Homeಕರ್ನಾಟಕಮುಸ್ಲಿಂ ಯುವತಿಗೆ ಕಿರುಕುಳ ಕೊಡುತ್ತಿದ್ದ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ: ಸಾಗರ ಬಂದ್‌ಗೆ ಕರೆ

ಮುಸ್ಲಿಂ ಯುವತಿಗೆ ಕಿರುಕುಳ ಕೊಡುತ್ತಿದ್ದ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ: ಸಾಗರ ಬಂದ್‌ಗೆ ಕರೆ

- Advertisement -
- Advertisement -

ಬಜರಂಗದಳ ಸಹ ಸಂಚಾಲಕ ಸುನೀಲ್ ಎಂಬಾತ 4 ತಿಂಗಳಿನಿಂದ ಮುಸ್ಲಿಂ ಯುವತಿಗೆ ಕಿರುಕುಳ ನೀಡುತ್ತಿದ್ದರಿಂದ ಸಿಟ್ಟಿಗೆದ್ದ ಯುವತಿಯ ಅಣ್ಣ ಮಾರಕಾಸ್ತ್ರಗಳಿಂದ ಹಲ್ಲೆಗೆ ಮುಂದಾಗಿರುವ ಘಟನೆ ಸಾಗರ ಪಟ್ಟಣದಲ್ಲಿ ಜರುಗಿದೆ.

ಸಾಗರದ ಬಿ.ಎಚ್ ರಸ್ತೆಯಲ್ಲಿ ಸುನೀಲ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸಮೀರ್ ಮತ್ತು ಆತನ ಇಬ್ಬರು ಸ್ನೇಹಿತರು ಹಲ್ಲೆಗೆ ಯತ್ನಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ಸುನೀಲ್ ತಪ್ಪಿಸಿಕೊಂಡಿದ್ದಾನೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಎಸ್‌ಪಿ ಮಿಥುನ್ ಕುಮಾರ್, “ಇದು ವಯಕ್ತಿಕ ಕಾರಣಗಳಿಂದ ನಡೆದ ಘಟನೆಯಾಗಿದೆ. ದೂರುದಾರ ಸುನೀಲ್ ನಾಲ್ಕೈದು ತಿಂಗಳಿನಿಂದ ಆರೋಪಿ ಸಮೀತ್ ತಂಗಿಯನ್ನು ಚುಡಾಯಿಸುತ್ತಿದ್ದ ಎಂದು ಕಂಡುಬಂದಿದೆ. ಸಮೀರ್ ಎರಡು ಮೂರು ಬಾರಿ ನನ್ನ ತಂಗಿಯ ತಂಟೆಗೆ ಬರಬೇಡಿ ಎಂದು ಎಚ್ಚರಿಕೆ ಕೂಡ ನೀಡಿದ್ದಾನೆ. ಆದರೆ ಸುನೀಲ್ ನಿನ್ನ ತಂಗಿಯ ನಂಬರ್ ಕೊಡು ಎಂದು ಸಮೀರ್‌ ಜೊತೆ ಮಾತನಾಡಿರುವ ಕಾಲ್ ರೆಕಾರ್ಡ್‌ಗಳನ್ನು ನಾವು ಪರೀಶಿಲಿಸಿದ್ದೇವೆ” ಎಂದಿದ್ದಾರೆ.

ಆದರೆ ಸುನೀಲ್ ಸಮೀರ್ ಮಾತನ್ನು ಕೇಳಿಲ್ಲ. ನಿನ್ನೆ ಕೂಡ ಮೇಕೆ ಕಾಯುತ್ತಿದ್ದ ಸಮೀರ್ ಹುಲ್ಲು ಕತ್ತರಿಸಲು ಇಟ್ಟುಕೊಂಡಿದ್ದ ಮಚ್ಚಿನಿಂದ ಸುನೀಲ್ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಇದು ತಪ್ಪು. ಏಕೆಂದರೆ ಯಾವುದೇ ಸಮಸ್ಯೆ ಕಂಡು ಬಂದರೆ ಪೊಲೀಸ್ ಗಮನಕ್ಕೆ ತರಬೇಕೆ ಹೊರತು, ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮಿಥುನ್ ಕುಮಾರ್ ತಿಳಿಸಿದ್ದಾರೆ.

ಆರೋಪಿ ಸಮೀರ್ ತಂಗಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ನಮ್ಮ ಸಾಗರಲ್ಲಿ ಹಿಜಾಬ್ ಗಲಾಟೆ ಆರಂಭವಾದ ನಂತರ ಜಗಳವಾಗಿತ್ತು. ನಾನು ಕಾಲೇಜಿಗೆ ಹೋಗುತ್ತಿದ್ದಾಗ ಸುನೀಲ್ ಎಂಬಾತ ನನ್ನನ್ನು ಹಿಂಬಾಲಿಸುತ್ತಿದ್ದ. ಹಿಜಾಬ್ ತೆಗಿ, ಬುರ್ಖ ತೆಗಿ ಎಂದು ಪೀಡಿಸುತ್ತಿದ್ದ. ಮತಾಂತರವಾಗು ಎಂದು ಚುಡಾಯಿಸುತ್ತಿದ್ದ. ಇದನ್ನು ನಾನು ನಮ್ಮ ಕುಟುಂಬದವರ ಬಳಿ ಹೇಳಿದ್ದೆ. ಹಾಗಾಗಿ ನಮ್ಮ ಅಣ್ಣ ಆತನಿಗೆ ಹೆದರಿಸಲು ಹೋಗಿರಬೇಕು ಅಷ್ಟೆ. ನಮ್ಮ ಅಣ್ಣ ಕೊಲ್ಲಲು ಹೋಗಿಲ್ಲ. ಅವನನ್ನು ದಯವಿಟ್ಟು ಬಿಟ್ಟುಬಿಡಿ” ಎಂದು ಮನವಿ ಮಾಡಿದ್ದಾರೆ.

ಈ ನಡುವೆ ಬಜರಂಗದಳ ಕಾರ್ಯಕರ್ತನ ಹಲ್ಲೆಗೆ ಯತ್ನಿಸಿರುವುದನ್ನು ಖಂಡಿಸಿ ಬಲಪಂಥೀಯ ಸಂಘಟನೆಗಳು ಸಾಗರ ಬಂದ್ ಹೋರಾಟಕ್ಕೆ ಕರೆ ನೀಡಿವೆ. ಸಾಗರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಸುನೀಲ್  ಮನೆಗೆ ಭೇಟಿ ನೀಡಿದ್ದಾರೆ. ಕೆಲವೆಡೆ ಸ್ವಯಂ ಪ್ರೇರಿತವಾಗಿ ಅಂಗಡಿ ಮುಚ್ಚಿದರೆ ಕೆಲವೆಡೆ ಅಂಗಡಿ ಮುಚ್ಚಲು ವ್ಯಾಪರಸ್ಥರು ನಿರಾಕರಿಸಿದ್ದಾರೆದ. ಆಗ ಬಜರಂಗದಳ ಕಾರ್ಯಕರ್ತರು ಮತ್ತು ಅಂಗಡಿ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಇದನ್ನೂ ಓದಿ: ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...