Homeಮುಖಪುಟಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

ಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

- Advertisement -
- Advertisement -

ಇತ್ತೀಚೆಗೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿ ಮೃತಪಟ್ಟವರಲ್ಲಿ ಭಾರತ ಮೂಲದ ಗುಜರಾತ್ ರಾಜ್ಯದವರು ಸೇರಿದ್ದಾರೆ. ಈ ಬಗ್ಗೆ ಭಾನುವಾರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕುಟುಂಬವೊಂದು ಖಚಿತಪಡಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅಮೆರಿಕಾ-ಕೆನಡಾ ಗಡಿಯ ನಡುವಿನ ಮೊಹಾಕ್ ಪ್ರದೇಶದ ಅಕ್ವೆಸಾಸ್ನೆಯಲ್ಲಿನ ಜವುಗು ಪ್ರದೇಶದಲ್ಲಿ ಎಂಟು ವ್ಯಕ್ತಿಗಳ ಶವಗಳು ಪತ್ತೆಯಾಗಿವೆ. ಅವರೆಲ್ಲರೂ ಪ್ರಯಾಣ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಬಗ್ಗೆ ಭಾನುವಾರ ಮೆಹ್ಸಾನಾದ ಮಾನೆಕ್‌ಪುರ್ ಗ್ರಾಮದ ನಿವಾಸಿ ಜಸುಭಾಯ್ ಚೌಧರಿ ಅವರು ಮಾಹಿತಿ ನೀಡಿದ್ದು, ”ತಮ್ಮ ಸಹೋದರ, ಸೊಸೆ ಮತ್ತು ಅವರ ಇಬ್ಬರು ಮಕ್ಕಳು ಎರಡು ತಿಂಗಳ ಹಿಂದೆ ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಹೋಗಿದ್ದರು. ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರು, ಸಂಪರ್ಕಕ್ಕೆ ಸಿಗುತ್ತಿಲ್ಲ. ಹಾಗಾಗಿ, ”ಅಲ್ಲಿ ಸಾವನ್ನಪ್ಪಿರುವವರು ನಮ್ಮ ಕುಟುಂಬದ ಸದಸ್ಯರು ಎಂಬ ಅನುಮಾನಕ್ಕೆ ಕಾರಣವಾಯಿತು” ಎಂದು ಚೌಧರಿ ಹೇಳಿದರು.

ಇದನ್ನೂ ಓದಿ: ವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

”ಕೆನಡಾದಲ್ಲಿ ನೆಲೆಸಿರುವ ಇತರ ಸಂಬಂಧಿಕರ ವಾಟ್ಸಾಪ್ ಗ್ರೂಪ್‌ಗಳಲ್ಲಿ ಸಾವನ್ನಪ್ಪಿರುವವರ ಹೆಸರು ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿತ್ತು. ಇದರಿಂದ ನಮ್ಮ ಅನುಮಾನ ದೃಢಪಟ್ಟಿದೆ” ಎಂದು ಅವರು ಹೇಳಿದರು.

ಕೆನಡಾಕ್ಕೆ ತೆರಳಿದ್ದ ತಮ್ಮ ಕುಟುಂಬದ ಬಗ್ಗೆ ಚೌಧರಿ ಮಾಹಿತಿ ನೀಡಿದ್ದು, ಪ್ರವೀಣ್ ಚೌಧರಿ (50), ಅವರ ಪತ್ನಿ ದೀಕ್ಷಾ (45), ಪುತ್ರ ಮೀತ್ (20) ಮತ್ತು ಪುತ್ರಿ ವಿಧಿ (24) ಎಂದು ತಿಳಿಸಿದ್ದಾರೆ.

ಪಿಟಿಐ ಪ್ರಕಾರ, ಮಾನೆಕ್‌ಪುರ ಗ್ರಾಮದ ಒಂದು ಕುಟುಂಬದ ನಾಲ್ವರು ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರು ನದಿ ದಾಟಲು ಪ್ರಯತ್ನಿಸಿದಾಗ ಮೃತಪಟ್ಟಿದ್ದಾರೆ ಎಂದು ಮೆಹ್ಸಾನಾ ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ”ಗ್ರಾಮಸ್ಥರು ತಮ್ಮ ದೇಹವನ್ನು ಮರಳಿ ತರಲು ಸಹಾಯ ಕೋರಿ ನಮ್ಮನ್ನು ಸಂಪರ್ಕಿಸಿದರು, ನಾವು ರಾಜ್ಯ ಸರ್ಕಾರಕ್ಕೆ ವರದಿ ಮಾಡಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇನ್ನು ಕೆನಡಾದ ಅಧಿಕಾರಿಗಳು ಪತ್ತೆಯಾದ ಶವಗಳ ಬಗ್ಗೆ ಮಾಹಿತಿ ನೀಡಿದ್ದು, ”ಆರು ವಯಸ್ಕರು ಮತ್ತು ಎರಡು ಕುಟುಂಬಗಳ ಇಬ್ಬರು ಮಕ್ಕಳು – ಒಂದು ಭಾರತೀಯ ಮತ್ತು ಇನ್ನೊಂದು ರೊಮೇನಿಯನ್ ಮೂಲದ ಕುಟುಂಬ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಗಡಿ ಪಟ್ಟಣವಾದ ಎಮರ್ಸನ್ ಬಳಿ ಅಲ್ಲಿಯ ಪೊಲೀಸರು ನಾಲ್ಕು ಭಾರತೀಯರ ಶವಗಳನ್ನು ಪತ್ತೆ ಮಾಡಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಅಮೆರಿಕ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಗುಜರಾತ್‌ನ ಹನ್ನೊಂದು ವ್ಯಕ್ತಿಗಳಲ್ಲಿ ಕುಟುಂಬವೂ ಸೇರಿದೆ. ಇತರ ಏಳು ಜನರನ್ನು ಅಮೆರಿಕ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...