Homeಮುಖಪುಟಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

ಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

- Advertisement -
- Advertisement -

ಇತ್ತೀಚೆಗೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿ ಮೃತಪಟ್ಟವರಲ್ಲಿ ಭಾರತ ಮೂಲದ ಗುಜರಾತ್ ರಾಜ್ಯದವರು ಸೇರಿದ್ದಾರೆ. ಈ ಬಗ್ಗೆ ಭಾನುವಾರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕುಟುಂಬವೊಂದು ಖಚಿತಪಡಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅಮೆರಿಕಾ-ಕೆನಡಾ ಗಡಿಯ ನಡುವಿನ ಮೊಹಾಕ್ ಪ್ರದೇಶದ ಅಕ್ವೆಸಾಸ್ನೆಯಲ್ಲಿನ ಜವುಗು ಪ್ರದೇಶದಲ್ಲಿ ಎಂಟು ವ್ಯಕ್ತಿಗಳ ಶವಗಳು ಪತ್ತೆಯಾಗಿವೆ. ಅವರೆಲ್ಲರೂ ಪ್ರಯಾಣ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಬಗ್ಗೆ ಭಾನುವಾರ ಮೆಹ್ಸಾನಾದ ಮಾನೆಕ್‌ಪುರ್ ಗ್ರಾಮದ ನಿವಾಸಿ ಜಸುಭಾಯ್ ಚೌಧರಿ ಅವರು ಮಾಹಿತಿ ನೀಡಿದ್ದು, ”ತಮ್ಮ ಸಹೋದರ, ಸೊಸೆ ಮತ್ತು ಅವರ ಇಬ್ಬರು ಮಕ್ಕಳು ಎರಡು ತಿಂಗಳ ಹಿಂದೆ ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಹೋಗಿದ್ದರು. ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರು, ಸಂಪರ್ಕಕ್ಕೆ ಸಿಗುತ್ತಿಲ್ಲ. ಹಾಗಾಗಿ, ”ಅಲ್ಲಿ ಸಾವನ್ನಪ್ಪಿರುವವರು ನಮ್ಮ ಕುಟುಂಬದ ಸದಸ್ಯರು ಎಂಬ ಅನುಮಾನಕ್ಕೆ ಕಾರಣವಾಯಿತು” ಎಂದು ಚೌಧರಿ ಹೇಳಿದರು.

ಇದನ್ನೂ ಓದಿ: ವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

”ಕೆನಡಾದಲ್ಲಿ ನೆಲೆಸಿರುವ ಇತರ ಸಂಬಂಧಿಕರ ವಾಟ್ಸಾಪ್ ಗ್ರೂಪ್‌ಗಳಲ್ಲಿ ಸಾವನ್ನಪ್ಪಿರುವವರ ಹೆಸರು ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿತ್ತು. ಇದರಿಂದ ನಮ್ಮ ಅನುಮಾನ ದೃಢಪಟ್ಟಿದೆ” ಎಂದು ಅವರು ಹೇಳಿದರು.

ಕೆನಡಾಕ್ಕೆ ತೆರಳಿದ್ದ ತಮ್ಮ ಕುಟುಂಬದ ಬಗ್ಗೆ ಚೌಧರಿ ಮಾಹಿತಿ ನೀಡಿದ್ದು, ಪ್ರವೀಣ್ ಚೌಧರಿ (50), ಅವರ ಪತ್ನಿ ದೀಕ್ಷಾ (45), ಪುತ್ರ ಮೀತ್ (20) ಮತ್ತು ಪುತ್ರಿ ವಿಧಿ (24) ಎಂದು ತಿಳಿಸಿದ್ದಾರೆ.

ಪಿಟಿಐ ಪ್ರಕಾರ, ಮಾನೆಕ್‌ಪುರ ಗ್ರಾಮದ ಒಂದು ಕುಟುಂಬದ ನಾಲ್ವರು ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರು ನದಿ ದಾಟಲು ಪ್ರಯತ್ನಿಸಿದಾಗ ಮೃತಪಟ್ಟಿದ್ದಾರೆ ಎಂದು ಮೆಹ್ಸಾನಾ ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ”ಗ್ರಾಮಸ್ಥರು ತಮ್ಮ ದೇಹವನ್ನು ಮರಳಿ ತರಲು ಸಹಾಯ ಕೋರಿ ನಮ್ಮನ್ನು ಸಂಪರ್ಕಿಸಿದರು, ನಾವು ರಾಜ್ಯ ಸರ್ಕಾರಕ್ಕೆ ವರದಿ ಮಾಡಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇನ್ನು ಕೆನಡಾದ ಅಧಿಕಾರಿಗಳು ಪತ್ತೆಯಾದ ಶವಗಳ ಬಗ್ಗೆ ಮಾಹಿತಿ ನೀಡಿದ್ದು, ”ಆರು ವಯಸ್ಕರು ಮತ್ತು ಎರಡು ಕುಟುಂಬಗಳ ಇಬ್ಬರು ಮಕ್ಕಳು – ಒಂದು ಭಾರತೀಯ ಮತ್ತು ಇನ್ನೊಂದು ರೊಮೇನಿಯನ್ ಮೂಲದ ಕುಟುಂಬ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಗಡಿ ಪಟ್ಟಣವಾದ ಎಮರ್ಸನ್ ಬಳಿ ಅಲ್ಲಿಯ ಪೊಲೀಸರು ನಾಲ್ಕು ಭಾರತೀಯರ ಶವಗಳನ್ನು ಪತ್ತೆ ಮಾಡಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಅಮೆರಿಕ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಗುಜರಾತ್‌ನ ಹನ್ನೊಂದು ವ್ಯಕ್ತಿಗಳಲ್ಲಿ ಕುಟುಂಬವೂ ಸೇರಿದೆ. ಇತರ ಏಳು ಜನರನ್ನು ಅಮೆರಿಕ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....