” ಎಂದು ಹೇಳಿದ್ದರು. ಅಷ್ಟು ಮಾತ್ರವಲ್ಲದೇ ತಾವೇ ಚಡ್ಡಿಗಳ ಮೂಟೆಯನ್ನು ತಲೆಯ ಮೇಲೊತ್ತಿಕೊಂಡು ಪ್ರತಿಭಟನೆ ನಡೆಸಿದ್ದರು. ಆ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಕೊಳಕು ಚಡ್ಡಿಗಳನ್ನು ಸಂಗ್ರಹಿಸುವ, ಹೊರುವ ಕೆಲಸವನ್ನು ಬಿಜೆಪಿಯಲ್ಲಿನ ದಲಿತರು ಮಾತ್ರವೇ ಏಕೆ ಮಾಡಬೇಕು? ಬಿ.ಸಿ ನಾಗೇಶ್, ತೇಜಸ್ವಿ ಸೂರ್ಯ, ಸುರೇಶ್ ಕುಮಾರ್‌ರಂತಹ ಬ್ರಾಹ್ಮಣರೇಕೆ ಹೊರಬಾರದು ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು, “ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ” ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ. ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು “ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ” ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ. ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ” ಎಂದು ಹೇಳುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅದಲ್ಲದೆ ಹಲವಾರು ಜನರು “ತೇಜಸ್ವಿ ಸೂರ್ಯ, ಸಚಿವ ಬಿ.ಸಿ.ನಾಗೇಶ್ ಅಥವಾ ಸುರೇಶಕುಮಾರ್ ಚಡ್ಡಿ ತಲೆಮೇಲೆ ಹೊತ್ತು ಸಿದ್ಧರಾಮಯ್ಯ ವಿರುದ್ಧ ಪ್ರತಿಭಟಿಸುವುದಾದರೆ ಬಳಸಿದ ನಮ್ಮ ಹಳೆ ಚಡ್ಡಿ ಕೊಡಲು ನಾವೂ ಸಿದ್ಧ” ಎಂದು ಸವಾಲು ಹಾಕಿದರು. ಆದರೆ ಬಿಜೆಪಿ ಹಾಗೆ ಮಾಡಲೇ ಇಲ್ಲ…

“ಪಠ್ಯಪುಸ್ತಕ ಪರಿಷ್ಕರಣೆ – ಮೇಲ್ವರ್ಗದವರಿಗೆ. ಚಡ್ಡಿ ಹೊರುವ ಕೆಲಸ – ದಲಿತರಿಗೆ. ಇದು ಬಿಜೆಪಿಯ ಆಧುನಿಕ ಮನುಧರ್ಮ. ದಲಿತರೊಬ್ಬರು RSSನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಬಿನ್ನವೇನಲ್ಲ. ನಾರಾಯಣಸ್ವಾಮಿ ಅಣ್ಣ, ಅಂಬೇಡ್ಕರ್‌ರವರು ಶೋಷಿತರ ತಲೆಯ ಮೇಲೆ ಕಿರೀಟವನ್ನ ಕಾಣಬಯಸಿದ್ದರೇ ಹೊರತು ಚಡ್ಡಿಗಳನ್ನಲ್ಲ” ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿಯು ಪಠ್ಯಪುಸ್ತಕದಲ್ಲಿ ಅಂಬೇಡ್ಕರ್‌ ಕುರಿತ ಪಠ್ಯದಲ್ಲಿ ಬದಲಾವಣೆ ಮಾಡಿ ಸಂವಿಧಾನ ಶಿಲ್ಪಿ ಪದವನ್ನೇ ಕಿತ್ತು ಹಾಕಿದೆ. ಜೊತೆಗೆ ಅವರು ಬೌದ್ಧಧರ್ಮಕ್ಕೆ ಸೇರಿದ್ದು ಏಕೆಂಬ ಮಾಹಿತಿಯನ್ನು ತಿರುಚಲಾಗಿದೆ. ಹಲವಾರು ದಲಿತ ಲೇಖಕರ ಪಠ್ಯ ಕೈಬಿಟ್ಟಿದೆ. ಮತ್ತೊಂದು ಕಡೆ ದಲಿತರ ಮೇಲೆ ಹಳೆ ಚಡ್ಡಿಗಳನ್ನು ಹೊರಿಸುತ್ತಿದೆ. ಹೀಗೆ ನೇರನೇರಾ ವರ್ಣಾಶ್ರಮ ಪದ್ದತಿಯನ್ನು ಜಾರಿ ಮಾಡುತ್ತಿದೆ ಎಂಬ ಆರೋಪ ದಟ್ಟವಾಗಿದೆ.

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಈ ನಿಟ್ಟಿನಲ್ಲಿ ಪಠ್ಯಪುಸ್ತಕ ವಿವಾದದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಚಡ್ಡಿ ಕಳಿಸುವ ಅಭಿಯಾನ ಹಮ್ಮಿಕೊಂಡ ಬಿಜೆಪಿ ಅಲ್ಲಿಯೂ ಹಿನ್ನಡೆ ಅನುಭವಿಸಿದೆ. ನಾಲ್ವರು ಬಿಜೆಪಿ ಶಾಸಕರೆ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿದ್ದಾರೆ. ಎಲ್ಲಾ ಸಮುದಾಯದ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ತಾನು ಏನೂ ಬೇಕಾದರೆ ಮಾಡಿ ಜಯಿಸಿಕೊಳ್ಳಬಲ್ಲೆ ಎಂಬುದು ಸುಲಭದ ಮಾತಲ್ಲ ಎಂಬುದನ್ನು ಈ ಪ್ರಕರಣಗಳು ಸಾಬೀತು ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...