Homeಮುಖಪುಟಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

ಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

- Advertisement -
- Advertisement -

ಇತ್ತೀಚೆಗೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿ ಮೃತಪಟ್ಟವರಲ್ಲಿ ಭಾರತ ಮೂಲದ ಗುಜರಾತ್ ರಾಜ್ಯದವರು ಸೇರಿದ್ದಾರೆ. ಈ ಬಗ್ಗೆ ಭಾನುವಾರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕುಟುಂಬವೊಂದು ಖಚಿತಪಡಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅಮೆರಿಕಾ-ಕೆನಡಾ ಗಡಿಯ ನಡುವಿನ ಮೊಹಾಕ್ ಪ್ರದೇಶದ ಅಕ್ವೆಸಾಸ್ನೆಯಲ್ಲಿನ ಜವುಗು ಪ್ರದೇಶದಲ್ಲಿ ಎಂಟು ವ್ಯಕ್ತಿಗಳ ಶವಗಳು ಪತ್ತೆಯಾಗಿವೆ. ಅವರೆಲ್ಲರೂ ಪ್ರಯಾಣ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಬಗ್ಗೆ ಭಾನುವಾರ ಮೆಹ್ಸಾನಾದ ಮಾನೆಕ್‌ಪುರ್ ಗ್ರಾಮದ ನಿವಾಸಿ ಜಸುಭಾಯ್ ಚೌಧರಿ ಅವರು ಮಾಹಿತಿ ನೀಡಿದ್ದು, ”ತಮ್ಮ ಸಹೋದರ, ಸೊಸೆ ಮತ್ತು ಅವರ ಇಬ್ಬರು ಮಕ್ಕಳು ಎರಡು ತಿಂಗಳ ಹಿಂದೆ ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಹೋಗಿದ್ದರು. ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರು, ಸಂಪರ್ಕಕ್ಕೆ ಸಿಗುತ್ತಿಲ್ಲ. ಹಾಗಾಗಿ, ”ಅಲ್ಲಿ ಸಾವನ್ನಪ್ಪಿರುವವರು ನಮ್ಮ ಕುಟುಂಬದ ಸದಸ್ಯರು ಎಂಬ ಅನುಮಾನಕ್ಕೆ ಕಾರಣವಾಯಿತು” ಎಂದು ಚೌಧರಿ ಹೇಳಿದರು.

ಇದನ್ನೂ ಓದಿ: ವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

”ಕೆನಡಾದಲ್ಲಿ ನೆಲೆಸಿರುವ ಇತರ ಸಂಬಂಧಿಕರ ವಾಟ್ಸಾಪ್ ಗ್ರೂಪ್‌ಗಳಲ್ಲಿ ಸಾವನ್ನಪ್ಪಿರುವವರ ಹೆಸರು ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿತ್ತು. ಇದರಿಂದ ನಮ್ಮ ಅನುಮಾನ ದೃಢಪಟ್ಟಿದೆ” ಎಂದು ಅವರು ಹೇಳಿದರು.

ಕೆನಡಾಕ್ಕೆ ತೆರಳಿದ್ದ ತಮ್ಮ ಕುಟುಂಬದ ಬಗ್ಗೆ ಚೌಧರಿ ಮಾಹಿತಿ ನೀಡಿದ್ದು, ಪ್ರವೀಣ್ ಚೌಧರಿ (50), ಅವರ ಪತ್ನಿ ದೀಕ್ಷಾ (45), ಪುತ್ರ ಮೀತ್ (20) ಮತ್ತು ಪುತ್ರಿ ವಿಧಿ (24) ಎಂದು ತಿಳಿಸಿದ್ದಾರೆ.

ಪಿಟಿಐ ಪ್ರಕಾರ, ಮಾನೆಕ್‌ಪುರ ಗ್ರಾಮದ ಒಂದು ಕುಟುಂಬದ ನಾಲ್ವರು ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರು ನದಿ ದಾಟಲು ಪ್ರಯತ್ನಿಸಿದಾಗ ಮೃತಪಟ್ಟಿದ್ದಾರೆ ಎಂದು ಮೆಹ್ಸಾನಾ ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ”ಗ್ರಾಮಸ್ಥರು ತಮ್ಮ ದೇಹವನ್ನು ಮರಳಿ ತರಲು ಸಹಾಯ ಕೋರಿ ನಮ್ಮನ್ನು ಸಂಪರ್ಕಿಸಿದರು, ನಾವು ರಾಜ್ಯ ಸರ್ಕಾರಕ್ಕೆ ವರದಿ ಮಾಡಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇನ್ನು ಕೆನಡಾದ ಅಧಿಕಾರಿಗಳು ಪತ್ತೆಯಾದ ಶವಗಳ ಬಗ್ಗೆ ಮಾಹಿತಿ ನೀಡಿದ್ದು, ”ಆರು ವಯಸ್ಕರು ಮತ್ತು ಎರಡು ಕುಟುಂಬಗಳ ಇಬ್ಬರು ಮಕ್ಕಳು – ಒಂದು ಭಾರತೀಯ ಮತ್ತು ಇನ್ನೊಂದು ರೊಮೇನಿಯನ್ ಮೂಲದ ಕುಟುಂಬ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಗಡಿ ಪಟ್ಟಣವಾದ ಎಮರ್ಸನ್ ಬಳಿ ಅಲ್ಲಿಯ ಪೊಲೀಸರು ನಾಲ್ಕು ಭಾರತೀಯರ ಶವಗಳನ್ನು ಪತ್ತೆ ಮಾಡಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಅಮೆರಿಕ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಗುಜರಾತ್‌ನ ಹನ್ನೊಂದು ವ್ಯಕ್ತಿಗಳಲ್ಲಿ ಕುಟುಂಬವೂ ಸೇರಿದೆ. ಇತರ ಏಳು ಜನರನ್ನು ಅಮೆರಿಕ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...