Homeಮುಖಪುಟಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

ಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

- Advertisement -
- Advertisement -

ಇತ್ತೀಚೆಗೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿ ಮೃತಪಟ್ಟವರಲ್ಲಿ ಭಾರತ ಮೂಲದ ಗುಜರಾತ್ ರಾಜ್ಯದವರು ಸೇರಿದ್ದಾರೆ. ಈ ಬಗ್ಗೆ ಭಾನುವಾರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕುಟುಂಬವೊಂದು ಖಚಿತಪಡಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅಮೆರಿಕಾ-ಕೆನಡಾ ಗಡಿಯ ನಡುವಿನ ಮೊಹಾಕ್ ಪ್ರದೇಶದ ಅಕ್ವೆಸಾಸ್ನೆಯಲ್ಲಿನ ಜವುಗು ಪ್ರದೇಶದಲ್ಲಿ ಎಂಟು ವ್ಯಕ್ತಿಗಳ ಶವಗಳು ಪತ್ತೆಯಾಗಿವೆ. ಅವರೆಲ್ಲರೂ ಪ್ರಯಾಣ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಬಗ್ಗೆ ಭಾನುವಾರ ಮೆಹ್ಸಾನಾದ ಮಾನೆಕ್‌ಪುರ್ ಗ್ರಾಮದ ನಿವಾಸಿ ಜಸುಭಾಯ್ ಚೌಧರಿ ಅವರು ಮಾಹಿತಿ ನೀಡಿದ್ದು, ”ತಮ್ಮ ಸಹೋದರ, ಸೊಸೆ ಮತ್ತು ಅವರ ಇಬ್ಬರು ಮಕ್ಕಳು ಎರಡು ತಿಂಗಳ ಹಿಂದೆ ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಹೋಗಿದ್ದರು. ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರು, ಸಂಪರ್ಕಕ್ಕೆ ಸಿಗುತ್ತಿಲ್ಲ. ಹಾಗಾಗಿ, ”ಅಲ್ಲಿ ಸಾವನ್ನಪ್ಪಿರುವವರು ನಮ್ಮ ಕುಟುಂಬದ ಸದಸ್ಯರು ಎಂಬ ಅನುಮಾನಕ್ಕೆ ಕಾರಣವಾಯಿತು” ಎಂದು ಚೌಧರಿ ಹೇಳಿದರು.

ಇದನ್ನೂ ಓದಿ: ವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

”ಕೆನಡಾದಲ್ಲಿ ನೆಲೆಸಿರುವ ಇತರ ಸಂಬಂಧಿಕರ ವಾಟ್ಸಾಪ್ ಗ್ರೂಪ್‌ಗಳಲ್ಲಿ ಸಾವನ್ನಪ್ಪಿರುವವರ ಹೆಸರು ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿತ್ತು. ಇದರಿಂದ ನಮ್ಮ ಅನುಮಾನ ದೃಢಪಟ್ಟಿದೆ” ಎಂದು ಅವರು ಹೇಳಿದರು.

ಕೆನಡಾಕ್ಕೆ ತೆರಳಿದ್ದ ತಮ್ಮ ಕುಟುಂಬದ ಬಗ್ಗೆ ಚೌಧರಿ ಮಾಹಿತಿ ನೀಡಿದ್ದು, ಪ್ರವೀಣ್ ಚೌಧರಿ (50), ಅವರ ಪತ್ನಿ ದೀಕ್ಷಾ (45), ಪುತ್ರ ಮೀತ್ (20) ಮತ್ತು ಪುತ್ರಿ ವಿಧಿ (24) ಎಂದು ತಿಳಿಸಿದ್ದಾರೆ.

ಪಿಟಿಐ ಪ್ರಕಾರ, ಮಾನೆಕ್‌ಪುರ ಗ್ರಾಮದ ಒಂದು ಕುಟುಂಬದ ನಾಲ್ವರು ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರು ನದಿ ದಾಟಲು ಪ್ರಯತ್ನಿಸಿದಾಗ ಮೃತಪಟ್ಟಿದ್ದಾರೆ ಎಂದು ಮೆಹ್ಸಾನಾ ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ”ಗ್ರಾಮಸ್ಥರು ತಮ್ಮ ದೇಹವನ್ನು ಮರಳಿ ತರಲು ಸಹಾಯ ಕೋರಿ ನಮ್ಮನ್ನು ಸಂಪರ್ಕಿಸಿದರು, ನಾವು ರಾಜ್ಯ ಸರ್ಕಾರಕ್ಕೆ ವರದಿ ಮಾಡಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇನ್ನು ಕೆನಡಾದ ಅಧಿಕಾರಿಗಳು ಪತ್ತೆಯಾದ ಶವಗಳ ಬಗ್ಗೆ ಮಾಹಿತಿ ನೀಡಿದ್ದು, ”ಆರು ವಯಸ್ಕರು ಮತ್ತು ಎರಡು ಕುಟುಂಬಗಳ ಇಬ್ಬರು ಮಕ್ಕಳು – ಒಂದು ಭಾರತೀಯ ಮತ್ತು ಇನ್ನೊಂದು ರೊಮೇನಿಯನ್ ಮೂಲದ ಕುಟುಂಬ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಗಡಿ ಪಟ್ಟಣವಾದ ಎಮರ್ಸನ್ ಬಳಿ ಅಲ್ಲಿಯ ಪೊಲೀಸರು ನಾಲ್ಕು ಭಾರತೀಯರ ಶವಗಳನ್ನು ಪತ್ತೆ ಮಾಡಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಅಮೆರಿಕ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಗುಜರಾತ್‌ನ ಹನ್ನೊಂದು ವ್ಯಕ್ತಿಗಳಲ್ಲಿ ಕುಟುಂಬವೂ ಸೇರಿದೆ. ಇತರ ಏಳು ಜನರನ್ನು ಅಮೆರಿಕ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...