Homeಮುಖಪುಟನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ...

ನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

- Advertisement -
- Advertisement -

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಸಂಪಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಮಾನವ ಹಕ್ಕುಗಳ ಹೋರಾಟಗಾರ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಮ್ ಖಾನ್ ಅವರನ್ನು ಬಂಧಿಸಲು ಬೆಂಗಳೂರಿಗೆ ಆಗಮಿಸಿರುವ ದೆಹಲಿ ಪೊಲೀಸರು, ಸ್ಥಳೀಯ ಪೊಲೀಸರ ಗಮನಕ್ಕೆ ತರದೆ ಅಕ್ರಮವಾಗಿ ಬಂಧಿಸಲು ಯತ್ನಿಸಿರುವ ಘಟನೆ ನ.30ರ ಸಂಜೆ ನಡೆದಿತ್ತು.

ಈ ಬಗ್ಗೆ ದೆಹಲಿ ಪೊಲೀಸರ ವಿರುದ್ಧ ನದೀಮ್ ಖಾನ್ ಕುಟುಂಬಸ್ಥರು ಕೂಡಲೇ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

“ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ಮನೆಗೆ ನುಗ್ಗಿದರು. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನದೀಮ್ ಖಾನ್ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ಹೇಳಿದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

“ದೆಹಲಿ ಪೊಲೀಶರು ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಮ್‌ನನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

“ಎಫ್ಐಆರ್‌ನಲ್ಲಿ ದಾಖಲಿಸಿಕೊಂಡಿರುವ ಎಲ್ಲ ಸೆಕ್ಷನ್‌ನ ಅಪರಾಧಗಳಿಗೆ ಮೂರು ವರ್ಷಗಳಿಗಿಂತ ಕಡಿಮೆಯಿರುವ ಶಿಕ್ಷೆಗಳಾಗಿದೆ. ಆದ್ದರಿಂದ ಇದಕ್ಕೆಲ್ಲ ನೋಟಿಸ್ ನೀಡಬೇಕಿದೆ. ಅದ್ಯಾವುದನ್ನೂ ದೆಹಲಿ ಪೊಲೀಸರು ಪಾಲಿಸಿಲ್ಲ. ಈ ಎಫ್‌ಐಆರ್ ದಾಖಲಾಗುವುದಕ್ಕೂ ಮೊದಲು, ನವೆಂಬರ್ 29ರ ತಡರಾತ್ರಿ ದೆಹಲಿಯಲ್ಲಿರುವ ಎಪಿಸಿಆರ್ ಕಚೇರಿಗೆ 20 ಪೊಲೀಸ್ ಅಧಿಕಾರಿಗಳು ನುಗ್ಗಲು ಪ್ರಯತ್ನಿಸಿದ್ದಾರೆ. ನದೀಮ್ ಮತ್ತು ನನಗೆ ಪೊಲೀಸರು ಮಾನಸಿಕ ಹಿಂಸೆ ನೀಡಿ, ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಬೆದರಿಕೆ, ಅತಿಕ್ರಮಣ, ಅಧಿಕಾರದ ದುರುಪಯೋಗ ನಡೆಸಿದ ದೆಹಲಿ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೀವಕ್ಕೆ ಅಪಾಯವಾಗದಂತೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗದಂತೆ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ದೂರಿನಲ್ಲಿ ನದೀಮ್ ಖಾನ್ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಮಾತನಾಡಿರುವ ಎಪಿಸಿಆರ್ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್ ಅಹ್ಮದ್, “ದೆಹಲಿ ಪೊಲೀಸರು ಈಗ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಬಂಧನಕ್ಕೂ ಮೊದಲು ನೋಟಿಸ್ ನೀಡಬೇಕಿದೆ. ಅಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಕೂಡ ಇದೆ. ಇದು ಯಾವುದನ್ನೂ ಅನುಸರಿಸದೆ, ಅಕ್ರಮ ಬಂಧನಕ್ಕೆ ಯತ್ನಿಸಿದ್ದಾರೆ. ಮನೆಗೆ ಬಂದವರ ಬಳಿಯಲ್ಲಿ ಐಡಿ ಕಾರ್ಡ್‌ ಕೂಡ ಇರಲಿಲ್ಲ. ಅಲ್ಲದೇ, ಯಾವುದೇ ಮಾಹಿತಿ ನೀಡದೆ ಮನೆಗೆ ನುಗ್ಗಿದ್ದಾರೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಅತಿಕ್ರಮಣ ಪ್ರವೇಶ ಮಾಡಿ, ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ಕುಟುಂಬಸ್ಥರು ದೂರು ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

“ನದೀಮ್ ಖಾನ್ ‘ದ್ವೇಷದ ವಿರುದ್ಧ ಒಂದಾದ ನಾವೆಲ್ಲರೂ’ ಎಂಬ ಸಂಘಟನೆಯ ಪದಾಧಿಕಾರಿಯಾಗಿದ್ದು, ಭಾರತ್ ಜೋಡೋ‌ ಅಭಿಯಾನದ ರಾಷ್ಟ್ರೀಯ ಪದಾಧಿಕಾರಿಯೂ ಆಗಿದ್ದಾರೆ. ಅವರನ್ನು ದುರುದ್ದೇಶಪೂರ್ವಕವಾಗಿ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿರುವುದು ಸ್ಪಷ್ಟ” ಎಂದು ಜಾಗೃತ ಕರ್ನಾಟಕದ ಡಾ.ವಾಸು ಎಚ್ ವಿ ಅವರು ಹೇಳಿದ್ದಾರೆ ಎಂದು ‘ಈದಿನ.ಕಾಮ್‌’ ವರದಿ ಮಾಡಿದೆ.

ದೆಹಲಿ ಪೊಲೀಸರು ಇನ್ನಷ್ಟು ಕುಖ್ಯಾತಿ ಪಡೆಯುವ ಮೊದಲು ನ್ಯಾಯಾಲಯಗಳು ಮಧ್ಯೆ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಪೊಲೀಸರು ಕಾನೂನು ಪಾಲಿಸದೇ ಈ ರೀತಿ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ, ಕಾನೂನಿನ ಕುರಿತು ಜನರಿಗೆ ವಿಶ್ವಾಸ ಕುಂದುತ್ತದೆ. ನದೀಮ್ ಖಾನ್ ವಿಚಾರದಲ್ಲಿ ದೆಹಲಿ ಪೊಲೀಸರು ನಡೆದುಕೊಂಡಿರುವ ರೀತಿಯೇ ಸರಿ ಇಲ್ಲ. ಅನುಮಾನ ಉಂಟು ಮಾಡುವಂಥದ್ದು. ಈ ಹಿಂದೆ ದಿಶಾ ರವಿಯವರ ಪ್ರಕರಣದಲ್ಲೂ ಇದೇ ರೀತಿ ನಡೆದುಕೊಂಡಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರಿನ ಪೊಲೀಸರು ಏನೂ ಮಾಡಿರಲಿಲ್ಲ” ಎಂದು ವಕೀಲ, ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಹೇಳಿದ್ದಾರೆ.

“ನಮ್ಮದು ಒಕ್ಕೂಟ ದೇಶ; ದೆಹಲಿ ಪೊಲೀಸರು ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿದ್ದಾರೆ ಎಂದು ತಿಳಿದುಕೊಂಡು ತಮಗಿಷ್ಟ ಬಂದಂತೆ ನಡೆದುಕೊಳ್ಳಬಾರದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನದೀಮ್ ಹಾಗೂ ಎಪಿಸಿಆರ್‌ನವರು ದನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಗುರಿ ಮಾಡಿಕೊಳ್ಳಲಾಗಿದೆ. ಅವರನ್ನು ಬೆನ್ನತ್ತುತ್ತಿರುವುದು ಖಂಡನೀಯ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು” ಎಂದು ವಿನಯ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...