Homeಮುಖಪುಟಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಚಡ್ಡಿಯನ್ನು ದಲಿತರ ಮೇಲೆ ಹೊರಿಸಲಾಗಿದೆ... ಪಠ್ಯಪುಸ್ತಕ ಪರಿಶೀಲನೆಯನ್ನು ಬ್ರಾಹ್ಮಣರಿಗೆ ವಹಿಸಲಾಗಿದೆ... ಅಂಬೇಡ್ಕರ್‌ ಅವರು ಸ್ವಾಭಿಮಾನದ ಬದುಕನ್ನು ಹೇಳಿದರು.. ಆದರೆ ಬಿಜೆಪಿಯಲ್ಲಿನ ದಲಿತರು ಏನನ್ನು ಸಾರಲು ಹೊರಟಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ಪಠ್ಯ ಪರಿಷ್ಕರಣೆ ಮಾಡಲು ಮುಂದಾದ ಬಿಜೆಪಿ ಸರ್ಕಾರಕ್ಕೆ ಇನ್ನಿಲ್ಲದ ಹೊಡೆತ ಬಿದ್ದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಯಡವಟ್ಟುಗಳು ದಿನ ಕಳೆದಂತೆ ಹೆಚ್ಚಾಗುತ್ತಲೇ ಇವೆ. ಮೊದ ಮೊದಲು ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಅದನ್ನು ವಿರೋಧಿಸಿದವರು. ಆ ನಂತರ ಸಾಹಿತಿಗಳು ಪಠ್ಯ ವಾಪಸ್ ಮಾಡಿದರು. ಕುವೆಂಪುರವರಿಗೆ, ಅಂಬೇಡ್ಕರ್‌ರವರಿಗೆ, ಬಸವಣ್ಣನವರಿಗೆ ಅವಮಾನವಾದಾಗ ದಲಿತರು, ಒಕ್ಕಲಿಗರು, ಲಿಂಗಾಯತರು ದೊಡ್ಡ ಮಟ್ಟದಲ್ಲಿ ವಿರೋಧಿಸಿದರು. ಸ್ವಾಮೀಜಿಗಳು ಬೀದಿಗೆ ಬಂದು ಹೋರಾಡಿದರು. ಈಗ ಪಠ್ಯದಲ್ಲಿ ಶಂಕರಾಚಾರ್ಯರಿಗೂ ಅವಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಸ್ಮಾರ್ತ ಬ್ರಾಹ್ಮಣ ಮಠಗಳು ಆಕ್ರೋಶ ಹೊರ ಹಾಕುವ ಸೂಚನೆ ಕಾಣುತ್ತಿದೆ.

ಇಂತಹ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡಿರುವ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದೆ. ಪಠ್ಯ ಪರಿಷ್ಕರಣೆಯಲ್ಲಿ ತಪ್ಪಾಗಿವೆ ಎಂದಿರುವ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಹೊಸದಾಗಿ ಪಠ್ಯ ಮುದ್ರಿಸುವುದಾಗಿ ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ಈ ವಿಷಯದಿಂದ ಜನರನ್ನು ಡೈವರ್ಟ್ ಮಾಡಲು ಯತ್ನಿಸಿದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಚಡ್ಡಿ ಕಳಿಸುವ ಅಭಿಯಾನ ಮಾಡಲು ಮುಂದಾಯಿತು. ಆದರೆ ದಲಿತರಿಗೆ ಚಡ್ಡಿ ಸಂಗ್ರಹಿಸುವ ಮತ್ತು ಚಡ್ಡಿ ಹೊರುವಂತೆ ಮಾಡುವ ಮೂಲಕ ಅದು ಮತ್ತೆ ಜಾತೀಯತೆ ಮೆರೆದು ಆ ಅಭಿಯಾನ ತನಗೆ ತಿರುಗುಬಾಣವಾಗುವಂತೆ ಮಾಡಿಕೊಂಡಿದೆ.

ಇದೆಲ್ಲ ಶುರುವಾಗಿದ್ದು ಹೀಗೆ..

ನಾಡಿನೆಲ್ಲೆಡೆ ಪಠ್ಯ ವಿವಾದ ತಾರಕಕ್ಕೇರಿತ್ತು. ತೀವ್ರ ವಿರೋಧವಿದ್ದರೂ ಸಹ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರ ಪರವಾಗಿ ವಾದಿಸಿದ್ದರು. ಹೋರಾಟನಿರತರನ್ನು ಹೀಯಾಳಿಸಿದ್ದರು. ಇದರಿಂದ ಕ್ರೋಧಗೊಂಡ NSUI ಕಾರ್ಯಕರ್ತರು ಜೂನ್ 01 ರಂದು ತಿಪಟೂರಿನ ನಾಗೇಶ್‌ರವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. RSS ಚಡ್ಡಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಸಿಎಂ, ಗೃಹಸಚಿವ ಎಲ್ಲರೂ ಖಂಡಿಸಿದ್ದರು. ತುಮಕೂರು ಸಂಸದ ಬಸವರಾಜುರವರು ಚಡ್ಡಿ ನಮ್ಮ ಬ್ರಾಂಡ್ ಅದನ್ನು ಸುಟ್ಟಿದ್ದು ತಪ್ಪು ಎಂದರು. NSUI ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 24 ಜನರ ವಿರುದ್ಧ FIR ದಾಖಲಿಸಿ ಬಂಧಿಸಲಾಯಿತು.

ಈ ಕುರಿತು ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ಒಂದು ಚಡ್ಡಿ ಸುಟ್ಟರೆ ಕೇಸ್ ಹಾಕಿ ಬಂಧಿಸುವುದಾದರೆ ತಾನೂ RSS ಚಡ್ಡಿ ಸುಡುವುದಾಗಿ ಘೋಷಿಸಿದ್ದರು. ಕಳೆದ ಒಂದು ತಿಂಗಳಿನಿಂದ ಆರ್‌ಎಸ್‌ಎಸ್‌ ವಿರುದ್ಧ ಸಮರ ಹೂಡಿರುವ ಅವರು #AryanRSS ಹ್ಯಾಷ್‌ಟ್ಯಾಗ್‌ ಅಡಿಯಲ್ಲಿ ಏಕೆ ಆರ್‌ಎಸ್‌ಎಸ್‌ನಲ್ಲಿ ದಲಿತರಿಗೆ ಮುಖ್ಯ ಸ್ಥಾನ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದರು. ಮುಂದುವರಿದು ಅದು ಭಯೋತ್ಪಾದಕ ಸಂಘಟನೆ, ಹಾಗಾಗಿ ಅದನ್ನು ಕಂಡರೆ ನನಗೆ ಭಯ ಎಂದಿದ್ದ ಅವರು ಆರ್ಯನ್ನರು ಈ ದೇಶದ ಮೂಲನಿವಾಸಿಗಳಲ್ಲ, ಬದಲಿಗೆ ಹೊರಗಿನಿಂದ ಬಂದವರು ಎಂದಿದ್ದರು. ಇದಕ್ಕೆ ಹಲವಾರು ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡಿದ್ದರು. ಆಗ ಮತ್ತೆ ಸಿದ್ದರಾಮಯ್ಯನವರು ನಾನು ಕೇಳಿದ್ದು RSSಗೆ. ಏಕೆ ಬಿಜೆಪಿ ನಾಯಕರು ಉತ್ತರಿಸುತ್ತೀರಿ? RSS ನಾಯಕರಿಗೆ ಅಷ್ಟು ಧೈರ್ಯವಿಲ್ಲವೆ ಎಂದು ಛೇಡಿಸಿದ್ದರು.

ಹೀಗೆ ಸಿದ್ದರಾಮಯ್ಯನವರು ಚಡ್ಡಿ ಸುಡುವುದಾಗಿ ಹೇಳಿದ್ದಕ್ಕೆ ಪ್ರತಿಯಾಗಿ ಬಿಜೆಪಿ ನಾವೇ ಹಳೆ ಚಡ್ಡಿ ಕಳಿಸುತ್ತೇವೆ ಎಂಬ ಅಭಿಯಾನ ಆರಂಭಿಸಿದರು. ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿಯವರು ಪತ್ರಿಕಾಗೋಷ್ಟಿ ನಡೆಸಿ “ಬಿಜೆಪಿ ಪರಿಶಿಷ್ಟ ಮೋರ್ಚಾದ ಕಾರ್ಯಕರ್ತರು ಚಡ್ಡಿಗಳನ್ನು ಸಂಗ್ರಹಿಸುತ್ತಾರೆ. ಅವುಗಳನ್ನು ಬಿಜೆಪಿ ಮುಖಂಡರು ಸಿದ್ದರಾಮಯ್ಯನವರಿಗೆ ಕಳಿಸಿಕೊಡುತ್ತಾರೆ” ಎಂದು ಹೇಳಿದ್ದರು. ಅಷ್ಟು ಮಾತ್ರವಲ್ಲದೇ ತಾವೇ ಚಡ್ಡಿಗಳ ಮೂಟೆಯನ್ನು ತಲೆಯ ಮೇಲೊತ್ತಿಕೊಂಡು ಪ್ರತಿಭಟನೆ ನಡೆಸಿದ್ದರು. ಆ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಕೊಳಕು ಚಡ್ಡಿಗಳನ್ನು ಸಂಗ್ರಹಿಸುವ, ಹೊರುವ ಕೆಲಸವನ್ನು ಬಿಜೆಪಿಯಲ್ಲಿನ ದಲಿತರು ಮಾತ್ರವೇ ಏಕೆ ಮಾಡಬೇಕು? ಬಿ.ಸಿ ನಾಗೇಶ್, ತೇಜಸ್ವಿ ಸೂರ್ಯ, ಸುರೇಶ್ ಕುಮಾರ್‌ರಂತಹ ಬ್ರಾಹ್ಮಣರೇಕೆ ಹೊರಬಾರದು ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು, “ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ” ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ. ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು “ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ” ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ. ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ” ಎಂದು ಹೇಳುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅದಲ್ಲದೆ ಹಲವಾರು ಜನರು “ತೇಜಸ್ವಿ ಸೂರ್ಯ, ಸಚಿವ ಬಿ.ಸಿ.ನಾಗೇಶ್ ಅಥವಾ ಸುರೇಶಕುಮಾರ್ ಚಡ್ಡಿ ತಲೆಮೇಲೆ ಹೊತ್ತು ಸಿದ್ಧರಾಮಯ್ಯ ವಿರುದ್ಧ ಪ್ರತಿಭಟಿಸುವುದಾದರೆ ಬಳಸಿದ ನಮ್ಮ ಹಳೆ ಚಡ್ಡಿ ಕೊಡಲು ನಾವೂ ಸಿದ್ಧ” ಎಂದು ಸವಾಲು ಹಾಕಿದರು. ಆದರೆ ಬಿಜೆಪಿ ಹಾಗೆ ಮಾಡಲೇ ಇಲ್ಲ…

“ಪಠ್ಯಪುಸ್ತಕ ಪರಿಷ್ಕರಣೆ – ಮೇಲ್ವರ್ಗದವರಿಗೆ. ಚಡ್ಡಿ ಹೊರುವ ಕೆಲಸ – ದಲಿತರಿಗೆ. ಇದು ಬಿಜೆಪಿಯ ಆಧುನಿಕ ಮನುಧರ್ಮ. ದಲಿತರೊಬ್ಬರು RSSನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಬಿನ್ನವೇನಲ್ಲ. ನಾರಾಯಣಸ್ವಾಮಿ ಅಣ್ಣ, ಅಂಬೇಡ್ಕರ್‌ರವರು ಶೋಷಿತರ ತಲೆಯ ಮೇಲೆ ಕಿರೀಟವನ್ನ ಕಾಣಬಯಸಿದ್ದರೇ ಹೊರತು ಚಡ್ಡಿಗಳನ್ನಲ್ಲ” ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿಯು ಪಠ್ಯಪುಸ್ತಕದಲ್ಲಿ ಅಂಬೇಡ್ಕರ್‌ ಕುರಿತ ಪಠ್ಯದಲ್ಲಿ ಬದಲಾವಣೆ ಮಾಡಿ ಸಂವಿಧಾನ ಶಿಲ್ಪಿ ಪದವನ್ನೇ ಕಿತ್ತು ಹಾಕಿದೆ. ಜೊತೆಗೆ ಅವರು ಬೌದ್ಧಧರ್ಮಕ್ಕೆ ಸೇರಿದ್ದು ಏಕೆಂಬ ಮಾಹಿತಿಯನ್ನು ತಿರುಚಲಾಗಿದೆ. ಹಲವಾರು ದಲಿತ ಲೇಖಕರ ಪಠ್ಯ ಕೈಬಿಟ್ಟಿದೆ. ಮತ್ತೊಂದು ಕಡೆ ದಲಿತರ ಮೇಲೆ ಹಳೆ ಚಡ್ಡಿಗಳನ್ನು ಹೊರಿಸುತ್ತಿದೆ. ಹೀಗೆ ನೇರನೇರಾ ವರ್ಣಾಶ್ರಮ ಪದ್ದತಿಯನ್ನು ಜಾರಿ ಮಾಡುತ್ತಿದೆ ಎಂಬ ಆರೋಪ ದಟ್ಟವಾಗಿದೆ.

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಈ ನಿಟ್ಟಿನಲ್ಲಿ ಪಠ್ಯಪುಸ್ತಕ ವಿವಾದದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಚಡ್ಡಿ ಕಳಿಸುವ ಅಭಿಯಾನ ಹಮ್ಮಿಕೊಂಡ ಬಿಜೆಪಿ ಅಲ್ಲಿಯೂ ಹಿನ್ನಡೆ ಅನುಭವಿಸಿದೆ. ನಾಲ್ವರು ಬಿಜೆಪಿ ಶಾಸಕರೆ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿದ್ದಾರೆ. ಎಲ್ಲಾ ಸಮುದಾಯದ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ತಾನು ಏನೂ ಬೇಕಾದರೆ ಮಾಡಿ ಜಯಿಸಿಕೊಳ್ಳಬಲ್ಲೆ ಎಂಬುದು ಸುಲಭದ ಮಾತಲ್ಲ ಎಂಬುದನ್ನು ಈ ಪ್ರಕರಣಗಳು ಸಾಬೀತು ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...