Homeಮುಖಪುಟಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

ಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

- Advertisement -
- Advertisement -

ಇತ್ತೀಚೆಗೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿ ಮೃತಪಟ್ಟವರಲ್ಲಿ ಭಾರತ ಮೂಲದ ಗುಜರಾತ್ ರಾಜ್ಯದವರು ಸೇರಿದ್ದಾರೆ. ಈ ಬಗ್ಗೆ ಭಾನುವಾರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕುಟುಂಬವೊಂದು ಖಚಿತಪಡಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅಮೆರಿಕಾ-ಕೆನಡಾ ಗಡಿಯ ನಡುವಿನ ಮೊಹಾಕ್ ಪ್ರದೇಶದ ಅಕ್ವೆಸಾಸ್ನೆಯಲ್ಲಿನ ಜವುಗು ಪ್ರದೇಶದಲ್ಲಿ ಎಂಟು ವ್ಯಕ್ತಿಗಳ ಶವಗಳು ಪತ್ತೆಯಾಗಿವೆ. ಅವರೆಲ್ಲರೂ ಪ್ರಯಾಣ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಬಗ್ಗೆ ಭಾನುವಾರ ಮೆಹ್ಸಾನಾದ ಮಾನೆಕ್‌ಪುರ್ ಗ್ರಾಮದ ನಿವಾಸಿ ಜಸುಭಾಯ್ ಚೌಧರಿ ಅವರು ಮಾಹಿತಿ ನೀಡಿದ್ದು, ”ತಮ್ಮ ಸಹೋದರ, ಸೊಸೆ ಮತ್ತು ಅವರ ಇಬ್ಬರು ಮಕ್ಕಳು ಎರಡು ತಿಂಗಳ ಹಿಂದೆ ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಹೋಗಿದ್ದರು. ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರು, ಸಂಪರ್ಕಕ್ಕೆ ಸಿಗುತ್ತಿಲ್ಲ. ಹಾಗಾಗಿ, ”ಅಲ್ಲಿ ಸಾವನ್ನಪ್ಪಿರುವವರು ನಮ್ಮ ಕುಟುಂಬದ ಸದಸ್ಯರು ಎಂಬ ಅನುಮಾನಕ್ಕೆ ಕಾರಣವಾಯಿತು” ಎಂದು ಚೌಧರಿ ಹೇಳಿದರು.

ಇದನ್ನೂ ಓದಿ: ವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

”ಕೆನಡಾದಲ್ಲಿ ನೆಲೆಸಿರುವ ಇತರ ಸಂಬಂಧಿಕರ ವಾಟ್ಸಾಪ್ ಗ್ರೂಪ್‌ಗಳಲ್ಲಿ ಸಾವನ್ನಪ್ಪಿರುವವರ ಹೆಸರು ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿತ್ತು. ಇದರಿಂದ ನಮ್ಮ ಅನುಮಾನ ದೃಢಪಟ್ಟಿದೆ” ಎಂದು ಅವರು ಹೇಳಿದರು.

ಕೆನಡಾಕ್ಕೆ ತೆರಳಿದ್ದ ತಮ್ಮ ಕುಟುಂಬದ ಬಗ್ಗೆ ಚೌಧರಿ ಮಾಹಿತಿ ನೀಡಿದ್ದು, ಪ್ರವೀಣ್ ಚೌಧರಿ (50), ಅವರ ಪತ್ನಿ ದೀಕ್ಷಾ (45), ಪುತ್ರ ಮೀತ್ (20) ಮತ್ತು ಪುತ್ರಿ ವಿಧಿ (24) ಎಂದು ತಿಳಿಸಿದ್ದಾರೆ.

ಪಿಟಿಐ ಪ್ರಕಾರ, ಮಾನೆಕ್‌ಪುರ ಗ್ರಾಮದ ಒಂದು ಕುಟುಂಬದ ನಾಲ್ವರು ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರು ನದಿ ದಾಟಲು ಪ್ರಯತ್ನಿಸಿದಾಗ ಮೃತಪಟ್ಟಿದ್ದಾರೆ ಎಂದು ಮೆಹ್ಸಾನಾ ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ”ಗ್ರಾಮಸ್ಥರು ತಮ್ಮ ದೇಹವನ್ನು ಮರಳಿ ತರಲು ಸಹಾಯ ಕೋರಿ ನಮ್ಮನ್ನು ಸಂಪರ್ಕಿಸಿದರು, ನಾವು ರಾಜ್ಯ ಸರ್ಕಾರಕ್ಕೆ ವರದಿ ಮಾಡಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇನ್ನು ಕೆನಡಾದ ಅಧಿಕಾರಿಗಳು ಪತ್ತೆಯಾದ ಶವಗಳ ಬಗ್ಗೆ ಮಾಹಿತಿ ನೀಡಿದ್ದು, ”ಆರು ವಯಸ್ಕರು ಮತ್ತು ಎರಡು ಕುಟುಂಬಗಳ ಇಬ್ಬರು ಮಕ್ಕಳು – ಒಂದು ಭಾರತೀಯ ಮತ್ತು ಇನ್ನೊಂದು ರೊಮೇನಿಯನ್ ಮೂಲದ ಕುಟುಂಬ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಗಡಿ ಪಟ್ಟಣವಾದ ಎಮರ್ಸನ್ ಬಳಿ ಅಲ್ಲಿಯ ಪೊಲೀಸರು ನಾಲ್ಕು ಭಾರತೀಯರ ಶವಗಳನ್ನು ಪತ್ತೆ ಮಾಡಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಅಮೆರಿಕ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಗುಜರಾತ್‌ನ ಹನ್ನೊಂದು ವ್ಯಕ್ತಿಗಳಲ್ಲಿ ಕುಟುಂಬವೂ ಸೇರಿದೆ. ಇತರ ಏಳು ಜನರನ್ನು ಅಮೆರಿಕ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...