Homeಮುಖಪುಟಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಚಡ್ಡಿಯನ್ನು ದಲಿತರ ಮೇಲೆ ಹೊರಿಸಲಾಗಿದೆ... ಪಠ್ಯಪುಸ್ತಕ ಪರಿಶೀಲನೆಯನ್ನು ಬ್ರಾಹ್ಮಣರಿಗೆ ವಹಿಸಲಾಗಿದೆ... ಅಂಬೇಡ್ಕರ್‌ ಅವರು ಸ್ವಾಭಿಮಾನದ ಬದುಕನ್ನು ಹೇಳಿದರು.. ಆದರೆ ಬಿಜೆಪಿಯಲ್ಲಿನ ದಲಿತರು ಏನನ್ನು ಸಾರಲು ಹೊರಟಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ಪಠ್ಯ ಪರಿಷ್ಕರಣೆ ಮಾಡಲು ಮುಂದಾದ ಬಿಜೆಪಿ ಸರ್ಕಾರಕ್ಕೆ ಇನ್ನಿಲ್ಲದ ಹೊಡೆತ ಬಿದ್ದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಯಡವಟ್ಟುಗಳು ದಿನ ಕಳೆದಂತೆ ಹೆಚ್ಚಾಗುತ್ತಲೇ ಇವೆ. ಮೊದ ಮೊದಲು ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಅದನ್ನು ವಿರೋಧಿಸಿದವರು. ಆ ನಂತರ ಸಾಹಿತಿಗಳು ಪಠ್ಯ ವಾಪಸ್ ಮಾಡಿದರು. ಕುವೆಂಪುರವರಿಗೆ, ಅಂಬೇಡ್ಕರ್‌ರವರಿಗೆ, ಬಸವಣ್ಣನವರಿಗೆ ಅವಮಾನವಾದಾಗ ದಲಿತರು, ಒಕ್ಕಲಿಗರು, ಲಿಂಗಾಯತರು ದೊಡ್ಡ ಮಟ್ಟದಲ್ಲಿ ವಿರೋಧಿಸಿದರು. ಸ್ವಾಮೀಜಿಗಳು ಬೀದಿಗೆ ಬಂದು ಹೋರಾಡಿದರು. ಈಗ ಪಠ್ಯದಲ್ಲಿ ಶಂಕರಾಚಾರ್ಯರಿಗೂ ಅವಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಸ್ಮಾರ್ತ ಬ್ರಾಹ್ಮಣ ಮಠಗಳು ಆಕ್ರೋಶ ಹೊರ ಹಾಕುವ ಸೂಚನೆ ಕಾಣುತ್ತಿದೆ.

ಇಂತಹ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡಿರುವ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದೆ. ಪಠ್ಯ ಪರಿಷ್ಕರಣೆಯಲ್ಲಿ ತಪ್ಪಾಗಿವೆ ಎಂದಿರುವ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಹೊಸದಾಗಿ ಪಠ್ಯ ಮುದ್ರಿಸುವುದಾಗಿ ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ಈ ವಿಷಯದಿಂದ ಜನರನ್ನು ಡೈವರ್ಟ್ ಮಾಡಲು ಯತ್ನಿಸಿದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಚಡ್ಡಿ ಕಳಿಸುವ ಅಭಿಯಾನ ಮಾಡಲು ಮುಂದಾಯಿತು. ಆದರೆ ದಲಿತರಿಗೆ ಚಡ್ಡಿ ಸಂಗ್ರಹಿಸುವ ಮತ್ತು ಚಡ್ಡಿ ಹೊರುವಂತೆ ಮಾಡುವ ಮೂಲಕ ಅದು ಮತ್ತೆ ಜಾತೀಯತೆ ಮೆರೆದು ಆ ಅಭಿಯಾನ ತನಗೆ ತಿರುಗುಬಾಣವಾಗುವಂತೆ ಮಾಡಿಕೊಂಡಿದೆ.

ಇದೆಲ್ಲ ಶುರುವಾಗಿದ್ದು ಹೀಗೆ..

ನಾಡಿನೆಲ್ಲೆಡೆ ಪಠ್ಯ ವಿವಾದ ತಾರಕಕ್ಕೇರಿತ್ತು. ತೀವ್ರ ವಿರೋಧವಿದ್ದರೂ ಸಹ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರ ಪರವಾಗಿ ವಾದಿಸಿದ್ದರು. ಹೋರಾಟನಿರತರನ್ನು ಹೀಯಾಳಿಸಿದ್ದರು. ಇದರಿಂದ ಕ್ರೋಧಗೊಂಡ NSUI ಕಾರ್ಯಕರ್ತರು ಜೂನ್ 01 ರಂದು ತಿಪಟೂರಿನ ನಾಗೇಶ್‌ರವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. RSS ಚಡ್ಡಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಸಿಎಂ, ಗೃಹಸಚಿವ ಎಲ್ಲರೂ ಖಂಡಿಸಿದ್ದರು. ತುಮಕೂರು ಸಂಸದ ಬಸವರಾಜುರವರು ಚಡ್ಡಿ ನಮ್ಮ ಬ್ರಾಂಡ್ ಅದನ್ನು ಸುಟ್ಟಿದ್ದು ತಪ್ಪು ಎಂದರು. NSUI ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 24 ಜನರ ವಿರುದ್ಧ FIR ದಾಖಲಿಸಿ ಬಂಧಿಸಲಾಯಿತು.

ಈ ಕುರಿತು ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ಒಂದು ಚಡ್ಡಿ ಸುಟ್ಟರೆ ಕೇಸ್ ಹಾಕಿ ಬಂಧಿಸುವುದಾದರೆ ತಾನೂ RSS ಚಡ್ಡಿ ಸುಡುವುದಾಗಿ ಘೋಷಿಸಿದ್ದರು. ಕಳೆದ ಒಂದು ತಿಂಗಳಿನಿಂದ ಆರ್‌ಎಸ್‌ಎಸ್‌ ವಿರುದ್ಧ ಸಮರ ಹೂಡಿರುವ ಅವರು #AryanRSS ಹ್ಯಾಷ್‌ಟ್ಯಾಗ್‌ ಅಡಿಯಲ್ಲಿ ಏಕೆ ಆರ್‌ಎಸ್‌ಎಸ್‌ನಲ್ಲಿ ದಲಿತರಿಗೆ ಮುಖ್ಯ ಸ್ಥಾನ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದರು. ಮುಂದುವರಿದು ಅದು ಭಯೋತ್ಪಾದಕ ಸಂಘಟನೆ, ಹಾಗಾಗಿ ಅದನ್ನು ಕಂಡರೆ ನನಗೆ ಭಯ ಎಂದಿದ್ದ ಅವರು ಆರ್ಯನ್ನರು ಈ ದೇಶದ ಮೂಲನಿವಾಸಿಗಳಲ್ಲ, ಬದಲಿಗೆ ಹೊರಗಿನಿಂದ ಬಂದವರು ಎಂದಿದ್ದರು. ಇದಕ್ಕೆ ಹಲವಾರು ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡಿದ್ದರು. ಆಗ ಮತ್ತೆ ಸಿದ್ದರಾಮಯ್ಯನವರು ನಾನು ಕೇಳಿದ್ದು RSSಗೆ. ಏಕೆ ಬಿಜೆಪಿ ನಾಯಕರು ಉತ್ತರಿಸುತ್ತೀರಿ? RSS ನಾಯಕರಿಗೆ ಅಷ್ಟು ಧೈರ್ಯವಿಲ್ಲವೆ ಎಂದು ಛೇಡಿಸಿದ್ದರು.

ಹೀಗೆ ಸಿದ್ದರಾಮಯ್ಯನವರು ಚಡ್ಡಿ ಸುಡುವುದಾಗಿ ಹೇಳಿದ್ದಕ್ಕೆ ಪ್ರತಿಯಾಗಿ ಬಿಜೆಪಿ ನಾವೇ ಹಳೆ ಚಡ್ಡಿ ಕಳಿಸುತ್ತೇವೆ ಎಂಬ ಅಭಿಯಾನ ಆರಂಭಿಸಿದರು. ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿಯವರು ಪತ್ರಿಕಾಗೋಷ್ಟಿ ನಡೆಸಿ “ಬಿಜೆಪಿ ಪರಿಶಿಷ್ಟ ಮೋರ್ಚಾದ ಕಾರ್ಯಕರ್ತರು ಚಡ್ಡಿಗಳನ್ನು ಸಂಗ್ರಹಿಸುತ್ತಾರೆ. ಅವುಗಳನ್ನು ಬಿಜೆಪಿ ಮುಖಂಡರು ಸಿದ್ದರಾಮಯ್ಯನವರಿಗೆ ಕಳಿಸಿಕೊಡುತ್ತಾರೆ” ಎಂದು ಹೇಳಿದ್ದರು. ಅಷ್ಟು ಮಾತ್ರವಲ್ಲದೇ ತಾವೇ ಚಡ್ಡಿಗಳ ಮೂಟೆಯನ್ನು ತಲೆಯ ಮೇಲೊತ್ತಿಕೊಂಡು ಪ್ರತಿಭಟನೆ ನಡೆಸಿದ್ದರು. ಆ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಕೊಳಕು ಚಡ್ಡಿಗಳನ್ನು ಸಂಗ್ರಹಿಸುವ, ಹೊರುವ ಕೆಲಸವನ್ನು ಬಿಜೆಪಿಯಲ್ಲಿನ ದಲಿತರು ಮಾತ್ರವೇ ಏಕೆ ಮಾಡಬೇಕು? ಬಿ.ಸಿ ನಾಗೇಶ್, ತೇಜಸ್ವಿ ಸೂರ್ಯ, ಸುರೇಶ್ ಕುಮಾರ್‌ರಂತಹ ಬ್ರಾಹ್ಮಣರೇಕೆ ಹೊರಬಾರದು ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು, “ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ” ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ. ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು “ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ” ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ. ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ” ಎಂದು ಹೇಳುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅದಲ್ಲದೆ ಹಲವಾರು ಜನರು “ತೇಜಸ್ವಿ ಸೂರ್ಯ, ಸಚಿವ ಬಿ.ಸಿ.ನಾಗೇಶ್ ಅಥವಾ ಸುರೇಶಕುಮಾರ್ ಚಡ್ಡಿ ತಲೆಮೇಲೆ ಹೊತ್ತು ಸಿದ್ಧರಾಮಯ್ಯ ವಿರುದ್ಧ ಪ್ರತಿಭಟಿಸುವುದಾದರೆ ಬಳಸಿದ ನಮ್ಮ ಹಳೆ ಚಡ್ಡಿ ಕೊಡಲು ನಾವೂ ಸಿದ್ಧ” ಎಂದು ಸವಾಲು ಹಾಕಿದರು. ಆದರೆ ಬಿಜೆಪಿ ಹಾಗೆ ಮಾಡಲೇ ಇಲ್ಲ…

“ಪಠ್ಯಪುಸ್ತಕ ಪರಿಷ್ಕರಣೆ – ಮೇಲ್ವರ್ಗದವರಿಗೆ. ಚಡ್ಡಿ ಹೊರುವ ಕೆಲಸ – ದಲಿತರಿಗೆ. ಇದು ಬಿಜೆಪಿಯ ಆಧುನಿಕ ಮನುಧರ್ಮ. ದಲಿತರೊಬ್ಬರು RSSನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಬಿನ್ನವೇನಲ್ಲ. ನಾರಾಯಣಸ್ವಾಮಿ ಅಣ್ಣ, ಅಂಬೇಡ್ಕರ್‌ರವರು ಶೋಷಿತರ ತಲೆಯ ಮೇಲೆ ಕಿರೀಟವನ್ನ ಕಾಣಬಯಸಿದ್ದರೇ ಹೊರತು ಚಡ್ಡಿಗಳನ್ನಲ್ಲ” ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿಯು ಪಠ್ಯಪುಸ್ತಕದಲ್ಲಿ ಅಂಬೇಡ್ಕರ್‌ ಕುರಿತ ಪಠ್ಯದಲ್ಲಿ ಬದಲಾವಣೆ ಮಾಡಿ ಸಂವಿಧಾನ ಶಿಲ್ಪಿ ಪದವನ್ನೇ ಕಿತ್ತು ಹಾಕಿದೆ. ಜೊತೆಗೆ ಅವರು ಬೌದ್ಧಧರ್ಮಕ್ಕೆ ಸೇರಿದ್ದು ಏಕೆಂಬ ಮಾಹಿತಿಯನ್ನು ತಿರುಚಲಾಗಿದೆ. ಹಲವಾರು ದಲಿತ ಲೇಖಕರ ಪಠ್ಯ ಕೈಬಿಟ್ಟಿದೆ. ಮತ್ತೊಂದು ಕಡೆ ದಲಿತರ ಮೇಲೆ ಹಳೆ ಚಡ್ಡಿಗಳನ್ನು ಹೊರಿಸುತ್ತಿದೆ. ಹೀಗೆ ನೇರನೇರಾ ವರ್ಣಾಶ್ರಮ ಪದ್ದತಿಯನ್ನು ಜಾರಿ ಮಾಡುತ್ತಿದೆ ಎಂಬ ಆರೋಪ ದಟ್ಟವಾಗಿದೆ.

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಈ ನಿಟ್ಟಿನಲ್ಲಿ ಪಠ್ಯಪುಸ್ತಕ ವಿವಾದದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಚಡ್ಡಿ ಕಳಿಸುವ ಅಭಿಯಾನ ಹಮ್ಮಿಕೊಂಡ ಬಿಜೆಪಿ ಅಲ್ಲಿಯೂ ಹಿನ್ನಡೆ ಅನುಭವಿಸಿದೆ. ನಾಲ್ವರು ಬಿಜೆಪಿ ಶಾಸಕರೆ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿದ್ದಾರೆ. ಎಲ್ಲಾ ಸಮುದಾಯದ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ತಾನು ಏನೂ ಬೇಕಾದರೆ ಮಾಡಿ ಜಯಿಸಿಕೊಳ್ಳಬಲ್ಲೆ ಎಂಬುದು ಸುಲಭದ ಮಾತಲ್ಲ ಎಂಬುದನ್ನು ಈ ಪ್ರಕರಣಗಳು ಸಾಬೀತು ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...