Homeಮುಖಪುಟಸಿಜೆಐ ಗವಾಯಿ ಮೇಲೆ ದಾಳಿಗೆ ಯತ್ನ; ವಕೀಲನ ಮನೆ ಹೊರಗೆ ಪ್ರತಿಭಟನೆ

ಸಿಜೆಐ ಗವಾಯಿ ಮೇಲೆ ದಾಳಿಗೆ ಯತ್ನ; ವಕೀಲನ ಮನೆ ಹೊರಗೆ ಪ್ರತಿಭಟನೆ

- Advertisement -
- Advertisement -

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಯತ್ನದ ನಂತರ, ಎಎಪಿ ನಾಯಕ ಸೌರಭ್ ಭಾರದ್ವಾಜ್ ನೇತೃತ್ವದಲ್ಲಿ ದಲಿತ ಗುಂಪುಗಳು ಮತ್ತು ಪಕ್ಷದ ನಾಯಕರು ವಕೀಲ ರಾಕೇಶ್ ಕಿಶೋರ್ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ಭಾವಚಿತ್ರ ಹಿಡಿದಿದ್ದ ಪ್ರತಿಭಟನಾಕಾರರು, ಶೂಗಳ ಹಾರದೊಂದಿಗೆ ವಕೀಲನ ವಿರುದ್ಧ ಘೋಷಣೆ ಕೂಗಿದರು. ‘ಜೈ ಭೀಮ್’ ಮತ್ತು ‘ಸಿಜೆಐ ಕಾ ಅಪ್ಮಾನ್ ನಹಿ ಸಹೇಗಾ ಹಿಂದೂಸ್ತಾನ್’ ಎಂದು ಘೋಷಣೆಗಳನ್ನು ಕೂಗುತ್ತಾ ವಕೀಲ ರಾಕೇಶ್ ಕಿಶೋರ್ ವಿಹಾರದ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ಕಿಶೋರ್ ವಿರುದ್ಧ ಎಫ್‌ಐಆರ್ ಮತ್ತು ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ವಕೀಲರ ಸಂಘವು ಸುಪ್ರೀಂ ಕೋರ್ಟ್ ಆವರಣದಲ್ಲಿ ಮೆರವಣಿಗೆ ನಡೆಸಿತು.

ಸುಪ್ರೀಂ ಕೋರ್ಟ್ ವಕೀಲನಾದ ರಾಕೇಶ್ ಕಿಶೋರ್, ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದರು. ಶಿರಚ್ಛೇದಿತ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಸಲ್ಲಿಸಿದ ಅರ್ಜಿಯನ್ನು ಗವಾಯಿ ಅವರು ವಜಾಗೊಳಿಸಿದ್ದರಿಂದ ಕೋಪಗೊಂಡ ಆತ, “ಸನಾತನ ಧರ್ಮದ ಮೇಲಿನ ಅವಮಾನ ಸಹಿಸುವುದಿಲ್ಲ” ಬಂಧನದ ಸಮಯದಲ್ಲಿ ಕಿರುಚಾಡಿದ್ದ.

ಭಾರತೀಯ ವಕೀಲರ ಮಂಡಳಿಯು ಕಿಶೋರ್ ಅವರ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ಈ ಕೃತ್ಯವನ್ನು ಖಂಡಿಸಿದರು, ಸಿಜೆಐ ಅವರ ಶಾಂತ ಪ್ರತಿಕ್ರಿಯೆಯನ್ನು ಶ್ಲಾಘಿಸಿದರು.

“ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಜಿ ಅವರೊಂದಿಗೆ ಮಾತನಾಡಿದೆ. ಇಂದು ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳಿಗೆ ಸ್ಥಳವಿಲ್ಲ. ಇದು ಸಂಪೂರ್ಣವಾಗಿ ಖಂಡನೀಯ. ಅಂತಹ ಪರಿಸ್ಥಿತಿಯನ್ನು ಎದುರಿಸುವಾಗ ನ್ಯಾಯಮೂರ್ತಿ ಗವಾಯಿ ಅವರು ಪ್ರದರ್ಶಿಸಿದ ಶಾಂತತೆಯನ್ನು ನಾನು ಮೆಚ್ಚುತ್ತೇನೆ. ಇದು ನ್ಯಾಯದ ಮೌಲ್ಯಗಳಿಗೆ ಮತ್ತು ನಮ್ಮ ಸಂವಿಧಾನದ ಚೈತನ್ಯವನ್ನು ಬಲಪಡಿಸಲು ಅವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಕೋರ್ಟ್ ಸಂಖ್ಯೆ 1 ರಲ್ಲಿ ನಿನ್ನೆ ಬೆಳಿಗ್ಗೆ 11:35 ಕ್ಕೆ 71 ವರ್ಷದ ಕಿಶೋರ್ ಪೀಠದ ಬಳಿ ಬಂದು, ತಮ್ಮ ಕ್ರೀಡಾ ಶೂ ತೆಗೆದು, ಸಿಜೆಐ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರತ್ತ ಎಸೆದ ಘಟನೆ ನಡೆಯಿತು. ಭದ್ರತಾ ಸಿಬ್ಬಂದಿ ಕ್ಷಿಪ್ರವಾಗಿ ಮಧ್ಯಪ್ರವೇಶಿಸಿ, ಕಿಶೋರ್ ಅವರನ್ನು ತಡೆದು, ಘೋಷಣೆಗಳನ್ನು ಕೂಗುತ್ತಲೇ ಅವರನ್ನು ಹೊರಗೆ ಕರೆದೊಯ್ದರು.

ಉಲ್ಲಂಘನೆಯ ಹೊರತಾಗಿಯೂ, ಸಿಜೆಐ ಗವಾಯಿ ಎಲ್ಲರೂ ಅಡಚಣೆಯನ್ನು ‘ನಿರ್ಲಕ್ಷಿಸಬೇಕೆಂದು’ ಹೇಳಿದರು. “ಈ ವಿಷಯಗಳು ನನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ಹೇಳುವ ಮೂಲಕ ತಮ್ಮ ದಿನದ ಪ್ರಕರಣಗಳನ್ನು ಮುಂದುವರೆಸಿದರು.

ಮಂಗಳವಾರ, ದಲಿತ ಸಂಘಟನೆಗಳ ಕಾರ್ಯಕರ್ತರು ಮತ್ತು ಎಎಪಿ ಸದಸ್ಯರು ಕಿಶೋರ್ ಅವರ ಮಯೂರ್ ವಿಹಾರ್ ಅಪಾರ್ಟ್ಮೆಂಟ್ ಹೊರಗೆ ಜಮಾಯಿಸಿದರು, ಅಲ್ಲಿ ಪೊಲೀಸರು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬ್ಯಾರಿಕೇಡ್ ಹಾಕಿದ್ದರು.

ಭಾರತದ ಎರಡನೇ ದಲಿತ ನ್ಯಾಯಾಂಗ ಮುಖ್ಯಸ್ಥರಾದ ಸಿಜೆಐ ಗವಾಯಿ ಅವರಿಗೆ ಒಗ್ಗಟ್ಟಿನಿಂದ ಎಎಪಿ ದೆಹಲಿ ಅಧ್ಯಕ್ಷ ಸೌರಭ್ ಭಾರದ್ವಾಜ್ ನೇತೃತ್ವದಲ್ಲಿ ‘ಹಲ್ಲಾ ಬೋಲ್’ ಮತ್ತು ‘ಜೈ ಭೀಮ್’ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳು ಮತ್ತು ಶೂಗಳ ಸಾಂಕೇತಿಕ ಹಾರಗಳನ್ನು ಹಿಡಿದುಕೊಂಡು ಆಕ್ರೋಶ ಹೊರಹಾಕಿದರು.

ಏಕಕಾಲದಲ್ಲಿ, ಅಖಿಲ ಭಾರತ ವಕೀಲರ ಸಂಘವು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಭಟನೆ ನಡೆಸಿ, ದಾಳಿಯನ್ನು ‘ಸಂವಿಧಾನದ ಮೇಲಿನ ದಾಳಿ’ ಎಂದು ಕರೆಯಿತು. ಕಿಶೋರ್ ವಿರುದ್ಧ ಔಪಚಾರಿಕ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ, ಆತನ ವಿರುದ್ಧ ನ್ಯಾಯಾಂಗ ನಿಂದನೆ ಆರೋಪಗಳನ್ನು ಮಾಡಿತು.

ಸಿಜೆಐ ಮೇಲೆ ದಾಳಿ: ಬಲಪಂಥೀಯ ಪ್ರಚೋದನೆಯ ಫಲಿತಾಂಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...