Homeಮುಖಪುಟಸಿಜೆಐ ಗವಾಯಿ ಮೇಲೆ ದಾಳಿಗೆ ಯತ್ನ; ವಕೀಲನ ಮನೆ ಹೊರಗೆ ಪ್ರತಿಭಟನೆ

ಸಿಜೆಐ ಗವಾಯಿ ಮೇಲೆ ದಾಳಿಗೆ ಯತ್ನ; ವಕೀಲನ ಮನೆ ಹೊರಗೆ ಪ್ರತಿಭಟನೆ

- Advertisement -
- Advertisement -

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಯತ್ನದ ನಂತರ, ಎಎಪಿ ನಾಯಕ ಸೌರಭ್ ಭಾರದ್ವಾಜ್ ನೇತೃತ್ವದಲ್ಲಿ ದಲಿತ ಗುಂಪುಗಳು ಮತ್ತು ಪಕ್ಷದ ನಾಯಕರು ವಕೀಲ ರಾಕೇಶ್ ಕಿಶೋರ್ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ಭಾವಚಿತ್ರ ಹಿಡಿದಿದ್ದ ಪ್ರತಿಭಟನಾಕಾರರು, ಶೂಗಳ ಹಾರದೊಂದಿಗೆ ವಕೀಲನ ವಿರುದ್ಧ ಘೋಷಣೆ ಕೂಗಿದರು. ‘ಜೈ ಭೀಮ್’ ಮತ್ತು ‘ಸಿಜೆಐ ಕಾ ಅಪ್ಮಾನ್ ನಹಿ ಸಹೇಗಾ ಹಿಂದೂಸ್ತಾನ್’ ಎಂದು ಘೋಷಣೆಗಳನ್ನು ಕೂಗುತ್ತಾ ವಕೀಲ ರಾಕೇಶ್ ಕಿಶೋರ್ ವಿಹಾರದ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ಕಿಶೋರ್ ವಿರುದ್ಧ ಎಫ್‌ಐಆರ್ ಮತ್ತು ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ವಕೀಲರ ಸಂಘವು ಸುಪ್ರೀಂ ಕೋರ್ಟ್ ಆವರಣದಲ್ಲಿ ಮೆರವಣಿಗೆ ನಡೆಸಿತು.

ಸುಪ್ರೀಂ ಕೋರ್ಟ್ ವಕೀಲನಾದ ರಾಕೇಶ್ ಕಿಶೋರ್, ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದರು. ಶಿರಚ್ಛೇದಿತ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಸಲ್ಲಿಸಿದ ಅರ್ಜಿಯನ್ನು ಗವಾಯಿ ಅವರು ವಜಾಗೊಳಿಸಿದ್ದರಿಂದ ಕೋಪಗೊಂಡ ಆತ, “ಸನಾತನ ಧರ್ಮದ ಮೇಲಿನ ಅವಮಾನ ಸಹಿಸುವುದಿಲ್ಲ” ಬಂಧನದ ಸಮಯದಲ್ಲಿ ಕಿರುಚಾಡಿದ್ದ.

ಭಾರತೀಯ ವಕೀಲರ ಮಂಡಳಿಯು ಕಿಶೋರ್ ಅವರ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ಈ ಕೃತ್ಯವನ್ನು ಖಂಡಿಸಿದರು, ಸಿಜೆಐ ಅವರ ಶಾಂತ ಪ್ರತಿಕ್ರಿಯೆಯನ್ನು ಶ್ಲಾಘಿಸಿದರು.

“ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಜಿ ಅವರೊಂದಿಗೆ ಮಾತನಾಡಿದೆ. ಇಂದು ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳಿಗೆ ಸ್ಥಳವಿಲ್ಲ. ಇದು ಸಂಪೂರ್ಣವಾಗಿ ಖಂಡನೀಯ. ಅಂತಹ ಪರಿಸ್ಥಿತಿಯನ್ನು ಎದುರಿಸುವಾಗ ನ್ಯಾಯಮೂರ್ತಿ ಗವಾಯಿ ಅವರು ಪ್ರದರ್ಶಿಸಿದ ಶಾಂತತೆಯನ್ನು ನಾನು ಮೆಚ್ಚುತ್ತೇನೆ. ಇದು ನ್ಯಾಯದ ಮೌಲ್ಯಗಳಿಗೆ ಮತ್ತು ನಮ್ಮ ಸಂವಿಧಾನದ ಚೈತನ್ಯವನ್ನು ಬಲಪಡಿಸಲು ಅವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಕೋರ್ಟ್ ಸಂಖ್ಯೆ 1 ರಲ್ಲಿ ನಿನ್ನೆ ಬೆಳಿಗ್ಗೆ 11:35 ಕ್ಕೆ 71 ವರ್ಷದ ಕಿಶೋರ್ ಪೀಠದ ಬಳಿ ಬಂದು, ತಮ್ಮ ಕ್ರೀಡಾ ಶೂ ತೆಗೆದು, ಸಿಜೆಐ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರತ್ತ ಎಸೆದ ಘಟನೆ ನಡೆಯಿತು. ಭದ್ರತಾ ಸಿಬ್ಬಂದಿ ಕ್ಷಿಪ್ರವಾಗಿ ಮಧ್ಯಪ್ರವೇಶಿಸಿ, ಕಿಶೋರ್ ಅವರನ್ನು ತಡೆದು, ಘೋಷಣೆಗಳನ್ನು ಕೂಗುತ್ತಲೇ ಅವರನ್ನು ಹೊರಗೆ ಕರೆದೊಯ್ದರು.

ಉಲ್ಲಂಘನೆಯ ಹೊರತಾಗಿಯೂ, ಸಿಜೆಐ ಗವಾಯಿ ಎಲ್ಲರೂ ಅಡಚಣೆಯನ್ನು ‘ನಿರ್ಲಕ್ಷಿಸಬೇಕೆಂದು’ ಹೇಳಿದರು. “ಈ ವಿಷಯಗಳು ನನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ಹೇಳುವ ಮೂಲಕ ತಮ್ಮ ದಿನದ ಪ್ರಕರಣಗಳನ್ನು ಮುಂದುವರೆಸಿದರು.

ಮಂಗಳವಾರ, ದಲಿತ ಸಂಘಟನೆಗಳ ಕಾರ್ಯಕರ್ತರು ಮತ್ತು ಎಎಪಿ ಸದಸ್ಯರು ಕಿಶೋರ್ ಅವರ ಮಯೂರ್ ವಿಹಾರ್ ಅಪಾರ್ಟ್ಮೆಂಟ್ ಹೊರಗೆ ಜಮಾಯಿಸಿದರು, ಅಲ್ಲಿ ಪೊಲೀಸರು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬ್ಯಾರಿಕೇಡ್ ಹಾಕಿದ್ದರು.

ಭಾರತದ ಎರಡನೇ ದಲಿತ ನ್ಯಾಯಾಂಗ ಮುಖ್ಯಸ್ಥರಾದ ಸಿಜೆಐ ಗವಾಯಿ ಅವರಿಗೆ ಒಗ್ಗಟ್ಟಿನಿಂದ ಎಎಪಿ ದೆಹಲಿ ಅಧ್ಯಕ್ಷ ಸೌರಭ್ ಭಾರದ್ವಾಜ್ ನೇತೃತ್ವದಲ್ಲಿ ‘ಹಲ್ಲಾ ಬೋಲ್’ ಮತ್ತು ‘ಜೈ ಭೀಮ್’ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳು ಮತ್ತು ಶೂಗಳ ಸಾಂಕೇತಿಕ ಹಾರಗಳನ್ನು ಹಿಡಿದುಕೊಂಡು ಆಕ್ರೋಶ ಹೊರಹಾಕಿದರು.

ಏಕಕಾಲದಲ್ಲಿ, ಅಖಿಲ ಭಾರತ ವಕೀಲರ ಸಂಘವು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಭಟನೆ ನಡೆಸಿ, ದಾಳಿಯನ್ನು ‘ಸಂವಿಧಾನದ ಮೇಲಿನ ದಾಳಿ’ ಎಂದು ಕರೆಯಿತು. ಕಿಶೋರ್ ವಿರುದ್ಧ ಔಪಚಾರಿಕ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ, ಆತನ ವಿರುದ್ಧ ನ್ಯಾಯಾಂಗ ನಿಂದನೆ ಆರೋಪಗಳನ್ನು ಮಾಡಿತು.

ಸಿಜೆಐ ಮೇಲೆ ದಾಳಿ: ಬಲಪಂಥೀಯ ಪ್ರಚೋದನೆಯ ಫಲಿತಾಂಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...