Homeಮುಖಪುಟಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಚಡ್ಡಿಯನ್ನು ದಲಿತರ ಮೇಲೆ ಹೊರಿಸಲಾಗಿದೆ... ಪಠ್ಯಪುಸ್ತಕ ಪರಿಶೀಲನೆಯನ್ನು ಬ್ರಾಹ್ಮಣರಿಗೆ ವಹಿಸಲಾಗಿದೆ... ಅಂಬೇಡ್ಕರ್‌ ಅವರು ಸ್ವಾಭಿಮಾನದ ಬದುಕನ್ನು ಹೇಳಿದರು.. ಆದರೆ ಬಿಜೆಪಿಯಲ್ಲಿನ ದಲಿತರು ಏನನ್ನು ಸಾರಲು ಹೊರಟಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ಪಠ್ಯ ಪರಿಷ್ಕರಣೆ ಮಾಡಲು ಮುಂದಾದ ಬಿಜೆಪಿ ಸರ್ಕಾರಕ್ಕೆ ಇನ್ನಿಲ್ಲದ ಹೊಡೆತ ಬಿದ್ದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಯಡವಟ್ಟುಗಳು ದಿನ ಕಳೆದಂತೆ ಹೆಚ್ಚಾಗುತ್ತಲೇ ಇವೆ. ಮೊದ ಮೊದಲು ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಅದನ್ನು ವಿರೋಧಿಸಿದವರು. ಆ ನಂತರ ಸಾಹಿತಿಗಳು ಪಠ್ಯ ವಾಪಸ್ ಮಾಡಿದರು. ಕುವೆಂಪುರವರಿಗೆ, ಅಂಬೇಡ್ಕರ್‌ರವರಿಗೆ, ಬಸವಣ್ಣನವರಿಗೆ ಅವಮಾನವಾದಾಗ ದಲಿತರು, ಒಕ್ಕಲಿಗರು, ಲಿಂಗಾಯತರು ದೊಡ್ಡ ಮಟ್ಟದಲ್ಲಿ ವಿರೋಧಿಸಿದರು. ಸ್ವಾಮೀಜಿಗಳು ಬೀದಿಗೆ ಬಂದು ಹೋರಾಡಿದರು. ಈಗ ಪಠ್ಯದಲ್ಲಿ ಶಂಕರಾಚಾರ್ಯರಿಗೂ ಅವಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಸ್ಮಾರ್ತ ಬ್ರಾಹ್ಮಣ ಮಠಗಳು ಆಕ್ರೋಶ ಹೊರ ಹಾಕುವ ಸೂಚನೆ ಕಾಣುತ್ತಿದೆ.

ಇಂತಹ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡಿರುವ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದೆ. ಪಠ್ಯ ಪರಿಷ್ಕರಣೆಯಲ್ಲಿ ತಪ್ಪಾಗಿವೆ ಎಂದಿರುವ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಹೊಸದಾಗಿ ಪಠ್ಯ ಮುದ್ರಿಸುವುದಾಗಿ ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ಈ ವಿಷಯದಿಂದ ಜನರನ್ನು ಡೈವರ್ಟ್ ಮಾಡಲು ಯತ್ನಿಸಿದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಚಡ್ಡಿ ಕಳಿಸುವ ಅಭಿಯಾನ ಮಾಡಲು ಮುಂದಾಯಿತು. ಆದರೆ ದಲಿತರಿಗೆ ಚಡ್ಡಿ ಸಂಗ್ರಹಿಸುವ ಮತ್ತು ಚಡ್ಡಿ ಹೊರುವಂತೆ ಮಾಡುವ ಮೂಲಕ ಅದು ಮತ್ತೆ ಜಾತೀಯತೆ ಮೆರೆದು ಆ ಅಭಿಯಾನ ತನಗೆ ತಿರುಗುಬಾಣವಾಗುವಂತೆ ಮಾಡಿಕೊಂಡಿದೆ.

ಇದೆಲ್ಲ ಶುರುವಾಗಿದ್ದು ಹೀಗೆ..

ನಾಡಿನೆಲ್ಲೆಡೆ ಪಠ್ಯ ವಿವಾದ ತಾರಕಕ್ಕೇರಿತ್ತು. ತೀವ್ರ ವಿರೋಧವಿದ್ದರೂ ಸಹ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರ ಪರವಾಗಿ ವಾದಿಸಿದ್ದರು. ಹೋರಾಟನಿರತರನ್ನು ಹೀಯಾಳಿಸಿದ್ದರು. ಇದರಿಂದ ಕ್ರೋಧಗೊಂಡ NSUI ಕಾರ್ಯಕರ್ತರು ಜೂನ್ 01 ರಂದು ತಿಪಟೂರಿನ ನಾಗೇಶ್‌ರವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. RSS ಚಡ್ಡಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಸಿಎಂ, ಗೃಹಸಚಿವ ಎಲ್ಲರೂ ಖಂಡಿಸಿದ್ದರು. ತುಮಕೂರು ಸಂಸದ ಬಸವರಾಜುರವರು ಚಡ್ಡಿ ನಮ್ಮ ಬ್ರಾಂಡ್ ಅದನ್ನು ಸುಟ್ಟಿದ್ದು ತಪ್ಪು ಎಂದರು. NSUI ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 24 ಜನರ ವಿರುದ್ಧ FIR ದಾಖಲಿಸಿ ಬಂಧಿಸಲಾಯಿತು.

ಈ ಕುರಿತು ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ಒಂದು ಚಡ್ಡಿ ಸುಟ್ಟರೆ ಕೇಸ್ ಹಾಕಿ ಬಂಧಿಸುವುದಾದರೆ ತಾನೂ RSS ಚಡ್ಡಿ ಸುಡುವುದಾಗಿ ಘೋಷಿಸಿದ್ದರು. ಕಳೆದ ಒಂದು ತಿಂಗಳಿನಿಂದ ಆರ್‌ಎಸ್‌ಎಸ್‌ ವಿರುದ್ಧ ಸಮರ ಹೂಡಿರುವ ಅವರು #AryanRSS ಹ್ಯಾಷ್‌ಟ್ಯಾಗ್‌ ಅಡಿಯಲ್ಲಿ ಏಕೆ ಆರ್‌ಎಸ್‌ಎಸ್‌ನಲ್ಲಿ ದಲಿತರಿಗೆ ಮುಖ್ಯ ಸ್ಥಾನ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದರು. ಮುಂದುವರಿದು ಅದು ಭಯೋತ್ಪಾದಕ ಸಂಘಟನೆ, ಹಾಗಾಗಿ ಅದನ್ನು ಕಂಡರೆ ನನಗೆ ಭಯ ಎಂದಿದ್ದ ಅವರು ಆರ್ಯನ್ನರು ಈ ದೇಶದ ಮೂಲನಿವಾಸಿಗಳಲ್ಲ, ಬದಲಿಗೆ ಹೊರಗಿನಿಂದ ಬಂದವರು ಎಂದಿದ್ದರು. ಇದಕ್ಕೆ ಹಲವಾರು ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡಿದ್ದರು. ಆಗ ಮತ್ತೆ ಸಿದ್ದರಾಮಯ್ಯನವರು ನಾನು ಕೇಳಿದ್ದು RSSಗೆ. ಏಕೆ ಬಿಜೆಪಿ ನಾಯಕರು ಉತ್ತರಿಸುತ್ತೀರಿ? RSS ನಾಯಕರಿಗೆ ಅಷ್ಟು ಧೈರ್ಯವಿಲ್ಲವೆ ಎಂದು ಛೇಡಿಸಿದ್ದರು.

ಹೀಗೆ ಸಿದ್ದರಾಮಯ್ಯನವರು ಚಡ್ಡಿ ಸುಡುವುದಾಗಿ ಹೇಳಿದ್ದಕ್ಕೆ ಪ್ರತಿಯಾಗಿ ಬಿಜೆಪಿ ನಾವೇ ಹಳೆ ಚಡ್ಡಿ ಕಳಿಸುತ್ತೇವೆ ಎಂಬ ಅಭಿಯಾನ ಆರಂಭಿಸಿದರು. ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿಯವರು ಪತ್ರಿಕಾಗೋಷ್ಟಿ ನಡೆಸಿ “ಬಿಜೆಪಿ ಪರಿಶಿಷ್ಟ ಮೋರ್ಚಾದ ಕಾರ್ಯಕರ್ತರು ಚಡ್ಡಿಗಳನ್ನು ಸಂಗ್ರಹಿಸುತ್ತಾರೆ. ಅವುಗಳನ್ನು ಬಿಜೆಪಿ ಮುಖಂಡರು ಸಿದ್ದರಾಮಯ್ಯನವರಿಗೆ ಕಳಿಸಿಕೊಡುತ್ತಾರೆ” ಎಂದು ಹೇಳಿದ್ದರು. ಅಷ್ಟು ಮಾತ್ರವಲ್ಲದೇ ತಾವೇ ಚಡ್ಡಿಗಳ ಮೂಟೆಯನ್ನು ತಲೆಯ ಮೇಲೊತ್ತಿಕೊಂಡು ಪ್ರತಿಭಟನೆ ನಡೆಸಿದ್ದರು. ಆ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಕೊಳಕು ಚಡ್ಡಿಗಳನ್ನು ಸಂಗ್ರಹಿಸುವ, ಹೊರುವ ಕೆಲಸವನ್ನು ಬಿಜೆಪಿಯಲ್ಲಿನ ದಲಿತರು ಮಾತ್ರವೇ ಏಕೆ ಮಾಡಬೇಕು? ಬಿ.ಸಿ ನಾಗೇಶ್, ತೇಜಸ್ವಿ ಸೂರ್ಯ, ಸುರೇಶ್ ಕುಮಾರ್‌ರಂತಹ ಬ್ರಾಹ್ಮಣರೇಕೆ ಹೊರಬಾರದು ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು, “ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ” ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ. ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು “ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ” ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ. ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ” ಎಂದು ಹೇಳುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅದಲ್ಲದೆ ಹಲವಾರು ಜನರು “ತೇಜಸ್ವಿ ಸೂರ್ಯ, ಸಚಿವ ಬಿ.ಸಿ.ನಾಗೇಶ್ ಅಥವಾ ಸುರೇಶಕುಮಾರ್ ಚಡ್ಡಿ ತಲೆಮೇಲೆ ಹೊತ್ತು ಸಿದ್ಧರಾಮಯ್ಯ ವಿರುದ್ಧ ಪ್ರತಿಭಟಿಸುವುದಾದರೆ ಬಳಸಿದ ನಮ್ಮ ಹಳೆ ಚಡ್ಡಿ ಕೊಡಲು ನಾವೂ ಸಿದ್ಧ” ಎಂದು ಸವಾಲು ಹಾಕಿದರು. ಆದರೆ ಬಿಜೆಪಿ ಹಾಗೆ ಮಾಡಲೇ ಇಲ್ಲ…

“ಪಠ್ಯಪುಸ್ತಕ ಪರಿಷ್ಕರಣೆ – ಮೇಲ್ವರ್ಗದವರಿಗೆ. ಚಡ್ಡಿ ಹೊರುವ ಕೆಲಸ – ದಲಿತರಿಗೆ. ಇದು ಬಿಜೆಪಿಯ ಆಧುನಿಕ ಮನುಧರ್ಮ. ದಲಿತರೊಬ್ಬರು RSSನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಬಿನ್ನವೇನಲ್ಲ. ನಾರಾಯಣಸ್ವಾಮಿ ಅಣ್ಣ, ಅಂಬೇಡ್ಕರ್‌ರವರು ಶೋಷಿತರ ತಲೆಯ ಮೇಲೆ ಕಿರೀಟವನ್ನ ಕಾಣಬಯಸಿದ್ದರೇ ಹೊರತು ಚಡ್ಡಿಗಳನ್ನಲ್ಲ” ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿಯು ಪಠ್ಯಪುಸ್ತಕದಲ್ಲಿ ಅಂಬೇಡ್ಕರ್‌ ಕುರಿತ ಪಠ್ಯದಲ್ಲಿ ಬದಲಾವಣೆ ಮಾಡಿ ಸಂವಿಧಾನ ಶಿಲ್ಪಿ ಪದವನ್ನೇ ಕಿತ್ತು ಹಾಕಿದೆ. ಜೊತೆಗೆ ಅವರು ಬೌದ್ಧಧರ್ಮಕ್ಕೆ ಸೇರಿದ್ದು ಏಕೆಂಬ ಮಾಹಿತಿಯನ್ನು ತಿರುಚಲಾಗಿದೆ. ಹಲವಾರು ದಲಿತ ಲೇಖಕರ ಪಠ್ಯ ಕೈಬಿಟ್ಟಿದೆ. ಮತ್ತೊಂದು ಕಡೆ ದಲಿತರ ಮೇಲೆ ಹಳೆ ಚಡ್ಡಿಗಳನ್ನು ಹೊರಿಸುತ್ತಿದೆ. ಹೀಗೆ ನೇರನೇರಾ ವರ್ಣಾಶ್ರಮ ಪದ್ದತಿಯನ್ನು ಜಾರಿ ಮಾಡುತ್ತಿದೆ ಎಂಬ ಆರೋಪ ದಟ್ಟವಾಗಿದೆ.

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಈ ನಿಟ್ಟಿನಲ್ಲಿ ಪಠ್ಯಪುಸ್ತಕ ವಿವಾದದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಚಡ್ಡಿ ಕಳಿಸುವ ಅಭಿಯಾನ ಹಮ್ಮಿಕೊಂಡ ಬಿಜೆಪಿ ಅಲ್ಲಿಯೂ ಹಿನ್ನಡೆ ಅನುಭವಿಸಿದೆ. ನಾಲ್ವರು ಬಿಜೆಪಿ ಶಾಸಕರೆ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿದ್ದಾರೆ. ಎಲ್ಲಾ ಸಮುದಾಯದ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ತಾನು ಏನೂ ಬೇಕಾದರೆ ಮಾಡಿ ಜಯಿಸಿಕೊಳ್ಳಬಲ್ಲೆ ಎಂಬುದು ಸುಲಭದ ಮಾತಲ್ಲ ಎಂಬುದನ್ನು ಈ ಪ್ರಕರಣಗಳು ಸಾಬೀತು ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...